ETV Bharat / state

ಶಾಲೆಗೆ ಹೋಗು‌ ಅಂದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಬಾಲಕ

author img

By

Published : Nov 8, 2019, 8:10 AM IST

ಶಾಲೆಗೆ ಹೋಗು ಎಂದು ಪೋಷಕರು ಮಗನಿಗೆ ಬೈದಿದ್ದರಿಂದ ಮನನೊಂದ ಬಾಲಕ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Representative image

ಬೆಂಗಳೂರು: ಮುದ್ದಾಗಿ ಬೆಳೆಸಿದ್ದ ಮಗನನ್ನು ಶಾಲೆಗೆ ಹೋಗುವಂತೆ ಪೋಷಕರು ಬೈದಿದ್ದಕ್ಕೆ ಮನನೊಂದ ಬಾಲಕ ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.

ರಾಹುಲ್(11) ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಗೋಪಾಲ ನಗರದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಹುಲ್, ನಿನ್ನೆ ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದ. ಇದಕ್ಕೆ ಪೋಷಕರು ಮಗನನ್ನು ಬೈಯ್ದು ಬುದ್ದಿವಾದ ಹೇಳಿ ಕೆಲಸಕ್ಕೆ ತೆರಳಿದ್ದಾರೆ. ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.‌

ಈ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಮುದ್ದಾಗಿ ಬೆಳೆಸಿದ್ದ ಮಗನನ್ನು ಶಾಲೆಗೆ ಹೋಗುವಂತೆ ಪೋಷಕರು ಬೈದಿದ್ದಕ್ಕೆ ಮನನೊಂದ ಬಾಲಕ ನೇಣುಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.

ರಾಹುಲ್(11) ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಗೋಪಾಲ ನಗರದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಹುಲ್, ನಿನ್ನೆ ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದ. ಇದಕ್ಕೆ ಪೋಷಕರು ಮಗನನ್ನು ಬೈಯ್ದು ಬುದ್ದಿವಾದ ಹೇಳಿ ಕೆಲಸಕ್ಕೆ ತೆರಳಿದ್ದಾರೆ. ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.‌

ಈ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:Photo sikilla
ಶಾಲೆಗೆ ಹೋಗು‌ ಅಂದಿದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಶಾಲಾ ಬಾಲಕ...

ಬೆಂಗಳೂರು: ಪೋಷಕರಾಗಲಿ ಅಥವಾ ಶಿಕ್ಷಕರಾಗಲಿ ಮಕ್ಕಳಿಗೆ ನೈತಿಕ ಶಿಕ್ಷಣವನ್ನು ಮನದಟ್ಟು ಮಾಡಿಕೊಳ್ಳದಿದ್ದರೆ ಅದೇಷ್ಟೇ ಉನ್ನತ ಶಿಕ್ಷಣ ಪಡೆದರೂ ವ್ಯರ್ಥವೇ ಸರಿ. ಮಕ್ಕಳಲ್ಲಿ ಜೀವನ ಎದುರಿಸುವ ಧೈರ್ಯವಿಲ್ಲದಿದ್ದಾಗ ಮಾತ್ರ ಖಿನ್ನತೆಗೆ ಒಳಗಾಗಿ ಸಾವಿಗೆ ಶರಣಾಗುತ್ತಾರೆ..
ಇದೇ ರೀತಿ ಮುದ್ದಾಗಿ ಬೆಳೆಸಿದ್ದ ಮಗನನ್ನು ಶಾಲೆಗೆ ಹೋಗುವಂತೆ ಪೋಷಕರು ಹಠ ಹಿಡಿದು‌ ಕುಳಿತವವನ್ನು ಬೈದಿದಕ್ಕೆ ಮನನೊಂದು ನೇಣುಬಿಗಿದುಕೊಂಡಿರುವ ರಾಜಗೋಪಾಲ ನಗರ ಪೊಲೀಸ್ ಠಾಣೆಯ ಹೆಗ್ಗನಹಳ್ಳಿ ಮನೆಯೊಂದರಲ್ಲಿ ನಡೆದಿದೆ.

ರಾಹುಲ್(11) ಮೃತ ದುರ್ದೈವಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಗೋಪಾಲ ನಗರದ ಖಾಸಗಿ ಶಾಲೆಯಲ್ಕಿ ವ್ಯಾಸಂಗ ಮಾಡುತ್ತಿದ್ದ ರಾಹುಲ್, ಇಂದು ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದಾನೆ‌. ಇದಕ್ಕೆ ಪೋಷಕರು ಮಗನನ್ನು ಬೈಯ್ದು ಬುದ್ದಿವಾದ ಹೇಳಿ ಕೆಲಸಕ್ಕೆ ತೆರಳಿದ್ದಾರೆ. ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಪೋಷಕರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.‌ ಈ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.