ಬೆಂಗಳೂರು: ಅಹಮದಾಬಾದ್ನಿಂದ ಬೆಂಗಳೂರಿಗೆ ಬಂದ ವಿಮಾನದಲ್ಲಿ ಧೂಮಪಾನ ಮಾಡಿದ ಆರೋಪದ ಮೇಲೆ ಪ್ರವೀಣ್ ಕುಮಾರ್ ಎಂಬ ಪ್ರಯಾಣಿಕನ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರವೀಣ್ ಕುಮಾರ್ ವಿರುದ್ಧ ಪ್ರಕರಣ ದಾಖಲು: ಪ್ರವೀಣ್ಕುಮಾರ್, ಆಕಾಶ ಏರ್ಲೈನ್ಸ್ ಸಂಸ್ಥೆಯ ಕ್ಯೂಪಿ-1326 ವಿಮಾನದಲ್ಲಿ ಮಂಗಳವಾರ ಮಧ್ಯಾಹ್ನ 1.10ಕ್ಕೆ ಅಹಮದಾಬಾದ್ನಿಂದ ಬೆಂಗಳೂರಿಗೆ ಬಂದಿದ್ದರು. ಅವರು ಮಾರ್ಗ ಮಧ್ಯೆ ವಿಮಾನದಲ್ಲಿ ಧೂಮಪಾನ ಮಾಡಿ ಏರ್ಕ್ರಟಾ ನಿಯಮ-25, ಸಹ ಪ್ರಯಾಣಿಕರ ಸುರಕ್ಷತೆ ಹಾಗೂ ಭದ್ರತೆ ನಿಯಮ ಉಲ್ಲಂಘಿಸಿದ್ದಾರೆ. ಈ ಸಂಬಂಧ ಕೆಐಎಎಲ್ ಎಸ್ಎನ್ವಿ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ನ ಡ್ಯೂಟಿ ಮ್ಯಾನೇಜರ್ ನೀಡಿದ ದೂರು ಆಧರಿಸಿ ಪ್ರವೀಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕೆಜಿ ಹಳ್ಳಿ ಡಿಜೆ ಹಳ್ಳಿ ಗಲಭೆ ಕೇಸ್.. ಆರೋಪ ಪಟ್ಟಿ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ವಿಮಾನದಲ್ಲಿ ಮಹಿಳಾ ಪ್ರಯಾಣಿಕರಿಗೆ ಕಚ್ಚಿದ ಚೇಳು: ನಾಗ್ಪುರದಿಂದ ಮುಂಬೈಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಚೇಳು ಕಚ್ಚಿರುವ ಘಟನೆಯು ಎಪ್ರಿಲ್ನಲ್ಲಿ ಜರುಗಿತ್ತು. ಈ ಕುರಿತು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಇತ್ತೀಚೆಗಿನ ಮಾಹಿತಿ ನೀಡಿತ್ತು. ನಂತರ ಮಹಿಳಾ ಪ್ರಯಾಣಿಕರನ್ನು ವೈದ್ಯರ ಬಳಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ: ದೇಶದ ವಿರುದ್ಧ ಬೇಹುಗಾರಿಕೆ ಆರೋಪ: ಫ್ರೀಲಾನ್ಸ್ ಪತ್ರಕರ್ತನ ವಿರುದ್ಧ ಸಿಬಿಐ ಕೇಸ್
ಎ.23ರಂದು ನಾಗ್ಪುರದಿಂದ ಮುಂಬೈಗೆ ಏರ್ ಇಂಡಿಯಾ ಎಐ-630 ವಿಮಾನದಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ವಿಮಾನದಲ್ಲಿ ಮಹಿಳಾ ಪ್ರಯಾಣಿಕರಿಗೆ ಚೇಳು ಕಚ್ಚಿದೆ ಎಂದು ಏರ್ ಇಂಡಿಯಾ ತಿಳಿಸಿದೆೆ. ನಂತರ ಮಹಿಳಾ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ವೈದ್ಯರು ಚಿಕಿತ್ಸೆ ನೀಡಿದರು. ವೈದ್ಯರು ಹೆಚ್ಚಿನ ಚಿಕಿತ್ಸೆ ನೀಡಿ ಮಹಿಳಾ ಪ್ರಯಾಣಿಕರನ್ನು ಡಿಸ್ಚಾರ್ಜ್ ಮಾಡಿದರು. ಈ ಘಟನೆ ನಂತರ ಏರ್ ಇಂಡಿಯಾ ವಿಮಾನದ ಇಂಜಿನಿಯರಿಂಗ್ ತಂಡವು ವಿಮಾನವನ್ನು ಪರಿಶೀಲನೆ ನಡೆಸಿದಾಗ ಚೇಳು ಪತ್ತೆಯಾಗಿದೆ ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದರು.
ಇದನ್ನೂ ಓದಿ: ಆಟೋರಿಕ್ಷಾ - ಟ್ಯಾಂಕರ್ ನಡುವೆ ಡಿಕ್ಕಿ: 9 ಜನ ದುರ್ಮರಣ