ETV Bharat / state

ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​​: ಸೈಬರ್​​ ಕ್ರೈಂ ಠಾಣೆಗೆ ವಿನೋದ್ ರಾಜ್ ಭೇಟಿ

author img

By

Published : Aug 4, 2021, 8:34 AM IST

ಕಳೆದ 8 ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನಟ ವಿನೋದ್ ರಾಜ್ ಬಗ್ಗೆ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಈ ಕುರಿತು ಪೊಲೀಸ್ ತನಿಖೆ ಮುಂದುವರೆದಿದೆ. ಈ ವಿಚಾರವಾಗಿ ಸೈಬರ್​​ ಕ್ರೈಂ ಠಾಣೆಗೆ ನಟ ಭೇಟಿ ನೀಡಿ, ಮಾಹಿತಿ ನೀಡಿದ್ದಾರೆ.

Actor Vinod Raj
ನಟ ವಿನೋದ್ ರಾಜ್

ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್​ ರಾಜ್​ಕುಮಾರ್​​​ ತಮ್ಮ ಬಗೆಗಿನ ಅವಹೇಳನಕಾರಿ ಪೋಸ್ಟ್​​ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ನೀಡಿದರು.

ಕಳೆದ 8 ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನಟ ವಿನೋದ್ ರಾಜ್ ಬಗ್ಗೆ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಈ ಕುರಿತು ವಿನೋದ್​ ರಾಜ್​ಕುಮಾರ್​​ ಉತ್ತರ ವಿಭಾಗದ ಸೈಬರ್ ಅಪರಾಧ ವಿಭಾಗಕ್ಕೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ತನಿಖೆ ಮುಂದುವರೆಸಿದ್ದು, ತನಿಖೆಯ ವಿಚಾರವಾಗಿ ಠಾಣೆಗೆ ನಟ ಭೇಟಿ ನೀಡಿ, ಮಾಹಿತಿ ನೀಡಿದರು.

ಮಧ್ಯಮಗಳಿಗೆ ಮಾಹಿತಿ ನೀಡಿದ ನಟ ವಿನೋದ್ ರಾಜ್

ಈ ಕುರಿತು ಮಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀಡುವುದಕ್ಕಾಗಿ ನನ್ನನ್ನು ಠಾಣೆಗೆ ಬರುವಂತೆ ಸೂಚಿಸಿದ್ದರು. ಯುವಕರು ಕೆಟ್ಟ ಮನಸ್ಥಿತಿಯಿಂದ ಹೊರಬರಬೇಕು. ಈ ರೀತಿಯ ಕೃತ್ಯಗಳನ್ನು ಎಸಗಬಾರದು ಎಂದರು.

ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್​ ರಾಜ್​ಕುಮಾರ್​​​ ತಮ್ಮ ಬಗೆಗಿನ ಅವಹೇಳನಕಾರಿ ಪೋಸ್ಟ್​​ ವಿರುದ್ಧ ಉತ್ತರ ವಿಭಾಗದ ಸೈಬರ್ ಅಪರಾಧ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ನೀಡಿದರು.

ಕಳೆದ 8 ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನಟ ವಿನೋದ್ ರಾಜ್ ಬಗ್ಗೆ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಈ ಕುರಿತು ವಿನೋದ್​ ರಾಜ್​ಕುಮಾರ್​​ ಉತ್ತರ ವಿಭಾಗದ ಸೈಬರ್ ಅಪರಾಧ ವಿಭಾಗಕ್ಕೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ತನಿಖೆ ಮುಂದುವರೆಸಿದ್ದು, ತನಿಖೆಯ ವಿಚಾರವಾಗಿ ಠಾಣೆಗೆ ನಟ ಭೇಟಿ ನೀಡಿ, ಮಾಹಿತಿ ನೀಡಿದರು.

ಮಧ್ಯಮಗಳಿಗೆ ಮಾಹಿತಿ ನೀಡಿದ ನಟ ವಿನೋದ್ ರಾಜ್

ಈ ಕುರಿತು ಮಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀಡುವುದಕ್ಕಾಗಿ ನನ್ನನ್ನು ಠಾಣೆಗೆ ಬರುವಂತೆ ಸೂಚಿಸಿದ್ದರು. ಯುವಕರು ಕೆಟ್ಟ ಮನಸ್ಥಿತಿಯಿಂದ ಹೊರಬರಬೇಕು. ಈ ರೀತಿಯ ಕೃತ್ಯಗಳನ್ನು ಎಸಗಬಾರದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.