ETV Bharat / state

ಅನಾಥಾಶ್ರಮಕ್ಕೆ ರಾಷ್ಟ್ರೀಯ ಮಕ್ಕಳ ಆಯೋಗದ ಅಧ್ಯಕ್ಷರಿಂದ ಅತಿಕ್ರಮ ಪ್ರವೇಶ ಆರೋಪ: ಪ್ರಕರಣ ದಾಖಲು

author img

By ETV Bharat Karnataka Team

Published : Nov 24, 2023, 10:31 AM IST

Updated : Nov 24, 2023, 4:39 PM IST

Case filed against National Children Commission chairman: ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಕ್ಷರು ಅನಾಥಾಶ್ರಮಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

National Children Commission  trespassing into the orphanage  chairman of the National Children Commission  ರಾಷ್ಟ್ರೀಯ ಮಕ್ಕಳ ಆಯೋಗದ ಅಧ್ಯಕ್ಷ  ಅತಿಕ್ರಮ ಪ್ರವೇಶ ಆರೋಪ  ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ರಾಷ್ಟ್ರೀಯ ಮಕ್ಕಳ ಆಯೋಗದ ಅಧ್ಯಕ್ಷ  ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ  ದಾರೂಲ್ ಉಲೂಮ್ ಸಯೀದಿಯಾ ಮಕ್ಕಳ ಅನಾಥ ಆಶ್ರಮ
ಪ್ರಕರಣ ದಾಖಲು

ಬೆಂಗಳೂರು: ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪ್ರಿಯಾಂಕ ಕಾನೂಂಗೊ ಇತ್ತೀಚೆಗೆ ಬೆಂಗಳೂರಿನ ದಾರೂಲ್ ಉಲೂಮ್ ಸಯೀದಿಯಾ ಎಂಬ ಮಕ್ಕಳ ಅನಾಥಾಶ್ರಮಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಆಶ್ರಮದ ಟ್ರಸ್ಟಿ ಆಶ್ರಫ್ ಖಾನ್ ಎಂಬುವರ ದೂರಿನ ಮೇರೆಗೆ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ದಾರೂಲ್ ಉಲೂಮ್ ಸಯೀದಿಯಾ ಮಕ್ಕಳ ಅನಾಥಾಶ್ರಮಕ್ಕೆ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪ್ರಿಯಾಂಕ ಕಾನೂಂಗೊ ಭೇಟಿ ನೀಡಿದ್ದರು. ಅನಾಥಾಶ್ರಮದಲ್ಲಿ ಮಕ್ಕಳನ್ನು ತಾಲಿಬಾನ್ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಮಕ್ಕಳನ್ನು ಶಾಲೆಗೆ ಕಳುಹಿಸದೇ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಮಕ್ಕಳು ತಾಲಿಬಾನ್ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ವಿಡಿಯೋ ಜೊತೆಗೆ ಸಾಮಾಜಿಕ ಜಾಲತಾಣ ಎಕ್ಸ್‌​ನಲ್ಲಿ ಪೋಸ್ಟ್ ಮಾಡಿದ್ದರು.

  • बंगलुरु,कर्नाटक में दारूल उलूम सैय्यादिया यतीम खाना नाम से अवैध ढंग से चलते हुए एक ग़ैरपंजीकृत अनाथ आश्रम का औचक निरीक्षण किया जिसमें कई अनियमिततायें पायी गयीं।

    यहाँ क़रीब 200 यतीम (अनाथ) बच्चों को रखा गया है।
    100 वर्गफ़िट के कमरे में 8 बच्चों का रखा जाता है,ऐसे 5 कमरों में 40… pic.twitter.com/dnp1g8Wj7a

    — प्रियंक कानूनगो Priyank Kanoongo (@KanoongoPriyank) November 20, 2023 " class="align-text-top noRightClick twitterSection" data=" ">

ಇದಕ್ಕೆ ಪ್ರತಿಕ್ರಿಯಿಸಿದ್ದ ಆಶ್ರಮದ ಟ್ರಸ್ಟಿ ಆಶ್ರಫ್ ಖಾನ್, ತಮ್ಮ ಆಶ್ರಮದ ಮೇಲೆ ಬಂದಿರುವ ಆರೋಪ ಸುಳ್ಳು ಎಂದಿದ್ದರು. ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಕ್ಷರು ಆಶ್ರಮಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷರಾದ ಪ್ರಿಯಾಂಕ ಕಾನೂಂಗೊ ವಿರುದ್ಧ ಡಿ ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೊತೆಗೆ ರಾಜ್ಯ ಗೃಹ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಅನಾಥಾಶ್ರಮ ನಡೆಸಲು ಅನುಮತಿ ಪಡೆದಿರುವುದು ಸೇರಿದಂತೆ ಇತರ ವಿಚಾರಗಳ ಬಗ್ಗೆ ಗೃಹ ಇಲಾಖೆ ಸಂಪೂರ್ಣ ತನಿಖೆಗೆ ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಚೊಚ್ಚಲ ಕಂಬಳಕ್ಕೆ ಪೂರ್ಣಗೊಂಡ ಸಿದ್ಧತೆ: 200ಕ್ಕೂ ಹೆಚ್ಚು ಕೋಣಗಳು ಕಣಕ್ಕೆ

ಬೆಂಗಳೂರು: ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪ್ರಿಯಾಂಕ ಕಾನೂಂಗೊ ಇತ್ತೀಚೆಗೆ ಬೆಂಗಳೂರಿನ ದಾರೂಲ್ ಉಲೂಮ್ ಸಯೀದಿಯಾ ಎಂಬ ಮಕ್ಕಳ ಅನಾಥಾಶ್ರಮಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಆಶ್ರಮದ ಟ್ರಸ್ಟಿ ಆಶ್ರಫ್ ಖಾನ್ ಎಂಬುವರ ದೂರಿನ ಮೇರೆಗೆ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ದಾರೂಲ್ ಉಲೂಮ್ ಸಯೀದಿಯಾ ಮಕ್ಕಳ ಅನಾಥಾಶ್ರಮಕ್ಕೆ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪ್ರಿಯಾಂಕ ಕಾನೂಂಗೊ ಭೇಟಿ ನೀಡಿದ್ದರು. ಅನಾಥಾಶ್ರಮದಲ್ಲಿ ಮಕ್ಕಳನ್ನು ತಾಲಿಬಾನ್ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಮಕ್ಕಳನ್ನು ಶಾಲೆಗೆ ಕಳುಹಿಸದೇ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಮಕ್ಕಳು ತಾಲಿಬಾನ್ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ವಿಡಿಯೋ ಜೊತೆಗೆ ಸಾಮಾಜಿಕ ಜಾಲತಾಣ ಎಕ್ಸ್‌​ನಲ್ಲಿ ಪೋಸ್ಟ್ ಮಾಡಿದ್ದರು.

  • बंगलुरु,कर्नाटक में दारूल उलूम सैय्यादिया यतीम खाना नाम से अवैध ढंग से चलते हुए एक ग़ैरपंजीकृत अनाथ आश्रम का औचक निरीक्षण किया जिसमें कई अनियमिततायें पायी गयीं।

    यहाँ क़रीब 200 यतीम (अनाथ) बच्चों को रखा गया है।
    100 वर्गफ़िट के कमरे में 8 बच्चों का रखा जाता है,ऐसे 5 कमरों में 40… pic.twitter.com/dnp1g8Wj7a

    — प्रियंक कानूनगो Priyank Kanoongo (@KanoongoPriyank) November 20, 2023 " class="align-text-top noRightClick twitterSection" data=" ">

ಇದಕ್ಕೆ ಪ್ರತಿಕ್ರಿಯಿಸಿದ್ದ ಆಶ್ರಮದ ಟ್ರಸ್ಟಿ ಆಶ್ರಫ್ ಖಾನ್, ತಮ್ಮ ಆಶ್ರಮದ ಮೇಲೆ ಬಂದಿರುವ ಆರೋಪ ಸುಳ್ಳು ಎಂದಿದ್ದರು. ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಕ್ಷರು ಆಶ್ರಮಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷರಾದ ಪ್ರಿಯಾಂಕ ಕಾನೂಂಗೊ ವಿರುದ್ಧ ಡಿ ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೊತೆಗೆ ರಾಜ್ಯ ಗೃಹ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಅನಾಥಾಶ್ರಮ ನಡೆಸಲು ಅನುಮತಿ ಪಡೆದಿರುವುದು ಸೇರಿದಂತೆ ಇತರ ವಿಚಾರಗಳ ಬಗ್ಗೆ ಗೃಹ ಇಲಾಖೆ ಸಂಪೂರ್ಣ ತನಿಖೆಗೆ ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಚೊಚ್ಚಲ ಕಂಬಳಕ್ಕೆ ಪೂರ್ಣಗೊಂಡ ಸಿದ್ಧತೆ: 200ಕ್ಕೂ ಹೆಚ್ಚು ಕೋಣಗಳು ಕಣಕ್ಕೆ

Last Updated : Nov 24, 2023, 4:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.