ETV Bharat / state

ಜೆಡಿಎಸ್ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯ ದಿನ ಆಚರಣೆ

author img

By

Published : Aug 15, 2020, 2:43 PM IST

ಕೇಂದ್ರ ಸರ್ಕಾರ ಕೆಲವು ಪ್ಯಾಕೇಜ್ ಗಳನ್ನು ಘೋಷಣೆ ಮಾಡಿ ಯಾವುದೇ ಕೆಲಸ ಮಾಡಿಲ್ಲ. ಇದರಿಂದ ಜನರು ಬೇಸತ್ತಿದ್ದಾರೆ ಎಂದು ಜೆಡಿಎಸ್ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜೆಡಿಎಸ್ ನಾಯಕ ಎಂ.ಎಸ್. ನಾರಾಯಣ ರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

dsd
ಜೆಡಿಎಸ್ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯ ದಿನ ಆಚರಣೆ

ಬೆಂಗಳೂರು: ನಗರದ ಜೆಪಿ ಭವನದಲ್ಲಿ ಜೆಡಿಎಸ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಜೆಡಿಎಸ್ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯ ದಿನ ಆಚರಣೆ

ಜೆಡಿಎಸ್ ನಾಯಕ, ಗಾಂಧಿವಾದಿ ಎಂ.ಎಸ್. ನಾರಾಯಣ ರಾವ್ ಧ್ವಜಾರೋಹಣ ಮಾಡಿ ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ ಸಮನ್ವಯದ ಕೊರತೆಯಿದ್ದು, ರಾಜ್ಯದ ಜನತೆ ಸಹ ಬೇಸತ್ತಿದ್ದಾರೆ. ಆದ್ದರಿಂದ ರಾಜಕೀಯ ಪಕ್ಷವಾಗಿ ನಮ್ಮ ಹೊಣೆಗಾರಿಕೆ ಏನಿದೆ ಎಂಬುದನ್ನು ಈಗಾಗಲೇ 2-3 ಸಭೆಯಲ್ಲಿ ನಮ್ಮ ನಾಯಕರು ಚರ್ಚೆ ಮಾಡಿದ್ದಾರೆ. ನಿರ್ದಿಷ್ಟ ಕಾರ್ಯಕ್ರಮದ ಮೂಲಕ ನಾವು ಮುಂದೆ ಹೋಗೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ. ಸರವಣ, ಬೆಂಗಳೂರು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬೆಂಗಳೂರು: ನಗರದ ಜೆಪಿ ಭವನದಲ್ಲಿ ಜೆಡಿಎಸ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಜೆಡಿಎಸ್ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯ ದಿನ ಆಚರಣೆ

ಜೆಡಿಎಸ್ ನಾಯಕ, ಗಾಂಧಿವಾದಿ ಎಂ.ಎಸ್. ನಾರಾಯಣ ರಾವ್ ಧ್ವಜಾರೋಹಣ ಮಾಡಿ ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ ಸಮನ್ವಯದ ಕೊರತೆಯಿದ್ದು, ರಾಜ್ಯದ ಜನತೆ ಸಹ ಬೇಸತ್ತಿದ್ದಾರೆ. ಆದ್ದರಿಂದ ರಾಜಕೀಯ ಪಕ್ಷವಾಗಿ ನಮ್ಮ ಹೊಣೆಗಾರಿಕೆ ಏನಿದೆ ಎಂಬುದನ್ನು ಈಗಾಗಲೇ 2-3 ಸಭೆಯಲ್ಲಿ ನಮ್ಮ ನಾಯಕರು ಚರ್ಚೆ ಮಾಡಿದ್ದಾರೆ. ನಿರ್ದಿಷ್ಟ ಕಾರ್ಯಕ್ರಮದ ಮೂಲಕ ನಾವು ಮುಂದೆ ಹೋಗೋಣ ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ. ಸರವಣ, ಬೆಂಗಳೂರು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.