ETV Bharat / state

ಇಂದಿನಿಂದ ರಾಜ್ಯಾದ್ಯಂತ 9,10ನೇ ತರಗತಿ ಆರಂಭ

author img

By

Published : Feb 13, 2022, 7:11 PM IST

Updated : Feb 14, 2022, 6:02 AM IST

ಪೋಷಕರು, ಶಾಲಾ ಆಡಳಿತ ಮಂಡಳಿ ಜೊತೆ ಜಿಲ್ಲಾಧಿಕಾರಿಗಳು ನಿರಂತರ ಶಾಂತಿಪಾಲನೆ ಸಭೆ ನಡೆಸಬೇಕು.‌ ಸಣ್ಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು, ರಾಜಕೀಯ ಪಕ್ಷಗಳು, ಧಾರ್ಮಿಕ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿ ಸಭೆ ನಡೆಸುವಂತೆ ಸರ್ಕಾರ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದೆ..

9th-10th-class-start-from-tomorrow-in-karnataka
ನಾಳೆಯಿಂದ ರಾಜ್ಯಾದ್ಯಂತ 9, 10ನೇ ತರಗತಿ ಆರಂಭ

ಬೆಂಗಳೂರು : ಹಿಜಾಬ್-ಕೇಸರಿ ಶಾಲು ವಿವಾದದಿಂದ ರಾಜ್ಯಾದ್ಯಂತ 1-8ನೇ ತರಗತಿ ಹೊರತುಪಡಿಸಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈಗಾಗಲೇ ಕೋವಿಡ್​​ನಿಂದಾಗಿ ಮಕ್ಕಳ ಕಲಿಕೆಗೆ ಧಕ್ಕೆ ಆಗಿರುವುದನ್ನು ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ಶಾಲಾ-ಕಾಲೇಜು ಆರಂಭಿಸುವಂತೆ ಸೂಚನೆ ನೀಡಿದೆ. ಅದರಂತೆ ಮೊದಲ ಭಾಗವಾಗಿ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗಲಿವೆ.

ಬಿಗಿ ಪೊಲೀಸ್ ಭದ್ರತೆಯಲ್ಲಿ ಶಾಲೆ ಆರಂಭವಾಗಲಿದ್ದು, ಹೈಸ್ಕೂಲ್‌ಗಳ ಬಳಿ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಮುಖ್ಯವಾಗಿ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದು. ವಿದ್ಯಾರ್ಥಿಗಳು ಹೊರತುಪಡಿಸಿ, ಬೇರೆ ಯಾರಾದರೂ ಕಂಡು ಬಂದ್ರೆ ಕ್ರಮ ಜರುಗಿಸುವುದು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ. ಇನ್ನು ಪ್ರಮುಖವಾಗಿ ವಿದ್ಯಾರ್ಥಿ ಸಂಘಟನೆಗಳ ಮೇಲೆ‌ ನಿಗಾ ವಹಿಸುವಂತೆಯೂ ಸೂಚಿಸಲಾಗಿದೆ.

ಆಯಾ ಜಿಲ್ಲೆಯ ಜಿಲ್ಲಾಧಿಕಾರಿ, ಎಸ್​ಪಿ ಹಾಗೂ ಶಿಕ್ಷಣಾಧಿಕಾರಿಗಳಿಗೆ ಸಂಪೂರ್ಣ ಹೊಣೆ ವಹಿಸಲಾಗಿದೆ. ‌ಹಿಜಾಬ್ ಮತ್ತು ಕೇಸರಿ ಶಾಲು ವಿಚಾರ, ಹೆಚ್ಚು ಗಲಾಟೆಯಾದ ಜಿಲ್ಲೆಗಳ ಶಾಲೆಗಳಿಗೆ ಹೆಚ್ಚು ಭದ್ರತೆಗೆ ಒತ್ತು ನೀಡಲಾಗಿದೆ. ವಿವಾದ ಸೃಷ್ಟಿಯಾದ ಉಡುಪಿಯಿಂದ ಹಿಡಿದು ಶಿವಮೊಗ್ಗ, ಬಾಗಲಕೋಟೆ, ಮೈಸೂರು, ಮಂಡ್ಯ, ಬೀದರ್, ಧಾರವಾಡ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಡಿಸಿ, ಎಸ್ಪಿಗೆ ಭದ್ರತೆಯ ಹೊಣೆ ವಹಿಸಲಾಗಿದೆ.‌ ಅಲ್ಲದೆ, ಶಾಲೆಗಳಿಗೆ ಎಸ್​​ಪಿ ಭೇಟಿ ನೀಡಬೇಕು.

ಪೋಷಕರು, ಶಾಲಾ ಆಡಳಿತ ಮಂಡಳಿ ಜೊತೆ ಜಿಲ್ಲಾಧಿಕಾರಿಗಳು ನಿರಂತರ ಶಾಂತಿಪಾಲನೆ ಸಭೆ ನಡೆಸಬೇಕು.‌ ಸಣ್ಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು, ರಾಜಕೀಯ ಪಕ್ಷಗಳು, ಧಾರ್ಮಿಕ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿ ಸಭೆ ನಡೆಸುವಂತೆ ಸರ್ಕಾರ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಪಿಯುಸಿ, ಪದವಿ ತರಗತಿ ಸದ್ಯಕ್ಕಿಲ್ಲ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಫೆ. 14 ಮತ್ತು 15ರವರೆಗೆ ರಜೆ ಘೋಷಿಸಲಾಗಿದೆ.

ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ 14,15,16ರಂದು ರಜೆ ಘೋಷಿಸಲಾಗಿದೆ. ಮುಂದುವರೆದು, ಈ ದಿನಗಳಂದು ಪರೀಕ್ಷೆಗಳು ನಡೆಯುತ್ತಿದ್ದಲ್ಲಿ, ಯಥಾವತ್ತಾಗಿ ನಡೆಯಲು ಹಾಗೂ ಆನ್​ಲೈನ್ ತರಗತಿಗಳ ಮೂಲಕ ವ್ಯಾಸಂಗ ನಡೆಸುವಂತೆ ಆದೇಶಿಸಿದೆ‌.

ಇದನ್ನೂ ಓದಿ: ಯಾವ್ನೋ ಈಶ್ವರಪ್ಪ ಅಂತೆ, ಅವನೊಬ್ಬ ತಲೆಕೆಟ್ಟ ಈಶ್ವರಪ್ಪ.. ಏಕವಚನದಲ್ಲೇ ಡಿಕೆಶಿ ವಾಗ್ದಾಳಿ

ಬೆಂಗಳೂರು : ಹಿಜಾಬ್-ಕೇಸರಿ ಶಾಲು ವಿವಾದದಿಂದ ರಾಜ್ಯಾದ್ಯಂತ 1-8ನೇ ತರಗತಿ ಹೊರತುಪಡಿಸಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈಗಾಗಲೇ ಕೋವಿಡ್​​ನಿಂದಾಗಿ ಮಕ್ಕಳ ಕಲಿಕೆಗೆ ಧಕ್ಕೆ ಆಗಿರುವುದನ್ನು ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ಶಾಲಾ-ಕಾಲೇಜು ಆರಂಭಿಸುವಂತೆ ಸೂಚನೆ ನೀಡಿದೆ. ಅದರಂತೆ ಮೊದಲ ಭಾಗವಾಗಿ ಇಂದಿನಿಂದ 9 ಮತ್ತು 10ನೇ ತರಗತಿ ಆರಂಭವಾಗಲಿವೆ.

ಬಿಗಿ ಪೊಲೀಸ್ ಭದ್ರತೆಯಲ್ಲಿ ಶಾಲೆ ಆರಂಭವಾಗಲಿದ್ದು, ಹೈಸ್ಕೂಲ್‌ಗಳ ಬಳಿ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಮುಖ್ಯವಾಗಿ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದು. ವಿದ್ಯಾರ್ಥಿಗಳು ಹೊರತುಪಡಿಸಿ, ಬೇರೆ ಯಾರಾದರೂ ಕಂಡು ಬಂದ್ರೆ ಕ್ರಮ ಜರುಗಿಸುವುದು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ. ಇನ್ನು ಪ್ರಮುಖವಾಗಿ ವಿದ್ಯಾರ್ಥಿ ಸಂಘಟನೆಗಳ ಮೇಲೆ‌ ನಿಗಾ ವಹಿಸುವಂತೆಯೂ ಸೂಚಿಸಲಾಗಿದೆ.

ಆಯಾ ಜಿಲ್ಲೆಯ ಜಿಲ್ಲಾಧಿಕಾರಿ, ಎಸ್​ಪಿ ಹಾಗೂ ಶಿಕ್ಷಣಾಧಿಕಾರಿಗಳಿಗೆ ಸಂಪೂರ್ಣ ಹೊಣೆ ವಹಿಸಲಾಗಿದೆ. ‌ಹಿಜಾಬ್ ಮತ್ತು ಕೇಸರಿ ಶಾಲು ವಿಚಾರ, ಹೆಚ್ಚು ಗಲಾಟೆಯಾದ ಜಿಲ್ಲೆಗಳ ಶಾಲೆಗಳಿಗೆ ಹೆಚ್ಚು ಭದ್ರತೆಗೆ ಒತ್ತು ನೀಡಲಾಗಿದೆ. ವಿವಾದ ಸೃಷ್ಟಿಯಾದ ಉಡುಪಿಯಿಂದ ಹಿಡಿದು ಶಿವಮೊಗ್ಗ, ಬಾಗಲಕೋಟೆ, ಮೈಸೂರು, ಮಂಡ್ಯ, ಬೀದರ್, ಧಾರವಾಡ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಡಿಸಿ, ಎಸ್ಪಿಗೆ ಭದ್ರತೆಯ ಹೊಣೆ ವಹಿಸಲಾಗಿದೆ.‌ ಅಲ್ಲದೆ, ಶಾಲೆಗಳಿಗೆ ಎಸ್​​ಪಿ ಭೇಟಿ ನೀಡಬೇಕು.

ಪೋಷಕರು, ಶಾಲಾ ಆಡಳಿತ ಮಂಡಳಿ ಜೊತೆ ಜಿಲ್ಲಾಧಿಕಾರಿಗಳು ನಿರಂತರ ಶಾಂತಿಪಾಲನೆ ಸಭೆ ನಡೆಸಬೇಕು.‌ ಸಣ್ಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು, ರಾಜಕೀಯ ಪಕ್ಷಗಳು, ಧಾರ್ಮಿಕ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿ ಸಭೆ ನಡೆಸುವಂತೆ ಸರ್ಕಾರ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಪಿಯುಸಿ, ಪದವಿ ತರಗತಿ ಸದ್ಯಕ್ಕಿಲ್ಲ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಫೆ. 14 ಮತ್ತು 15ರವರೆಗೆ ರಜೆ ಘೋಷಿಸಲಾಗಿದೆ.

ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ 14,15,16ರಂದು ರಜೆ ಘೋಷಿಸಲಾಗಿದೆ. ಮುಂದುವರೆದು, ಈ ದಿನಗಳಂದು ಪರೀಕ್ಷೆಗಳು ನಡೆಯುತ್ತಿದ್ದಲ್ಲಿ, ಯಥಾವತ್ತಾಗಿ ನಡೆಯಲು ಹಾಗೂ ಆನ್​ಲೈನ್ ತರಗತಿಗಳ ಮೂಲಕ ವ್ಯಾಸಂಗ ನಡೆಸುವಂತೆ ಆದೇಶಿಸಿದೆ‌.

ಇದನ್ನೂ ಓದಿ: ಯಾವ್ನೋ ಈಶ್ವರಪ್ಪ ಅಂತೆ, ಅವನೊಬ್ಬ ತಲೆಕೆಟ್ಟ ಈಶ್ವರಪ್ಪ.. ಏಕವಚನದಲ್ಲೇ ಡಿಕೆಶಿ ವಾಗ್ದಾಳಿ

Last Updated : Feb 14, 2022, 6:02 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.