ಬೆಂಗಳೂರು: ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಅನುಮಾನಾಸ್ಪದ ವ್ಯಕ್ತಿಯನ್ನು ಉಪ್ಪಾರಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಗಾಳಿ ಸುದ್ದಿಗೆ ತೆರೆ ಎಳೆದ ಪೊಲೀಸರು: ಮೆಟ್ರೋದಲ್ಲಿದ್ದ ಅನುಮಾನಾಸ್ಪದ ವ್ಯಕ್ತಿ ಮೌಲ್ವಿಯಂತೆ!
ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಅನುಮಾನಾಸ್ಪದ ವ್ಯಕ್ತಿ ಮೌಲ್ವಿ ಎಂದು ಉಪ್ಪಾರಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
![ಗಾಳಿ ಸುದ್ದಿಗೆ ತೆರೆ ಎಳೆದ ಪೊಲೀಸರು: ಮೆಟ್ರೋದಲ್ಲಿದ್ದ ಅನುಮಾನಾಸ್ಪದ ವ್ಯಕ್ತಿ ಮೌಲ್ವಿಯಂತೆ!](https://etvbharatimages.akamaized.net/etvbharat/prod-images/768-512-3246927-thumbnail-3x2-bng.jpg?imwidth=3840)
ಆತ ಹಲಸೂರಿನ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದು, ಆರ್.ಟಿ.ನಗರ ನಿವಾಸಿಯಾಗಿದ್ದಾರೆ. ಮೌಲ್ವಿಯನ್ನ ವಶಕ್ಕೆ ಪಡೆದಿದ್ದ ಉಪ್ಪಾರಪೇಟೆ ಪೊಲೀಸರು ವಿಚಾರಣೆಗೊಳಪಡಿಸಿದ್ದರು.
![Bangalore](https://etvbharatimages.akamaized.net/etvbharat/prod-images/img-20190510-wa00961557512918563-2_1005email_1557512929_760.jpg)
ಮೇ 6 ರಂದು ಮೆಟ್ರೋ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ವರ್ತನೆ ತೋರಿದ್ದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು. ಈ ಪೈಕಿ ಓರ್ವ ಗಾಂಧಿನಗರದಲ್ಲಿ ವಾಚ್ ಅಂಗಡಿ ಇಟ್ಟುಕೊಂಡಿದ್ದ ರಿಯಾಜ್ ಅಹಮದ್ ಎಂದು ತಿಳಿದು ಬಂದಿತ್ತು. ಬಳಿಕ ಮತ್ತೋರ್ವ ವ್ಯಕ್ತಿಗಾಗಿ ವಿಶೇಷ ತಂಡ ರಚಿಸಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ಮೌಲ್ವಿ ಉಪ್ಪಾರಪೇಟೆ ಪೊಲೀಸರ ವಶದಲ್ಲಿದ್ದು, ಸದ್ಯ ಎಲ್ಲ ಆತಂಕಗಳಿಗೂ ತೆರೆಬಿದ್ದಿದೆ.
ಬೆಂಗಳೂರು: ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಅನುಮಾನಾಸ್ಪದ ವ್ಯಕ್ತಿಯನ್ನು ಉಪ್ಪಾರಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಆತ ಹಲಸೂರಿನ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದು, ಆರ್.ಟಿ.ನಗರ ನಿವಾಸಿಯಾಗಿದ್ದಾರೆ. ಮೌಲ್ವಿಯನ್ನ ವಶಕ್ಕೆ ಪಡೆದಿದ್ದ ಉಪ್ಪಾರಪೇಟೆ ಪೊಲೀಸರು ವಿಚಾರಣೆಗೊಳಪಡಿಸಿದ್ದರು.
![Bangalore](https://etvbharatimages.akamaized.net/etvbharat/prod-images/img-20190510-wa00961557512918563-2_1005email_1557512929_760.jpg)
ಮೇ 6 ರಂದು ಮೆಟ್ರೋ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ವರ್ತನೆ ತೋರಿದ್ದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು. ಈ ಪೈಕಿ ಓರ್ವ ಗಾಂಧಿನಗರದಲ್ಲಿ ವಾಚ್ ಅಂಗಡಿ ಇಟ್ಟುಕೊಂಡಿದ್ದ ರಿಯಾಜ್ ಅಹಮದ್ ಎಂದು ತಿಳಿದು ಬಂದಿತ್ತು. ಬಳಿಕ ಮತ್ತೋರ್ವ ವ್ಯಕ್ತಿಗಾಗಿ ವಿಶೇಷ ತಂಡ ರಚಿಸಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ಮೌಲ್ವಿ ಉಪ್ಪಾರಪೇಟೆ ಪೊಲೀಸರ ವಶದಲ್ಲಿದ್ದು, ಸದ್ಯ ಎಲ್ಲ ಆತಂಕಗಳಿಗೂ ತೆರೆಬಿದ್ದಿದೆ.