ಬೆಂಗಳೂರು: ಬೆದರಿಕೆ ಕರೆ ಸಂಬಂಧ ಮಾಜಿ ಸಚಿವ ಯು.ಟಿ.ಖಾದರ್ಗೆ ಸೂಕ್ತ ಭದ್ರತೆ ನೀಡಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಯು.ಟಿ.ಖಾದರ್ಗೆ ಬೆದರಿಕೆ ಕರೆ ಬಂದಿರುವ ಸಂಬಂಧ ಪ್ರತಿಕ್ರಿಯಿಸುತ್ತಾ, ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನಾವು ಅವರಿಗೆ ಗನ್ಮ್ಯಾನ್ ಕೊಟ್ಟಿದ್ದೇವೆ. ಜೊತೆಗೆ ಸ್ಥಳೀಯ ಪೊಲೀಸರಿಗೆ ಯು.ಟಿ.ಖಾದರ್ ಏನೆಲ್ಲ ಭದ್ರತೆ ಕೇಳುತ್ತಾರೆ ಅದನ್ನು ನೀಡುವಂತೆ ಸೂಚನೆ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಈ ಸಂಬಂಧ ಖಾದರ್ ಕೂಡ ಪೊಲೀಸರಲ್ಲಿ ಎಲ್ಲಾ ಮಾಹಿತಿ ಹಂಚಿಕೊಳ್ಳಬೇಕು ಎಂದೂ ಇದೇ ವೇಳೆ ಶಾಸಕರಿಗೆ ಗೃಹ ಸಚಿವರು ಮನವಿ ಮಾಡಿದರು.