ETV Bharat / state

ಕೆಪಿಎಸ್​ಸಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಹೈಕೋರ್ಟ್ ನೋಟಿಸ್

author img

By

Published : Oct 21, 2020, 11:07 PM IST

1998ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ವಿಚಾರವಾಗಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಆಲಿಸಿದ ಹೈಕೋರ್ಟ್​, ಕೆಪಿಎಸ್​ಸಿ ನ್ಯಾಯಾಂಗ ನಿಂದನೆ ಎಸಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಅಭಿಪ್ರಾಯಪಟ್ಟು ನೋಟಿಸ್ ಜಾರಿ ಮಾಡಿದೆ.

1998 recruitment issue of KAS officers; High Court notice
ಹೈಕೋರ್ಟ್

ಬೆಂಗಳೂರು : 1998ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ವಿಚಾರವಾಗಿ ನ್ಯಾಯಾಲಯ ನೀಡಿದ್ದ ಆದೇಶ ಪಾಲನೆ ಮಾಡಿಲ್ಲ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ಕರ್ನಾಟಕ ಲೋಕಸೇವಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಚನ್ನಪ್ಪ ಮತ್ತಿತರೆ ಅಭ್ಯರ್ಥಿಗಳು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರ ವಾದ ಆಲಿಸಿದ ಬಳಿಕ ಕೆಪಿಎಸ್​ಸಿ ನ್ಯಾಯಾಂಗ ನಿಂದನೆ ಎಸಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಅಭಿಪ್ರಾಯಪಟ್ಟಿತು. ಅಲ್ಲದೆ, ಕೆಪಿಎಸ್​ಸಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಡಿ.ಆರ್. ರವಿಶಂಕರ್, ಹಗರಣದ ಬಗ್ಗೆ ನ್ಯಾಯಾಲಯ 2016ರಲ್ಲಿ ತೀರ್ಪು ನೀಡಿ 91 ಉತ್ತರ ಪತ್ರಿಕೆಗಳ ಮೌಲ್ಯಮಾಪನ ಅಂಕ ಆಧರಿಸಿ ಅರ್ಹ ಅಭ್ಯರ್ಥಿಗಳನ್ನು ಸೇವೆಗೆ ಸೇರಿಸಿಕೊಳ್ಳುವಂತೆ ಆದೇಶಿಸಿತ್ತು. ಆದರೆ, ಕೆಪಿಎಸ್​ಸಿ ತೀರ್ಪನ್ನು ಬೇಕೆಂದೇ ತಪ್ಪಾಗಿ ಅರ್ಥೈಸಿ ಹೆಚ್ಚಿನ ಉತ್ತರ ಪತ್ರಿಕೆಗಳನ್ನು ಪರಿಗಣಿಸಿದೆ. ಈ ಮೂಲಕ ಉದ್ದೇಶ ಪೂರ್ವಕವಾಗಿಯೇ ನ್ಯಾಯಾಂಗ ನಿಂದನೆ ಎಸಗಿದೆ ಎಂದು ಆರೋಪಿಸಿದರು.

ನ್ಯಾಯಾಲಯದ ಆದೇಶದಂತೆ 76 ಅಭ್ಯರ್ಥಿಗಳನ್ನು ನೇಮಕಾತಿಗೆ ಪರಿಗಣಿಸಬೇಕಾಗಿತ್ತು. ಆದರೆ, ಕೆಪಿಎಸ್​ಸಿ 96 ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಬೆಂಗಳೂರು : 1998ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ವಿಚಾರವಾಗಿ ನ್ಯಾಯಾಲಯ ನೀಡಿದ್ದ ಆದೇಶ ಪಾಲನೆ ಮಾಡಿಲ್ಲ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ಕರ್ನಾಟಕ ಲೋಕಸೇವಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಚನ್ನಪ್ಪ ಮತ್ತಿತರೆ ಅಭ್ಯರ್ಥಿಗಳು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರ ವಾದ ಆಲಿಸಿದ ಬಳಿಕ ಕೆಪಿಎಸ್​ಸಿ ನ್ಯಾಯಾಂಗ ನಿಂದನೆ ಎಸಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಅಭಿಪ್ರಾಯಪಟ್ಟಿತು. ಅಲ್ಲದೆ, ಕೆಪಿಎಸ್​ಸಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಡಿ.ಆರ್. ರವಿಶಂಕರ್, ಹಗರಣದ ಬಗ್ಗೆ ನ್ಯಾಯಾಲಯ 2016ರಲ್ಲಿ ತೀರ್ಪು ನೀಡಿ 91 ಉತ್ತರ ಪತ್ರಿಕೆಗಳ ಮೌಲ್ಯಮಾಪನ ಅಂಕ ಆಧರಿಸಿ ಅರ್ಹ ಅಭ್ಯರ್ಥಿಗಳನ್ನು ಸೇವೆಗೆ ಸೇರಿಸಿಕೊಳ್ಳುವಂತೆ ಆದೇಶಿಸಿತ್ತು. ಆದರೆ, ಕೆಪಿಎಸ್​ಸಿ ತೀರ್ಪನ್ನು ಬೇಕೆಂದೇ ತಪ್ಪಾಗಿ ಅರ್ಥೈಸಿ ಹೆಚ್ಚಿನ ಉತ್ತರ ಪತ್ರಿಕೆಗಳನ್ನು ಪರಿಗಣಿಸಿದೆ. ಈ ಮೂಲಕ ಉದ್ದೇಶ ಪೂರ್ವಕವಾಗಿಯೇ ನ್ಯಾಯಾಂಗ ನಿಂದನೆ ಎಸಗಿದೆ ಎಂದು ಆರೋಪಿಸಿದರು.

ನ್ಯಾಯಾಲಯದ ಆದೇಶದಂತೆ 76 ಅಭ್ಯರ್ಥಿಗಳನ್ನು ನೇಮಕಾತಿಗೆ ಪರಿಗಣಿಸಬೇಕಾಗಿತ್ತು. ಆದರೆ, ಕೆಪಿಎಸ್​ಸಿ 96 ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.