ETV Bharat / state

ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ.. ರಾಜ್ಯ ಸರ್ಕಾರದಿಂದ ಪೂರ್ವ ಸಿದ್ಧತಾ ಸಭೆ

ಏರೋ ಇಂಡಿಯಾ-2023- ಜುಲೈ 11 ರಂದು ವಿಧಾನಸೌಧದಲ್ಲಿ ಸಭೆ- ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತೆ ಕುರಿತು ಚರ್ಚೆ

author img

By

Published : Jul 7, 2022, 4:11 PM IST

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ
ಏರೋ ಇಂಡಿಯಾ ವೈಮಾನಿಕ ಪ್ರದರ್ಶನ

ಬೆಂಗಳೂರು: ಏರೋ ಇಂಡಿಯಾ ಸ್ಥಳಾಂತರದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಮತ್ತೆ ಯಲಹಂಕದ ವಾಯುನೆಲೆಯಲ್ಲಿ 2023 ನೇ ಸಾಲಿನ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಸಲು ಕೇಂದ್ರ ಸರ್ಕಾರ ಒಲವು ತೋರಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ.

1996 ರಿಂದ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ನಡೆಯುತ್ತಿದೆ. ಆದರೆ, ಇತ್ತೀಚೆಗೆ ವೈಮಾನಿಕ ಪ್ರದರ್ಶನವನ್ನ ಯಲಹಂಕದಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕೆಂಬ ಚರ್ಚೆಗಳು ನಡೆಯುತ್ತಿವೆ. ವೈಮಾನಿಕ ಪ್ರದರ್ಶನವನ್ನ ಲಖನೌ ದಲ್ಲಿ ನಡೆಸಬೇಕು, ಇದರಿಂದ ಉತ್ತರಪ್ರದೇಶದ ಅಭಿವೃದ್ಧಿಗೆ ಅನುಕೂಲವಾಗುತ್ತೆ ಎಂದು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಯಲಹಂಕದಿಂದ ಬೇರೆಡೆ ಸ್ಥಳಾಂತರಿಸುವ ದೊಡ್ಡ ಚರ್ಚೆ ಸಹ ನಡೆದಿತ್ತು. ಆಗ ಮೈತ್ರಿ ಸರ್ಕಾರ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು ಮತ್ತು ರಾಜ್ಯ ಸಂಸದರ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಏರೋ ಇಂಡಿಯಾ ಸ್ಥಳಾಂತರಿಸದಂತೆ ಮನವಿ ಮಾಡಿದ್ದರು. ಬಳಿಕ ಕೇಂದ್ರ ಸರ್ಕಾರ ಸ್ಥಳಾಂತರ ನಿರ್ಧಾರವನ್ನು ಕೈಬಿಟ್ಟಿದೆ.

ರಾಜ್ಯ ಸರ್ಕಾರದ ಸಿದ್ಧತೆ: 2023 ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದರಿಂದ ಒಂದು ವೇಳೆ ಯಲಹಂಕದಿಂದ ಬೇರೆಡೆಗೆ ಏರೋ ಇಂಡಿಯಾ ಸ್ಥಳಾಂತರಿಸಿದರೆ ಪಕ್ಷದ ಮೇಲೆ ಪರಿಣಾಮ ಬೀರುವ ಕಾರಣಕ್ಕೆ 2023 ನೇ ಸಾಲಿನ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನ ಯಲಹಂಕದ ವಾಯುನೆಲೆಯಲ್ಲಿ ನಡೆಸಲು ಕೇಂದ್ರ ಸರ್ಕಾರ ಒಲವು ತೋರಿದೆ. ಹೀಗಾಗಿ, ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ.

ಇದರ ನಡುವೆ ವೈಮಾನಿಕ ಪ್ರದರ್ಶನವನ್ನು ಗೋವಾ, ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ನಡೆಸುವಂತೆ ಅಲ್ಲಿನ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದವು. ಆದರೆ, ಕೇಂದ್ರ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿಲ್ಲ. ಇದೇ ತಿಂಗಳ ಜುಲೈ 11 ರಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಏರೋ ಇಂಡಿಯಾ-2023ರ ಪೂರ್ವ ಸಿದ್ಧತೆ ಕುರಿತು ಸಭೆ ನಡೆಯಲಿದೆ.

ಓದಿ: ನಾಡ ಕಚೇರಿಯಲ್ಲಿ ನಕಲಿ ವಂಶ ವೃಕ್ಷ, ಮರಣ ದೃಢೀಕರಣ ಪತ್ರ ನೀಡಿದ ಆರೋಪ.. ಅಧಿಕಾರಿಗಳ ವಿರುದ್ಧ ಕೇಸ್​

ಬೆಂಗಳೂರು: ಏರೋ ಇಂಡಿಯಾ ಸ್ಥಳಾಂತರದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಮತ್ತೆ ಯಲಹಂಕದ ವಾಯುನೆಲೆಯಲ್ಲಿ 2023 ನೇ ಸಾಲಿನ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಸಲು ಕೇಂದ್ರ ಸರ್ಕಾರ ಒಲವು ತೋರಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ.

1996 ರಿಂದ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನ ನಡೆಯುತ್ತಿದೆ. ಆದರೆ, ಇತ್ತೀಚೆಗೆ ವೈಮಾನಿಕ ಪ್ರದರ್ಶನವನ್ನ ಯಲಹಂಕದಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕೆಂಬ ಚರ್ಚೆಗಳು ನಡೆಯುತ್ತಿವೆ. ವೈಮಾನಿಕ ಪ್ರದರ್ಶನವನ್ನ ಲಖನೌ ದಲ್ಲಿ ನಡೆಸಬೇಕು, ಇದರಿಂದ ಉತ್ತರಪ್ರದೇಶದ ಅಭಿವೃದ್ಧಿಗೆ ಅನುಕೂಲವಾಗುತ್ತೆ ಎಂದು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಯಲಹಂಕದಿಂದ ಬೇರೆಡೆ ಸ್ಥಳಾಂತರಿಸುವ ದೊಡ್ಡ ಚರ್ಚೆ ಸಹ ನಡೆದಿತ್ತು. ಆಗ ಮೈತ್ರಿ ಸರ್ಕಾರ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು ಮತ್ತು ರಾಜ್ಯ ಸಂಸದರ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಏರೋ ಇಂಡಿಯಾ ಸ್ಥಳಾಂತರಿಸದಂತೆ ಮನವಿ ಮಾಡಿದ್ದರು. ಬಳಿಕ ಕೇಂದ್ರ ಸರ್ಕಾರ ಸ್ಥಳಾಂತರ ನಿರ್ಧಾರವನ್ನು ಕೈಬಿಟ್ಟಿದೆ.

ರಾಜ್ಯ ಸರ್ಕಾರದ ಸಿದ್ಧತೆ: 2023 ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದರಿಂದ ಒಂದು ವೇಳೆ ಯಲಹಂಕದಿಂದ ಬೇರೆಡೆಗೆ ಏರೋ ಇಂಡಿಯಾ ಸ್ಥಳಾಂತರಿಸಿದರೆ ಪಕ್ಷದ ಮೇಲೆ ಪರಿಣಾಮ ಬೀರುವ ಕಾರಣಕ್ಕೆ 2023 ನೇ ಸಾಲಿನ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನ ಯಲಹಂಕದ ವಾಯುನೆಲೆಯಲ್ಲಿ ನಡೆಸಲು ಕೇಂದ್ರ ಸರ್ಕಾರ ಒಲವು ತೋರಿದೆ. ಹೀಗಾಗಿ, ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ.

ಇದರ ನಡುವೆ ವೈಮಾನಿಕ ಪ್ರದರ್ಶನವನ್ನು ಗೋವಾ, ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ನಡೆಸುವಂತೆ ಅಲ್ಲಿನ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದವು. ಆದರೆ, ಕೇಂದ್ರ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿಲ್ಲ. ಇದೇ ತಿಂಗಳ ಜುಲೈ 11 ರಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಏರೋ ಇಂಡಿಯಾ-2023ರ ಪೂರ್ವ ಸಿದ್ಧತೆ ಕುರಿತು ಸಭೆ ನಡೆಯಲಿದೆ.

ಓದಿ: ನಾಡ ಕಚೇರಿಯಲ್ಲಿ ನಕಲಿ ವಂಶ ವೃಕ್ಷ, ಮರಣ ದೃಢೀಕರಣ ಪತ್ರ ನೀಡಿದ ಆರೋಪ.. ಅಧಿಕಾರಿಗಳ ವಿರುದ್ಧ ಕೇಸ್​

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.