ETV Bharat / state

12 ಜಿಲ್ಲೆಗಳಿಗೆ ಮುಂದಿನ 2ದಿನ ಮತ್ತೆ ಯಲ್ಲೋ ಅಲರ್ಟ್: ಮುಂದುವರೆಯಲಿದೆ ವರುಣನ ಅಬ್ಬರ

author img

By

Published : Oct 14, 2021, 10:07 PM IST

ವರುಣ ತನ್ನ ಆರ್ಭಟವನ್ನು ಶೀಘ್ರದಲ್ಲಿ ನಿಲ್ಲಿಸುವ ಲಕ್ಷಣ ಕಂಡು ಬರುತ್ತಿಲ್ಲ. ಈ ಕಾರಣದಿಂದಲೇ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಎರಡು ದಿನ ಯಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

12 ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯಲ್ಲೋ ಅಲರ್ಟ್
12 ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 3 ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

12 ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್:

ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಮತ್ತು ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಅಕ್ಟೋಬರ್ 15 ಮತ್ತು 16 ರಂದು ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಬೆಳಗಾವಿ, ಗದಗ, ಕೊಪ್ಪಳದಲ್ಲಿ ನಾಳೆ ಮಾತ್ರ (ಅಕ್ಟೋಬರ್ 15 ಕ್ಕೆ) ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 3 ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

12 ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್:

ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಮತ್ತು ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಅಕ್ಟೋಬರ್ 15 ಮತ್ತು 16 ರಂದು ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಬೆಳಗಾವಿ, ಗದಗ, ಕೊಪ್ಪಳದಲ್ಲಿ ನಾಳೆ ಮಾತ್ರ (ಅಕ್ಟೋಬರ್ 15 ಕ್ಕೆ) ಯೆಲ್ಲೋ ಅಲರ್ಟ್ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.