ETV Bharat / state

ಇದೆಂಥಾ ವಿಕೃತಿ.. ಮಲಗಿದ್ದ ನಾಯಿ ಮೇಲೆ ಕಾರು ಹಾಯಿಸಿದ ನಿವೃತ್ತ ಸಬ್ ಇನ್​​​​​ಸ್ಪೆಕ್ಟರ್ - ಮಲಗಿದ್ದ ನಾಯಿ ಮೇಲೆ ಕಾರು ಹಾಯಿಸಿದ ನಿವೃತ್ತ ಸಬ್ ಇನ್ ಸ್ಪೆಕ್ಟರ್

ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಪಶು ವೈದ್ಯ ರಮೇಶ್ ನೀಡಿದ ದೂರಿನ ಆಧಾರದ ಮೇರೆಗೆ ಹುಳಿಮಾವು ನಿವಾಸಿ ನಿವೃತ್ತ ಸಬ್‌ ಇನ್ ಸೆಕ್ಟರ್ ನಾಗೇಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

a-retired-sub-inspector-who-climbed-the-car-on-a-sleeping-dog
ಮಲಗಿದ್ದ ನಾಯಿ ಮೇಲೆ ಕಾರು ಹಾಯಿಸಿದ ನಿವೃತ್ತ ಸಬ್ ಇನ್ ಸ್ಪೆಕ್ಟರ್
author img

By

Published : Jan 27, 2021, 8:37 AM IST

Updated : Jan 27, 2021, 9:19 AM IST

ಬೆಂಗಳೂರು: ರಸ್ತೆಬದಿ ಮಲಗಿದ್ದ ಬೀದಿನಾಯಿ ಮೇಲೆ ಕಾರು ಹತ್ತಿಸಿ ಅದನ್ನು ಕೊಲ್ಲಲ್ಲು ಮುಂದಾದ ಆರೋಪದ ಮೇಲೆ ನಿವೃತ್ತ ಸಬ್‌ಇನ್ಸ್‌ಪೆಕ್ಟರ್‌ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಲಗಿದ್ದ ನಾಯಿ ಮೇಲೆ ಕಾರು ಹಾಯಿಸಿದ ನಿವೃತ್ತ ಸಬ್ ಇನ್​​​​​ಸ್ಪೆಕ್ಟರ್

ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಪಶು ವೈದ್ಯ ರಮೇಶ್ ನೀಡಿದ ದೂರಿನ ಆಧಾರದ ಮೇರೆಗೆ ಹುಳಿಮಾವು ನಿವಾಸಿ ನಿವೃತ್ತ ಸಬ್‌ ಇನ್​​​​​ಸ್ಪೆಕ್ಟರ್​​​ ನಾಗೇಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿರುವ ನಾಗೇಶ್ ಕುಟುಂಬ ಸಮೇತ ಹುಳಿಮಾವು ದೊಡ್ಡಕಮ್ಮನಹಳ್ಳಿಯಲ್ಲಿ ವಾಸಿಸುತ್ತಿದ್ದರು. ಭಾನುವಾರ ಮಧ್ಯಾಹ್ನ ನಾಗೇಶ್ ಮನೆ ಸಮೀಪವೇ ಬೀದಿ ನಾಯಿಯೊಂದು ರಸ್ತೆ ಬದಿ ನಿದ್ರಿಸಿತ್ತು. ಅದೇ ರಸ್ತೆಯಲ್ಲಿ ಕಾರಿನಲ್ಲಿ ಬಂದ ನಾಗೇಶ್ ಹಾರನ್ ಮಾಡಿದರೂ ನಾಯಿ ಎದ್ದಿರಲಿಲ್ಲ. ಇದರಿಂದ ಆಕ್ರೋಶಗೊಂಡ ನಾಗೇಶ್ ತಮ್ಮ ಕಾರನ್ನು ನಾಯಿ ಮೇಲೆ ಹರಿಸಿದ್ದಾರೆ. ಪರಿಣಾಮ ನಾಯಿ ಗಂಭೀರವಾಗಿ ಗಾಯಗೊಂಡಿದೆ.

ಓದಿ : ರೈತರ ಪ್ರತಿಭಟನೆಯಿಂದ ಕಸದ ತೊಟ್ಟಿಯಾಗಿದ್ದ ಫ್ರೀಡಂ ಪಾರ್ಕ್: ತ್ಯಾಜ್ಯ ವಿಲೇವಾರಿ ಮಾಡಿ ಗಮನ ಸೆಳೆದ ರೈತ ಬ್ರಿಗೇಡ್

ಈ ವಿಚಾರ ಗಮನಕ್ಕೆ ಬಂದ ಕೂಡಲೇ ಪಶು ವೈದ್ಯ ರಮೇಶ್ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ನಾಗೇಶ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ನಾಗೇಶ್ ಬೀದಿ ನಾಯಿ ಮೇಲೆ ಕಾರು ಹತ್ತಿಸಿರುವ ದೃಶ್ಯವು ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.

ಬೆಂಗಳೂರು: ರಸ್ತೆಬದಿ ಮಲಗಿದ್ದ ಬೀದಿನಾಯಿ ಮೇಲೆ ಕಾರು ಹತ್ತಿಸಿ ಅದನ್ನು ಕೊಲ್ಲಲ್ಲು ಮುಂದಾದ ಆರೋಪದ ಮೇಲೆ ನಿವೃತ್ತ ಸಬ್‌ಇನ್ಸ್‌ಪೆಕ್ಟರ್‌ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಲಗಿದ್ದ ನಾಯಿ ಮೇಲೆ ಕಾರು ಹಾಯಿಸಿದ ನಿವೃತ್ತ ಸಬ್ ಇನ್​​​​​ಸ್ಪೆಕ್ಟರ್

ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಪಶು ವೈದ್ಯ ರಮೇಶ್ ನೀಡಿದ ದೂರಿನ ಆಧಾರದ ಮೇರೆಗೆ ಹುಳಿಮಾವು ನಿವಾಸಿ ನಿವೃತ್ತ ಸಬ್‌ ಇನ್​​​​​ಸ್ಪೆಕ್ಟರ್​​​ ನಾಗೇಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿರುವ ನಾಗೇಶ್ ಕುಟುಂಬ ಸಮೇತ ಹುಳಿಮಾವು ದೊಡ್ಡಕಮ್ಮನಹಳ್ಳಿಯಲ್ಲಿ ವಾಸಿಸುತ್ತಿದ್ದರು. ಭಾನುವಾರ ಮಧ್ಯಾಹ್ನ ನಾಗೇಶ್ ಮನೆ ಸಮೀಪವೇ ಬೀದಿ ನಾಯಿಯೊಂದು ರಸ್ತೆ ಬದಿ ನಿದ್ರಿಸಿತ್ತು. ಅದೇ ರಸ್ತೆಯಲ್ಲಿ ಕಾರಿನಲ್ಲಿ ಬಂದ ನಾಗೇಶ್ ಹಾರನ್ ಮಾಡಿದರೂ ನಾಯಿ ಎದ್ದಿರಲಿಲ್ಲ. ಇದರಿಂದ ಆಕ್ರೋಶಗೊಂಡ ನಾಗೇಶ್ ತಮ್ಮ ಕಾರನ್ನು ನಾಯಿ ಮೇಲೆ ಹರಿಸಿದ್ದಾರೆ. ಪರಿಣಾಮ ನಾಯಿ ಗಂಭೀರವಾಗಿ ಗಾಯಗೊಂಡಿದೆ.

ಓದಿ : ರೈತರ ಪ್ರತಿಭಟನೆಯಿಂದ ಕಸದ ತೊಟ್ಟಿಯಾಗಿದ್ದ ಫ್ರೀಡಂ ಪಾರ್ಕ್: ತ್ಯಾಜ್ಯ ವಿಲೇವಾರಿ ಮಾಡಿ ಗಮನ ಸೆಳೆದ ರೈತ ಬ್ರಿಗೇಡ್

ಈ ವಿಚಾರ ಗಮನಕ್ಕೆ ಬಂದ ಕೂಡಲೇ ಪಶು ವೈದ್ಯ ರಮೇಶ್ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ನಾಗೇಶ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ನಾಗೇಶ್ ಬೀದಿ ನಾಯಿ ಮೇಲೆ ಕಾರು ಹತ್ತಿಸಿರುವ ದೃಶ್ಯವು ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ.

Last Updated : Jan 27, 2021, 9:19 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.