ETV Bharat / state

ಯುವತಿ ಮೇಲೆ ಆ್ಯಸಿಡ್ ದಾಳಿ: ಆರೋಪಿ ನಾಗೇಶನಿಗೆ ಹಿಡಿಶಾಪ ಹಾಕುತ್ತಿರುವ ಕುಟುಂಬಸ್ಥರು - ಕೆಲಸಕ್ಕೆಂದು ತೆರಳಿದ್ದ ಯುವತಿ ಮೇಲೆ ಭಗ್ನ ಪ್ರೇಮಿಯಿಂದ ಆ್ಯಸಿಡ್ ದಾಳಿ

ಭಗ್ನ ಪ್ರೇಮಿ ನಾಗೇಶ 23 ವರ್ಷದ ಯವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ, ಪರಾರಿಯಾಗಿದ್ದಾನೆ. ಈಗ ಆರೋಪಿ ನಾಗೇಶನಿಗೆ ಕುಟುಂಬದವರು ಹಿಡಿಶಾಪ ಹಾಕುತ್ತಿದ್ದಾರೆ. ಅವನು ಏನಾದರೂ ಆಗಲಿ, ನಮಗೂ ಅವನಿಗೂ ಸಂಬಂಧವಿಲ್ಲ. ಅವನಿಂದ ನಮಗೆಲ್ಲಾ ತೊಂದರೆ ಆಗಿದೆ ಎಂದು ಅವನ ಮಾವ ಕೃಷ್ಣಪ್ಪ ಕಣ್ಣೀರಾಕಿದ್ದಾರೆ.

Acid attack on a young girl on her way to work
ಆರೋಪಿ ನಾಗೇಶನಿಗೆ ಹಿಡಿ ಶಾಪ ಹಾಕುತ್ತಿರುವ ಕುಟುಂಬಸ್ಥರು
author img

By

Published : May 5, 2022, 6:13 PM IST

ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ಹಾಕಿ ನಾಪತ್ತೆಯಾಗಿರುವ ಆರೋಪಿ ನಾಗೇಶನ ಮೇಲೆ ಕುಟುಂಬದವರು ಹಿಡಿಶಾಪ ಹಾಕಿದ್ದಾರೆ. ಅವನು ಏನಾದರೂ ಆಗಲಿ, ನಮಗೂ ಅವನಿಗೂ ಸಂಬಂಧವಿಲ್ಲ. ಅವನಿಂದ ನಮಗೆಲ್ಲಾ ತೊಂದರೆ ಆಗಿದೆ. ಅವನು ನಮ್ಮ ಮನೆಗೆ ಬರ್ತಾನೆ ಇರಲಿಲ್ಲ. ಈಗ ಪ್ರತಿದಿನ ನಾವು ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದೇವೆ ಎಂದು ನಾಗೇಶ್ ಮಾವ ಕೃಷ್ಣಪ್ಪ ಕಣ್ಣೀರಾಕಿದ್ದಾರೆ.

ಅವನು ಅಪ್ಪ ಅಮ್ಮನ ಜೊತೆ ಒಬ್ಬನೆ ವಾಸವಿದ್ದ. ನಮ್ಮ ಮನೆಗೆ ಅವನು ಬರುತ್ತಿರಲಿಲ್ಲ. ನಾನು ಅವರ ಅಕ್ಕನನ್ನ ಮದುವೆಯಾಗಿದ್ದೀನಿ. ಅವರ ಅಕ್ಕನ ಮದುವೆಯಾಗಿದ್ದೆ ತಪ್ಪಾಗಿ ಹೋಗಿದೆ. ನಮ್ಮ ಮನೆಯಲ್ಲಿ ನಾವು ಇದ್ದೀವಿ. ಆತನ ನೀಚ ಕೆಲಸಕ್ಕಾಗಿ ಗಾರ್ಮೆಂಟ್ಸ್ ಮಾರಿಬಿಟ್ಟೆ. ಊರಲ್ಲಿ ಜಮೀನು ಮಾರಿದೆ. ನಮಗೆ ಸಾಕಾಗಿ ಹೋಗಿದೆ ಎಂದು ನಾಗೇಶನ ಮಾವ ಕೃಷ್ಣಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ಮೇಲೆ ಭಗ್ನ ಪ್ರೇಮಿಯಿಂದ ಆ್ಯಸಿಡ್ ದಾಳಿ...!

ಭಗ್ನ ಪ್ರೇಮಿ ನಾಗೇಶ 23 ವರ್ಷದ ಯವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಪ್ರೀತಿಗೆ ನಿರಾಕರಿಸಿದ್ದಕ್ಕೆ ಆ್ಯಸಿಡ್​ ದಾಳಿ ನಡೆಸಿದ್ದಾನೆ. ಸುಂಕದ ಕಟ್ಟೆಯ ಮುತ್ತೂಟ್ ಫೈನಾನ್ಸ್‌ನಲ್ಲಿ ಕೆಲಸ ಮಾಡಲು ತೆರಳುತ್ತಿದ್ದ ವೇಳೆ ನಾಗೇಶ​ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಈ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.

ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ಹಾಕಿ ನಾಪತ್ತೆಯಾಗಿರುವ ಆರೋಪಿ ನಾಗೇಶನ ಮೇಲೆ ಕುಟುಂಬದವರು ಹಿಡಿಶಾಪ ಹಾಕಿದ್ದಾರೆ. ಅವನು ಏನಾದರೂ ಆಗಲಿ, ನಮಗೂ ಅವನಿಗೂ ಸಂಬಂಧವಿಲ್ಲ. ಅವನಿಂದ ನಮಗೆಲ್ಲಾ ತೊಂದರೆ ಆಗಿದೆ. ಅವನು ನಮ್ಮ ಮನೆಗೆ ಬರ್ತಾನೆ ಇರಲಿಲ್ಲ. ಈಗ ಪ್ರತಿದಿನ ನಾವು ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದೇವೆ ಎಂದು ನಾಗೇಶ್ ಮಾವ ಕೃಷ್ಣಪ್ಪ ಕಣ್ಣೀರಾಕಿದ್ದಾರೆ.

ಅವನು ಅಪ್ಪ ಅಮ್ಮನ ಜೊತೆ ಒಬ್ಬನೆ ವಾಸವಿದ್ದ. ನಮ್ಮ ಮನೆಗೆ ಅವನು ಬರುತ್ತಿರಲಿಲ್ಲ. ನಾನು ಅವರ ಅಕ್ಕನನ್ನ ಮದುವೆಯಾಗಿದ್ದೀನಿ. ಅವರ ಅಕ್ಕನ ಮದುವೆಯಾಗಿದ್ದೆ ತಪ್ಪಾಗಿ ಹೋಗಿದೆ. ನಮ್ಮ ಮನೆಯಲ್ಲಿ ನಾವು ಇದ್ದೀವಿ. ಆತನ ನೀಚ ಕೆಲಸಕ್ಕಾಗಿ ಗಾರ್ಮೆಂಟ್ಸ್ ಮಾರಿಬಿಟ್ಟೆ. ಊರಲ್ಲಿ ಜಮೀನು ಮಾರಿದೆ. ನಮಗೆ ಸಾಕಾಗಿ ಹೋಗಿದೆ ಎಂದು ನಾಗೇಶನ ಮಾವ ಕೃಷ್ಣಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ಮೇಲೆ ಭಗ್ನ ಪ್ರೇಮಿಯಿಂದ ಆ್ಯಸಿಡ್ ದಾಳಿ...!

ಭಗ್ನ ಪ್ರೇಮಿ ನಾಗೇಶ 23 ವರ್ಷದ ಯವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಪ್ರೀತಿಗೆ ನಿರಾಕರಿಸಿದ್ದಕ್ಕೆ ಆ್ಯಸಿಡ್​ ದಾಳಿ ನಡೆಸಿದ್ದಾನೆ. ಸುಂಕದ ಕಟ್ಟೆಯ ಮುತ್ತೂಟ್ ಫೈನಾನ್ಸ್‌ನಲ್ಲಿ ಕೆಲಸ ಮಾಡಲು ತೆರಳುತ್ತಿದ್ದ ವೇಳೆ ನಾಗೇಶ​ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಈ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.