ETV Bharat / state

ಯೂಟ್ಯೂಬ್ ನೋಡಿ ತೂಕದ ಸ್ಕೇಲ್‌ನಲ್ಲಿ ಗೋಲ್ಮಾಲ್: ಗ್ರಾಹಕರಿಗೆ ವಂಚಿಸುತ್ತಿದ್ದ ಹದಿನೇಳು ಜನರ ಬಂಧನ

ಯೂಟ್ಯೂಬ್ ನೋಡಿ ತೂಕದ ಯಂತ್ರದಲ್ಲಿ ಚಿಪ್​ ಅಳವಡಿಸಿ ಗ್ರಾಹಕರಿಗೆ ವಂಚಿಸುತ್ತಿದ್ದವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

author img

By

Published : Mar 18, 2023, 11:31 AM IST

Updated : Mar 18, 2023, 6:21 PM IST

ಗ್ರಾಹಕರಿಗೆ ವಂಚನೆ ಪ್ರಕರಣ
ಗ್ರಾಹಕರಿಗೆ ವಂಚನೆ ಪ್ರಕರಣ
ತೂಕದ ಸ್ಕೇಲ್‌ನಲ್ಲಿ ಚಿಪ್​ ಅಳವಡಿಕೆ

ಬೆಂಗಳೂರು‌: ತೂಕದ ಸ್ಕೇಲ್​ನಲ್ಲಿ ಚಿಪ್ ಅಳವಡಿಸಿ ಗ್ರಾಹಕರಿಗೆ ವಂಚಿಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ ಕೈಗೊಂಡ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಹದಿನೇಳು ಜನ ಆರೋಪಿಗಳನ್ನ ಬಂಧಿಸಿದ್ದಾರೆ. ನ್ಯಾಯಬೆಲೆ ಅಂಗಡಿ, ಗುಜರಿ ಅಂಗಡಿ, ಕೋಳಿ ಮೀನು ಮಾಂಸ ಮಾರಾಟ ಅಂಗಡಿಗಳಲ್ಲಿ‌ ಗ್ರಾಹಕರಿಗೆ ವಂಚಿಸುತ್ತಿದ್ದ ಸೋಮಶೇಖರ್, ನವೀನ್ ಕುಮಾರ್, ವಿನೇಶ್ ಪಟೇಲ್, ರಾಜೇಶ್ ಕುಮಾರ್, ವ್ಯಾಟರಾಯನ್, ಮೇಘನಾಧಮ್, ಲೋಕೆಶ್ ಕೆ, ಲೋಕೆಶ್ ಎಸ್.ಆರ್, ಗಂಗಾಧರ್, ಚಂದ್ರಶೇಖರಯ್ಯ, ಅನಂತಯ್ಯ, ರಂಗನಾಥ್, ಶಿವಣ್ಣ, ಸನಾವುಲ್ಲಾ, ವಿಶ್ವನಾಥ್, ಮಹಮದ್ ಈಶಾಕ್, ಹಾಗೂ ಮಧುಸೂಧನ್ ಬಂಧಿತ ಆರೋಪಿಗಳು.

ವಂಚನೆ ಮಾಡುತ್ತಿದ್ದದ್ದು ಹೇಗೆ? ಮಾಪನ ಶಾಸ್ತ್ರ ಇಲಾಖೆಯಿಂದ ಪರವಾನಗಿ ಪಡೆದು ಸ್ಕೇಲ್ ಸರ್ವಿಸ್ ಮಾಡುವ ಕೆಲಸ ಮಾಡುತ್ತಿದ್ದ ಸೋಮಶೇಖರ್ ಮತ್ತು ನವೀನ್ ಕುಮಾರ್, ಯೂಟ್ಯೂಬ್ ನೋಡಿ ತೂಕದ ಯಂತ್ರದಲ್ಲಿ ವೈಯರ್ ಬದಲಾವಣೆ ಮಾಡುವುದನ್ನ ಕಲಿತುಕೊಂಡಿದ್ದರು. ತೂಕದ ಯಂತ್ರದಲ್ಲಿನಿ ಪಿಸಿಬಿ (ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್) ಚಿಪ್​ನಲ್ಲಿ ಬದಲಾವಣೆ ಮಾಡಿ ಸ್ಕೇಲ್​ನಲ್ಲಿ ಹೆಚ್ಚುವರಿ ಬಟನ್ ಹಾಗೂ ರಿಮೋಟ್ ಅಳವಡಿಸುತ್ತಿದ್ದರು. ಇದೇ ರೀತಿ ಎರಡ್ಮೂರು ವರ್ಷಗಳಿಂದ ತೂಕದ ಸ್ಕೇಲ್​ನಲ್ಲಿ ಮಾರ್ಪಾಡು ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದರು.

ಇಬ್ಬರು ಗ್ರಾಹಕರಿಂದ ಬಂದ ಮಾಹಿತಿ ಮೇರೆಗೆ ವಿಶೇಷ ತಂಡ ರಚಿಸಿಕೊಂಡು‌ ಕಾರ್ಯಾಚರಣೆ ಕೈಗೊಂಡ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ವಿವಿಧ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳ ಪೈಕಿ ನವೀನ್ ಕುಮಾರ್, 2020ರಲ್ಲಿಯೂ ತೂಕದ ಸ್ಕೇಲ್​ನಲ್ಲಿ ಬದಲಾವಣೆ ಮಾಡಿ ಸಿಕ್ಕಿಬಿದ್ದಿದ್ದ. ಕೆ.ಪಿ ಅಗ್ರಹಾರ ಠಾಣೆಯಲ್ಲಿ ಆರೋಪಿತನ ವಿರುದ್ಧ ದೂರು ದಾಖಲಾಗಿತ್ತು. ದೂರು ನೀಡಿದ್ದ ಅಸಿಸ್ಟೆಂಟ್ ಕಂಟ್ರೋಲರ್ ಗೆ ಆರೋಪಿ ಬೆದರಿಕೆ ಹಾಕಿದ್ದ ಕುರಿತು ವಿಧಾನಸೌಧ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿತ್ತು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ ಗೇಮ್​ ಗೀಳು.. ಅಧಿಕಾರಿಯಿಂದ ಬ್ಯಾಂಕ್​​ಗೆ 2 ಕೋಟಿಗೂ ಅಧಿಕ ವಂಚನೆ

ಇತ್ತೀಚೆಗೆ ಹಾವೇರಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ಐಸಿಐಸಿಐ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ವೀರೇಶ್ ಕಾಶಿಮಠ ವಿರುದ್ಧ ವಂಚನೆ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್​​ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರು. ಬ್ಯಾಂಕ್​ ಸಹಾಯಕ ವ್ಯವಸ್ಥಾಪಕ ವೀರೇಶ್ ಕಾಶಿಮಠ ಕಳೆದ 2022 ಆಗಸ್ಟ್​​ 22 ರಿಂದ ಫೆಬ್ರವರಿ 7 ರವರೆಗೆ ಗ್ರಾಹಕರು ಬ್ಯಾಂಕ್‌ನಲ್ಲಿ ಠೇವಣಿ ಇರಿಸಿದ್ದ ಹಣವನ್ನು ತನಗೆ ಬೇಕಾದವರ ಖಾತೆಗೆ ಜಮಾ ಮಾಡಿದ್ದರು. ಕಳೆದ ಆರು ತಿಂಗಳಲ್ಲಿ ವೀರೇಶ್​ ಸುಮಾರು 2 ಕೋಟಿ 36 ಲಕ್ಷ ರೂಪಾಯಿ ಹಣವನ್ನು ತನಗೆ ಬೇಕಾದವರ ಖಾತೆಗೆ ಜಮೆ ಮಾಡಿದ್ದರು. ಬಳಿಕ ಈ ಹಣವನ್ನು ಪಡೆದುಕೊಂಡು ವೀರೇಶ್ ಆನ್​ಲೈನ್ ಗೇಮ್​​ ಆಡುತ್ತಿದ್ದರು ಎಂದು ಹಾವೇರಿ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಶಹರ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: ಮಂಗಳೂರು ಏರ್ಪೋರ್ಟ್​ನಲ್ಲಿ 90 ಲಕ್ಷ ರೂ. ಮೌಲ್ಯದ ಚಿನ್ನ ವಶ: ಮಗುವಿನ ಡೈಪರ್​ನಲ್ಲೂ ಬಂಗಾರ ಪತ್ತೆ

ತೂಕದ ಸ್ಕೇಲ್‌ನಲ್ಲಿ ಚಿಪ್​ ಅಳವಡಿಕೆ

ಬೆಂಗಳೂರು‌: ತೂಕದ ಸ್ಕೇಲ್​ನಲ್ಲಿ ಚಿಪ್ ಅಳವಡಿಸಿ ಗ್ರಾಹಕರಿಗೆ ವಂಚಿಸುತ್ತಿದ್ದವರ ವಿರುದ್ಧ ಕಾರ್ಯಾಚರಣೆ ಕೈಗೊಂಡ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಹದಿನೇಳು ಜನ ಆರೋಪಿಗಳನ್ನ ಬಂಧಿಸಿದ್ದಾರೆ. ನ್ಯಾಯಬೆಲೆ ಅಂಗಡಿ, ಗುಜರಿ ಅಂಗಡಿ, ಕೋಳಿ ಮೀನು ಮಾಂಸ ಮಾರಾಟ ಅಂಗಡಿಗಳಲ್ಲಿ‌ ಗ್ರಾಹಕರಿಗೆ ವಂಚಿಸುತ್ತಿದ್ದ ಸೋಮಶೇಖರ್, ನವೀನ್ ಕುಮಾರ್, ವಿನೇಶ್ ಪಟೇಲ್, ರಾಜೇಶ್ ಕುಮಾರ್, ವ್ಯಾಟರಾಯನ್, ಮೇಘನಾಧಮ್, ಲೋಕೆಶ್ ಕೆ, ಲೋಕೆಶ್ ಎಸ್.ಆರ್, ಗಂಗಾಧರ್, ಚಂದ್ರಶೇಖರಯ್ಯ, ಅನಂತಯ್ಯ, ರಂಗನಾಥ್, ಶಿವಣ್ಣ, ಸನಾವುಲ್ಲಾ, ವಿಶ್ವನಾಥ್, ಮಹಮದ್ ಈಶಾಕ್, ಹಾಗೂ ಮಧುಸೂಧನ್ ಬಂಧಿತ ಆರೋಪಿಗಳು.

ವಂಚನೆ ಮಾಡುತ್ತಿದ್ದದ್ದು ಹೇಗೆ? ಮಾಪನ ಶಾಸ್ತ್ರ ಇಲಾಖೆಯಿಂದ ಪರವಾನಗಿ ಪಡೆದು ಸ್ಕೇಲ್ ಸರ್ವಿಸ್ ಮಾಡುವ ಕೆಲಸ ಮಾಡುತ್ತಿದ್ದ ಸೋಮಶೇಖರ್ ಮತ್ತು ನವೀನ್ ಕುಮಾರ್, ಯೂಟ್ಯೂಬ್ ನೋಡಿ ತೂಕದ ಯಂತ್ರದಲ್ಲಿ ವೈಯರ್ ಬದಲಾವಣೆ ಮಾಡುವುದನ್ನ ಕಲಿತುಕೊಂಡಿದ್ದರು. ತೂಕದ ಯಂತ್ರದಲ್ಲಿನಿ ಪಿಸಿಬಿ (ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್) ಚಿಪ್​ನಲ್ಲಿ ಬದಲಾವಣೆ ಮಾಡಿ ಸ್ಕೇಲ್​ನಲ್ಲಿ ಹೆಚ್ಚುವರಿ ಬಟನ್ ಹಾಗೂ ರಿಮೋಟ್ ಅಳವಡಿಸುತ್ತಿದ್ದರು. ಇದೇ ರೀತಿ ಎರಡ್ಮೂರು ವರ್ಷಗಳಿಂದ ತೂಕದ ಸ್ಕೇಲ್​ನಲ್ಲಿ ಮಾರ್ಪಾಡು ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದರು.

ಇಬ್ಬರು ಗ್ರಾಹಕರಿಂದ ಬಂದ ಮಾಹಿತಿ ಮೇರೆಗೆ ವಿಶೇಷ ತಂಡ ರಚಿಸಿಕೊಂಡು‌ ಕಾರ್ಯಾಚರಣೆ ಕೈಗೊಂಡ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ವಿವಿಧ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳ ಪೈಕಿ ನವೀನ್ ಕುಮಾರ್, 2020ರಲ್ಲಿಯೂ ತೂಕದ ಸ್ಕೇಲ್​ನಲ್ಲಿ ಬದಲಾವಣೆ ಮಾಡಿ ಸಿಕ್ಕಿಬಿದ್ದಿದ್ದ. ಕೆ.ಪಿ ಅಗ್ರಹಾರ ಠಾಣೆಯಲ್ಲಿ ಆರೋಪಿತನ ವಿರುದ್ಧ ದೂರು ದಾಖಲಾಗಿತ್ತು. ದೂರು ನೀಡಿದ್ದ ಅಸಿಸ್ಟೆಂಟ್ ಕಂಟ್ರೋಲರ್ ಗೆ ಆರೋಪಿ ಬೆದರಿಕೆ ಹಾಕಿದ್ದ ಕುರಿತು ವಿಧಾನಸೌಧ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿತ್ತು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ ಗೇಮ್​ ಗೀಳು.. ಅಧಿಕಾರಿಯಿಂದ ಬ್ಯಾಂಕ್​​ಗೆ 2 ಕೋಟಿಗೂ ಅಧಿಕ ವಂಚನೆ

ಇತ್ತೀಚೆಗೆ ಹಾವೇರಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ಐಸಿಐಸಿಐ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ವೀರೇಶ್ ಕಾಶಿಮಠ ವಿರುದ್ಧ ವಂಚನೆ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್​​ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರು. ಬ್ಯಾಂಕ್​ ಸಹಾಯಕ ವ್ಯವಸ್ಥಾಪಕ ವೀರೇಶ್ ಕಾಶಿಮಠ ಕಳೆದ 2022 ಆಗಸ್ಟ್​​ 22 ರಿಂದ ಫೆಬ್ರವರಿ 7 ರವರೆಗೆ ಗ್ರಾಹಕರು ಬ್ಯಾಂಕ್‌ನಲ್ಲಿ ಠೇವಣಿ ಇರಿಸಿದ್ದ ಹಣವನ್ನು ತನಗೆ ಬೇಕಾದವರ ಖಾತೆಗೆ ಜಮಾ ಮಾಡಿದ್ದರು. ಕಳೆದ ಆರು ತಿಂಗಳಲ್ಲಿ ವೀರೇಶ್​ ಸುಮಾರು 2 ಕೋಟಿ 36 ಲಕ್ಷ ರೂಪಾಯಿ ಹಣವನ್ನು ತನಗೆ ಬೇಕಾದವರ ಖಾತೆಗೆ ಜಮೆ ಮಾಡಿದ್ದರು. ಬಳಿಕ ಈ ಹಣವನ್ನು ಪಡೆದುಕೊಂಡು ವೀರೇಶ್ ಆನ್​ಲೈನ್ ಗೇಮ್​​ ಆಡುತ್ತಿದ್ದರು ಎಂದು ಹಾವೇರಿ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಶಹರ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: ಮಂಗಳೂರು ಏರ್ಪೋರ್ಟ್​ನಲ್ಲಿ 90 ಲಕ್ಷ ರೂ. ಮೌಲ್ಯದ ಚಿನ್ನ ವಶ: ಮಗುವಿನ ಡೈಪರ್​ನಲ್ಲೂ ಬಂಗಾರ ಪತ್ತೆ

Last Updated : Mar 18, 2023, 6:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.