ETV Bharat / state

ವೀರಶೈವ ಸಮಾಜದ ಮಹಿಳಾ ಉದ್ಯಮಿಗಳ ಗುರುತಿಸುವ ಕೆಲಸ ನಡೆಯಲಿದೆ: ಶಾಮನೂರು ಶಿವಶಂಕರಪ್ಪ

ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ಸಮಿತಿಯಿಂದ ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.

author img

By

Published : Mar 19, 2021, 7:40 PM IST

All India Veerashaiva Mahasabha
ಅಖಿಲ ಭಾರತ ವೀರಶೈವ ಮಹಾಸಭಾ

ಬೆಂಗಳೂರು: ವೀರಶೈವ ಸಮಾಜದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳಾ ಉದ್ಯಮಿಗಳನ್ನು ಗುರುತಿಸುವ ಕೆಲಸ ಮಾಡಲಾಗುತ್ತದೆ ಎಂದು ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ಸಮಿತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಉದ್ಯಮಿಗಳ ಸಮಿತಿ ಉದ್ಘಾಟಿಸಿ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಮುಂದಿನ ದಿನಗಳಲ್ಲಿ ಮಹಿಳಾ ಉದ್ಯಮಿಗಳ ಉತ್ತೇಜನಕ್ಕೆ ಅವಕಾಶ ಕಲ್ಪಿಸಿ ಕೊಡುವುದಾಗಿ ಅವರು ಭರವಸೆ ನೀಡಿದರು.

ವಸ್ತು ಪ್ರದರ್ಶನ

ಮಹಾಸಭಾದ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಮಧುರಾ ಅಶೋಕ್ ಕುಮಾರ್ ಈಟಿವಿ ಭಾರತದ ಜೊತೆ ಮಾತನಾಡಿ, ಗೃಹ ಕೈಗಾರಿಕಾ, ಉದ್ಯೋಗ, ಕರಕುಶಲ, ಬ್ಯುಟೀಶಿಯನ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಮಾಜದ ಮಹಿಳೆಯರು ತೊಡಗಿಸಿಕೊಂಡಿದ್ದಾರೆ. ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ರಮವೂ ಅದರ ಒಂದು ಭಾಗವಾಗಿದ್ದು, ಮಹಿಳೆಯರ ಪಾತ್ರದ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ ಹೇಳಿದರು.

ರಾಜ್ಯ ಮಹಿಳಾ ವಾಣಿಜ್ಯ ಮತ್ತು ಕೈಗಾರಿಕಾ ಸಮಿತಿಯ ಅಧ್ಯಕ್ಷೆ ಅರುಣಾ ದೇವಿ ಮಾತನಾಡಿ, ಮಹಿಳಾ ಉದ್ಯಮ‌ ಘಟಕದ ಉದ್ಘಾಟನೆಯಾಗಿದೆ. ಇ ಕಾಮರ್ಸ್, ವಿಚಾರ ಸಂಕಿರಣ, ಬಂಡವಾಳ ಹೂಡಿಕೆ ಸೇರಿದಂತೆ ಉದ್ಯಮ ಕ್ಷೇತ್ರದ ಬಗ್ಗೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದರು.

ಒಟ್ಟು 17 ವಿವಿಧ ಮಳಿಗೆಗಳನ್ನು ತೆರೆಯಲಾಗಿದ್ದು, ಮಹಿಳೆಯರು ಸ್ವತಃ ತಮ್ಮ ಕೈಯಾರೆ ಶುಚಿಯಾಗಿ ತಯಾರಿಸಿದ ವಸ್ತುಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಹಲವು ವೀರಶೈವ ಮಹಾಸಭಾದ ಮುಖಂಡರು ಹಾಗೂ ಸಮಾಜದ ಮಹಿಳಾ ಉದ್ಯಮಿಗಳು ಉಪಸ್ಥಿತರಿದ್ದರು.

ಬೆಂಗಳೂರು: ವೀರಶೈವ ಸಮಾಜದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳಾ ಉದ್ಯಮಿಗಳನ್ನು ಗುರುತಿಸುವ ಕೆಲಸ ಮಾಡಲಾಗುತ್ತದೆ ಎಂದು ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ಸಮಿತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಉದ್ಯಮಿಗಳ ಸಮಿತಿ ಉದ್ಘಾಟಿಸಿ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಮುಂದಿನ ದಿನಗಳಲ್ಲಿ ಮಹಿಳಾ ಉದ್ಯಮಿಗಳ ಉತ್ತೇಜನಕ್ಕೆ ಅವಕಾಶ ಕಲ್ಪಿಸಿ ಕೊಡುವುದಾಗಿ ಅವರು ಭರವಸೆ ನೀಡಿದರು.

ವಸ್ತು ಪ್ರದರ್ಶನ

ಮಹಾಸಭಾದ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಮಧುರಾ ಅಶೋಕ್ ಕುಮಾರ್ ಈಟಿವಿ ಭಾರತದ ಜೊತೆ ಮಾತನಾಡಿ, ಗೃಹ ಕೈಗಾರಿಕಾ, ಉದ್ಯೋಗ, ಕರಕುಶಲ, ಬ್ಯುಟೀಶಿಯನ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಮಾಜದ ಮಹಿಳೆಯರು ತೊಡಗಿಸಿಕೊಂಡಿದ್ದಾರೆ. ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ರಮವೂ ಅದರ ಒಂದು ಭಾಗವಾಗಿದ್ದು, ಮಹಿಳೆಯರ ಪಾತ್ರದ ಬಗ್ಗೆ ತಿಳಿಸಿಕೊಡುವ ಕೆಲಸ ಮಾಡಲಾಗುತ್ತಿದೆ ಎಂದು ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ ಹೇಳಿದರು.

ರಾಜ್ಯ ಮಹಿಳಾ ವಾಣಿಜ್ಯ ಮತ್ತು ಕೈಗಾರಿಕಾ ಸಮಿತಿಯ ಅಧ್ಯಕ್ಷೆ ಅರುಣಾ ದೇವಿ ಮಾತನಾಡಿ, ಮಹಿಳಾ ಉದ್ಯಮ‌ ಘಟಕದ ಉದ್ಘಾಟನೆಯಾಗಿದೆ. ಇ ಕಾಮರ್ಸ್, ವಿಚಾರ ಸಂಕಿರಣ, ಬಂಡವಾಳ ಹೂಡಿಕೆ ಸೇರಿದಂತೆ ಉದ್ಯಮ ಕ್ಷೇತ್ರದ ಬಗ್ಗೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದರು.

ಒಟ್ಟು 17 ವಿವಿಧ ಮಳಿಗೆಗಳನ್ನು ತೆರೆಯಲಾಗಿದ್ದು, ಮಹಿಳೆಯರು ಸ್ವತಃ ತಮ್ಮ ಕೈಯಾರೆ ಶುಚಿಯಾಗಿ ತಯಾರಿಸಿದ ವಸ್ತುಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಹಲವು ವೀರಶೈವ ಮಹಾಸಭಾದ ಮುಖಂಡರು ಹಾಗೂ ಸಮಾಜದ ಮಹಿಳಾ ಉದ್ಯಮಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.