ಬೆಂಗಳೂರು: ಶಾಲೆಯಲ್ಲಿ ಅವಮಾನ ಆಗಿದ್ದಕ್ಕೆ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಧೀರಜ್ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಾಜರಾಜೇಶ್ವರಿ ನಗರ ಸಮೀಪದ ಸ್ವರ್ಗರಾಣಿ ಸ್ಕೂಲ್ ಅಂಡ್ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ.
ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಗಡಿ ಉಸ್ತುವಾರಿ ಸಚಿವರ ನೇಮಕ ಮರೆತ ರಾಜ್ಯ ಸರ್ಕಾರ
ಧೀರಜ್ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ಧೀರಜ್ಗೆ ಪರೀಕ್ಷೆಯಿತ್ತು. ಪರೀಕ್ಷೆ ವೇಳೆ ಕಾಪಿ ಹೊಡೆಯುತ್ತಿದ್ದನಂತೆ. ಇದನ್ನು ಗಮನಿಸಿದ ಶಿಕ್ಷಕರು ಆತನಿಗೆ ಬೈದು ಪೋಷಕರಿಗೆ ಮಾಹಿತಿ ನೀಡಿದ್ದರಂತೆ. ಬಳಿಕ ಕಾಲೇಜು ಪ್ರಾಂಶುಪಾಲರು ಕ್ಷಮಾಪಣಾ ಪತ್ರ ಬರೆಸಿಕೊಂಡಿದ್ದರು. ಇದರಿಂದ ಮನನೊಂದ ಧೀರಜ್ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಘಟನೆ ಕುರಿತು ಸದ್ಯ ವಿಜಯನಗರನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.