ETV Bharat / state

ಬೆಳಗಾವಿಯತ್ತ ಅಮಿತ್ ಶಾ ಪ್ರಯಾಣ: ಬಿಎಸ್​​​ವೈ, ಜೋಶಿ ಸಾಥ್​​ - amith sha coming to belgavi

ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಯಲ್ಲೇ ಒಂದೇ ಕಾರಿನಲ್ಲಿ ಸಿಎಂ ಯಡಿಯೂರಪ್ಪ ಹಾಗು ಕೇದ್ರ ಸಚಿವ ಪ್ರಹ್ಲಾದ್ ಜೋಶಿ‌ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ವಾಯುಪಡೆ ವಿಮಾನದ ಮೂಲಕ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.

amith sha coming to belgavi
ಬೆಳಗಾವಿಯತ್ತ ಅಮಿತ್ ಶಾ ಪ್ರಯಾಣ; ಬಿಎಸ್​​​ವೈ, ಜೋಷಿ ಸಾಥ್​​!
author img

By

Published : Jan 17, 2021, 11:13 AM IST

ಬೆಂಗಳೂರು: ಬೆಳಗಾವಿ ಪ್ರವಾಸಕ್ಕೆ ತೆರಳಲು ವಿಂಡ್ಸರ್ ಮ್ಯಾನರ್ ಹೋಟೆಲ್​ನಿಂದ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಒಂದೇ ಕಾರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೆರಳಿದರು.

ಬೆಳಗಾವಿಯತ್ತ ಅಮಿತ್ ಶಾ ಪ್ರಯಾಣ, ಬಿಎಸ್​ವೈ- ಜೋಶಿ ಸಾಥ್​

ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಅಮಿತ್ ಶಾ ನಗರದ ವಿಂಡ್ಸರ್ ಮ್ಯಾನರ್ ಹೋಟೆಲ್​​ನಲ್ಲಿ ತಂಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗು ಆರೋಗ್ಯ ಸಚಿವ ಡಾ. ಸುಧಾಕರ್ ಹೋಟೆಲ್​​ಗೆ ಭೇಟಿ ನೀಡಿದ್ದರು. ಅಮಿತ್ ಶಾಗೆ ಅಭಿನಂದನೆ ಸಲ್ಲಿಸಿ ಕೆಲಕಾಲ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ಕೊರೊನಾ ನಿರ್ವಹಣೆ ಕುರಿತು ಅಮಿತ್ ಶಾ ಅವರು ಸಿಎಂ ಯಡಿಯೂರಪ್ಪ ಮತ್ತು ಸುಧಾಕರ್ ಕಾರ್ಯವನ್ನು ಮತ್ತೊಮ್ಮೆ ಶ್ಲಾಘಿಸಿದ್ದಾರೆ ಎನ್ನಲಾಗ್ತಿದೆ.

ಈ ಸುದ್ದಿಯನ್ನೂ ಓದಿ: ಅಮಿತ್​ ಶಾ ಭ್ರಷ್ಟ ರಾಜಕಾರಣಿ: ಗೃಹ ಸಚಿವರ ವಿರುದ್ಧ ರೈತ ಮಹಿಳೆ ಗಂಭೀರ ಆರೋಪ

ನಂತರ ಅಮಿತ್ ಶಾ ಜೊತೆಯಲ್ಲೇ ಒಂದೇ ಕಾರಿನಲ್ಲಿ ಸಿಎಂ ಯಡಿಯೂರಪ್ಪ ಹಾಗು ಪ್ರಹ್ಲಾದ್ ಜೋಶಿ‌ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ವಾಯುಪಡೆ ವಿಮಾನದ ಮೂಲಕ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.

ಬೆಂಗಳೂರು: ಬೆಳಗಾವಿ ಪ್ರವಾಸಕ್ಕೆ ತೆರಳಲು ವಿಂಡ್ಸರ್ ಮ್ಯಾನರ್ ಹೋಟೆಲ್​ನಿಂದ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಒಂದೇ ಕಾರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೆರಳಿದರು.

ಬೆಳಗಾವಿಯತ್ತ ಅಮಿತ್ ಶಾ ಪ್ರಯಾಣ, ಬಿಎಸ್​ವೈ- ಜೋಶಿ ಸಾಥ್​

ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಅಮಿತ್ ಶಾ ನಗರದ ವಿಂಡ್ಸರ್ ಮ್ಯಾನರ್ ಹೋಟೆಲ್​​ನಲ್ಲಿ ತಂಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗು ಆರೋಗ್ಯ ಸಚಿವ ಡಾ. ಸುಧಾಕರ್ ಹೋಟೆಲ್​​ಗೆ ಭೇಟಿ ನೀಡಿದ್ದರು. ಅಮಿತ್ ಶಾಗೆ ಅಭಿನಂದನೆ ಸಲ್ಲಿಸಿ ಕೆಲಕಾಲ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ಕೊರೊನಾ ನಿರ್ವಹಣೆ ಕುರಿತು ಅಮಿತ್ ಶಾ ಅವರು ಸಿಎಂ ಯಡಿಯೂರಪ್ಪ ಮತ್ತು ಸುಧಾಕರ್ ಕಾರ್ಯವನ್ನು ಮತ್ತೊಮ್ಮೆ ಶ್ಲಾಘಿಸಿದ್ದಾರೆ ಎನ್ನಲಾಗ್ತಿದೆ.

ಈ ಸುದ್ದಿಯನ್ನೂ ಓದಿ: ಅಮಿತ್​ ಶಾ ಭ್ರಷ್ಟ ರಾಜಕಾರಣಿ: ಗೃಹ ಸಚಿವರ ವಿರುದ್ಧ ರೈತ ಮಹಿಳೆ ಗಂಭೀರ ಆರೋಪ

ನಂತರ ಅಮಿತ್ ಶಾ ಜೊತೆಯಲ್ಲೇ ಒಂದೇ ಕಾರಿನಲ್ಲಿ ಸಿಎಂ ಯಡಿಯೂರಪ್ಪ ಹಾಗು ಪ್ರಹ್ಲಾದ್ ಜೋಶಿ‌ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ವಾಯುಪಡೆ ವಿಮಾನದ ಮೂಲಕ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.