ETV Bharat / state

ಕೋವಿಡ್ ಕೇರ್‌ ಕೇಂದ್ರಗಳಲ್ಲಿ 20 ಸಾವಿರ ಬೆಡ್, ಐಸಿಯು ಸೌಲಭ್ಯ: ಉನ್ನತಮಟ್ಟದ ಸಭೆಯಲ್ಲಿ ತೀರ್ಮಾನ

author img

By

Published : Jul 6, 2020, 10:31 PM IST

ಕೊರೊನಾ ಪರಿಸ್ಥಿತಿ ನಿಯಂತ್ರಣ ಕುರಿತು ಇಂದು ಸಂಜೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್​​ ನಾರಾಯಣ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಬೆಡ್​ಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿಸುವ ಬಗ್ಗೆ ಸಮಾಲೋಚನೆ ನಡೆಸಿದರು.

ಉನ್ನತಮಟ್ಟದ ಸಭೆ
ಉನ್ನತಮಟ್ಟದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಭವಿಷ್ಯದಲ್ಲಿ ಎದುರಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವ ರಾಜ್ಯ ಸರ್ಕಾರ, ನಗರದ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿನ ಬೆಡ್‌ಗಳ ಪ್ರಮಾಣವನ್ನು 20 ಸಾವಿರದವರೆಗೂ ಹೆಚ್ಚಿಸಲು ನಿರ್ಧಾರ ತಗೆದುಕೊಂಡಿದೆ.

ಕೊರೊನಾ ಪರಿಸ್ಥಿತಿ ನಿಯಂತ್ರಣ ಕುರಿತು ಇಂದು ಸಂಜೆ ಉನ್ನತ ಮಟ್ಟದ ಸಭೆ ನಡೆಸಿದ, ಕೋವಿಡ್‌ ಕೇರ್‌ ಕೇಂದ್ರಗಳ (ಸಿಸಿಸಿ) ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್​​ ನಾರಾಯಣ, ಬೆಡ್​ಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿಸುವ ಬಗ್ಗೆ ಸಮಾಲೋಚನೆ ನಡೆಸಿದರು.

ಈಗಾಗಲೇ ನಮ್ಮಲ್ಲಿ 1250 ಬೆಡ್​​ಗಳು ಲಭ್ಯ ಇವೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರವನ್ನು ಜಗತ್ತಿನಲ್ಲಿಯೇ ಅತಿ ದೊಡ್ಡ ಕೋವಿಡ್ ಕೇಂದ್ರವನ್ನಾಗಿ ಸಿದ್ಧಪಡಿಸಲಾಗಿದೆ. ಇಲ್ಲಿ 3-4 ದಿನಗಳಲ್ಲಿ 10,100 ಬೆಡ್‌ಗಳು ಸಿಗಲಿವೆ. ವಾರದಲ್ಲಿ ಒಟ್ಟಾರೆ 20 ಸಾವಿರ ಬೆಡ್ ಲಭ್ಯವಾಗಲಿವೆ. ಇನ್ನೂ ಅಗತ್ಯ ಬಿದ್ದರೆ ತಿಂಗಳಾಂತ್ಯದ ವೇಳೆಗೆ ಬೆಡ್‌ಗಳ ಸಂಖ್ಯೆಯನ್ನು 30 ಸಾವಿರಕ್ಕೆ ಹೆಚ್ಚಿಸುವ ಉದ್ದೇಶ ಇದೆ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್​ ನಾರಾಯಣ

ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ನಗರದ ಕೆಲವು ಶಾಸಕರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ಡಿಸಿಎಂ, ಕೋವಿಡ್ ಕೇರ್ ಕೇಂದ್ರಗಳಲ್ಲಿ ತಲಾ ಹತ್ತು ಬೆಡ್‌ಗಳ ತುರ್ತು ನಿಗಾ ಘಟಕಗಳನ್ನು ಸ್ಥಾಪಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸದ್ಯಕ್ಕೆ ನಮ್ಮಲ್ಲಿರುವ ಬೆಡ್​​ಗಳಲ್ಲಿ 2,250 ಬೆಡ್​ಗಳು ಬಳಕೆಯಾಗುತ್ತಿವೆ. ಕೆಲ ರೋಗಿಗಳು ಗುಣಮುಖರಾಗಿ ಮನೆಗೆ ಹೋಗುತ್ತಿರುವುದರಿಂದ ಬೆಡ್​​ಗಳು ಖಾಲಿ ಕೂಡ ಆಗುತ್ತಿವೆ. ಅಲ್ಲದೆ ಮನೆಯಲ್ಲೇ ಚಿಕಿತ್ಸೆ ಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ. ಅಪಾರ್ಟ್‌ಮೆಂಟ್​ಗಳಲ್ಲಿ ಇರುವ ಕ್ಲಬ್ ಹೌಸ್‌ಗಳನ್ನು ಬಳಕೆ ಮಾಡಿಕೊಂಡು ಅಲ್ಲಿಯೂ ನಮಗೆ ಕೋವಿಡ್‌ ಕೇರ್‌ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶ ಇದೆ. ಇದಕ್ಕೆ ಅಪಾರ್ಟ್‌ಮೆಂಟ್‌ ಸಂಘಗಳ ಪ್ರತಿನಿಧಿಗಳು ಒಪ್ಪಿದ್ದಾರೆ ಎಂದು ಅವರು ತಿಳಿಸಿದರು.

ಸದ್ಯಕ್ಕೆ ಬೆಂಗಳೂರಿನಲ್ಲಿ ನಾಲ್ಕು ಕೋವಿಡ್ ಕೇರ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಆ ಪೈಕಿ ಜಿಕೆವಿಕೆಯಲ್ಲಿ 770, ಹಜ್ ಭವನದಲ್ಲಿ 432, ರವಿ ಶಂಕರ್ ಗುರೂಜಿ ಆಶ್ರಮದಲ್ಲಿ 176, ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ 64 ಬೆಡ್​ಗಳು ಸಿದ್ಧ ಇವೆ. ಜಿಕೆವಿಕೆ ಕ್ಯಾಂಪಸ್​​ನಲ್ಲಿರುವ ತೋಟಗಾರಿಕೆ ವಿಭಾಗದಲ್ಲಿ 450 ಬೆಡ್​ಗಳಿಗೆ ಹೆಚ್ಚುವರಿಯಾಗಿ ವ್ಯವಸ್ಥೆ ಮಾಡಲಾಗಿದೆ. ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ 250 ಬೆಡ್​ಗಳು ಈಗಾಗಲೇ ರೆಡಿ ಇವೆ. ಜತೆಗೆ ಬೆಂಗಳೂರು ವಿವಿಯ ಬಾಲಕಿಯರ ಹಾಸ್ಟೆಲ್​​ನಲ್ಲಿ 200 ಬೆಡ್ ವ್ಯವಸ್ಥೆ ಮಾಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಸಮರ್ಥ ಭಾರತ ಸ್ವಯಂ ಸೇವಕರು:

ಕೋವಿಡ್ ಕೇರ್ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್​ಗಳು ಮತ್ತಿತರೆ ಸಿಬ್ಬಂದಿಗೆ ನೆರವಾಗಲು ಮಂಗಳವಾರದಿಂದಲೇ ಸಮರ್ಥ ಭಾರತ ಸಂಘಟನೆಯ ಸ್ವಯಂ ಸೇವಕರು ಲಭ್ಯವಾಗಲಿದ್ದಾರೆ. ಮೊದಲಿಗೆ ಇವರು ಜಿಕೆವಿಕೆಯ ಕೇಂದ್ರದಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಅಲ್ಲಿ ಅಗತ್ಯವಾಗಿ ಮಾಡಬೇಕಿರುವ ವೈದ್ಯಕೀಯೇತರ ಎಲ್ಲಾ ಕೆಲಸಗಳನ್ನು ಈ ಸ್ವಯಂ ಸೇವಕರು ಮಾಡಲಿದ್ದಾರೆ. ಇವರ ಜತೆಗೆ ಪ್ರತಿ ಕೇಂದ್ರಕ್ಕೂ ಒಬ್ಬೊಬ್ಬ ವ್ಯವಸ್ಥಾಪಕರನ್ನು ನಿಯೋಜಿಸಲಾಗುವುದು ಹಾಗೂ ಎಲ್ಲಾ ಕಡೆ ಕೋವಿಡ್ ಮಾರ್ಷಲ್​​ಗಳನ್ನು ನೇಮಿಸಲಾಗುತ್ತಿದೆ. ಹೌಸ್ ಕೀಪಿಂಗ್ ಸಿಬ್ಬಂದಿಯೂ ಇರುತ್ತಾರೆ. ಎರಡು ಆ್ಯಂಬುಲೆನ್ಸ್​​ಗಳನ್ನು ಸದಾ ಕೇಂದ್ರಗಳಲ್ಲಿ ಇರುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ವಿವರಿಸಿದರು.

ಗುಣಮಟ್ಟದ ಆಹಾರ:

ಕೋವಿಡ್ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ಸಿಬ್ಬಂದಿ ಹಾಗೂ ರೋಗಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ. ಹಜ್ ಭವನದಲ್ಲಿ ಸಮಸ್ಯೆಯಾಗಿತ್ತು. ಅದನ್ನು ಸರಿಪಡಿಸಲಾಗಿದೆ. ಈ ಕ್ಷಣದಿಂದ ಎಲ್ಲೆಡೆಗೂ ಉತ್ತಮ ಆಹಾರವನ್ನು ಪೂರೈಕೆ ಮಾಡುವುದರ ಜತೆಗೆ ವೈದ್ಯಕೀಯ ಸಿಬ್ಬಂದಿಗೆ ಹಣ್ಣು ನೀಡುವ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಡಿಸಿಎಂ ಹೇಳಿದರು. ಕೋವಿಡ್‌ ಕೇಂದ್ರಗಳಿಗೆ ಆಹಾರ ಸರಬರಾಜು ಮಾಡುತ್ತಿರುವ ಇಸ್ಕಾನ್ ಸಂಸ್ಥೆಯ ಪ್ರತಿನಿಧಿಗಳು ಕೂಡ ಈ ಸಭೆಯಲ್ಲಿ ಹಾಜರಿದ್ದರು. ಗುಣಮಟ್ಟದ ಜತೆಗೆ ಕೊಡುತ್ತಿರುವ ಆಹಾರದ ಪ್ರಮಾಣವನ್ನು ಹೆಚ್ಚು ಮಾಡಬೇಕೆಂದೂ ಡಿಸಿಎಂ ಅವರಿಗೆ ಸೂಚಿಸಿದರು.

ಶಾಸಕರಾದ ರವಿ ಸುಬ್ರಹ್ಮಣ್ಯ, ವೈ.ಎ.ನಾರಾಯಣಸ್ವಾಮಿ, ಲೆಹರ್‌ ಸಿಂಗ್‌, ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಬಿಎಂಪಿ ಜಂಟಿ ಆಯುಕ್ತ ಸರ್ಫೋಜ್‌ ಖಾನ್, ಆರ್‌ಎಸ್‌ಎಸ್‌ನ ದಕ್ಷಿಣ ಕ್ಷೇತ್ರೀಯ ಕಾರ್ಯವಾಹಕ ತಿಪ್ಪೇಸ್ವಾಮಿ, ಸಮರ್ಥ ಭಾರತ ಸಂಸ್ಥೆಯ ಶ್ರೀಧರ ಸೇರಿದಂತೆ ಇತರರು ಸಭೆಯಲ್ಲಿ ಹಾಜರಿದ್ದರು.

ಆರೋಗ್ಯ ಇಲಾಖೆ ನಿದೇಶಕರಿಗೆ ಕ್ಲಾಸ್:

ಕೋವಿಡ್ ಕೇರ್ ಕೇಂದ್ರಗಳಲ್ಲಿ ಐಸಿಯು ವ್ಯವಸ್ಥೆ ಮಾಡುವುದು ಕಷ್ಟ ಎಂದ ಹೇಳಿದ ಆರೋಗ್ಯ ಇಲಾಖೆ ನಿರ್ದೇಶಕ ಓಂಪ್ರಕಾಶ್ ಪಾಟೀಲ ಅವರಿಗೆ ಉಪ ಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ ತರಾಟೆಗೆ ತೆಗೆದುಕೊಂಡ ಪ್ರಸಂಗ ಸಭೆಯಲ್ಲಿ ನಡೆಯಿತು.

ನಗರದಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿರುವ ಕೋವಿಡ್ ಕೇಂದ್ರಗಳಲ್ಲಿ ಮತ್ತು ಹೊಸದಾಗಿ ತೆರೆಯುವ ಕೇಂದ್ರಗಳಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯುವುದು ಕಷ್ಟ. ಬೇಕಾದರೆ ಅಂತಹ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಬಹುದು ಎಂದಾಗ ಉಪ ಮುಖ್ಯಮಂತ್ರಿ ಸಿಟ್ಟಾದರು. ಹಾಲಿ ಆಸ್ಪತ್ರೆಗೆ ಸ್ಥಳಾಂತರಿಸುವುದು ವಿಳಂಬವಾದಾಗ ರೋಗಿಗಳಿಗೆ ಅನಾನುಕೂಲ ಆಗಬಾರದು ಎನ್ನುವ ಕಾರಣಕ್ಕೆ ಐಸಿಯು ವ್ಯವಸ್ಥೆ ಕೋವಿಡ್ ಕೇಂದ್ರಗಳಲ್ಲಿಯೂ ಇರಲಿ ಎಂದು ಹೇಳುತ್ತಿರುವುದು. ಇದಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ನಿಮ್ಮಿಂದ ಮಾಡಲಾಗದಿದ್ದರೆ ಬೇರೆಯವರಿಂದ ಮಾಡಿಸುತ್ತೇವೆ. ಪ್ರತಿ ಕೇಂದ್ರದಲ್ಲಿಯೂ ಕೊನೆಯ ಪಕ್ಷ 10 ಐಸಿಯುಗಳನ್ನಾದರೂ ಮಾಡಲೇಬೇಕು ಎಂದು ತಾಕೀತು ಮಾಡಿದರು.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಭವಿಷ್ಯದಲ್ಲಿ ಎದುರಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವ ರಾಜ್ಯ ಸರ್ಕಾರ, ನಗರದ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿನ ಬೆಡ್‌ಗಳ ಪ್ರಮಾಣವನ್ನು 20 ಸಾವಿರದವರೆಗೂ ಹೆಚ್ಚಿಸಲು ನಿರ್ಧಾರ ತಗೆದುಕೊಂಡಿದೆ.

ಕೊರೊನಾ ಪರಿಸ್ಥಿತಿ ನಿಯಂತ್ರಣ ಕುರಿತು ಇಂದು ಸಂಜೆ ಉನ್ನತ ಮಟ್ಟದ ಸಭೆ ನಡೆಸಿದ, ಕೋವಿಡ್‌ ಕೇರ್‌ ಕೇಂದ್ರಗಳ (ಸಿಸಿಸಿ) ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್​​ ನಾರಾಯಣ, ಬೆಡ್​ಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿಸುವ ಬಗ್ಗೆ ಸಮಾಲೋಚನೆ ನಡೆಸಿದರು.

ಈಗಾಗಲೇ ನಮ್ಮಲ್ಲಿ 1250 ಬೆಡ್​​ಗಳು ಲಭ್ಯ ಇವೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರವನ್ನು ಜಗತ್ತಿನಲ್ಲಿಯೇ ಅತಿ ದೊಡ್ಡ ಕೋವಿಡ್ ಕೇಂದ್ರವನ್ನಾಗಿ ಸಿದ್ಧಪಡಿಸಲಾಗಿದೆ. ಇಲ್ಲಿ 3-4 ದಿನಗಳಲ್ಲಿ 10,100 ಬೆಡ್‌ಗಳು ಸಿಗಲಿವೆ. ವಾರದಲ್ಲಿ ಒಟ್ಟಾರೆ 20 ಸಾವಿರ ಬೆಡ್ ಲಭ್ಯವಾಗಲಿವೆ. ಇನ್ನೂ ಅಗತ್ಯ ಬಿದ್ದರೆ ತಿಂಗಳಾಂತ್ಯದ ವೇಳೆಗೆ ಬೆಡ್‌ಗಳ ಸಂಖ್ಯೆಯನ್ನು 30 ಸಾವಿರಕ್ಕೆ ಹೆಚ್ಚಿಸುವ ಉದ್ದೇಶ ಇದೆ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್​ ನಾರಾಯಣ

ಕಂದಾಯ ಸಚಿವ ಆರ್.ಅಶೋಕ್ ಸೇರಿದಂತೆ ನಗರದ ಕೆಲವು ಶಾಸಕರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ಡಿಸಿಎಂ, ಕೋವಿಡ್ ಕೇರ್ ಕೇಂದ್ರಗಳಲ್ಲಿ ತಲಾ ಹತ್ತು ಬೆಡ್‌ಗಳ ತುರ್ತು ನಿಗಾ ಘಟಕಗಳನ್ನು ಸ್ಥಾಪಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸದ್ಯಕ್ಕೆ ನಮ್ಮಲ್ಲಿರುವ ಬೆಡ್​​ಗಳಲ್ಲಿ 2,250 ಬೆಡ್​ಗಳು ಬಳಕೆಯಾಗುತ್ತಿವೆ. ಕೆಲ ರೋಗಿಗಳು ಗುಣಮುಖರಾಗಿ ಮನೆಗೆ ಹೋಗುತ್ತಿರುವುದರಿಂದ ಬೆಡ್​​ಗಳು ಖಾಲಿ ಕೂಡ ಆಗುತ್ತಿವೆ. ಅಲ್ಲದೆ ಮನೆಯಲ್ಲೇ ಚಿಕಿತ್ಸೆ ಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ. ಅಪಾರ್ಟ್‌ಮೆಂಟ್​ಗಳಲ್ಲಿ ಇರುವ ಕ್ಲಬ್ ಹೌಸ್‌ಗಳನ್ನು ಬಳಕೆ ಮಾಡಿಕೊಂಡು ಅಲ್ಲಿಯೂ ನಮಗೆ ಕೋವಿಡ್‌ ಕೇರ್‌ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶ ಇದೆ. ಇದಕ್ಕೆ ಅಪಾರ್ಟ್‌ಮೆಂಟ್‌ ಸಂಘಗಳ ಪ್ರತಿನಿಧಿಗಳು ಒಪ್ಪಿದ್ದಾರೆ ಎಂದು ಅವರು ತಿಳಿಸಿದರು.

ಸದ್ಯಕ್ಕೆ ಬೆಂಗಳೂರಿನಲ್ಲಿ ನಾಲ್ಕು ಕೋವಿಡ್ ಕೇರ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಆ ಪೈಕಿ ಜಿಕೆವಿಕೆಯಲ್ಲಿ 770, ಹಜ್ ಭವನದಲ್ಲಿ 432, ರವಿ ಶಂಕರ್ ಗುರೂಜಿ ಆಶ್ರಮದಲ್ಲಿ 176, ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ 64 ಬೆಡ್​ಗಳು ಸಿದ್ಧ ಇವೆ. ಜಿಕೆವಿಕೆ ಕ್ಯಾಂಪಸ್​​ನಲ್ಲಿರುವ ತೋಟಗಾರಿಕೆ ವಿಭಾಗದಲ್ಲಿ 450 ಬೆಡ್​ಗಳಿಗೆ ಹೆಚ್ಚುವರಿಯಾಗಿ ವ್ಯವಸ್ಥೆ ಮಾಡಲಾಗಿದೆ. ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ 250 ಬೆಡ್​ಗಳು ಈಗಾಗಲೇ ರೆಡಿ ಇವೆ. ಜತೆಗೆ ಬೆಂಗಳೂರು ವಿವಿಯ ಬಾಲಕಿಯರ ಹಾಸ್ಟೆಲ್​​ನಲ್ಲಿ 200 ಬೆಡ್ ವ್ಯವಸ್ಥೆ ಮಾಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಸಮರ್ಥ ಭಾರತ ಸ್ವಯಂ ಸೇವಕರು:

ಕೋವಿಡ್ ಕೇರ್ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್​ಗಳು ಮತ್ತಿತರೆ ಸಿಬ್ಬಂದಿಗೆ ನೆರವಾಗಲು ಮಂಗಳವಾರದಿಂದಲೇ ಸಮರ್ಥ ಭಾರತ ಸಂಘಟನೆಯ ಸ್ವಯಂ ಸೇವಕರು ಲಭ್ಯವಾಗಲಿದ್ದಾರೆ. ಮೊದಲಿಗೆ ಇವರು ಜಿಕೆವಿಕೆಯ ಕೇಂದ್ರದಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಅಲ್ಲಿ ಅಗತ್ಯವಾಗಿ ಮಾಡಬೇಕಿರುವ ವೈದ್ಯಕೀಯೇತರ ಎಲ್ಲಾ ಕೆಲಸಗಳನ್ನು ಈ ಸ್ವಯಂ ಸೇವಕರು ಮಾಡಲಿದ್ದಾರೆ. ಇವರ ಜತೆಗೆ ಪ್ರತಿ ಕೇಂದ್ರಕ್ಕೂ ಒಬ್ಬೊಬ್ಬ ವ್ಯವಸ್ಥಾಪಕರನ್ನು ನಿಯೋಜಿಸಲಾಗುವುದು ಹಾಗೂ ಎಲ್ಲಾ ಕಡೆ ಕೋವಿಡ್ ಮಾರ್ಷಲ್​​ಗಳನ್ನು ನೇಮಿಸಲಾಗುತ್ತಿದೆ. ಹೌಸ್ ಕೀಪಿಂಗ್ ಸಿಬ್ಬಂದಿಯೂ ಇರುತ್ತಾರೆ. ಎರಡು ಆ್ಯಂಬುಲೆನ್ಸ್​​ಗಳನ್ನು ಸದಾ ಕೇಂದ್ರಗಳಲ್ಲಿ ಇರುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ವಿವರಿಸಿದರು.

ಗುಣಮಟ್ಟದ ಆಹಾರ:

ಕೋವಿಡ್ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ಸಿಬ್ಬಂದಿ ಹಾಗೂ ರೋಗಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ. ಹಜ್ ಭವನದಲ್ಲಿ ಸಮಸ್ಯೆಯಾಗಿತ್ತು. ಅದನ್ನು ಸರಿಪಡಿಸಲಾಗಿದೆ. ಈ ಕ್ಷಣದಿಂದ ಎಲ್ಲೆಡೆಗೂ ಉತ್ತಮ ಆಹಾರವನ್ನು ಪೂರೈಕೆ ಮಾಡುವುದರ ಜತೆಗೆ ವೈದ್ಯಕೀಯ ಸಿಬ್ಬಂದಿಗೆ ಹಣ್ಣು ನೀಡುವ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಡಿಸಿಎಂ ಹೇಳಿದರು. ಕೋವಿಡ್‌ ಕೇಂದ್ರಗಳಿಗೆ ಆಹಾರ ಸರಬರಾಜು ಮಾಡುತ್ತಿರುವ ಇಸ್ಕಾನ್ ಸಂಸ್ಥೆಯ ಪ್ರತಿನಿಧಿಗಳು ಕೂಡ ಈ ಸಭೆಯಲ್ಲಿ ಹಾಜರಿದ್ದರು. ಗುಣಮಟ್ಟದ ಜತೆಗೆ ಕೊಡುತ್ತಿರುವ ಆಹಾರದ ಪ್ರಮಾಣವನ್ನು ಹೆಚ್ಚು ಮಾಡಬೇಕೆಂದೂ ಡಿಸಿಎಂ ಅವರಿಗೆ ಸೂಚಿಸಿದರು.

ಶಾಸಕರಾದ ರವಿ ಸುಬ್ರಹ್ಮಣ್ಯ, ವೈ.ಎ.ನಾರಾಯಣಸ್ವಾಮಿ, ಲೆಹರ್‌ ಸಿಂಗ್‌, ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಬಿಎಂಪಿ ಜಂಟಿ ಆಯುಕ್ತ ಸರ್ಫೋಜ್‌ ಖಾನ್, ಆರ್‌ಎಸ್‌ಎಸ್‌ನ ದಕ್ಷಿಣ ಕ್ಷೇತ್ರೀಯ ಕಾರ್ಯವಾಹಕ ತಿಪ್ಪೇಸ್ವಾಮಿ, ಸಮರ್ಥ ಭಾರತ ಸಂಸ್ಥೆಯ ಶ್ರೀಧರ ಸೇರಿದಂತೆ ಇತರರು ಸಭೆಯಲ್ಲಿ ಹಾಜರಿದ್ದರು.

ಆರೋಗ್ಯ ಇಲಾಖೆ ನಿದೇಶಕರಿಗೆ ಕ್ಲಾಸ್:

ಕೋವಿಡ್ ಕೇರ್ ಕೇಂದ್ರಗಳಲ್ಲಿ ಐಸಿಯು ವ್ಯವಸ್ಥೆ ಮಾಡುವುದು ಕಷ್ಟ ಎಂದ ಹೇಳಿದ ಆರೋಗ್ಯ ಇಲಾಖೆ ನಿರ್ದೇಶಕ ಓಂಪ್ರಕಾಶ್ ಪಾಟೀಲ ಅವರಿಗೆ ಉಪ ಮುಖ್ಯಮಂತ್ರಿ ಅಶ್ವತ್ಥ್​ ನಾರಾಯಣ ತರಾಟೆಗೆ ತೆಗೆದುಕೊಂಡ ಪ್ರಸಂಗ ಸಭೆಯಲ್ಲಿ ನಡೆಯಿತು.

ನಗರದಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿರುವ ಕೋವಿಡ್ ಕೇಂದ್ರಗಳಲ್ಲಿ ಮತ್ತು ಹೊಸದಾಗಿ ತೆರೆಯುವ ಕೇಂದ್ರಗಳಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯುವುದು ಕಷ್ಟ. ಬೇಕಾದರೆ ಅಂತಹ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಬಹುದು ಎಂದಾಗ ಉಪ ಮುಖ್ಯಮಂತ್ರಿ ಸಿಟ್ಟಾದರು. ಹಾಲಿ ಆಸ್ಪತ್ರೆಗೆ ಸ್ಥಳಾಂತರಿಸುವುದು ವಿಳಂಬವಾದಾಗ ರೋಗಿಗಳಿಗೆ ಅನಾನುಕೂಲ ಆಗಬಾರದು ಎನ್ನುವ ಕಾರಣಕ್ಕೆ ಐಸಿಯು ವ್ಯವಸ್ಥೆ ಕೋವಿಡ್ ಕೇಂದ್ರಗಳಲ್ಲಿಯೂ ಇರಲಿ ಎಂದು ಹೇಳುತ್ತಿರುವುದು. ಇದಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ನಿಮ್ಮಿಂದ ಮಾಡಲಾಗದಿದ್ದರೆ ಬೇರೆಯವರಿಂದ ಮಾಡಿಸುತ್ತೇವೆ. ಪ್ರತಿ ಕೇಂದ್ರದಲ್ಲಿಯೂ ಕೊನೆಯ ಪಕ್ಷ 10 ಐಸಿಯುಗಳನ್ನಾದರೂ ಮಾಡಲೇಬೇಕು ಎಂದು ತಾಕೀತು ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.