ಬೆಂಗಳೂರು : 2021-22ನೇ ಸಾಲಿಗೆ ಆದರ್ಶ ವಿದ್ಯಾಲಯಗಳ 6ನೇ ತರಗತಿಯ ದಾಖಲಾತಿಗಾಗಿ ನಡೆಸುವ ಪ್ರವೇಶ ಪರೀಕ್ಷೆ ಮುಂದೂಡಲಾಗಿದೆ.
ಏಪ್ರಿಲ್ 25ರಂದು ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ರಾಜ್ಯದಲ್ಲಿ ಕೋವಿಡ್-19 ವ್ಯಾಪಕವಾಗಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಪರೀಕ್ಷೆಯನ್ನು ಮುಂದೂಡಿರುವ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರ ಮೂಲಕ ವಿದ್ಯಾರ್ಥಿಗಳು,ಪೋಷಕರಿಗೆ ತಿಳಿಸಲು ಸೂಚಿಸಿದೆ.