ETV Bharat / state

ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಬಳಿ ಹಾಡಹಗಲೇ ಸುಲಿಗೆ ಮಾಡಿದ್ದ ಆರೋಪಿ ಬಂಧನ

author img

By

Published : Oct 23, 2020, 6:00 PM IST

ಘಟನೆ ಸಂಬಂಧ ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್ ಆಗಿತ್ತು. ನಗರ ಪಶ್ಚಿಮ ವಿಭಾಗದ ಸಂಜೀವ್ ಪಾಟೀಲ್ ಘಟನೆ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಕೆ.ಆರ್.ಮಾರ್ಕೆಟ್ ಪೊಲೀಸರಿಗೆ ಸೂಚನೆ ನೀಡಿದ್ದರು‌. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

accused arrested
ಆರೋಪಿ ಬಂಧನ

ಬೆಂಗಳೂರು: ಲಾಕ್​ಡೌನ್ ವೇಳೆ ಹಾಡಹಾಗಲೇ ದರೋಡೆ ಮಾಡಿದ್ದ ಸುಲಿಗೆಕೋರರನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಕಾಟನ್ ಪೇಟೆಯ ಜಾನಿ ಬಂಧಿತ ಆರೋಪಿ. ಲಾಕ್​ಡೌನ್ ವೇಳೆ ಚಿಕ್ಕಪೇಟೆ‌ ಮೆಟ್ರೋ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಇಬ್ಬರು ಆರೋಪಿಗಳು ಅಡ್ಡಗಟ್ಟಿ ಚಾಕು ತೋರಿಸಿ ಹಣ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದರು.

ಘಟನೆ ಸಂಬಂಧ ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್ ಆಗಿತ್ತು. ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್, ಘಟನೆ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಕೆ.ಆರ್.ಮಾರ್ಕೆಟ್ ಪೊಲೀಸರಿಗೆ ಸೂಚನೆ ನೀಡಿದ್ದರು‌. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಚಿಕ್ಕಪೇಟೆ ಮೆಟ್ರೊ ನಿಲ್ದಾಣದ ಮುಂದೆಯೇ ನಡೆಯಿತು ಲೈವ್ ದರೋಡೆ: ವೀಡಿಯೋ..

ಆರೋಪಿ ಜಾನಿ ಕಳೆದ ವರ್ಷ ಬ್ಯಾಡರಹಳ್ಳಿ‌‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ. ಜಾಮೀನಿನ ಮೇರೆಗೆ ಕಳೆದ ಮಾರ್ಚ್​ನಲ್ಲಿ ಹೊರಬಂದು ಹಳೆ ಕಾಯಕ ಮುಂದುವರೆಸಿದ್ದ. ಪ್ರಕರಣದಲ್ಲಿ ಮತ್ತೋರ್ವ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದೇವೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಲಾಕ್​ಡೌನ್ ವೇಳೆ ಹಾಡಹಾಗಲೇ ದರೋಡೆ ಮಾಡಿದ್ದ ಸುಲಿಗೆಕೋರರನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಕಾಟನ್ ಪೇಟೆಯ ಜಾನಿ ಬಂಧಿತ ಆರೋಪಿ. ಲಾಕ್​ಡೌನ್ ವೇಳೆ ಚಿಕ್ಕಪೇಟೆ‌ ಮೆಟ್ರೋ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಇಬ್ಬರು ಆರೋಪಿಗಳು ಅಡ್ಡಗಟ್ಟಿ ಚಾಕು ತೋರಿಸಿ ಹಣ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದರು.

ಘಟನೆ ಸಂಬಂಧ ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್ ಆಗಿತ್ತು. ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್, ಘಟನೆ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಕೆ.ಆರ್.ಮಾರ್ಕೆಟ್ ಪೊಲೀಸರಿಗೆ ಸೂಚನೆ ನೀಡಿದ್ದರು‌. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಚಿಕ್ಕಪೇಟೆ ಮೆಟ್ರೊ ನಿಲ್ದಾಣದ ಮುಂದೆಯೇ ನಡೆಯಿತು ಲೈವ್ ದರೋಡೆ: ವೀಡಿಯೋ..

ಆರೋಪಿ ಜಾನಿ ಕಳೆದ ವರ್ಷ ಬ್ಯಾಡರಹಳ್ಳಿ‌‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ. ಜಾಮೀನಿನ ಮೇರೆಗೆ ಕಳೆದ ಮಾರ್ಚ್​ನಲ್ಲಿ ಹೊರಬಂದು ಹಳೆ ಕಾಯಕ ಮುಂದುವರೆಸಿದ್ದ. ಪ್ರಕರಣದಲ್ಲಿ ಮತ್ತೋರ್ವ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದೇವೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.