ಬೆಂಗಳೂರು: ಯಾರೋ ಮಾಡಿರುವ ಮೊಬೈಲ್ ಕಳ್ಳತನಕ್ಕೆ ವರ್ತೂರು ನಿವಾಸಿ ಚರಣ್ ಎಂಬ ಯುವಕನನ್ನು ಕಳ್ಳತನ ಆರೋಪದಡಿ ಕಾಡುಗುಡಿ ಪೊಲೀಸರು ರಾತ್ರೋರಾತ್ರಿ ವಿಚಾರಣೆಗೆ ಒಳಪಡಿಸಿ 48 ಗಂಟೆಗಳ ಕಾಲ ಅಕ್ರಮವಾಗಿ ಬಂಧನಕ್ಕೊಳಪಡಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ಯುವಕನ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ವೈಟ್ ಫೀಲ್ಡ್ ನಲ್ಲಿ ಪ್ರತಿಭಟನೆ ನಡೆಸಿದ್ರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರಿಗಳು ಪ್ರಕರಣವನ್ನು ತನಿಖೆ ನಡೆಸಿ ಯುವಕನ ಮೇಲೆ ಅಮಾನವೀಯವಾಗಿ ದೌರ್ಜನ್ಯ ಎಸಗಿರುವ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕಾಗಮಿಸಿದ ವೈಟ್ ಫೀಲ್ಡ್ ಉಪವಿಭಾಗದ ಡಿಸಿಪಿ ಅನುಚೇತ್ ಅವರು ಮನವಿ ಸ್ವೀಕರಿಸಿ ಸೂಕ್ತ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಭರವಸೆ ನೀಡಿದರು.