ಬೆಂಗಳೂರು: ರಾಜರಾಜೇಶ್ವರಿನಗರ ಉಪಚುನಾವಣೆ ಕಣದಲ್ಲಿ ಅಂತಿಮವಾಗಿ 16 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.
ಒಟ್ಟು 23 ಮಂದಿ ಅಭ್ಯರ್ಥಿಗಳು 27 ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದರಲ್ಲಿ ಪರಿಷ್ಕರಣೆ ಬಳಿಕ 20 ನಾಮಪತ್ರಗಳು ಉಳಿದಿದ್ದವು. ಇದೀಗ 4 ಮಂದಿ ನಾಮಪತ್ರ ವಾಪಸ್ ಪಡೆದಿದ್ದು, ಅಂತಿಮವಾಗಿ 16 ಮಂದಿ ಉಳಿದಿದ್ದಾರೆ. ಇಂದು ಆನಂದ್ ಸಿ, ಆರ್ ಕುಮಾರ್, ಮುನಿರತ್ನ, ಮುನಿರತ್ನಮ್ಮ ನಾಮಪತ್ರ ವಾಪಸು ಪಡೆದಿದ್ದಾರೆ.
ಶಿರಾ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, 15 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.