ETV Bharat / state

ಬಿಜೆಪಿ ಸಾಮಾಜಿಕ ಜಾಲತಾಣದಿಂದ ಅಂಬರೀಶ್ ಸ್ಮಾರಕ ವಿಚಾರವಾಗಿ ಪೋಸ್ಟ್ ,ವೈರಲ್

author img

By

Published : Jul 9, 2021, 11:26 PM IST

ನಟ ದಿ.ಅಂಬರೀಶ್ ಸ್ಮಾರಕ ನಿರ್ಮಾಣ ವಿಚಾರವಾಗಿ ಕಳೆದ ಎರಡ್ಮೂರು ದಿನಗಳಿಂದ ಪರ- ವಿರೋಧದ ಹೇಳಿಕೆಗಳು ಕೇಳಿ ಬರುತ್ತಿವೆ. ಇದೀಗ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್​ ಹರಿದಾಡುತ್ತಿದ್ದು, ಇನ್ನೊಂದು ಸುತ್ತಿನ ಕೇಸರೆರಚಾಟಕ್ಕೆ ನಾಂದಿ ಹಾಡುವ ಸೂಚನೆ ಗೋಚರಿಸುತ್ತಿದೆ.

ಅಂಬರೀಶ್ ಸ್ಮಾರಕ ವಿಚಾರ
Ambarish memorial issue

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಟ ದಿ.ಅಂಬರೀಶ್ ಸ್ಮಾರಕ ನಿರ್ಮಾಣ ವಿಚಾರವಾಗಿ ಕಳೆದ ಎರಡ್ಮೂರು ದಿನಗಳಿಂದ ಪರ- ವಿರೋಧದ ಹೇಳಿಕೆಗಳು ಕೇಳಿ ಬರುತ್ತಿವೆ. ಇದೀಗ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್​ ಹರಿದಾಡುತ್ತಿದ್ದು, ಇನ್ನೊಂದು ಸುತ್ತಿನ ಕೇಸರೆರಚಾಟಕ್ಕೆ ನಾಂದಿ ಹಾಡುವ ಸೂಚನೆ ಗೋಚರಿಸುತ್ತಿದೆ.

ಕನ್ನಡ ಚಿತ್ರರಂಗದ ಹೆಸರಾಂತ ನಟ ದಿ.ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಆಗಿನ ಸಿಎಂ ಕುಮಾರಸ್ವಾಮಿ ಬಳಿಗೆ ಹೋದಾಗ ಮನವಿ ಪತ್ರವನ್ನು ಎಸೆದುಬಿಟ್ಟಿದ್ದರು ಎಂದು ಸಂಸದೆ ಸುಮಲತಾ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ದನಿಗೂಡಿಸಿದ್ದ ಹಿರಿಯ ನಟ ದೊಡ್ಡಣ್ಣ, ಅಂಬರೀಶ್​ರವರ ಸ್ಮಾರಕ ನಿರ್ಮಾಣಕ್ಕೆ ಕುಮಾರಸ್ವಾಮಿ ಕಾರಣ ಅಲ್ಲ. ಸಿಎಂ ಯಡಿಯೂರಪ್ಪನವರು ಕಾರಣಿಕರ್ತರು ಎಂದು ಹೇಳಿಕೆ ನೀಡಿದ್ದರು. ಈ ಕುರಿತಾಗಿ ಶಾಸಕ ಸಾರಾ ಮಹೇಶ್, ಡಿಸಿ ತಮ್ಮಣ್ಣ ಹಾಗೂ ಸಚಿವ ಕೆ.ಎಸ್ ,ಈಶ್ವರಪ್ಪ ಪ್ರತಿಕ್ರಿಯಿಸಿದ್ದರು.

viral post
ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ಪೋಸ್ಟ್​

ಇನ್ನು ಅಂಬರೀಶ್​ ಸ್ಮಾರಕ ವಿಚಾರ ಕುರಿತು ಪರ-ವಿರೋಧದ ಹೇಳಿಕೆಗಳು ಕಳೆದು ಎರಡ್ಮೂರು ದಿನಗಳಿಂದ ನಡೆಯುತ್ತಿದೆ. ಈ ವಿಚಾರವಾಗಿ ಈಗ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಯಡಿಯೂರಪ್ಪ ಹೆಸರಲ್ಲಿ ಪೋಸ್ಟ್ ವೈರಲ್ ಆಗುತ್ತಿದೆ.

ಅದರಲ್ಲಿ ಕರುನಾಡ ಹೆಮ್ಮೆಯ ನಟ ಅಂಬ​​ರೀಶ್​ರ ಸಾಮಾಜಿಕ ಹಾಗೂ ಚಿತ್ರರಂಗದ ಸೇವೆಯನ್ನು ಗೌರವಿಸಿ ಅಂಬರೀಶ್​​ ಸ್ಮಾರಕಕ್ಕೆ 1 ಎಕರೆ 34 ಗುಂಟೆ ಭೂಮಿ ಹಾಗೂ ನಿರ್ಮಾಣಕ್ಕೆ ಮೊದಲ ಕಂತಾಗಿ 5 ಕೋಟಿ ರೂ.ಗಳನ್ನು ಘೋಷಿಸಿರುವ ಮುಖ್ಯಮಂತ್ರಿ ಬಿ.ಎಸ್​​​ .ಯೂರಪ್ಪನವರಿಗೆ ಅಭಿನಂದನೆಗಳು ಎಂದು ಬರೆಯಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಟ ದಿ.ಅಂಬರೀಶ್ ಸ್ಮಾರಕ ನಿರ್ಮಾಣ ವಿಚಾರವಾಗಿ ಕಳೆದ ಎರಡ್ಮೂರು ದಿನಗಳಿಂದ ಪರ- ವಿರೋಧದ ಹೇಳಿಕೆಗಳು ಕೇಳಿ ಬರುತ್ತಿವೆ. ಇದೀಗ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್​ ಹರಿದಾಡುತ್ತಿದ್ದು, ಇನ್ನೊಂದು ಸುತ್ತಿನ ಕೇಸರೆರಚಾಟಕ್ಕೆ ನಾಂದಿ ಹಾಡುವ ಸೂಚನೆ ಗೋಚರಿಸುತ್ತಿದೆ.

ಕನ್ನಡ ಚಿತ್ರರಂಗದ ಹೆಸರಾಂತ ನಟ ದಿ.ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಆಗಿನ ಸಿಎಂ ಕುಮಾರಸ್ವಾಮಿ ಬಳಿಗೆ ಹೋದಾಗ ಮನವಿ ಪತ್ರವನ್ನು ಎಸೆದುಬಿಟ್ಟಿದ್ದರು ಎಂದು ಸಂಸದೆ ಸುಮಲತಾ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ದನಿಗೂಡಿಸಿದ್ದ ಹಿರಿಯ ನಟ ದೊಡ್ಡಣ್ಣ, ಅಂಬರೀಶ್​ರವರ ಸ್ಮಾರಕ ನಿರ್ಮಾಣಕ್ಕೆ ಕುಮಾರಸ್ವಾಮಿ ಕಾರಣ ಅಲ್ಲ. ಸಿಎಂ ಯಡಿಯೂರಪ್ಪನವರು ಕಾರಣಿಕರ್ತರು ಎಂದು ಹೇಳಿಕೆ ನೀಡಿದ್ದರು. ಈ ಕುರಿತಾಗಿ ಶಾಸಕ ಸಾರಾ ಮಹೇಶ್, ಡಿಸಿ ತಮ್ಮಣ್ಣ ಹಾಗೂ ಸಚಿವ ಕೆ.ಎಸ್ ,ಈಶ್ವರಪ್ಪ ಪ್ರತಿಕ್ರಿಯಿಸಿದ್ದರು.

viral post
ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ಪೋಸ್ಟ್​

ಇನ್ನು ಅಂಬರೀಶ್​ ಸ್ಮಾರಕ ವಿಚಾರ ಕುರಿತು ಪರ-ವಿರೋಧದ ಹೇಳಿಕೆಗಳು ಕಳೆದು ಎರಡ್ಮೂರು ದಿನಗಳಿಂದ ನಡೆಯುತ್ತಿದೆ. ಈ ವಿಚಾರವಾಗಿ ಈಗ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಯಡಿಯೂರಪ್ಪ ಹೆಸರಲ್ಲಿ ಪೋಸ್ಟ್ ವೈರಲ್ ಆಗುತ್ತಿದೆ.

ಅದರಲ್ಲಿ ಕರುನಾಡ ಹೆಮ್ಮೆಯ ನಟ ಅಂಬ​​ರೀಶ್​ರ ಸಾಮಾಜಿಕ ಹಾಗೂ ಚಿತ್ರರಂಗದ ಸೇವೆಯನ್ನು ಗೌರವಿಸಿ ಅಂಬರೀಶ್​​ ಸ್ಮಾರಕಕ್ಕೆ 1 ಎಕರೆ 34 ಗುಂಟೆ ಭೂಮಿ ಹಾಗೂ ನಿರ್ಮಾಣಕ್ಕೆ ಮೊದಲ ಕಂತಾಗಿ 5 ಕೋಟಿ ರೂ.ಗಳನ್ನು ಘೋಷಿಸಿರುವ ಮುಖ್ಯಮಂತ್ರಿ ಬಿ.ಎಸ್​​​ .ಯೂರಪ್ಪನವರಿಗೆ ಅಭಿನಂದನೆಗಳು ಎಂದು ಬರೆಯಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.