ETV Bharat / state

ಕೆ.ಜಿ ಹಳ್ಳಿ ಗಲಭೆ: ಎಸಿಪಿ ಸೇರಿ 60 ಪೊಲೀಸರಿಗೆ ಗಾಯ, 30 ಜನರ ಬಂಧಿಸಿದ ಖಾಕಿ ಪಡೆ! - ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ

ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಅನೇಕ ಪೊಲೀಸರಿಗೆ ಗಾಯಗಳಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕರ ಬಂಧನ ಮಾಡಲಾಗಿದೆ.

Sandeep Patil
Sandeep Patil
author img

By

Published : Aug 12, 2020, 4:10 AM IST

ಬೆಂಗಳೂರು: ಫೇಸ್​ಬುಕ್​ ಪೋಸ್ಟ್​ ವಿಚಾರವಾಗಿ ನಗರದ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಹಾಗೂ ಕಾವಲ್​ಭೈರ್​ ಸಂದ್ರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಜನರ ಬಂಧನ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಖಂಡ ಶ್ರೀನಿವಾಸಮೂರ್ತಿ ಮನೆ,ಕಚೇರಿ ಮೇಲೆ ಕಲ್ಲು ತೂರಾಟ; ಶಾಂತಿ ಕಾಪಾಡುವಂತೆ ಮನವಿ ಮಾಡಿದ ಶಾಸಕ!

ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ 30 ಜನರ ಬಂಧನ ಮಾಡಲಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಇತರರಿಗೋಸ್ಕರ ಶೋಧ ಕಾರ್ಯ ಮುಂದುವರಿದಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್​ ಆಯುಕ್ತ ಸಂದೀಪ್​ ಪಾಟೀಲ್​ ಮಾಹಿತಿ ನೀಡಿದ್ದಾರೆ.

ಗಲಭೆ ಪೀಡಿತ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ

ಮುಂಜಾಗ್ರತ ಕ್ರಮವಾಗಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಏರಿಯಾದಿಂದ ಹೊರಗೆ ಹಾಗೂ ಒಳ ಬಾರದಂತೆ ಎಲ್ಲ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಸೆಕ್ಷನ್​ 144 ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ತಿಳಿಸಿದ್ದಾರೆ.

ಗಲಭೆ ಸೃಷ್ಟಿಸಿದ ಕಿಡಿಗೇಡಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲಾಗುತ್ತಿದೆ. ಈ ಹಿಂದೆ ಕಾರ್ಯನಿರ್ವಹಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕರೆಯಿಸಿಕೊಳ್ಳಲಾಗುತ್ತಿದೆ. ಕಲ್ಲು ತೂರಾಟ ನಡೆಸಿದವರ ವಿರುದ್ಧ ಬೆಳಗ್ಗೆಯೊಳಗೆ ಬಂಧಿಸಿ ಗುಂಡಾ ಕಾಯ್ದೆಯಡಿ ಜೈಲಿಗೆ ಅಟ್ಟಲು ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.

  • Two people died in police firing, one injured shifted to a hospital. Restrictions under Section 144 of CrPC imposed in Bengaluru & curfew imposed in DJ Halli & KG Halli police station limits of the city: Bengaluru Police Commissioner Kamal Pant https://t.co/VlZKo8CW3d

    — ANI (@ANI) August 11, 2020 " class="align-text-top noRightClick twitterSection" data=" ">

ಸ್ಥಳದಲ್ಲಿ ಈಗಾಗಲೇ 1500ಕ್ಕೂ ಹೆಚ್ಚು ಪೊಲೀಸರು ಬೀಡು ಬಿಟ್ಟಿ ಕಾರ್ಯನಿರ್ವಹಿಸುತ್ತಿದ್ದಾರೆ.‌ ಬೆಳಗ್ಗೆ ಇನ್ನೂ 20 ತುಕಡಿಗಳು ಬರಲಿವೆ. ಈಗಾಗಲೇ ಕೆಎಸ್ಆರ್,‌ರಾಜ್ಯ ಕೈಗಾರಿಕಾ ಪಡೆಗಳು ಕಾರ್ಯನಿರ್ವಹಿಸುತ್ತಿವೆ.

60 ಪೊಲೀಸರಿಗೆ ಗಾಯ

ಘಟನೆ ವೇಳೆ ಎಸಿಪಿ ಸೇರಿದಂತೆ 60 ಪೊಲೀಸ್​ ಸಿಬ್ಬಂದಿಗೆ ಗಾಯಗಳಾಗಿದ್ದು, ಪರಿಸ್ಥಿತಿ ನಿಯಂತ್ರಣ ತೆಗೆದುಕೊಂಡು ಬರುವ ಉದ್ದೇಶದಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾಗಿ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ತಿಳಿಸಿದ್ದಾರೆ.

ಬೆಂಗಳೂರು: ಫೇಸ್​ಬುಕ್​ ಪೋಸ್ಟ್​ ವಿಚಾರವಾಗಿ ನಗರದ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಹಾಗೂ ಕಾವಲ್​ಭೈರ್​ ಸಂದ್ರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಜನರ ಬಂಧನ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಖಂಡ ಶ್ರೀನಿವಾಸಮೂರ್ತಿ ಮನೆ,ಕಚೇರಿ ಮೇಲೆ ಕಲ್ಲು ತೂರಾಟ; ಶಾಂತಿ ಕಾಪಾಡುವಂತೆ ಮನವಿ ಮಾಡಿದ ಶಾಸಕ!

ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ 30 ಜನರ ಬಂಧನ ಮಾಡಲಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಇತರರಿಗೋಸ್ಕರ ಶೋಧ ಕಾರ್ಯ ಮುಂದುವರಿದಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್​ ಆಯುಕ್ತ ಸಂದೀಪ್​ ಪಾಟೀಲ್​ ಮಾಹಿತಿ ನೀಡಿದ್ದಾರೆ.

ಗಲಭೆ ಪೀಡಿತ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ

ಮುಂಜಾಗ್ರತ ಕ್ರಮವಾಗಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಏರಿಯಾದಿಂದ ಹೊರಗೆ ಹಾಗೂ ಒಳ ಬಾರದಂತೆ ಎಲ್ಲ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಇದರ ಜತೆಗೆ ಬೆಂಗಳೂರಿನಲ್ಲಿ ಸೆಕ್ಷನ್​ 144 ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ತಿಳಿಸಿದ್ದಾರೆ.

ಗಲಭೆ ಸೃಷ್ಟಿಸಿದ ಕಿಡಿಗೇಡಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲಾಗುತ್ತಿದೆ. ಈ ಹಿಂದೆ ಕಾರ್ಯನಿರ್ವಹಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕರೆಯಿಸಿಕೊಳ್ಳಲಾಗುತ್ತಿದೆ. ಕಲ್ಲು ತೂರಾಟ ನಡೆಸಿದವರ ವಿರುದ್ಧ ಬೆಳಗ್ಗೆಯೊಳಗೆ ಬಂಧಿಸಿ ಗುಂಡಾ ಕಾಯ್ದೆಯಡಿ ಜೈಲಿಗೆ ಅಟ್ಟಲು ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.

  • Two people died in police firing, one injured shifted to a hospital. Restrictions under Section 144 of CrPC imposed in Bengaluru & curfew imposed in DJ Halli & KG Halli police station limits of the city: Bengaluru Police Commissioner Kamal Pant https://t.co/VlZKo8CW3d

    — ANI (@ANI) August 11, 2020 " class="align-text-top noRightClick twitterSection" data=" ">

ಸ್ಥಳದಲ್ಲಿ ಈಗಾಗಲೇ 1500ಕ್ಕೂ ಹೆಚ್ಚು ಪೊಲೀಸರು ಬೀಡು ಬಿಟ್ಟಿ ಕಾರ್ಯನಿರ್ವಹಿಸುತ್ತಿದ್ದಾರೆ.‌ ಬೆಳಗ್ಗೆ ಇನ್ನೂ 20 ತುಕಡಿಗಳು ಬರಲಿವೆ. ಈಗಾಗಲೇ ಕೆಎಸ್ಆರ್,‌ರಾಜ್ಯ ಕೈಗಾರಿಕಾ ಪಡೆಗಳು ಕಾರ್ಯನಿರ್ವಹಿಸುತ್ತಿವೆ.

60 ಪೊಲೀಸರಿಗೆ ಗಾಯ

ಘಟನೆ ವೇಳೆ ಎಸಿಪಿ ಸೇರಿದಂತೆ 60 ಪೊಲೀಸ್​ ಸಿಬ್ಬಂದಿಗೆ ಗಾಯಗಳಾಗಿದ್ದು, ಪರಿಸ್ಥಿತಿ ನಿಯಂತ್ರಣ ತೆಗೆದುಕೊಂಡು ಬರುವ ಉದ್ದೇಶದಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾಗಿ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.