ETV Bharat / state

ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್: ನಿರ್ಭಯಾ ಹಂತಕರ ಹ್ಯಾಂಗ್​ಮನ್​ಗೆ ಒಂದು ಲಕ್ಷ ದೇಣಿಗೆ!

author img

By

Published : Mar 20, 2020, 6:25 PM IST

ನಿರ್ಭಯಾ ಹಂತಕರನ್ನು ಗಲ್ಲಿಗೇರಿಸುವ ಹ್ಯಾಂಗ್​ಮನ್​ಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ನವರಸ ನಾಯಕ ಈ ಮೊದಲು ಘೋಷಿಸಿದ್ದರು. ಇದೀಗ ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲಾಗಿದ್ದು, ಕೊಟ್ಟ ಮಾತಿನಂತೆ ತಿಹಾರ್​ ಜೈಲಿನ ಹ್ಯಾಂಗ್​ಮನ್​ ಹೆಸರಲ್ಲಿ ಜಗ್ಗೇಶ್​ ಒಂದು ಲಕ್ಷ ರೂಪಾಯಿಯ ಚೆಕ್​ ಬರೆದು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Jaggesh
ನಟ ಜಗ್ಗೇಶ್

ಬೆಂಗಳೂರು: ನಿರ್ಭಯಾ ಗ್ಯಾಂಗ್ ರೇಪ್​ ಹಂತಕರನ್ನು ಗಲ್ಲಿಗೇರಿಸಿದ್ದಕ್ಕೆ ದೇಶಕ್ಕೆ ದೇಶವೇ ಸಂಭ್ರಮಾಚರಣೆಯಲ್ಲಿದ್ದರೆ, ಇತ್ತ ಕಡೆ ನವರಸ ನಾಯಕ ಜಗ್ಗೇಶ್​ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್​ಮನ್​ಗೆ ಒಂದು 1 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಇತ್ತೀಚೆಗೆ ನಟ ಜಗ್ಗೇಶ್ ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದರು. ಇದೀಗ ಕೊನೆಗೂ ನಿರ್ಭಯಾ ಹಂತಕರನ್ನು ನೇಣುಗಂಬಕ್ಕೇರಿಸಲಾಗಿದ್ದು, ನಟ ಜಗ್ಗೇಶ್​ ತಾವು ಈ ಮೊದಲೇ ಹೇಳಿದಂತೆ 1 ಲಕ್ಷ ರೂಪಾಯಿಯ ಚೆಕ್​ ಬರೆಯುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

  • ಕೊಟ್ಟ ಮಾತಿನಂತೆ 1 ಲಕ್ಷ ರೂ
    ನಿರ್ಭಯ ಹಂತಕರ #hangmen ಗೆ
    ನನ್ನ ಧೇಣಿಗೆ..
    ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ!
    ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ!
    ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!
    ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!
    ಸುದ್ಧಿಕೇಳಲು ನಿದ್ರೆಮಾಡದೆ ಕಾದೆ!ಹರಿಓಂ. ಶುಭದಿನ pic.twitter.com/84aJ3XJ76y

    — ನವರಸನಾಯಕ ಜಗ್ಗೇಶ್ (@Jaggesh2) March 20, 2020 " class="align-text-top noRightClick twitterSection" data=" ">

ಈ ಬಗ್ಗೆ ಟ್ವೀಟ್​ ಮಾಡಿರುವ ಜಗ್ಗೇಶ್,​ ‌‌ಕೊಟ್ಟ ಮಾತಿನಂತೆ 1 ಲಕ್ಷ ರೂ. ನಿರ್ಭಯಾ ಹಂತಕರ ಹ್ಯಾಂಗ್​ಮೆನ್​ಗೆ ನನ್ನ ದೇಣಿಗೆ. ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ! ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ! ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!. ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!. ಸುದ್ದಿ ಕೇಳಲು ನಿದ್ರೆ ಮಾಡದೆ ಕಾದೆ! ಹರಿ ಓಂ. ಶುಭ ದಿನ ಎಂದು ಬರೆದುಕೊಂಡಿದ್ದಾರೆ.

ಬೆಂಗಳೂರು: ನಿರ್ಭಯಾ ಗ್ಯಾಂಗ್ ರೇಪ್​ ಹಂತಕರನ್ನು ಗಲ್ಲಿಗೇರಿಸಿದ್ದಕ್ಕೆ ದೇಶಕ್ಕೆ ದೇಶವೇ ಸಂಭ್ರಮಾಚರಣೆಯಲ್ಲಿದ್ದರೆ, ಇತ್ತ ಕಡೆ ನವರಸ ನಾಯಕ ಜಗ್ಗೇಶ್​ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್​ಮನ್​ಗೆ ಒಂದು 1 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಇತ್ತೀಚೆಗೆ ನಟ ಜಗ್ಗೇಶ್ ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದರು. ಇದೀಗ ಕೊನೆಗೂ ನಿರ್ಭಯಾ ಹಂತಕರನ್ನು ನೇಣುಗಂಬಕ್ಕೇರಿಸಲಾಗಿದ್ದು, ನಟ ಜಗ್ಗೇಶ್​ ತಾವು ಈ ಮೊದಲೇ ಹೇಳಿದಂತೆ 1 ಲಕ್ಷ ರೂಪಾಯಿಯ ಚೆಕ್​ ಬರೆಯುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

  • ಕೊಟ್ಟ ಮಾತಿನಂತೆ 1 ಲಕ್ಷ ರೂ
    ನಿರ್ಭಯ ಹಂತಕರ #hangmen ಗೆ
    ನನ್ನ ಧೇಣಿಗೆ..
    ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ!
    ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ!
    ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!
    ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!
    ಸುದ್ಧಿಕೇಳಲು ನಿದ್ರೆಮಾಡದೆ ಕಾದೆ!ಹರಿಓಂ. ಶುಭದಿನ pic.twitter.com/84aJ3XJ76y

    — ನವರಸನಾಯಕ ಜಗ್ಗೇಶ್ (@Jaggesh2) March 20, 2020 " class="align-text-top noRightClick twitterSection" data=" ">

ಈ ಬಗ್ಗೆ ಟ್ವೀಟ್​ ಮಾಡಿರುವ ಜಗ್ಗೇಶ್,​ ‌‌ಕೊಟ್ಟ ಮಾತಿನಂತೆ 1 ಲಕ್ಷ ರೂ. ನಿರ್ಭಯಾ ಹಂತಕರ ಹ್ಯಾಂಗ್​ಮೆನ್​ಗೆ ನನ್ನ ದೇಣಿಗೆ. ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ! ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ! ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!. ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!. ಸುದ್ದಿ ಕೇಳಲು ನಿದ್ರೆ ಮಾಡದೆ ಕಾದೆ! ಹರಿ ಓಂ. ಶುಭ ದಿನ ಎಂದು ಬರೆದುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.