ಬೆಂಗಳೂರು: ಸಿಲಿಕಾನ್ ಸಿಟಿಯ ಎಲ್ಲಾ ಪೊಲೀಸರಿಗೆ ಅಲೋಕ್ ಕುಮಾರ್ ಮಹತ್ವದ ಸಭೆಗೆ ಆಹ್ವಾನ ನೀಡಿದ್ದಾರೆ.
ಕಮಿಷನರ್ ಕಚೇರಿಯಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು, ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೇ ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಸಿಟಿ ಎಸಿಪಿ, ಸಿಸಿಬಿ ಎಸಿಪಿ, ಇನ್ಸ್ಪೆಕ್ಟರ್ಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಅಲೋಕ್ ಕುಮಾರ್ ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಇದು ಮೊದಲನೇ ಸಭೆಯಾಗಿದ್ದು, ನಗರದ ಸುರಕ್ಷತೆ ಕುರಿತಾಗಿ ಮಹತ್ವರ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ಹಾಗೇ ಮೊದಲ ದಿನವೇ ರೌಡಿಶೀಟರ್ಗಳ ಮೇಲೆ ಕಣ್ಣಿಟ್ಟ ಕಮಿಷನರ್, ಪ್ರತಿಯೊಬ್ಬ ರೌಡಿಶೀಟರ್ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಅಲರ್ಟ್ ಆದ ಪೊಲೀಸರು, ಎಲ್ಲಾ ರೌಡಿಶೀಟರ್ಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಆಯುಕ್ತರ ಮುಂದಿಡಲು ಪಟ್ಟಿ ರೆಡಿ ಮಾಡಿದ್ದಾರೆ.