ETV Bharat / state

ದೇವೇಗೌಡರ ನಿವಾಸಕ್ಕೆ ದಿಢೀರ್​ ಭೇಟಿ ನೀಡಿದ ಆದಿಚುಂಚನಗಿರಿ ಶ್ರೀ!.. ಏನಿರಬಹುದು ಕಾರಣ?

author img

By

Published : Dec 10, 2019, 3:21 PM IST

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಭೇಟಿ ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಜೆಡಿಎಸ್​ ಶೂನ್ಯ ಸಂಪಾದನೆ ಮಾಡಿದ್ದು, ಧೃತಿಗೆಡದಂತೆ ಶ್ರೀಗಳು ದೇವೇಗೌಡರಿಗೆ ಧೈರ್ಯ ತುಂಬಿದ್ದಾರೆ ಎಂದು ಹೇಳಲಾಗುತ್ತಿದೆ.

Adichunchanagiri Shri visits Deve Gowda's residence
ದೇವೇಗೌಡರ ನಿವಾಸಕ್ಕೆ ಆದಿಚುಂಚನಗಿರಿ ಶ್ರೀಗಳ ಭೇಟಿ

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದ ಸ್ವಾಮೀಜಿ ಅವರು ಅನೌಪಚಾರಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಅಚ್ಚರಿ ಮೂಡಿಸಿದ ಆದಿಚುಂಚನಗಿರಿ ಶ್ರೀಗಳು !

ಪದ್ಮನಾಭ ನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಆಗಮಿಸಿದ ಶ್ರೀಗಳು, ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ನಿನ್ನೆಯಷ್ಟೇ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದರಲ್ಲಿ ಜೆಡಿಎಸ್ ಯಾವುದೇ ಕ್ಷೇತ್ರ ಗೆಲ್ಲಲು ಸಾಧ್ಯವಾಗದೇ ಶೂನ್ಯ ಸಂಪಾದನೆ ಮಾಡಿತ್ತು. ಇದರಿಂದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೇಸರಗೊಂಡಿದ್ದರು. ಹಾಗಾಗಿ ನಿರ್ಮಾಲಾನಂದ ಶ್ರೀಗಳು ಇಂದು ಗೌಡರನ್ನು ಭೇಟಿ ಮಾಡಿದ ವೇಳೆ, ಉಪಚುನಾವಣೆ ಫಲಿತಾಂಶ ಕುರಿತು ಚರ್ಚೆ ನಡೆಸಿದರು ಎನ್ನಲಾಗಿದೆ.

ಇದೇ ವೇಳೆ, ಧೃತಿಗೆಡದಂತೆ ಶ್ರೀಗಳು ದೇವೇಗೌಡರಿಗೆ ಧೈರ್ಯ ತುಂಬಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ಇಡೀ ದಿನ ಗೌಡರು ಮನೆಯಿಂದ ಹೊರಬರದೇ ಮಾಧ್ಯಮಗಳಲ್ಲಿ ಬರುತ್ತಿದ್ದ ಉಪಚುನಾವಣೆ ಫಲಿತಾಂಶ ವೀಕ್ಷಿಸಿದ್ದರು. ಬಿಜೆಪಿ 12 ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ. ಕೆ.ಆರ್.ಪೇಟೆ, ಮಹಾಲಕ್ಷ್ಮಿ ಲೇಔಟ್ ಹಾಗೂ ಯಶವಂತಪುರ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸದಲ್ಲಿದ್ದ ಗೌಡರಿಗೆ ನಿರಾಸೆಯಾಗಿದ್ದು, ಇದೀಗ ಮೌನಕ್ಕೆ ಶರಣಾಗಿದ್ದಾರೆ.

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದ ಸ್ವಾಮೀಜಿ ಅವರು ಅನೌಪಚಾರಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಅಚ್ಚರಿ ಮೂಡಿಸಿದ ಆದಿಚುಂಚನಗಿರಿ ಶ್ರೀಗಳು !

ಪದ್ಮನಾಭ ನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಆಗಮಿಸಿದ ಶ್ರೀಗಳು, ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ನಿನ್ನೆಯಷ್ಟೇ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದರಲ್ಲಿ ಜೆಡಿಎಸ್ ಯಾವುದೇ ಕ್ಷೇತ್ರ ಗೆಲ್ಲಲು ಸಾಧ್ಯವಾಗದೇ ಶೂನ್ಯ ಸಂಪಾದನೆ ಮಾಡಿತ್ತು. ಇದರಿಂದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೇಸರಗೊಂಡಿದ್ದರು. ಹಾಗಾಗಿ ನಿರ್ಮಾಲಾನಂದ ಶ್ರೀಗಳು ಇಂದು ಗೌಡರನ್ನು ಭೇಟಿ ಮಾಡಿದ ವೇಳೆ, ಉಪಚುನಾವಣೆ ಫಲಿತಾಂಶ ಕುರಿತು ಚರ್ಚೆ ನಡೆಸಿದರು ಎನ್ನಲಾಗಿದೆ.

ಇದೇ ವೇಳೆ, ಧೃತಿಗೆಡದಂತೆ ಶ್ರೀಗಳು ದೇವೇಗೌಡರಿಗೆ ಧೈರ್ಯ ತುಂಬಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ಇಡೀ ದಿನ ಗೌಡರು ಮನೆಯಿಂದ ಹೊರಬರದೇ ಮಾಧ್ಯಮಗಳಲ್ಲಿ ಬರುತ್ತಿದ್ದ ಉಪಚುನಾವಣೆ ಫಲಿತಾಂಶ ವೀಕ್ಷಿಸಿದ್ದರು. ಬಿಜೆಪಿ 12 ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ. ಕೆ.ಆರ್.ಪೇಟೆ, ಮಹಾಲಕ್ಷ್ಮಿ ಲೇಔಟ್ ಹಾಗೂ ಯಶವಂತಪುರ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸದಲ್ಲಿದ್ದ ಗೌಡರಿಗೆ ನಿರಾಸೆಯಾಗಿದ್ದು, ಇದೀಗ ಮೌನಕ್ಕೆ ಶರಣಾಗಿದ್ದಾರೆ.

Intro:ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದ ಸ್ವಾಮೀಜಿ ಅವರು ಅನೌಪಚಾರಿಕವಾಗಿ ಭೇಟಿ ಮಾಡಿ ಗೌಡರ ಜೊತೆ ಮಾತುಕತೆ ನಡೆಸಿದ್ದಾರೆ.


Body:ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಆಗಮಿಸಿದ ಶ್ರೀಗಳು, ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು.
ನಿನ್ನೆಯಷ್ಟೆ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದರಲ್ಲಿ ಜೆಡಿಎಸ್ ಯಾವುದೇ ಕ್ಷೇತ್ರ ಗೆಲ್ಲಲು ಸಾಧ್ಯವಾಗದೆ ಶೂನ್ಯ ಸಂಪಾದನೆ ಮಾಡಿತ್ತು. ಇದರಿಂದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೇಸರಗೊಂಡಿದ್ದರು.
ನಿರ್ಮಾಲಾನಂದ ಶ್ರೀಗಳು ಇಂದು ಗೌಡರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಉಪಚುನಾವಣೆ ಫಲಿತಾಂಶ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಧೃತಿಗೆಡದಂತೆ ಶ್ರೀಗಳು ದೇವೇಗೌಡರಿಗೆ ಧೈರ್ಯ ತುಂಬಿದ್ದಾರೆ ಎಂದು ಹೇಳಲಾಗುತ್ತಿದೆ.
ನಿನ್ನೆ ಇಡೀ ದಿನ ಗೌಡರು ಮನೆಯಿಂದ ಹೊರಬರದೆ ಮಾಧ್ಯಮಗಳಲ್ಲಿ ಬರುತ್ತಿದ್ದ ಉಪಚುನಾವಣೆ ಫಲಿತಾಂಶ ವೀಕ್ಷಿಸಿದರು. ಬಿಜೆಪಿ 12 ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಕಂಡವು. ಕೆ.ಆರ್.ಪೇಟೆ, ಮಹಾಲಕ್ಷ್ಮಿ ಲೇಔಟ್ ಹಾಗೂ ಯಶವಂತಪುರ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸದಲ್ಲಿದ್ದ ಗೌಡರಿಗೆ ನಿರಾಸೆಯಾಯಿತು. ಇದರಿಂದ ಗೌಡರು ಬೇಸರಗೊಂಡು ಮೌನಕ್ಕೆ ಶರಣಾಗಿದ್ದರು.
ನಿನ್ನೆ ಮಧ್ಯಾಹ್ನದ ವೇಳೆ್ಗೆ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ವಿಶ್ರಾಂತಿ ಪಡೆಯುತ್ತಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆತಂಕಗೊಂಡು ದೇವೇಗೌಡರ ನಿವಾಸಕ್ಕೆ ಆಗಮಿಸಿ ಗೌಡರ ಜೊತೆ ಚರ್ಚೆ ನಡೆಸಿದ್ದರು.


Conclusion:ಕನಿಷ್ಠ ಮೂರು ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ಭಾರಿ ವಿಶ್ವಾಸದಲ್ಲಿದ್ದ ಕುಮಾರಸ್ವಾಮಿ ಅವರಿಗೂ ನಿರಾಸೆಯಾಗಿತ್ತು. ಫಲಿತಾಂಶದಿಂದ ಬೇಸರಗೊಂಡಿದ್ದ ಇಬ್ಬರೂ ನಾಯಕರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.