ETV Bharat / state

ಬಿಟಿಎಸ್ 12 ಒಪ್ಪಂದಗಳಿಗೆ ಅಂಕಿತ: ತಂತ್ರಜ್ಞಾನ, ಸಂಶೋಧನೆ, ಕೃಷಿ, ನವೋದ್ಯಮ ಕ್ಷೇತ್ರಗಳಿಗೆ ಹೆಚ್ಚು ಪ್ರಾಶಸ್ತ್ಯ

author img

By

Published : Nov 9, 2020, 8:03 PM IST

ಕೊರೊನಾ ನಡುವೆಯೂ ಇದೇ ತಿಂಗಳು 19ರಿಂದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ಜರುಗಲಿದ್ದು, ಈ ಶೃಂಗದಲ್ಲಿ 25ಕ್ಕೂ ಹೆಚ್ಚು ದೇಶಗಳು ಭಾಗಿಯಾಗುತ್ತಿವೆ. ಅದಲ್ಲದೆ, ಈ ಕಾರ್ಯಕ್ರಮದ ವೇಳೆ ತಂತ್ರಜ್ಞಾನದ ಅನೇಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಒಪ್ಪಂದಗಳೂ ಸಹ ಆಗಲಿವೆ.

BTS
ಬಿಟಿಎಸ್ ಒಪ್ಪಂದ

ಬೆಂಗಳೂರು: ಇದೇ ನವೆಂಬರ್‌ 19ರಿಂದ ನಡೆಯಲಿರುವ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ (ಬಿಟಿಎಸ್)ನಲ್ಲಿ ಮಹತ್ವದ 12 ಒಪ್ಪಂದಗಳಿಗೆ ಜಾಗತಿಕ ಆವಿಷ್ಕಾರ ಮೈತ್ರಿಕೂಟದ (GIA) ಪಾಲುದಾರ ದೇಶಗಳ ಜತೆ ಸಹಿ ಹಾಕಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

ತಂತ್ರಜ್ಞಾನ ಶೃಂಗಸಭೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ವಿವಿಧ ದೇಶಗಳ ಉನ್ನತ ರಾಜತಾಂತ್ರಿಕ ಅಧಿಕಾರಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19ರ ನಡುವೆಯೂ ನಡೆಯುತ್ತಿರುವ ಅತಿದೊಡ್ಡ ಪ್ರಮಾಣದ ಈ ಶೃಂಗದಲ್ಲಿ ಸುಮಾರು 25ಕ್ಕೂ ಹೆಚ್ಚು ದೇಶಗಳು ಭಾಗಿಯಾಗುತ್ತಿದ್ದು, ತಂತ್ರಜ್ಞಾನದ ಅನೇಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಪ್ಪಂದಗಳು ಆಗಲಿವೆ. ಈ ಪೈಕಿ ಏಳು ಒಪ್ಪಂದಗಳು ಸಹಿಗೂ ಸಿದ್ಧವಾಗಿವೆ ಎಂದರು.

ಈ ಹಿಂದೆ ಮಾಡಿಕೊಂಡಿರುವ ಒಪ್ಪಂದಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ನೀಡಲಾಗುವುದು. ಜೊತೆಗೆ, ಹೊಸ ಒಪ್ಪಂದಗಳನ್ನು ಕಾಲಮಿತಿಯೊಳಗೆ, ಪೂರ್ವ ನಿಗದಿಯಂತೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುವುದು. ಒಪ್ಪಂದಗಳ ಫಲಶ್ರುತಿ ಬೇಗ ಸಿಗುವ ಗುರಿಯೊಂದಿಗೆ ಪಾಲುದಾರ ದೇಶಗಳ ಜೊತೆ ಕೆಲಸ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹೇಳಿದರು.

ಕೃಷಿ, ಸಂಶೋಧನೆ, ಅಭಿವೃದ್ಧಿ, ಸ್ಟಾರ್ಟ್ ಅಪ್‌ಗಳ ಸ್ಥಾಪನೆ ಪಾಲುದಾರಿಕೆ ಸೇರಿದಂತೆ ಏಳು ಮಹತ್ವದ ಹೊಸ ಒಪ್ಪಂದಗಳಿಗೆ ಶೃಂಗಸಭೆಯಲ್ಲಿ ಸಹಿ ಬೀಳಲಿದೆ ಎಂದ ಅವರು, ಜಾಗತಿಕ ಮಟ್ಟದ ಆವಿಷ್ಕಾರ ಮೈತ್ರಿ (GIA)ಗೆ ಸಂಬಂಧಿಸಿದ ವಿಚಾರ ವಿನಿಮಯ- ಚರ್ಚೆಯ ಜೊತೆಗೆ 15 ಅಧಿವೇಶನಗಳು ನಡೆಯುತ್ತಿವೆ. 60ಕ್ಕೂ ಹೆಚ್ಚು ಜನ ಈ ಬಗ್ಗೆ ತಮ್ಮ ಆಭಿಪ್ರಾಯವನ್ನು ಮಂಡಿಸಲಿದ್ದಾರೆ. ವಿವಿಧ ದೇಶಗಳ ಸಚಿವರ ಮಟ್ಟದ ಹತ್ತು ನಿಯೋಗಗಳು ಭಾಗಿಯಾಗಲಿದೆ. ಇದರ ಜತೆ 500ಕ್ಕೂ ಹೆಚ್ಚು ಅಂರಾತಾಷ್ಟ್ರೀಯ ಮಟ್ಟದ ನಿಯೋಗಗಳು ಭೇಟಿ ನೀಡುತ್ತಿವೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಪಾಲುದಾರಿಕೆ ದೇಶಗಳು:

ಆಸ್ಟ್ರೇಲಿಯಾ, ಫ್ರಾನ್ಸ್‌, ಜರ್ಮನಿ, ಇಸ್ರೇಲ್‌, ನೆದರ್‌ಲ್ಯಾಂಡ್‌, ಸ್ವಿಡ್ಜರ್‌ಲೆಂಡ್‌, ಇಂಗ್ಲೆಂಡ್‌ ತಂತ್ರಜ್ಞಾನ ಶೃಂಗಸಭೆಯ ಪಾಲುದಾರ ದೇಶಗಳಾಗಿದ್ದು, ಮುಖ್ಯವಾಗಿ ಈ ರಾಷ್ಟ್ರಗಳಿಂದ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆಯನ್ನು ನಿರೀಕ್ಷೆ ಮಾಡುತ್ತಿದೆ. ಈಗಾಗಲೇ ಕರ್ನಾಟಕ ಕೋವಿಡ್‌ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಿ ಉದ್ಯಮಕ್ಕೆ ಪೂರಕವಾದ ಕಾರ್ಮಿಕ ಕಾಯ್ದೆಗಳ ಸುಧಾರಣೆ, ತರಬೇತಿ, ಕುಶಲತೆಯುಳ್ಳ ಶಿಕ್ಷಣಕ್ಕೆ ಒತ್ತು ನೀಡಿದೆ. ಹೀಗಾಗಿ ರಾಜ್ಯದಲ್ಲಿ ಹೂಡಿಕೆ ಮಾಡುವ ಹೂಡಿಕೆದಾರರಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದು, ಉತ್ತಮ ಮಾನವ ಸಂಪನ್ಮೂಲವನ್ನು ನೇಮಿಸಿಕೊಳ್ಳುವುದು ಸುಲಭ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಹೂಡಿಕೆಗೆ ಉತ್ಸಾಹುಕರಾಗಿರುವ ವಿವಿಧ ದೇಶಗಳು:

ಇದೇ ಮಾಧ್ಯಮಗೋಷ್ಠಿಯಲ್ಲಿ ವರ್ಚುವಲ್‌ ಮೂಲಕ ಬ್ರಿಟನ್‌, ಆಸ್ಟ್ರೇಲಿಯಾ, ನೆದರ್‌ಲ್ಯಾಂಡ್‌, ಸ್ವೀಡನ್‌, ಫ್ರಾನ್ಸ್‌, ಇಸ್ರೇಲ್‌, ಜಪಾನ್‌, ಜರ್ಮನಿ ದೇಶಗಳ ಉನ್ನತ ರಾಜತಾಂತ್ರಿಕ ಅಧಿಕಾರಿಗಳು ಮಾತನಾಡಿದರು. ಭಾರತದಲ್ಲಿನ ಆಸ್ಟ್ರೇಲಿಯಾ‌ ಹೈಕಮೀಷನರ್ ಹಾನ್‌ಬೆರಿ ಓ ಫರೇಲ್ ಮಾತನಾಡಿ,‌ ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳು ಹಲವಾರು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿವೆ. ಈ ಪೈಕಿ ಸೈಬರ್‌ ಸೆಕ್ಯೂರಿಟಿಗೆ ಹೆಚ್ಚು ಒತ್ತು ನೀಡಲಾಗಿದೆ. ಕರ್ನಾಟಕದೊಂದಿಗೆ ತಂತ್ರಜ್ಞಾನ, ಬಾಹ್ಯಾಕಾಶ, ಸೈಬರ್‌ ಭದ್ರತೆ, ಖನಿಜ ಮುಂತಾದ ಕ್ಷೇತ್ರಗಳಲ್ಲಿ ಮತ್ತಷ್ಟು ವಿಸ್ತೃತವಾಗಿ ಕೆಲಸ ಮಾಡಲು ಸಿದ್ಧವಿದೆ ಎಂದರು.

ಬೆಂಗಳೂರಿನಲ್ಲಿರುವ ಸ್ವಿಡ್ಜರ್‌ಲೆಂಡ್‌ ಕಾನ್ಸುಲೇಟ್‌ ಜನರಲ್‌ ಸೆಬಾಸ್ಟಿಯನ್‌ ಹಗ್‌ ಅವರು ವರ್ಚುವಲ್‌ ಮೂಲಕ ಮಾತನಾಡಿ, ಜಗತ್ತಿನ ಶ್ರೇಷ್ಟ ನಾವಿನ್ಯತಾ ಕೇಂದ್ರಗಳು ಹಾಗೂ ಕರ್ನಾಟಕದ ನಡುವೆ ಸಂಪರ್ಕ ಏರ್ಪಡಲು ಈ ಶೃಂಗಸಭೆ ಹೆಚ್ಚು ಸಹಕಾರಿ ಆಗುತ್ತದೆ. ಕರ್ನಾಟಕದಲ್ಲಿ ಹೂಡಿಕೆ ಮಾಡಲು ನಮ್ಮ ದೇಶದ ಉದ್ದಿಮೆದಾರರು ಉತ್ಸುಕರಾಗಿದ್ದಾರೆ ಎಂದರು.

ನೆದರ್‌ಲ್ಯಾಂಡ್‌ನ ದಕ್ಷಿಣ ಭಾರತದ ಕಾನ್ಸುಲೇಟ್‌ ಜನರಲ್‌ ಗೆರ್ಟ್‌ ಹೆಜ್‌ಕೂಪ್‌ ಮಾತನಾಡಿ, ಆಧುನಿಕ ತಂತ್ರಜ್ಞಾನದ ಹಲವಾರು ಕ್ಷೇತ್ರದಲ್ಲಿ ಕರ್ನಾಟಕದೊಂದಿಗೆ ನೆದರ್‌ಲ್ಯಾಂಡ್‌ ಅತ್ಯುತ್ತಮ ಪಾಲುದಾರಿಕೆಯನ್ನು ಹೊಂದಿದೆ. ಈ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಈ ಶೃಂಗಸಭೆ ಸಹಕಾರಿಯಾಗಲಿದೆ. ಈ ಶೃಂಗದಲ್ಲಿ ಬಿಸಿನೆಸ್‌ ಏಜೆನ್ಸಿಯೂ ಭಾರತದ ಸ್ಟಾರ್ಟಪ್‌ಗಳ ಅನುಕೂಲನಕ್ಕೆ ಡಿಜಿಟಲ್‌ ಲ್ಯಾಂಡಿಂಗ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದೆ. ಭಾರತದ ಸುಮಾರು 50ಕ್ಕೂ ಹೆಚ್ಚು ತಂತ್ರಜ್ಞಾನ ಸ್ಟಾರ್ಟಪ್‌ಗಳು ತಾವು ಆವಿಷ್ಕಾರ ಮಾಡಿದ ತಂತ್ರಜ್ಞಾನವನ್ನು ಯುರೋಪ್‌ಗೆ ಕೊಂಡೊಯ್ಯಲು ಈ ಶೃಂಗವು ನೆರವಾಗಲಿದೆ. ತಂತ್ರಜ್ಞಾನದ ಜೊತೆಗೆ ಸರಕು ಮತ್ತು ಸೇವೆಗಳನ್ನು ಯುರೋಪ್‌ ಮಾರುಕಟ್ಟೆಗೆ ತಲುಪಿಸಲು ಭಾರತೀಯ ಸ್ಟಾರ್ಟಪ್‌ಗಳಿಗೆ ನೆದರ್‌ಲ್ಯಾಂಡ್‌ ಮಹಾದ್ವಾರವಾಗಿದೆ. ಇದಕ್ಕೆ ಪೂರಕವಾಗಿ ಸುರಕ್ಷತೆ, ಕೃಷಿ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕರ್ನಾಟಕದೊಂದಿಗೆ ಎರಡು ಮಹತ್ವದ ಒಪ್ಪಂದಗಳಿಗೆ ನೆದರ್‌ಲ್ಯಾಂಡ್‌ ಸಹಿ ಹಾಕಲಿದೆ ಎಂದರು.

ಶುಕ್ರಯಾನದಲ್ಲಿ ಪಾಲುದಾರಿಕೆ:

ವರ್ಚುವಲ್‌ ವೇದಿಕೆ ಮೂಲಕ ಮಾತನಾಡಿದ ಭಾರತದಲ್ಲಿನ ಸ್ವೀಡನ್‌ ದೇಶದ ಹೈಕಮೀಷನರ್‌ ಡಾ.ಫ್ಯಾನಿ ವಾನ್‌ ಹೆಲ್ಯಾಂಡ್‌, ಭಾರತದಲ್ಲಿ ಬಾಹ್ಯಾಕಾಶಕ್ಕೆ ಸಂಬಂಧಿಸಿ ಸ್ವೀಡನ್‌ ಹಿಂದಿನಿಂದಲೂ ಕೆಲಸ ಮಾಡುತ್ತಿದೆ. ಮುಖ್ಯವಾಗಿ ಚಂದ್ರಯಾನ-1ರಲ್ಲಿ ತಂತ್ರಜ್ಞಾನ ನೀಡಿಕೆ ವಿಚಾರದಲ್ಲಿ ಸ್ವೀಡನ್‌, ಭಾರತದೊಂದಿಗೆ ಕೈಜೋಡಿಸಿತ್ತು. ಇದೀಗ ಶುಕ್ರಯಾನ ಯೋಜನೆಯಲ್ಲೂ ಭಾರತಕ್ಕೆ ನಮ್ಮ ದೇಶವೂ ನೆರವಾಗಲಿದೆ ಎಂದು ತಿಳಿಸಿದರು.

ಕರ್ನಾಟಕ ಇಡೀ ಜಗತ್ತಿಗೆ ಮೆಚ್ಚುಗೆಯಾಗಿರುವಂತಹದ್ದು:‌

ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕ ಅತ್ಯಂತ ಇಷ್ಟದ ತಾಣವಾಗಿದೆ. ಮುಂಬರುವ ಟೆಕ್‌ ಸಮ್ಮಿಟ್‌ ಮೂಲಕ ಅದು ಮತ್ತಷ್ಟು ವಿಸ್ತೃತವಾಗಲಿದೆ. ಇವತ್ತು ಜಗತ್ತನ್ನು ಕಾಡುತ್ತಿರುವ ಕೋವಿಡ್‌ ಪಿಡುಗಿನಿಂದ ಪಾರಾಗಲು ಇಂಥ ಶೃಂಗ ಸಭೆಗಳು ನಡೆಯಬೇಕು. ಈ ದಿಸೆಯಲ್ಲಿ ನಡೆಯುತ್ತಿರುವ ಈ ಶೃಂಗವೂ ಜಾಗತಿಕ ಹೂಡಿಕೆದಾರರಿಗೆ ಹೊಸ ದಿಕ್ಸೂಚಿಯಾಗಲಿದೆ ಎಂದು ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಹೇಳಿದರು.

ಬೆಂಗಳೂರು: ಇದೇ ನವೆಂಬರ್‌ 19ರಿಂದ ನಡೆಯಲಿರುವ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ (ಬಿಟಿಎಸ್)ನಲ್ಲಿ ಮಹತ್ವದ 12 ಒಪ್ಪಂದಗಳಿಗೆ ಜಾಗತಿಕ ಆವಿಷ್ಕಾರ ಮೈತ್ರಿಕೂಟದ (GIA) ಪಾಲುದಾರ ದೇಶಗಳ ಜತೆ ಸಹಿ ಹಾಕಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

ತಂತ್ರಜ್ಞಾನ ಶೃಂಗಸಭೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ವಿವಿಧ ದೇಶಗಳ ಉನ್ನತ ರಾಜತಾಂತ್ರಿಕ ಅಧಿಕಾರಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19ರ ನಡುವೆಯೂ ನಡೆಯುತ್ತಿರುವ ಅತಿದೊಡ್ಡ ಪ್ರಮಾಣದ ಈ ಶೃಂಗದಲ್ಲಿ ಸುಮಾರು 25ಕ್ಕೂ ಹೆಚ್ಚು ದೇಶಗಳು ಭಾಗಿಯಾಗುತ್ತಿದ್ದು, ತಂತ್ರಜ್ಞಾನದ ಅನೇಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಪ್ಪಂದಗಳು ಆಗಲಿವೆ. ಈ ಪೈಕಿ ಏಳು ಒಪ್ಪಂದಗಳು ಸಹಿಗೂ ಸಿದ್ಧವಾಗಿವೆ ಎಂದರು.

ಈ ಹಿಂದೆ ಮಾಡಿಕೊಂಡಿರುವ ಒಪ್ಪಂದಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ನೀಡಲಾಗುವುದು. ಜೊತೆಗೆ, ಹೊಸ ಒಪ್ಪಂದಗಳನ್ನು ಕಾಲಮಿತಿಯೊಳಗೆ, ಪೂರ್ವ ನಿಗದಿಯಂತೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುವುದು. ಒಪ್ಪಂದಗಳ ಫಲಶ್ರುತಿ ಬೇಗ ಸಿಗುವ ಗುರಿಯೊಂದಿಗೆ ಪಾಲುದಾರ ದೇಶಗಳ ಜೊತೆ ಕೆಲಸ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹೇಳಿದರು.

ಕೃಷಿ, ಸಂಶೋಧನೆ, ಅಭಿವೃದ್ಧಿ, ಸ್ಟಾರ್ಟ್ ಅಪ್‌ಗಳ ಸ್ಥಾಪನೆ ಪಾಲುದಾರಿಕೆ ಸೇರಿದಂತೆ ಏಳು ಮಹತ್ವದ ಹೊಸ ಒಪ್ಪಂದಗಳಿಗೆ ಶೃಂಗಸಭೆಯಲ್ಲಿ ಸಹಿ ಬೀಳಲಿದೆ ಎಂದ ಅವರು, ಜಾಗತಿಕ ಮಟ್ಟದ ಆವಿಷ್ಕಾರ ಮೈತ್ರಿ (GIA)ಗೆ ಸಂಬಂಧಿಸಿದ ವಿಚಾರ ವಿನಿಮಯ- ಚರ್ಚೆಯ ಜೊತೆಗೆ 15 ಅಧಿವೇಶನಗಳು ನಡೆಯುತ್ತಿವೆ. 60ಕ್ಕೂ ಹೆಚ್ಚು ಜನ ಈ ಬಗ್ಗೆ ತಮ್ಮ ಆಭಿಪ್ರಾಯವನ್ನು ಮಂಡಿಸಲಿದ್ದಾರೆ. ವಿವಿಧ ದೇಶಗಳ ಸಚಿವರ ಮಟ್ಟದ ಹತ್ತು ನಿಯೋಗಗಳು ಭಾಗಿಯಾಗಲಿದೆ. ಇದರ ಜತೆ 500ಕ್ಕೂ ಹೆಚ್ಚು ಅಂರಾತಾಷ್ಟ್ರೀಯ ಮಟ್ಟದ ನಿಯೋಗಗಳು ಭೇಟಿ ನೀಡುತ್ತಿವೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಪಾಲುದಾರಿಕೆ ದೇಶಗಳು:

ಆಸ್ಟ್ರೇಲಿಯಾ, ಫ್ರಾನ್ಸ್‌, ಜರ್ಮನಿ, ಇಸ್ರೇಲ್‌, ನೆದರ್‌ಲ್ಯಾಂಡ್‌, ಸ್ವಿಡ್ಜರ್‌ಲೆಂಡ್‌, ಇಂಗ್ಲೆಂಡ್‌ ತಂತ್ರಜ್ಞಾನ ಶೃಂಗಸಭೆಯ ಪಾಲುದಾರ ದೇಶಗಳಾಗಿದ್ದು, ಮುಖ್ಯವಾಗಿ ಈ ರಾಷ್ಟ್ರಗಳಿಂದ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆಯನ್ನು ನಿರೀಕ್ಷೆ ಮಾಡುತ್ತಿದೆ. ಈಗಾಗಲೇ ಕರ್ನಾಟಕ ಕೋವಿಡ್‌ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಿ ಉದ್ಯಮಕ್ಕೆ ಪೂರಕವಾದ ಕಾರ್ಮಿಕ ಕಾಯ್ದೆಗಳ ಸುಧಾರಣೆ, ತರಬೇತಿ, ಕುಶಲತೆಯುಳ್ಳ ಶಿಕ್ಷಣಕ್ಕೆ ಒತ್ತು ನೀಡಿದೆ. ಹೀಗಾಗಿ ರಾಜ್ಯದಲ್ಲಿ ಹೂಡಿಕೆ ಮಾಡುವ ಹೂಡಿಕೆದಾರರಿಗೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದು, ಉತ್ತಮ ಮಾನವ ಸಂಪನ್ಮೂಲವನ್ನು ನೇಮಿಸಿಕೊಳ್ಳುವುದು ಸುಲಭ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಹೂಡಿಕೆಗೆ ಉತ್ಸಾಹುಕರಾಗಿರುವ ವಿವಿಧ ದೇಶಗಳು:

ಇದೇ ಮಾಧ್ಯಮಗೋಷ್ಠಿಯಲ್ಲಿ ವರ್ಚುವಲ್‌ ಮೂಲಕ ಬ್ರಿಟನ್‌, ಆಸ್ಟ್ರೇಲಿಯಾ, ನೆದರ್‌ಲ್ಯಾಂಡ್‌, ಸ್ವೀಡನ್‌, ಫ್ರಾನ್ಸ್‌, ಇಸ್ರೇಲ್‌, ಜಪಾನ್‌, ಜರ್ಮನಿ ದೇಶಗಳ ಉನ್ನತ ರಾಜತಾಂತ್ರಿಕ ಅಧಿಕಾರಿಗಳು ಮಾತನಾಡಿದರು. ಭಾರತದಲ್ಲಿನ ಆಸ್ಟ್ರೇಲಿಯಾ‌ ಹೈಕಮೀಷನರ್ ಹಾನ್‌ಬೆರಿ ಓ ಫರೇಲ್ ಮಾತನಾಡಿ,‌ ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳು ಹಲವಾರು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿವೆ. ಈ ಪೈಕಿ ಸೈಬರ್‌ ಸೆಕ್ಯೂರಿಟಿಗೆ ಹೆಚ್ಚು ಒತ್ತು ನೀಡಲಾಗಿದೆ. ಕರ್ನಾಟಕದೊಂದಿಗೆ ತಂತ್ರಜ್ಞಾನ, ಬಾಹ್ಯಾಕಾಶ, ಸೈಬರ್‌ ಭದ್ರತೆ, ಖನಿಜ ಮುಂತಾದ ಕ್ಷೇತ್ರಗಳಲ್ಲಿ ಮತ್ತಷ್ಟು ವಿಸ್ತೃತವಾಗಿ ಕೆಲಸ ಮಾಡಲು ಸಿದ್ಧವಿದೆ ಎಂದರು.

ಬೆಂಗಳೂರಿನಲ್ಲಿರುವ ಸ್ವಿಡ್ಜರ್‌ಲೆಂಡ್‌ ಕಾನ್ಸುಲೇಟ್‌ ಜನರಲ್‌ ಸೆಬಾಸ್ಟಿಯನ್‌ ಹಗ್‌ ಅವರು ವರ್ಚುವಲ್‌ ಮೂಲಕ ಮಾತನಾಡಿ, ಜಗತ್ತಿನ ಶ್ರೇಷ್ಟ ನಾವಿನ್ಯತಾ ಕೇಂದ್ರಗಳು ಹಾಗೂ ಕರ್ನಾಟಕದ ನಡುವೆ ಸಂಪರ್ಕ ಏರ್ಪಡಲು ಈ ಶೃಂಗಸಭೆ ಹೆಚ್ಚು ಸಹಕಾರಿ ಆಗುತ್ತದೆ. ಕರ್ನಾಟಕದಲ್ಲಿ ಹೂಡಿಕೆ ಮಾಡಲು ನಮ್ಮ ದೇಶದ ಉದ್ದಿಮೆದಾರರು ಉತ್ಸುಕರಾಗಿದ್ದಾರೆ ಎಂದರು.

ನೆದರ್‌ಲ್ಯಾಂಡ್‌ನ ದಕ್ಷಿಣ ಭಾರತದ ಕಾನ್ಸುಲೇಟ್‌ ಜನರಲ್‌ ಗೆರ್ಟ್‌ ಹೆಜ್‌ಕೂಪ್‌ ಮಾತನಾಡಿ, ಆಧುನಿಕ ತಂತ್ರಜ್ಞಾನದ ಹಲವಾರು ಕ್ಷೇತ್ರದಲ್ಲಿ ಕರ್ನಾಟಕದೊಂದಿಗೆ ನೆದರ್‌ಲ್ಯಾಂಡ್‌ ಅತ್ಯುತ್ತಮ ಪಾಲುದಾರಿಕೆಯನ್ನು ಹೊಂದಿದೆ. ಈ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಈ ಶೃಂಗಸಭೆ ಸಹಕಾರಿಯಾಗಲಿದೆ. ಈ ಶೃಂಗದಲ್ಲಿ ಬಿಸಿನೆಸ್‌ ಏಜೆನ್ಸಿಯೂ ಭಾರತದ ಸ್ಟಾರ್ಟಪ್‌ಗಳ ಅನುಕೂಲನಕ್ಕೆ ಡಿಜಿಟಲ್‌ ಲ್ಯಾಂಡಿಂಗ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದೆ. ಭಾರತದ ಸುಮಾರು 50ಕ್ಕೂ ಹೆಚ್ಚು ತಂತ್ರಜ್ಞಾನ ಸ್ಟಾರ್ಟಪ್‌ಗಳು ತಾವು ಆವಿಷ್ಕಾರ ಮಾಡಿದ ತಂತ್ರಜ್ಞಾನವನ್ನು ಯುರೋಪ್‌ಗೆ ಕೊಂಡೊಯ್ಯಲು ಈ ಶೃಂಗವು ನೆರವಾಗಲಿದೆ. ತಂತ್ರಜ್ಞಾನದ ಜೊತೆಗೆ ಸರಕು ಮತ್ತು ಸೇವೆಗಳನ್ನು ಯುರೋಪ್‌ ಮಾರುಕಟ್ಟೆಗೆ ತಲುಪಿಸಲು ಭಾರತೀಯ ಸ್ಟಾರ್ಟಪ್‌ಗಳಿಗೆ ನೆದರ್‌ಲ್ಯಾಂಡ್‌ ಮಹಾದ್ವಾರವಾಗಿದೆ. ಇದಕ್ಕೆ ಪೂರಕವಾಗಿ ಸುರಕ್ಷತೆ, ಕೃಷಿ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕರ್ನಾಟಕದೊಂದಿಗೆ ಎರಡು ಮಹತ್ವದ ಒಪ್ಪಂದಗಳಿಗೆ ನೆದರ್‌ಲ್ಯಾಂಡ್‌ ಸಹಿ ಹಾಕಲಿದೆ ಎಂದರು.

ಶುಕ್ರಯಾನದಲ್ಲಿ ಪಾಲುದಾರಿಕೆ:

ವರ್ಚುವಲ್‌ ವೇದಿಕೆ ಮೂಲಕ ಮಾತನಾಡಿದ ಭಾರತದಲ್ಲಿನ ಸ್ವೀಡನ್‌ ದೇಶದ ಹೈಕಮೀಷನರ್‌ ಡಾ.ಫ್ಯಾನಿ ವಾನ್‌ ಹೆಲ್ಯಾಂಡ್‌, ಭಾರತದಲ್ಲಿ ಬಾಹ್ಯಾಕಾಶಕ್ಕೆ ಸಂಬಂಧಿಸಿ ಸ್ವೀಡನ್‌ ಹಿಂದಿನಿಂದಲೂ ಕೆಲಸ ಮಾಡುತ್ತಿದೆ. ಮುಖ್ಯವಾಗಿ ಚಂದ್ರಯಾನ-1ರಲ್ಲಿ ತಂತ್ರಜ್ಞಾನ ನೀಡಿಕೆ ವಿಚಾರದಲ್ಲಿ ಸ್ವೀಡನ್‌, ಭಾರತದೊಂದಿಗೆ ಕೈಜೋಡಿಸಿತ್ತು. ಇದೀಗ ಶುಕ್ರಯಾನ ಯೋಜನೆಯಲ್ಲೂ ಭಾರತಕ್ಕೆ ನಮ್ಮ ದೇಶವೂ ನೆರವಾಗಲಿದೆ ಎಂದು ತಿಳಿಸಿದರು.

ಕರ್ನಾಟಕ ಇಡೀ ಜಗತ್ತಿಗೆ ಮೆಚ್ಚುಗೆಯಾಗಿರುವಂತಹದ್ದು:‌

ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕ ಅತ್ಯಂತ ಇಷ್ಟದ ತಾಣವಾಗಿದೆ. ಮುಂಬರುವ ಟೆಕ್‌ ಸಮ್ಮಿಟ್‌ ಮೂಲಕ ಅದು ಮತ್ತಷ್ಟು ವಿಸ್ತೃತವಾಗಲಿದೆ. ಇವತ್ತು ಜಗತ್ತನ್ನು ಕಾಡುತ್ತಿರುವ ಕೋವಿಡ್‌ ಪಿಡುಗಿನಿಂದ ಪಾರಾಗಲು ಇಂಥ ಶೃಂಗ ಸಭೆಗಳು ನಡೆಯಬೇಕು. ಈ ದಿಸೆಯಲ್ಲಿ ನಡೆಯುತ್ತಿರುವ ಈ ಶೃಂಗವೂ ಜಾಗತಿಕ ಹೂಡಿಕೆದಾರರಿಗೆ ಹೊಸ ದಿಕ್ಸೂಚಿಯಾಗಲಿದೆ ಎಂದು ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.