ETV Bharat / state

ಯುಜಿಸಿ ಮಾನದಂಡ ಪಾಲಿಸದವರಿಗೆ ಅನುಮತಿ ಕೊಟ್ಟರೆ ಕುಲಪತಿಗಳ ವಿರುದ್ಧ ಕ್ರಮ: ಡಾ. ಅಶ್ವತ್ಥನಾರಾಯಣ - ಯುಜಿಸಿ ಮಾನದಂಡದ ಪ್ರಕಾರ ಅರ್ಜಿದಾರರ ಅರ್ಜಿಯನ್ನು ಪರಿಶೀಲಿಸಿ

ಯುಜಿಸಿ ಮಾನದಂಡಗಳ ಅನ್ವಯ ಕನಿಷ್ಠ ಮೂಲಸೌಲಭ್ಯಗಳಿಲ್ಲದ ಸಂಸ್ಥೆಗಳಿಗೆ ಕಾಲೇಜು ತೆರೆಯಲು ಶಿಫಾರಸು ಮಾಡಿದರೆ ವಿಶ್ವವಿದ್ಯಾಲಯದ ಕುಲಪತಿ ಹಾಗೂ ರಿಜಿಸ್ಟ್ರಾರ್‌ ಅವರನ್ನು ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.

KN_BNG_05_Training_Syndicate_Members_University_9024736
ಯುಜಿಸಿ ಮಾನದಂಡ ಪಾಲಿಸದವರಿಗೆ ಅನುಮತಿ ಕೊಟ್ಟರೆ ಕುಲಪತಿಗಳ ವಿರುದ್ಧ ಕ್ರಮ:ಡಾ. ಅಶ್ವತ್ಥನಾರಾಯಣ
author img

By

Published : Feb 8, 2020, 6:34 AM IST

ಬೆಂಗಳೂರು: ಯುಜಿಸಿ ಮಾನದಂಡಗಳ ಅನ್ವಯ ಕನಿಷ್ಠ ಮೂಲಸೌಲಭ್ಯಗಳಿಲ್ಲದ ಸಂಸ್ಥೆಗಳಿಗೆ ಕಾಲೇಜು ತೆರೆಯಲು ಶಿಫಾರಸು ಮಾಡಿದರೆ ವಿಶ್ವವಿದ್ಯಾಲಯದ ಕುಲಪತಿ ಹಾಗೂ ರಿಜಿಸ್ಟ್ರಾರ್‌ ಅವರನ್ನು ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು. ಈ ವಿಷಯದಲ್ಲಿ ಯಾವ ರೀತಿಯ ರಕ್ಷಣೆ ಸಾಧ್ಯ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರಿಗೆ ಸರ್ಕಾರದ ವತಿಯಿಂದ ವಿಕಾಸಸೌಧದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಮತ್ತು ಆಡಳಿತಾತ್ಮಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪ ಆಗಬಾರದು ಎಂಬ ಕಾರಣಕ್ಕೆ ವಿಶ್ವವಿದ್ಯಾಲಯಗಳಿಗೆ ಸ್ವಾಯತ್ತೆ ನೀಡಲಾಗುತ್ತದೆ. ಆದರೆ, ಕೊಟ್ಟಂತಹ ಅಧಿಕಾರ ಪ್ರಯೋಜನ ಆಗದಿದ್ದರೆ ಅದನ್ನು ವಾಪಸ್‌ ಪಡೆಯಬಹುದು. ವಿಶ್ವವಿದ್ಯಾಲಯಗಳಿಗೆ ನಮ್ಮ ಸರ್ಕಾರದಿಂದ ಹೆಚ್ಚಿನ ಸ್ವಾತಂತ್ರ್ಯ ಕೊಡಲಾಗಿದೆ. ಇಂಥ ಸ್ವಾತಂತ್ರ್ಯ ಮತ್ತು ಅಧಿಕಾರವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು. ಒಂದು ವೇಳೆ ಕೊಟ್ಟ ಅಧಿಕಾರ ಪ್ರಯೋಜನ ಆಗದಿದ್ದರೆ ಅದನ್ನು ವಾಪಸ್‌ ಕೂಡ ತೆಗೆದುಕೊಳ್ಳಬಹುದು ಎಂದು ಖಡಕ್‌ ಸೂಚನೆ ನೀಡಿದರು.

ಇಡೀ ಸಮಾಜದ ವ್ಯವಸ್ಥೆಯನ್ನು ಸರಿಪಡಿಸುವಂತ ಮಹತ್ತರವಾದ ಜವಾಬ್ದಾರಿ ವಿಶ್ವವಿದ್ಯಾಲಯಗಳ ಮೇಲಿದೆ. ಇಲ್ಲಿ ಸಿಗುವಂತ ಗುಣಮಟ್ಟದ ಶಿಕ್ಷಣದಿಂದ ಉತ್ತಮ ಸಮಾಜ ಸೃಷ್ಟಿಸಲು ಸಾಧ್ಯ. ಈ ಜವಾಬ್ದಾರಿಯನ್ನು ಅರಿತು ಎಲ್ಲರೂ ಕೆಲಸ ಮಾಡಿದಾಗ ಉತ್ತಮ ವ್ಯವಸ್ಥೆ ನಿರ್ಮಿಸಬಹುದು. ಅಧಿಕಾರದ ದರ್ಪ ತೋರಿಸಲು ದೊಡ್ಡ ಹುದ್ದೆಗಳಲ್ಲಿ ಇರುವ ಅಗತ್ಯ ಇಲ್ಲ. ಒಳ್ಳೆಯ ಗುಣ ಬೆಳೆಸಿಕೊಂಡಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

ನೇಮಕದಲ್ಲಿ ಪಾರದರ್ಶಕತೆ : ವಿಶ್ವವಿದ್ಯಾಲಯಗಳಲ್ಲಿ ಕೇವಲ ಲಿಖಿತ ಪರೀಕ್ಷೆ ಮೂಲಕ ನೇಮಕ ಆಗುತ್ತಿದೆ. ಪಾರದರ್ಶಕತೆ ಕಾಯ್ದುಕೊಳ್ಳುತ್ತಿದ್ದೇವೆ. ಯುಜಿಸಿ ಮಾನದಂಡದ ಪ್ರಕಾರ ಅರ್ಜಿದಾರರ ಅರ್ಜಿಯನ್ನು ಪರಿಶೀಲಿಸಿ, ಮೌಲ್ಯಮಾಪನ ನಡೆಸಿ, ವಿವಿ ಮಟ್ಟದಲ್ಲೇ ನೇಮಕ ಆಗುವುದು. ಪರೀಕ್ಷಾ ಪ್ರಾಧಿಕಾರದಿಂದ ಯಾವುದೇ ಪರೀಕ್ಷೆ ಅಥವಾ ಸಂದರ್ಶನ ನಡೆಸುವುದಿಲ್ಲ. ಅರ್ಜಿಗಳನ್ನು ವಿಶ್ಲೇಷಿಸಿ 1:3 ಅನುಪಾತದಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾಲಯಗಳಿಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿಯೇ ಆಯ್ಕೆ ಪ್ರಕ್ರಿಯೆ ನಡೆಯುವುದು ಎಂದು ಅವರು ಸ್ಪಷ್ಟಪಡಿಸಿದರು.

ಆನ್‌ಲೈನ್‌ ವ್ಯವಸ್ಥೆಗೆ ಒತ್ತು: ನಮ್ಮ ರಾಜ್ಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇಂಥ ಸಂದರ್ಭದಲ್ಲೂ ಕಡತಗಳಲ್ಲಿ ಕಾರ್ಯ ನಿರ್ವಹಿಸುವುದು ಸರಿಯಲ್ಲ. ವಿಶ್ವವಿದ್ಯಾಲಯಗಳ ಎಲ್ಲ ಕೆಲಸ, ಶಿಫಾರಸುಗಳು ಆನ್‌ಲೈನ್‌ ಮೂಲಕವೇ ನಡೆಯಬೇಕು ಎಂದು ಡಿಸಿಎಂ ತಾಕೀತು ಮಾಡಿದರು.

ಬೆಂಗಳೂರು: ಯುಜಿಸಿ ಮಾನದಂಡಗಳ ಅನ್ವಯ ಕನಿಷ್ಠ ಮೂಲಸೌಲಭ್ಯಗಳಿಲ್ಲದ ಸಂಸ್ಥೆಗಳಿಗೆ ಕಾಲೇಜು ತೆರೆಯಲು ಶಿಫಾರಸು ಮಾಡಿದರೆ ವಿಶ್ವವಿದ್ಯಾಲಯದ ಕುಲಪತಿ ಹಾಗೂ ರಿಜಿಸ್ಟ್ರಾರ್‌ ಅವರನ್ನು ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು. ಈ ವಿಷಯದಲ್ಲಿ ಯಾವ ರೀತಿಯ ರಕ್ಷಣೆ ಸಾಧ್ಯ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರಿಗೆ ಸರ್ಕಾರದ ವತಿಯಿಂದ ವಿಕಾಸಸೌಧದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಮತ್ತು ಆಡಳಿತಾತ್ಮಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪ ಆಗಬಾರದು ಎಂಬ ಕಾರಣಕ್ಕೆ ವಿಶ್ವವಿದ್ಯಾಲಯಗಳಿಗೆ ಸ್ವಾಯತ್ತೆ ನೀಡಲಾಗುತ್ತದೆ. ಆದರೆ, ಕೊಟ್ಟಂತಹ ಅಧಿಕಾರ ಪ್ರಯೋಜನ ಆಗದಿದ್ದರೆ ಅದನ್ನು ವಾಪಸ್‌ ಪಡೆಯಬಹುದು. ವಿಶ್ವವಿದ್ಯಾಲಯಗಳಿಗೆ ನಮ್ಮ ಸರ್ಕಾರದಿಂದ ಹೆಚ್ಚಿನ ಸ್ವಾತಂತ್ರ್ಯ ಕೊಡಲಾಗಿದೆ. ಇಂಥ ಸ್ವಾತಂತ್ರ್ಯ ಮತ್ತು ಅಧಿಕಾರವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು. ಒಂದು ವೇಳೆ ಕೊಟ್ಟ ಅಧಿಕಾರ ಪ್ರಯೋಜನ ಆಗದಿದ್ದರೆ ಅದನ್ನು ವಾಪಸ್‌ ಕೂಡ ತೆಗೆದುಕೊಳ್ಳಬಹುದು ಎಂದು ಖಡಕ್‌ ಸೂಚನೆ ನೀಡಿದರು.

ಇಡೀ ಸಮಾಜದ ವ್ಯವಸ್ಥೆಯನ್ನು ಸರಿಪಡಿಸುವಂತ ಮಹತ್ತರವಾದ ಜವಾಬ್ದಾರಿ ವಿಶ್ವವಿದ್ಯಾಲಯಗಳ ಮೇಲಿದೆ. ಇಲ್ಲಿ ಸಿಗುವಂತ ಗುಣಮಟ್ಟದ ಶಿಕ್ಷಣದಿಂದ ಉತ್ತಮ ಸಮಾಜ ಸೃಷ್ಟಿಸಲು ಸಾಧ್ಯ. ಈ ಜವಾಬ್ದಾರಿಯನ್ನು ಅರಿತು ಎಲ್ಲರೂ ಕೆಲಸ ಮಾಡಿದಾಗ ಉತ್ತಮ ವ್ಯವಸ್ಥೆ ನಿರ್ಮಿಸಬಹುದು. ಅಧಿಕಾರದ ದರ್ಪ ತೋರಿಸಲು ದೊಡ್ಡ ಹುದ್ದೆಗಳಲ್ಲಿ ಇರುವ ಅಗತ್ಯ ಇಲ್ಲ. ಒಳ್ಳೆಯ ಗುಣ ಬೆಳೆಸಿಕೊಂಡಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.

ನೇಮಕದಲ್ಲಿ ಪಾರದರ್ಶಕತೆ : ವಿಶ್ವವಿದ್ಯಾಲಯಗಳಲ್ಲಿ ಕೇವಲ ಲಿಖಿತ ಪರೀಕ್ಷೆ ಮೂಲಕ ನೇಮಕ ಆಗುತ್ತಿದೆ. ಪಾರದರ್ಶಕತೆ ಕಾಯ್ದುಕೊಳ್ಳುತ್ತಿದ್ದೇವೆ. ಯುಜಿಸಿ ಮಾನದಂಡದ ಪ್ರಕಾರ ಅರ್ಜಿದಾರರ ಅರ್ಜಿಯನ್ನು ಪರಿಶೀಲಿಸಿ, ಮೌಲ್ಯಮಾಪನ ನಡೆಸಿ, ವಿವಿ ಮಟ್ಟದಲ್ಲೇ ನೇಮಕ ಆಗುವುದು. ಪರೀಕ್ಷಾ ಪ್ರಾಧಿಕಾರದಿಂದ ಯಾವುದೇ ಪರೀಕ್ಷೆ ಅಥವಾ ಸಂದರ್ಶನ ನಡೆಸುವುದಿಲ್ಲ. ಅರ್ಜಿಗಳನ್ನು ವಿಶ್ಲೇಷಿಸಿ 1:3 ಅನುಪಾತದಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾಲಯಗಳಿಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿಯೇ ಆಯ್ಕೆ ಪ್ರಕ್ರಿಯೆ ನಡೆಯುವುದು ಎಂದು ಅವರು ಸ್ಪಷ್ಟಪಡಿಸಿದರು.

ಆನ್‌ಲೈನ್‌ ವ್ಯವಸ್ಥೆಗೆ ಒತ್ತು: ನಮ್ಮ ರಾಜ್ಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇಂಥ ಸಂದರ್ಭದಲ್ಲೂ ಕಡತಗಳಲ್ಲಿ ಕಾರ್ಯ ನಿರ್ವಹಿಸುವುದು ಸರಿಯಲ್ಲ. ವಿಶ್ವವಿದ್ಯಾಲಯಗಳ ಎಲ್ಲ ಕೆಲಸ, ಶಿಫಾರಸುಗಳು ಆನ್‌ಲೈನ್‌ ಮೂಲಕವೇ ನಡೆಯಬೇಕು ಎಂದು ಡಿಸಿಎಂ ತಾಕೀತು ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.