ETV Bharat / state

ಸ್ಯಾಂಟ್ರೋ ರವಿಗೆ ಆಶ್ರಯ ನೀಡಿರುವ ಆರೋಪ: ಕುಮಾರಕೃಪ ಗೆಸ್ಟ್ ಹೌಸ್ ಅಧಿಕಾರಿ ಎತ್ತಂಗಡಿ

author img

By

Published : Jan 7, 2023, 5:24 PM IST

ಕುಮಾರಕೃಪ ಗೆಸ್ಟ್​ಹೌಸ್​ನಲ್ಲಿ ಆಶ್ರಯ ಪಡೆದಿದ್ದ ಸ್ಯಾಂಟ್ರೋ ರವಿ - ಮಾಜಿ ಮುಖ್ಯಮಂತ್ರಿ ಹೆಚ್​ಡಿಕೆ ಆರೋಪ - ಆರೋಪದ ಬೆನ್ನಲ್ಲೇ ಕೆಕೆ ಗೆಸ್ಟ್​ ಹೌಸ್​ ಅಧಿಕಾರಿ ವರ್ಗಾವಣೆ

Manjunath alias Santro Ravi
ಮಂಜುನಾಥ್​ ಅಲಿಯಾಸ್​ ಸ್ಯಾಂಟ್ರೋ ರವಿ

ಬೆಂಗಳೂರು: ಸ್ಯಾಂಟ್ರೋ ರವಿ ಟೀಂಗೆ ಆಶ್ರಯ ನೀಡಿದ ಆರೋಪ‌ ಬೆನ್ನಲ್ಲೇ ಕುಮಾರಕೃಪಾ ಅತಿಥಿಗೃಹದ ಸಹಾಯಕ ಪ್ರಧಾನ ವ್ಯವಸ್ಥಾಪಕರನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಎಂಡಿ ಕುಮಾರಕೃಪಾ ಅತಿಥಿ ಗೃಹದ ಸಹಾಯಕ ವ್ಯವಸ್ಥಾಪಕ ದೇವರಾಜ್ ಹೆಚ್.ಎಸ್. ಅವರನ್ನು ಎತ್ತಂಗಡಿ ಮಾಡಿ ಆದೇಶಿಸಿದ್ದಾರೆ.

ಮುಂದಿ‌ನ ಆದೇಶದ ವರೆಗೆ ಕೇಂದ್ರ ಕಚೇರಿಯಲ್ಲಿ ವರದಿ ಮಾಡುವಂತೆ ಆದೇಶಿಸಲಾಗಿದೆ. ಸ್ಯಾಂಟ್ರೋ ರವಿ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದ. ಇದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಪ್ರತಿಪಕ್ಷ ನಾಯಕರುಗಳು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಮ್ಮಿಶ್ರ ಸರ್ಕಾರ ಕೆಡೆವಿದ ಶಾಸಕರು ಮುಂಬೈನಲ್ಲಿದ್ದಾಗ ಮೋಜು ಮಸ್ತಿಗಾಗಿ ಸ್ಯಾಂಟ್ರೋ ರವಿ ಹುಡುಗಿಯರನ್ನು ಸಪ್ಲೈ ಮಾಡಿದ್ದ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪದ ಹಿನ್ನೆಲೆ ಸ್ಯಾಂಟ್ರೋ ರವಿ ಹೆಸರು ಮುನ್ನಲೆಗೆ ಬಂದಿದೆ.

ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಹೆಚ್​ಡಿಕೆ, ಕುಮಾರಕೃಪ ಗೆಸ್ಟ್‌ಹೌಸ್‌ನಲ್ಲಿ ಸ್ಯಾಂಟ್ರೋ ರವಿ ವ್ಯವಹಾರ. ಇವನಿಗೆ ರೂಂ ಕೊಟ್ಟವರು ಯಾರು? ಯಾರ ರೆಫರೆನ್ಸ್ ಆಧಾರದ ಮೇಲೆ ರೂಂ ಕೊಟ್ಟಿದ್ದರು? ಸಮ್ಮಿಶ್ರ ಸರ್ಕಾರ ಉರುಳಿಸುವ ವೇಳೆ ಅವರನ್ನು ಯಾರು ಎಲ್ಲಿಗೆ ಕರೆದುಕೊಂಡು ಹೋಗಿದ್ದರು ಎಂದು ತನಿಖೆ ಮಾಡಬೇಕು. ನಾನು ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿದ್ದೆ. ಕಳೆದ ತಿಂಗಳವರೆಗೆ ಕುಮಾರಕೃಪದಲ್ಲಿ ಈ ವ್ಯಕ್ತಿಗೆ ರೂಮ್ ಕೊಟ್ಟವರು ಯಾರು? ಕುಮಾರಕೃಪದಲ್ಲೇ ಈತನ ವ್ಯವಹಾರ ಎಂದು ಗಂಭೀರ ಆರೋಪ ಮಾಡಿದ್ದರು.

ಇತ್ತ ಕೆಕೆ ಗೆಸ್ಟ್​ಹೌಸ್​ನಲ್ಲಿ ಸ್ಯಾಂಟ್ರೋ ರವಿಗೆ ಕೊಠಡಿ ಕಲ್ಪಿಸಿರುವ ಬಗ್ಗೆ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಬಿಜೆಪಿ ಸರ್ಕಾರ ಸ್ಯಾಂಟ್ರೋ ರವಿಗೆ ಕೆಕೆ ಗೆಸ್ಟ್ ಹೌಸ್​ನಲ್ಲಿ ಕೊಠಡಿ ನೀಡಿ, ಆತನಿಗೆ ವ್ಯವಹಾರ ಮಾಡಲು ಅನುವು ಮಾಡಿಕೊಟ್ಟಿತ್ತು ಎಂದು ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿತ್ತು. ಇದೀಗ ಕೆಕೆ ಗೆಸ್ಟ್ ಹೌಸ್ ಸಹಾಯಕ ಪ್ರಧಾನ ವ್ಯವಸ್ಥಾಪಕ ದೇವರಾಜ್ ಹೆಚ್.ಎಸ್. ಅವರನ್ನು ಎತ್ತಂಗಡಿ ಮಾಡಲು ಕಾರಣ ಎಂದು ಹೇಳಲಾಗಿದೆ.

ಯಾರು ಈ ಸ್ಯಾಂಟ್ರೋ ರವಿ?: ಸಮ್ಮಿಶ್ರ ಸರ್ಕಾರ ಕೆಡೆವಿದ ಶಾಸಕರು ಮುಂಬೈನಲ್ಲಿದ್ದಾಗ ಮೋಜು ಮಸ್ತಿಗಾಗಿ ಸ್ಯಾಂಟ್ರೋ ರವಿ ಹುಡುಗಿಯರನ್ನು ಸಪ್ಲೈ ಮಾಡಿದ್ದ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಈ ಹಿನ್ನೆಲೆ ಸ್ಯಾಂಟ್ರೋ ರವಿ ಹೆಸರು ಮುನ್ನಲೆಗೆ ಬಂದಿದೆ. ಇದರ ಬೆನ್ನಲ್ಲೇ ವರ್ಗಾವಣೆ ವಿಚಾರವಾಗಿ ಡಿವೈಎಸ್‌ಪಿಯೊಬ್ಬರ ಜೊತೆಗೆ ಸ್ಯಾಂಟ್ರೋ ರವಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋ ಬೆನ್ನಲ್ಲೇ ಸ್ಯಾಂಟ್ರೋ‌ ರವಿಗೆ ಹಲವು ರಾಜಕಾರಣಿಗಳು, ಅಧಿಕಾರಿಗಳ ಜೊತೆ ಲಿಂಕ್ ಇರುವ ಕುರಿತಾಗಿ ಫೋಟೋಗಳು ಹರಿದಾಡುತ್ತಿವೆ.

ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸ್ಯಾಂಟ್ರೋ ರವಿ ಮಾಡಿದ್ದಾರೆ ಎನ್ನಲಾಗುತ್ತಿರುವ ವಾಟ್ಸ್​ಆ್ಯಪ್​ ಮೆಸೇಜ್‌ಗಳು, ಗೃಹ ಸಚಿವ ಅರಗ ಜ್ಞಾನೇಂದ್ರ ಜೊತೆಗೆ ಇರುವ ಫೋಟೋಗಳು ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರಗ ಜ್ಞಾನೇಂದ್ರ, ಎಸ್.ಟಿ. ಸೋಮಶೇಖರ್, ಸುಧಾಕರ್ ಮಾತ್ರವಲ್ಲದೇ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳೊಂದಿಗೂ ವಾಟ್ಸ್​ಆ್ಯಪ್​​ ಚಾಟ್ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ವಿಷಯವನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಬಿಜೆಪಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ.

ಸ್ಯಾಂಟ್ರೋ ರವಿಗೆ ಬಿಜೆಪಿ ನಾಯಕರ ಜೊತೆ ಸಂಪರ್ಕ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, ಕುಮಾರಸ್ವಾಮಿಯೇ ಸ್ಯಾಂಟ್ರೋ ರವಿ ಯಾರು ಅಂತ ಹೇಳಬೇಕು ಮತ್ತು ವಿವರಗಳನ್ನು ನೀಡಬೇಕು. ಯಾಕೆಂದರೆ ರವಿ ಯಾರು ಎನ್ನುವುದು ನನಗೆ ಗೊತ್ತಿಲ್ಲ ಎಂದಿದ್ದರು.

ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲು: ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ಎರಡನೇ ಪತ್ನಿ ದೂರು ನೀಡಿದ್ದಾರೆ. ಇತ್ತ ಸಿಎಂ ಬೊಮ್ಮಾಯಿ‌ ಸ್ಯಾಂಟ್ರೋ ರವಿಯ 20 ವರ್ಷಗಳ ದಂಧೆಯ ಎಲ್ಲಾ ಅಂಶಗಳನ್ನು ತನಿಖೆಗೆ ಒಳಪಡಿಸುತ್ತೇವೆ. ಆತ 20 ವರ್ಷದಲ್ಲಿ ಯಾರ ಯಾರ ಸಂಪರ್ಕದಲ್ಲಿದ್ದ, ಆತನ ವ್ಯವಹಾರ ಏನು ಎಂಬುದು ತನಿಖೆ ಮೂಲಕ ಬಯಲಾಗುತ್ತದೆ ಎಂದಿದ್ದಾರೆ.

ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣ ಕುರಿತು ಮೈಸೂರು ನಗರ ಪೊಲೀಸ್ ಕಮೀಷನರ್ ರಮೇಶ್ ಅವರು ಹೇಳಿಕೆ ನೀಡಿ, ಸ್ಯಾಂಟ್ರೋ ರವಿ ಪ್ರಕರಣ ಸಂಬಂಧ ಈಗಾಗಲೇ ವಿಚಾರಣೆ ಆರಂಭವಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಸ್ಯಾಂಟ್ರೊ ರವಿ ಜೊತೆ ನಾನು ಚಾಟಿಂಗ್ ಮಾಡಿದ್ದೇನೆ ಎಂಬುದು ಸುಳ್ಳು: ರಾಜಕಾರಣಿಗಳ ಜತೆಗಿನ ನಂಟು ಅಲ್ಲಗಳೆದ ಸಿಎಂ

ಬೆಂಗಳೂರು: ಸ್ಯಾಂಟ್ರೋ ರವಿ ಟೀಂಗೆ ಆಶ್ರಯ ನೀಡಿದ ಆರೋಪ‌ ಬೆನ್ನಲ್ಲೇ ಕುಮಾರಕೃಪಾ ಅತಿಥಿಗೃಹದ ಸಹಾಯಕ ಪ್ರಧಾನ ವ್ಯವಸ್ಥಾಪಕರನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಎಂಡಿ ಕುಮಾರಕೃಪಾ ಅತಿಥಿ ಗೃಹದ ಸಹಾಯಕ ವ್ಯವಸ್ಥಾಪಕ ದೇವರಾಜ್ ಹೆಚ್.ಎಸ್. ಅವರನ್ನು ಎತ್ತಂಗಡಿ ಮಾಡಿ ಆದೇಶಿಸಿದ್ದಾರೆ.

ಮುಂದಿ‌ನ ಆದೇಶದ ವರೆಗೆ ಕೇಂದ್ರ ಕಚೇರಿಯಲ್ಲಿ ವರದಿ ಮಾಡುವಂತೆ ಆದೇಶಿಸಲಾಗಿದೆ. ಸ್ಯಾಂಟ್ರೋ ರವಿ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದ. ಇದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಪ್ರತಿಪಕ್ಷ ನಾಯಕರುಗಳು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಮ್ಮಿಶ್ರ ಸರ್ಕಾರ ಕೆಡೆವಿದ ಶಾಸಕರು ಮುಂಬೈನಲ್ಲಿದ್ದಾಗ ಮೋಜು ಮಸ್ತಿಗಾಗಿ ಸ್ಯಾಂಟ್ರೋ ರವಿ ಹುಡುಗಿಯರನ್ನು ಸಪ್ಲೈ ಮಾಡಿದ್ದ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪದ ಹಿನ್ನೆಲೆ ಸ್ಯಾಂಟ್ರೋ ರವಿ ಹೆಸರು ಮುನ್ನಲೆಗೆ ಬಂದಿದೆ.

ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಹೆಚ್​ಡಿಕೆ, ಕುಮಾರಕೃಪ ಗೆಸ್ಟ್‌ಹೌಸ್‌ನಲ್ಲಿ ಸ್ಯಾಂಟ್ರೋ ರವಿ ವ್ಯವಹಾರ. ಇವನಿಗೆ ರೂಂ ಕೊಟ್ಟವರು ಯಾರು? ಯಾರ ರೆಫರೆನ್ಸ್ ಆಧಾರದ ಮೇಲೆ ರೂಂ ಕೊಟ್ಟಿದ್ದರು? ಸಮ್ಮಿಶ್ರ ಸರ್ಕಾರ ಉರುಳಿಸುವ ವೇಳೆ ಅವರನ್ನು ಯಾರು ಎಲ್ಲಿಗೆ ಕರೆದುಕೊಂಡು ಹೋಗಿದ್ದರು ಎಂದು ತನಿಖೆ ಮಾಡಬೇಕು. ನಾನು ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿದ್ದೆ. ಕಳೆದ ತಿಂಗಳವರೆಗೆ ಕುಮಾರಕೃಪದಲ್ಲಿ ಈ ವ್ಯಕ್ತಿಗೆ ರೂಮ್ ಕೊಟ್ಟವರು ಯಾರು? ಕುಮಾರಕೃಪದಲ್ಲೇ ಈತನ ವ್ಯವಹಾರ ಎಂದು ಗಂಭೀರ ಆರೋಪ ಮಾಡಿದ್ದರು.

ಇತ್ತ ಕೆಕೆ ಗೆಸ್ಟ್​ಹೌಸ್​ನಲ್ಲಿ ಸ್ಯಾಂಟ್ರೋ ರವಿಗೆ ಕೊಠಡಿ ಕಲ್ಪಿಸಿರುವ ಬಗ್ಗೆ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಬಿಜೆಪಿ ಸರ್ಕಾರ ಸ್ಯಾಂಟ್ರೋ ರವಿಗೆ ಕೆಕೆ ಗೆಸ್ಟ್ ಹೌಸ್​ನಲ್ಲಿ ಕೊಠಡಿ ನೀಡಿ, ಆತನಿಗೆ ವ್ಯವಹಾರ ಮಾಡಲು ಅನುವು ಮಾಡಿಕೊಟ್ಟಿತ್ತು ಎಂದು ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿತ್ತು. ಇದೀಗ ಕೆಕೆ ಗೆಸ್ಟ್ ಹೌಸ್ ಸಹಾಯಕ ಪ್ರಧಾನ ವ್ಯವಸ್ಥಾಪಕ ದೇವರಾಜ್ ಹೆಚ್.ಎಸ್. ಅವರನ್ನು ಎತ್ತಂಗಡಿ ಮಾಡಲು ಕಾರಣ ಎಂದು ಹೇಳಲಾಗಿದೆ.

ಯಾರು ಈ ಸ್ಯಾಂಟ್ರೋ ರವಿ?: ಸಮ್ಮಿಶ್ರ ಸರ್ಕಾರ ಕೆಡೆವಿದ ಶಾಸಕರು ಮುಂಬೈನಲ್ಲಿದ್ದಾಗ ಮೋಜು ಮಸ್ತಿಗಾಗಿ ಸ್ಯಾಂಟ್ರೋ ರವಿ ಹುಡುಗಿಯರನ್ನು ಸಪ್ಲೈ ಮಾಡಿದ್ದ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಈ ಹಿನ್ನೆಲೆ ಸ್ಯಾಂಟ್ರೋ ರವಿ ಹೆಸರು ಮುನ್ನಲೆಗೆ ಬಂದಿದೆ. ಇದರ ಬೆನ್ನಲ್ಲೇ ವರ್ಗಾವಣೆ ವಿಚಾರವಾಗಿ ಡಿವೈಎಸ್‌ಪಿಯೊಬ್ಬರ ಜೊತೆಗೆ ಸ್ಯಾಂಟ್ರೋ ರವಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋ ಬೆನ್ನಲ್ಲೇ ಸ್ಯಾಂಟ್ರೋ‌ ರವಿಗೆ ಹಲವು ರಾಜಕಾರಣಿಗಳು, ಅಧಿಕಾರಿಗಳ ಜೊತೆ ಲಿಂಕ್ ಇರುವ ಕುರಿತಾಗಿ ಫೋಟೋಗಳು ಹರಿದಾಡುತ್ತಿವೆ.

ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸ್ಯಾಂಟ್ರೋ ರವಿ ಮಾಡಿದ್ದಾರೆ ಎನ್ನಲಾಗುತ್ತಿರುವ ವಾಟ್ಸ್​ಆ್ಯಪ್​ ಮೆಸೇಜ್‌ಗಳು, ಗೃಹ ಸಚಿವ ಅರಗ ಜ್ಞಾನೇಂದ್ರ ಜೊತೆಗೆ ಇರುವ ಫೋಟೋಗಳು ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರಗ ಜ್ಞಾನೇಂದ್ರ, ಎಸ್.ಟಿ. ಸೋಮಶೇಖರ್, ಸುಧಾಕರ್ ಮಾತ್ರವಲ್ಲದೇ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳೊಂದಿಗೂ ವಾಟ್ಸ್​ಆ್ಯಪ್​​ ಚಾಟ್ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ವಿಷಯವನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಬಿಜೆಪಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದಾರೆ.

ಸ್ಯಾಂಟ್ರೋ ರವಿಗೆ ಬಿಜೆಪಿ ನಾಯಕರ ಜೊತೆ ಸಂಪರ್ಕ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, ಕುಮಾರಸ್ವಾಮಿಯೇ ಸ್ಯಾಂಟ್ರೋ ರವಿ ಯಾರು ಅಂತ ಹೇಳಬೇಕು ಮತ್ತು ವಿವರಗಳನ್ನು ನೀಡಬೇಕು. ಯಾಕೆಂದರೆ ರವಿ ಯಾರು ಎನ್ನುವುದು ನನಗೆ ಗೊತ್ತಿಲ್ಲ ಎಂದಿದ್ದರು.

ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲು: ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ಎರಡನೇ ಪತ್ನಿ ದೂರು ನೀಡಿದ್ದಾರೆ. ಇತ್ತ ಸಿಎಂ ಬೊಮ್ಮಾಯಿ‌ ಸ್ಯಾಂಟ್ರೋ ರವಿಯ 20 ವರ್ಷಗಳ ದಂಧೆಯ ಎಲ್ಲಾ ಅಂಶಗಳನ್ನು ತನಿಖೆಗೆ ಒಳಪಡಿಸುತ್ತೇವೆ. ಆತ 20 ವರ್ಷದಲ್ಲಿ ಯಾರ ಯಾರ ಸಂಪರ್ಕದಲ್ಲಿದ್ದ, ಆತನ ವ್ಯವಹಾರ ಏನು ಎಂಬುದು ತನಿಖೆ ಮೂಲಕ ಬಯಲಾಗುತ್ತದೆ ಎಂದಿದ್ದಾರೆ.

ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣ ಕುರಿತು ಮೈಸೂರು ನಗರ ಪೊಲೀಸ್ ಕಮೀಷನರ್ ರಮೇಶ್ ಅವರು ಹೇಳಿಕೆ ನೀಡಿ, ಸ್ಯಾಂಟ್ರೋ ರವಿ ಪ್ರಕರಣ ಸಂಬಂಧ ಈಗಾಗಲೇ ವಿಚಾರಣೆ ಆರಂಭವಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಸ್ಯಾಂಟ್ರೊ ರವಿ ಜೊತೆ ನಾನು ಚಾಟಿಂಗ್ ಮಾಡಿದ್ದೇನೆ ಎಂಬುದು ಸುಳ್ಳು: ರಾಜಕಾರಣಿಗಳ ಜತೆಗಿನ ನಂಟು ಅಲ್ಲಗಳೆದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.