ETV Bharat / state

ಮೇ 27 ರಿಂದ ಗೋವಾದಲ್ಲಿ 8ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾದಲ್ಲಿನ ಹಿಂದೂಗಳ ರಕ್ಷಣೆಯ ಬಗ್ಗೆಯೂ ಚರ್ಚಿಸಲಾಗುವುದು. ಹಿಂದೂ ನ್ಯಾಯವಾದಿಗಳ ಅಧಿವೇಶನ, ಉದ್ಯಮಿಗಳ ಅಧಿವೇಶನ, ಸೋಷಿಯಲ್ ಮೀಡಿಯಾ ಕಾನ್‌ಕ್ಲೇವ್ ಹಾಗೂ ಹಿಂದೂ ರಾಷ್ಟ್ರ ಸಂಘಟನೆ ಪ್ರಶಿಕ್ಷಣ ಮತ್ತು ಅಧಿವೇಶನಗಳನ್ನು ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

author img

By

Published : May 21, 2019, 4:39 PM IST

8ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಬಗ್ಗೆ ಮಾಹಿತಿ

ಬೆಂಗಳೂರು : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮೇ 27 ರಿಂದ ಜೂನ್ 8 ರವರೆಗೆ ಗೋವಾದ ಫೋಂಡಾದಲ್ಲಿರುವ ಶ್ರೀ ರಾಮನಾಥ ದೇವಸ್ಥಾನದಲ್ಲಿ 8ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಆಯೋಜಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಮೋಹನ ಗೌಡ ತಿಳಿಸಿದರು.

ಕಳೆದ 7 ವರ್ಷದಲ್ಲಿ ನಡೆದ ಅಖಿಲ ಭಾರತೀಯ ಹಿಂದೂ ಅಧಿವೇಶನದಿಂದಾಗಿಯೇ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ವಿಷಯದಲ್ಲಿ ದೊಡ್ಡ ಪ್ರಮಾಣದ ಜಾಗೃತಿ ಉಂಟಾಗಿದೆ. ಈ ಅಧಿವೇಶನಕ್ಕೆ ಭಾರತದ 26 ರಾಜ್ಯಗಳ ಸಹಿತ ಬಾಂಗ್ಲಾದೇಶದಿಂದ 200ಕ್ಕಿಂತ ಅಧಿಕ ಹಿಂದೂ ಸಂಘಟನೆಗಳ 800 ಜನ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

8ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಬಗ್ಗೆ ಮಾಹಿತಿ

ಕೇಂದ್ರದಲ್ಲಿ ಹೊಸ ಸರ್ಕಾರದ ಸ್ಥಾಪನೆಯ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿ, ಸಮಾನ ನಾಗರಿಕ ಕಾನೂನು, ಕಲಂ 370 ರದ್ದು ಮಾಡುವುದು, ಗೋ ಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪುನರ್ ನಿರ್ಮಾಣ ಇತ್ಯಾದಿಯಾಗಿ ಕಳೆದ ಅನೇಕ ವರ್ಷಗಳಿಂದ ನೆನೆಗುದಿಯಲ್ಲಿದ್ದ ಹಿಂದೂಗಳ ಸಮಸ್ಯೆಗಳ ಮೇಲೆ ವಿಚಾರ ವಿನಿಮಯ ಮಾಡಿ ಸರಕಾರಕ್ಕೆ ನಿರ್ಧಿಷ್ಟ ಕ್ರಮಕೈಗೊಳ್ಳುವ ದೃಷ್ಟಿಯಿಂದ ಸಂಘಟನಾತ್ಮಕ ಪ್ರಯತ್ನ ಮಾಡಲಾಗುವುದು ಎಂದರು.

ಇದರೊಂದಿಗೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾದ ಹಿಂದೂಗಳ ರಕ್ಷಣೆಯ ಬಗ್ಗೆಯೂ ಚರ್ಚಿಸಲಾಗುವುದು. ಹಿಂದೂ ನ್ಯಾಯವಾದಿಗಳ ಅಧಿವೇಶನ, ಉದ್ಯಮಿಗಳ ಅಧಿವೇಶನ, ಸೋಷಿಯಲ್ ಮೀಡಿಯಾ ಕಾನ್‌ಕ್ಲೇವ್ ಹಾಗೂ ಹಿಂದೂ ರಾಷ್ಟ್ರ ಸಂಘಟನೆ ಪ್ರಶಿಕ್ಷಣ ಮತ್ತು ಅಧಿವೇಶನಗಳನ್ನು ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮೇ 27 ರಿಂದ ಜೂನ್ 8 ರವರೆಗೆ ಗೋವಾದ ಫೋಂಡಾದಲ್ಲಿರುವ ಶ್ರೀ ರಾಮನಾಥ ದೇವಸ್ಥಾನದಲ್ಲಿ 8ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಆಯೋಜಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಮೋಹನ ಗೌಡ ತಿಳಿಸಿದರು.

ಕಳೆದ 7 ವರ್ಷದಲ್ಲಿ ನಡೆದ ಅಖಿಲ ಭಾರತೀಯ ಹಿಂದೂ ಅಧಿವೇಶನದಿಂದಾಗಿಯೇ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ವಿಷಯದಲ್ಲಿ ದೊಡ್ಡ ಪ್ರಮಾಣದ ಜಾಗೃತಿ ಉಂಟಾಗಿದೆ. ಈ ಅಧಿವೇಶನಕ್ಕೆ ಭಾರತದ 26 ರಾಜ್ಯಗಳ ಸಹಿತ ಬಾಂಗ್ಲಾದೇಶದಿಂದ 200ಕ್ಕಿಂತ ಅಧಿಕ ಹಿಂದೂ ಸಂಘಟನೆಗಳ 800 ಜನ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

8ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ಬಗ್ಗೆ ಮಾಹಿತಿ

ಕೇಂದ್ರದಲ್ಲಿ ಹೊಸ ಸರ್ಕಾರದ ಸ್ಥಾಪನೆಯ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿ, ಸಮಾನ ನಾಗರಿಕ ಕಾನೂನು, ಕಲಂ 370 ರದ್ದು ಮಾಡುವುದು, ಗೋ ಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪುನರ್ ನಿರ್ಮಾಣ ಇತ್ಯಾದಿಯಾಗಿ ಕಳೆದ ಅನೇಕ ವರ್ಷಗಳಿಂದ ನೆನೆಗುದಿಯಲ್ಲಿದ್ದ ಹಿಂದೂಗಳ ಸಮಸ್ಯೆಗಳ ಮೇಲೆ ವಿಚಾರ ವಿನಿಮಯ ಮಾಡಿ ಸರಕಾರಕ್ಕೆ ನಿರ್ಧಿಷ್ಟ ಕ್ರಮಕೈಗೊಳ್ಳುವ ದೃಷ್ಟಿಯಿಂದ ಸಂಘಟನಾತ್ಮಕ ಪ್ರಯತ್ನ ಮಾಡಲಾಗುವುದು ಎಂದರು.

ಇದರೊಂದಿಗೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾದ ಹಿಂದೂಗಳ ರಕ್ಷಣೆಯ ಬಗ್ಗೆಯೂ ಚರ್ಚಿಸಲಾಗುವುದು. ಹಿಂದೂ ನ್ಯಾಯವಾದಿಗಳ ಅಧಿವೇಶನ, ಉದ್ಯಮಿಗಳ ಅಧಿವೇಶನ, ಸೋಷಿಯಲ್ ಮೀಡಿಯಾ ಕಾನ್‌ಕ್ಲೇವ್ ಹಾಗೂ ಹಿಂದೂ ರಾಷ್ಟ್ರ ಸಂಘಟನೆ ಪ್ರಶಿಕ್ಷಣ ಮತ್ತು ಅಧಿವೇಶನಗಳನ್ನು ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Intro:ವಿಶ್ವಕಲ್ಯಾಣಕಾರಿ ‘ಹಿಂದೂ ರಾಷ್ಟ್ರದ ಸಂಕಲ್ಪಕ್ಕಾಗಿ ಒಟ್ಟಾದ ಹಿಂದೂ ಸಂಘಟನೆಗಳು
‘ಮೇ ೨೭  ರಿಂದ ಗೋವಾದಲ್ಲಿ  ೮ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ !
Body:

ಬೆಂಗಳೂರು: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗೋವಾದಲ್ಲಿ ಮೇ ೨೭ ರಿಂದ  ಜೂನ್ ೮ ಈ ಅವಧಿಯಲ್ಲಿ ಗೋವಾದ ಫೋಂಡಾದಲ್ಲಿರುವ ‘ಶ್ರೀ ರಾಮನಾಥ  ದೇವಸ್ಥಾನದಲ್ಲಿ ‘೮ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ, ಆಯೋಜಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಮೋಹನ ಗೌಡ ತಿಳಿಸಿದರು.
ಕಳೆದ ೭ ವರ್ಷದಲ್ಲಿ  ನಡೆದ ‘ಅಖಿಲ ಭಾರತೀಯ ಹಿಂದೂ ಅಧಿವೇಶನದಿಂದಾಗಿಯೇ ದೇಶಾದ್ಯಂತ ‘ಹಿಂದೂ ರಾಷ್ಟ್ರ, ಸಂಕಲ್ಪನೆಯ ವಿಷಯದಲ್ಲಿ ದೊಡ್ಡ ಪ್ರಮಾಣದಲ್ಲಿ  ಜಾಗೃತಿ ಉಂಟಾಗಿದೆ. ಈ ಅಧಿವೇಶನಕ್ಕೆ ಭಾರತದ ೨೬ ರಾಜ್ಯಗಳ ಸಹಿತ ಬಾಂಗ್ಲಾದೇಶದಿಂದ ಹೀಗೆ ೨೦೦ಕ್ಕಿಂತ ಅಧಿಕ ಹಿಂದೂ ಸಂಘಟನೆಗಳ ೮೦೦ಕ್ಕಿಂತ ಹೆಚ್ಚು ಹಿಂದುತ್ವನಿಷ್ಠರು ಭಾಗವಹಿಸಲಿದ್ದಾರೆ.
ಕೇಂದ್ರದಲ್ಲಿ  ಹೊಸ ಸರಕಾರದ ಸ್ಥಾಪನೆಯ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿ, ಸಮಾನ ನಾಗರಿಕ ಕಾನೂನು, ಕಲಂ ೩೭೦ ರದ್ದುಮಾಡುವುದು, ಗೋ ಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪುನರ್ ನಿರ್ಮಾಣ ಇತ್ಯಾದಿ ಹಿಂದೂಗಳ ಕಳೆದ ಅನೇಕ ವರ್ಷಗಳಿಂದ ನೆನೆಗುದಿಯಲ್ಲಿದ್ದ ಸಮಸ್ಯೆಗಳ ಮೇಲೆ ವಿಚಾರ ವಿನಿಮಯ ಮಾಡಿ ಸರಕಾರಕ್ಕೆ ನಿರ್ದಿಷ್ಟ ಕ್ರಮಕೈಗೊಳ್ಳುವ ದೃಷ್ಟಿಯಿಂದ ಸಂಘಟನಾತ್ಮಕ ಪ್ರಯತ್ನಗಳ ದೃಢನಿರ್ಧಾರವನ್ನು ಈ ಅಧಿವೇಶನದ ಮೂಲಕ ಮಾಡಲಾಗುವುದು. ಇದರೊಂದಿಗೆ ಪಾಕಿಸ್ಥಾನ, ಬಾಂಗ್ಲಾದೇಶ, ನೇಪಾಳ ಮತ್ತು ಶ್ರೀಲಂಕಾದ ಹಿಂದೂಗಳ ರಕ್ಷಣೆಯ ಸಂದರ್ಭದಲ್ಲಿಯೂ ಚರ್ಚಿಸಲಾಗುವುದು.
ಹಿಂದೂ ನ್ಯಾಯವಾದಿಗಳ ಅಧಿವೇಶನ, ಉದ್ಯಮಿಗಳ ಅಧಿವೇಶನ, ‘ಸೋಶಿಯಲ್ ಮೀಡಿಯಾ ಕಾನ್‌ಕ್ಲೇವ್
ಹಾಗೂ ‘ಹಿಂದೂ ರಾಷ್ಟ್ರ ಸಂಘಟನೆ ಪ್ರಶಿಕ್ಷಣ ಮತ್ತು ಅಧಿವೇಶನ ಇವುಗಳ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
‘ದೇಶಾದ್ಯಂತ ಹೆಚ್ಚುತ್ತಿರುವ ಭ್ರಷ್ಟಾಚಾರವನ್ನು ತಡೆಯಲು ಮತ್ತು ಭಾರತಕ್ಕೆ ಸಾಂವಿಧಾನಾತ್ಮಕವಾಗಿ ‘ಹಿಂದೂ ರಾಷ್ಟ್ರ ಎಂದು ಘೋಷಿಸುವ ದೃಷ್ಟಿಯಿಂದ ಕೃತಿಯನ್ನು ನಿಶ್ಚಯಿಸಲು ‘ಧರ್ಮಪ್ರೇಮಿ ನ್ಯಾಯವಾದಿಗಳ ಅಧಿವೇಶನ ಆಯೋಜಿಸಲಾಗಿದೆ. ಈ ಅಧಿವೇಶನವು ೨೭ ಮತ್ತು ೨೮ ಮೇ ಈ ಎರಡು ದಿನಗಳಂದು ನಡೆಯಲಿದೆ ಎಂದು ಹಿಂದೂ ವಿಧಿಜ್ಞ ಪರಿಷತ್ತಿನ ರಾಷ್ಟ್ರೀಯ ಉಪಾದ್ಯಕ್ಷ ಅಮೃತೇಶ ಎನ್. ಪಿ ಇವರು ತಿಳಿಸಿದರು.

          ಸನಾತನ ಸಂಸ್ಥೆಯ ಗಾಯತ್ರಿ ಮಾತನಾಡಿ, ‘ಸಮಾಜ, ರಾಷ್ಟ್ರ ಮತ್ತು ಧರ್ಮಕ್ಕಾಗಿ ಕಾರ್ಯನಿರತವಾಗಿರುವ ವೃತ್ತಿಪರರು, ವ್ಯಾಪಾರಿಗಳು ಮತ್ತು ಉದ್ಯಮಿಗಳ  ಸಂಘಟನೆಯಾಗಲು, ಹಾಗೆಯೇ ವಿವಿಧ ಆಪತ್ಕಾಲಗಳಲ್ಲಿ ಸಮಾಜಕ್ಕಾಗಿ ಸಹಾಯ ಮಾಡುವ ದೃಷ್ಟಿಯಿಂದ ಆಯೋಜನೆ ಮಾಡಲು ಒಂದು ದಿನದ ‘ಉದ್ಯಮಿಗಳ ಅಧಿವೇಶನವನ್ನು  ಮೇ  ೨೮ ರಂದು ಅಧಿವೇಶನದ ಮುಖ್ಯಸ್ಥಳದಲ್ಲಿ ಆಯೋಜಿಸಲಾಗಿದೆ’ ಮತ್ತು ಹಿಂದೂ ರಾಷ್ಟ್ರದ ಸಂಕಲ್ಪನೆ ೧೦೦ ಕೋಟಿ ಹಿಂದೂಗಳಿಗೆ ವೇಗವಾಗಿ ತಲುಪುವ ದೃಷ್ಟಿಯಿಂದ ಸೋಶಿಯಲ್ ಮೀಡಿಯಾ ಕಾನ್‌ಕ್ಲೇವ್ ಆಯೋಜಿಸಲಾಗಿದೆ. ಈ ‘ಕಾನ್‌ಕ್ಲೇವ್ ರವಿವಾರ, ಜೂನ್ ೨ ರಂದು ಅಧಿವೇಶನದ ಮುಖ್ಯ ಸ್ಥಳದಲ್ಲಿ ಜರುಗಲಿದೆ” ಎಂದು ಹೇಳಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.