ETV Bharat / state

ಉಕ್ರೇನ್​​ನಲ್ಲಿದ್ದ 703 ಕನ್ನಡಿಗರಲ್ಲಿ 193 ವಿದ್ಯಾರ್ಥಿಗಳು ಬೆಂಗಳೂರಿಗೆ ವಾಪಸ್​​

author img

By

Published : Mar 4, 2022, 7:09 AM IST

ವಿದ್ಯಾಭ್ಯಾಸಕ್ಕಾಗಿ ಕರ್ನಾಟಕದಿಂದ ಉಕ್ರೇನ್​​ಗೆ ತೆರಳಿದ 703 ಕನ್ನಡಿಗರಲ್ಲಿ ಈಗಾಗಲೇ 193 ವಿದ್ಯಾರ್ಥಿಗಳು ಬೆಂಗಳೂರು ತಲುಪಿದ್ದಾರೆ ಎಂದು ರಾಜ್ಯ ನೋಡಲ್ ಅಧಿಕಾರಿ ಮನೋಜ್ ಮಾಹಿತಿ ನೀಡಿದ್ದಾರೆ.

Karnataka students have returned from Ukraine to Bengaluru
ಉಕ್ರೇನ್​​ನಿಂದ ಬೆಂಗಳೂರಿಗೆ ವಾಪಸ್​​ ಆದ ವಿದ್ಯಾರ್ಥಿಗಳು

ದೇವನಹಳ್ಳಿ(ಬೆಂಗಳೂರು): ಉಕ್ರೇನ್​​ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನ ಕರೆತರುವ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದೆ. ಯುದ್ದ ಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ 703 ಕನ್ನಡಿಗರಲ್ಲಿ, ಸದ್ಯ 193 ವಿದ್ಯಾರ್ಥಿಗಳು ಬೆಂಗಳೂರು ತಲುಪಿದ್ದಾರೆ.

ರಾಜ್ಯ ನೋಡಲ್ ಅಧಿಕಾರಿ ಮನೋಜ್ ಮಾಹಿತಿ ನೀಡಿರುವುದು

ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನ 'ಆಪರೇಷನ್ ಗಂಗಾ' ಯೋಜನೆಯಡಿ ಭಾರತ ಸರ್ಕಾರ ಕರೆತರುವ ವ್ಯವಸ್ಥೆ ಮಾಡುತ್ತಿದೆ. ವಿದ್ಯಾಭ್ಯಾಸಕ್ಕಾಗಿ ಕರ್ನಾಟಕದಿಂದ ಉಕ್ರೇನ್​​ಗೆ ತೆರಳಿದ 703 ಕನ್ನಡಿಗರಲ್ಲಿ ಈಗಾಗಲೇ 193 ವಿದ್ಯಾರ್ಥಿಗಳು ಬೆಂಗಳೂರು ತಲುಪಿದ್ದಾರೆ.

ನಿನ್ನೆ(ಗುರುವಾರ) ಒಂದೇ ದಿನ 104 ವಿದ್ಯಾರ್ಥಿಗಳು ಬಂದಿದ್ದಾರೆ. ಇಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 16 ವಿಮಾನಗಳು ಬರಲಿದ್ದು, 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಂಗಳೂರು ತಲುಪಲಿದ್ದಾರೆ ಎಂದು ರಾಜ್ಯ ನೋಡಲ್ ಅಧಿಕಾರಿ ಮನೋಜ್ ಮಾಹಿತಿ ನೀಡಿದ್ದಾರೆ.

ಭಾರತ ಸರ್ಕಾರದ ಎಂಬಸಿಯಿಂದ ಉಕ್ರೇನ್ ಗಡಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಆಶ್ರಯ ಮತ್ತು ಆಹಾರದ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬರನ್ನು ಕರೆ ತರುವ ವ್ಯವಸ್ಥೆ ಮಾಡಲಾಗಿದ್ದು, ಪೋಷಕರು ಧೈರ್ಯವಾಗಿರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: 'ನನ್ನೊಂದಿಗೆ ನೇರವಾಗಿ ಮಾತುಕತೆ ನಡೆಸಿ' ರಷ್ಯಾ ಅಧ್ಯಕ್ಷರಿಗೆ ಸವಾಲು ಹಾಕಿದ ವೊಲೊಡಿಮಿರ್

ದೇವನಹಳ್ಳಿ(ಬೆಂಗಳೂರು): ಉಕ್ರೇನ್​​ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನ ಕರೆತರುವ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದೆ. ಯುದ್ದ ಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ 703 ಕನ್ನಡಿಗರಲ್ಲಿ, ಸದ್ಯ 193 ವಿದ್ಯಾರ್ಥಿಗಳು ಬೆಂಗಳೂರು ತಲುಪಿದ್ದಾರೆ.

ರಾಜ್ಯ ನೋಡಲ್ ಅಧಿಕಾರಿ ಮನೋಜ್ ಮಾಹಿತಿ ನೀಡಿರುವುದು

ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನ 'ಆಪರೇಷನ್ ಗಂಗಾ' ಯೋಜನೆಯಡಿ ಭಾರತ ಸರ್ಕಾರ ಕರೆತರುವ ವ್ಯವಸ್ಥೆ ಮಾಡುತ್ತಿದೆ. ವಿದ್ಯಾಭ್ಯಾಸಕ್ಕಾಗಿ ಕರ್ನಾಟಕದಿಂದ ಉಕ್ರೇನ್​​ಗೆ ತೆರಳಿದ 703 ಕನ್ನಡಿಗರಲ್ಲಿ ಈಗಾಗಲೇ 193 ವಿದ್ಯಾರ್ಥಿಗಳು ಬೆಂಗಳೂರು ತಲುಪಿದ್ದಾರೆ.

ನಿನ್ನೆ(ಗುರುವಾರ) ಒಂದೇ ದಿನ 104 ವಿದ್ಯಾರ್ಥಿಗಳು ಬಂದಿದ್ದಾರೆ. ಇಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 16 ವಿಮಾನಗಳು ಬರಲಿದ್ದು, 120ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಂಗಳೂರು ತಲುಪಲಿದ್ದಾರೆ ಎಂದು ರಾಜ್ಯ ನೋಡಲ್ ಅಧಿಕಾರಿ ಮನೋಜ್ ಮಾಹಿತಿ ನೀಡಿದ್ದಾರೆ.

ಭಾರತ ಸರ್ಕಾರದ ಎಂಬಸಿಯಿಂದ ಉಕ್ರೇನ್ ಗಡಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಆಶ್ರಯ ಮತ್ತು ಆಹಾರದ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬರನ್ನು ಕರೆ ತರುವ ವ್ಯವಸ್ಥೆ ಮಾಡಲಾಗಿದ್ದು, ಪೋಷಕರು ಧೈರ್ಯವಾಗಿರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: 'ನನ್ನೊಂದಿಗೆ ನೇರವಾಗಿ ಮಾತುಕತೆ ನಡೆಸಿ' ರಷ್ಯಾ ಅಧ್ಯಕ್ಷರಿಗೆ ಸವಾಲು ಹಾಕಿದ ವೊಲೊಡಿಮಿರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.