ETV Bharat / state

ನಟ ಚೇತನ್​ಗೆ ಜಾಮೀನು ನೀಡಿದ ಕೋರ್ಟ್: ಆದರೆ ಬಿಡುಗಡೆ ಭಾಗ್ಯವಿಲ್ಲ?

ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ನಟ ಚೇತನ್​ಗೆ ನಗರದ 8ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ನೀಡಿದೆ. ಮಂಗಳವಾರ ಶೇಷಾದ್ರಿಪುರಂ ಠಾಣೆ ಪೊಲೀಸರು ನಟ ಚೇತನ್ ಅವರನ್ನು ಬಂಧಿಸಿದ್ದರು.

author img

By

Published : Feb 25, 2022, 7:25 PM IST

actor-chetan-kumar-gets-bail-after-arrest-for-tweet-on-judge
ನಟ ಚೇತನ್​ಗೆ ಜಾಮೀನು ನೀಡಿದ ಕೋರ್ಟ್

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ನಟ ಚೇತನ್​ಗೆ ನಗರದ 8ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ನೀಡಿದೆ. ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಬಿತ್ತುವ ಹೇಳಿಕೆ ಪ್ರಚುರಪಡಿಸಿದ್ದಾರೆ ಎಂಬ ಆರೋಪದಡಿ ಕಳೆದ ಮಂಗಳವಾರ ಶೇಷಾದ್ರಿಪುರಂ ಠಾಣೆ ಪೊಲೀಸರು ನಟ ಚೇತನ್ ಅವರನ್ನು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಪ್ರಕರಣದಲ್ಲಿ ಜಾಮೀನು ಕೋರಿ ನಟ ಚೇತನ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ನಗರದ 8ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ಆರೋಪಿಯು 1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು. ಅಷ್ಟೇ ಮೊತ್ತಕ್ಕೆ ಇಬ್ಬರು ವ್ಯಕ್ತಿಗಳ ಭದ್ರತೆ ನೀಡಬೇಕು. ಆರೋಪಿ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಬಾರದು. ಕೋಮು ಸೌಹಾರ್ದತೆ ಕದಡುವ ಅಥವಾ ಸಮಾಜದ ಶಾಂತಿ ಕೆಡಿಸುವಂತಹ ಪೋಸ್ಟ್​​ಗಳನ್ನು ಹಾಕಬಾರದು. ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸಬಾರದು.

ತನಿಖಾಧಿಕಾರಿಯ ತನಿಖೆಗೆ ಸಹಕಾರ ನೀಡಬೇಕು. ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ವಿಳಾಸ ಹಾಗೂ ಗುರುತಿನ ಚೀಟಿಗಳನ್ನು ಖಾತ್ರಿಪಡಿಸಬೇಕು. ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದಾಗಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ:12 ಮಕ್ಕಳು ಸೇರಿದಂತೆ 17 ಜನರಿಗೆ ಗಾಯ!

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಬರಹ ಪ್ರಕಟಿಸಿದ್ದಾರೆಂಬ ಆರೋಪದಡಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಚೇತನ್ ಅವರನ್ನು ಕಳೆದ ಮಂಗಳವಾರ ಮಧ್ಯಾಹ್ನ ಬಂಧಿಸಿದ್ದರು. ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಉಂಟು ಮಾಡುವ ಹೇಳಿಕೆ ಪ್ರಚುರಪಡಿಸಿದ (ಐಪಿಸಿ 505 (2) ಹಾಗೂ ಅಪರಾಧ ಕೃತ್ಯ ಕೈಗೊಳ್ಳಲು ಪ್ರಚೋದನೆ (ಐಪಿಸಿ 504) ನೀಡಿದ್ದಾರೆ' ಎಂಬ ಆರೋಪದಡಿ ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಚೇತನ್ ಅವರನ್ನು ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ: ಜಾಮೀನು ದೊರೆತರೂ ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಚೇತನ್​ ಇನ್ನೂ‌ ಮೂರು‌ ದಿನಗಳ‌ ಕಾಲ ಪರಪ್ಪನ‌ ಅಗ್ರಹಾರ ಜೈಲಿನಲ್ಲೇ‌ ಇರಬೇಕಾಗುತ್ತದೆ‌.‌ ನಾಳೆ ನಾಲ್ಕನೇ‌ ಶನಿವಾರ ಆಗಿರುವುದರಿಂದ ಶ್ಯೂರಿಟಿ ಒದಗಿಸುವುದು ಸಾಧ್ಯವಾಗದಿದ್ದಲ್ಲಿ ಸೋಮವಾರ ತನಕವೂ ಚೇತನ್​ಗೆ ಬಿಡುಗಡೆ ಸಾಧ್ಯವಿಲ್ಲ.

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ನಟ ಚೇತನ್​ಗೆ ನಗರದ 8ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ನೀಡಿದೆ. ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಬಿತ್ತುವ ಹೇಳಿಕೆ ಪ್ರಚುರಪಡಿಸಿದ್ದಾರೆ ಎಂಬ ಆರೋಪದಡಿ ಕಳೆದ ಮಂಗಳವಾರ ಶೇಷಾದ್ರಿಪುರಂ ಠಾಣೆ ಪೊಲೀಸರು ನಟ ಚೇತನ್ ಅವರನ್ನು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಪ್ರಕರಣದಲ್ಲಿ ಜಾಮೀನು ಕೋರಿ ನಟ ಚೇತನ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ನಗರದ 8ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ಆರೋಪಿಯು 1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು. ಅಷ್ಟೇ ಮೊತ್ತಕ್ಕೆ ಇಬ್ಬರು ವ್ಯಕ್ತಿಗಳ ಭದ್ರತೆ ನೀಡಬೇಕು. ಆರೋಪಿ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಬಾರದು. ಕೋಮು ಸೌಹಾರ್ದತೆ ಕದಡುವ ಅಥವಾ ಸಮಾಜದ ಶಾಂತಿ ಕೆಡಿಸುವಂತಹ ಪೋಸ್ಟ್​​ಗಳನ್ನು ಹಾಕಬಾರದು. ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸಬಾರದು.

ತನಿಖಾಧಿಕಾರಿಯ ತನಿಖೆಗೆ ಸಹಕಾರ ನೀಡಬೇಕು. ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ವಿಳಾಸ ಹಾಗೂ ಗುರುತಿನ ಚೀಟಿಗಳನ್ನು ಖಾತ್ರಿಪಡಿಸಬೇಕು. ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದಾಗಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟ:12 ಮಕ್ಕಳು ಸೇರಿದಂತೆ 17 ಜನರಿಗೆ ಗಾಯ!

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಬರಹ ಪ್ರಕಟಿಸಿದ್ದಾರೆಂಬ ಆರೋಪದಡಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಚೇತನ್ ಅವರನ್ನು ಕಳೆದ ಮಂಗಳವಾರ ಮಧ್ಯಾಹ್ನ ಬಂಧಿಸಿದ್ದರು. ಜಾತಿ, ಧರ್ಮ ಹಾಗೂ ಎರಡು ಗುಂಪಿನ ನಡುವೆ ದ್ವೇಷ ಉಂಟು ಮಾಡುವ ಹೇಳಿಕೆ ಪ್ರಚುರಪಡಿಸಿದ (ಐಪಿಸಿ 505 (2) ಹಾಗೂ ಅಪರಾಧ ಕೃತ್ಯ ಕೈಗೊಳ್ಳಲು ಪ್ರಚೋದನೆ (ಐಪಿಸಿ 504) ನೀಡಿದ್ದಾರೆ' ಎಂಬ ಆರೋಪದಡಿ ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಚೇತನ್ ಅವರನ್ನು ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ: ಜಾಮೀನು ದೊರೆತರೂ ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಚೇತನ್​ ಇನ್ನೂ‌ ಮೂರು‌ ದಿನಗಳ‌ ಕಾಲ ಪರಪ್ಪನ‌ ಅಗ್ರಹಾರ ಜೈಲಿನಲ್ಲೇ‌ ಇರಬೇಕಾಗುತ್ತದೆ‌.‌ ನಾಳೆ ನಾಲ್ಕನೇ‌ ಶನಿವಾರ ಆಗಿರುವುದರಿಂದ ಶ್ಯೂರಿಟಿ ಒದಗಿಸುವುದು ಸಾಧ್ಯವಾಗದಿದ್ದಲ್ಲಿ ಸೋಮವಾರ ತನಕವೂ ಚೇತನ್​ಗೆ ಬಿಡುಗಡೆ ಸಾಧ್ಯವಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.