ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಪ್ರಭಾವ ಮಿತಿ ಮೀರಿರುವ ಕಾರಣ ರಾಜ್ಯ ಸರ್ಕಾರ ಇಂದಿನ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.
ನಾಳೆಯಿಂದ ಮುಂದಿನ 14 ದಿನಗಳ ಕಾಲ ರಾಜ್ಯಾದ್ಯಂತ ಕೋವಿಡ್ ಕರ್ಫ್ಯೂ ವಿಧಿಸಿ ಘೋಷಣೆ ಮಾಡಲಾಗಿದ್ದು, ಕಠಿಣ ನಿಯಮ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಈ ನಡುವೆ ಜನರು ಅಗತ್ಯ ವಸ್ತುಗಳ ಖರೀದಿಗಾಗಿ ಮಾರುಕಟ್ಟೆಯತ್ತ ಧಾವಿಸಿದ್ದಾರೆ.
ಮಾರ್ಕೆಟ್ನಲ್ಲಿ ತರಕಾರಿ, ಹೂವು ಹಣ್ಣು ಖರೀದಿಸಲು ಮುಗಿಬಿದ್ದ ಜನ, ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಲಾಕ್ಡೌನ್ ಜಾರಿಯಾಗಬಹುದೆಂಬ ನಿರೀಕ್ಷೆಯಲ್ಲಿದ್ದ ಜನ ಮೊದಲೇ ಅಗತ್ಯ ವಸ್ತುಗಳನ್ನು ಖರೀದಿಸಲು ಮಾರುಕಟ್ಟೆಯತ್ತ ಮುಖಮಾಡಿದ್ದಾರೆ.
ಓದಿ: ನಾಳೆ ಸಂಜೆಯಿಂದ ರಾಜ್ಯಾದ್ಯಂತ 14 ದಿನ ಕೋವಿಡ್ ಕರ್ಫ್ಯೂ... ಕಠಿಣ ನಿಯಮ ಜಾರಿ