ETV Bharat / state

ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ: ಸಿಎಂ, ಗೃಹ ಸಚಿವರು ಭಾಗಿ

author img

By ETV Bharat Karnataka Team

Published : Jan 16, 2024, 2:15 PM IST

Updated : Jan 16, 2024, 3:15 PM IST

ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗಿಯಾಗಿದ್ದರು.

annual-conference
ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ

ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ

ಬೆಂಗಳೂರು: ನಗರದ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಹಿರಿಯ ಪೊಲೀಸ್​​ ಅಧಿಕಾರಿಗಳ ವಾರ್ಷಿಕ ಸಮಾವೇಶದ ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾಗಿಯಾಗಿದ್ದಾರೆ. ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

ಸಮಾವೇಶದಲ್ಲಿ ರಾಜ್ಯದ ವಿವಿಧ ತನಿಖಾ ವಿಶೇಷತೆಗಳ ಕುರಿತು ಪ್ರದರ್ಶಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಗರುಡ ಪಡೆ, ಎಫ್.ಎಸ್.ಎಲ್. ಹಾಗೂ ಮೊಬೈಲ್ ಕಮಾಂಡ್ ಕಂಟ್ರೋಲ್​ ಸೆಂಟರ್​ಗಳ ವಿಶೇಷತೆಗಳ ಕುರಿತು ಸಿದ್ದರಾಮಯ್ಯ ಹಾಗೂ ಪರಮೇಶ್ವರ್​ ಮಾಹಿತಿ ಪಡೆದರು. ಡ್ರಗ್​ ಮುಕ್ತ ಕರ್ನಾಟಕ ಜಾಗೃತಿ ಕಾರ್ಯಕ್ರಮದ ಭಾಗವಾಗಿ, ಪೊಲೀಸರು ವಶಕ್ಕೆ ಪಡೆದಿರುವ ಹಲವು ಮಾದರಿಯ ಮಾದಕ ವಸ್ತುಗಳನ್ನು ಪ್ರದರ್ಶಿಸಲಾಗಿದೆ. ಸಮಾವೇಶದಲ್ಲಿ ರಾಜ್ಯದಲ್ಲಿ ಕಳೆದ ವರ್ಷ ಪೊಲೀಸ್​ ಇಲಾಖೆಯಲ್ಲಿ ಸಾಧಿಸಿದ ಕಾರ್ಯಾಚರಣೆಗಳು, ಈ ವರ್ಷ ಹಾಕಿಕೊಂಡಿರುವ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಗುತ್ತಿದೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆ, ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ರಾಜ್ಯಾದ್ಯಂತ ಕೈಗೊಳ್ಳಬೇಕಿರುವ ಅಗತ್ಯ ಭದ್ರತಾ ಕ್ರಮಗಳ ಕುರಿತು ಚರ್ಚಿಸಲಾಯಿತು.

senior police officers annual conference
ರಾಜ್ಯ ಹಿರಿಯ ಪೊಲೀಸ್​ ಅಧಿಕಾರಿಗಳ ವಾರ್ಷಿಕ ಸಮಾವೇಶ

ಸಂಕ್ಷಿಪ್ತ ಸೈಬರ್​ ಕ್ರೈಂ ತನಿಖಾ ಕೈಪಿಡಿ ಬಿಡುಗಡೆ: ಇದೇ ವೇಳೆ 'ಸಂಕ್ಷಿಪ್ತ ಸೈಬರ್ ಕ್ರೈಂ ತನಿಖಾ ಕೈಪಿಡಿ' ಬಿಡುಗಡೆಗೊಳಿಸಲಾಯಿತು. ತಂತ್ರಜ್ಞಾನ ವೇಗವಾಗಿರುವ ಈ ವಿದ್ಯುನ್ಮಾನ ಯುಗದಲ್ಲಿ ಅದರಿಂದ ಆಗುತ್ತಿರುವ ಸಮಸ್ಯೆಗಳು ಕೂಡ ಜಟಿಲವಾಗಿದ್ದು, ಪೊಲೀಸ್ ಅಧಿಕಾರಿಗಳು ಇಂತಹ ಸನ್ನಿವೇಶಗಳನ್ನು ಎದುರಿಸಲು ತಾಂತ್ರಿಕವಾಗಿ ಒಂದು ಹೆಜ್ಜೆ ಮುಂದೆ ಇರಬೇಕಾಗಿರುತ್ತದೆ. ಸಂಕ್ಷಿಪ್ತ ಸೈಬರ್ ಕ್ರೈಂ ತನಿಖಾ ಕೈಪಿಡಿಯು ಅಂಥ ಸೈಬರ್ ತನಿಖಾ ಪ್ರಕ್ರಿಯೆ, ಡಿಜಿಟಲ್ ಫಾರೆನ್ಸಿಕ್‌ನಲ್ಲಿ ಪ್ರಮಾಣಿತ ಅಭ್ಯಾಸಗಳು, ಇತ್ತೀಚೆಗೆ ಸೈಬರ್ ಅಪರಾಧಗಳಲ್ಲಿ ಬದಲಾದ ಸನ್ನಿವೇಶಗಳ ಒಳನೋಟವನ್ನು ಒಳಗೊಂಡಿದೆ. ಈ ಕೈಪಿಡಿಯನ್ನು ಸಿ.ಐ.ಡಿ., ಕರ್ನಾಟಕದವರು ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ (ಡಿ.ಎಸ್.ಸಿ.ಐ), ಇನ್ಫೋಸಿಸ್​ ಫೌಂಡೇಶನ್ ಸಹಯೋಗದೊಂದಿಗೆ ಸ್ಥಾಪಿಸಲಾದ ಸೆಂಟರ್​ ಫಾರ್​​ ಸೈಬರ್​​ ಕ್ರೈಂ ಟ್ರೈನಿಂಗ್​​ & ರಿಸರ್ಚ್​ (ಸಿ.ಸಿ.ಐ.ಟಿ.ಆರ್) ಮೂಲಕ ಅಭಿವೃದ್ಧಿಪಡಿಸಲಾಗಿದೆ.

senior police officers annual conference
ವಿವಿಧ ತನಿಖಾ ವಿಶೇಷತೆಗಳ ಕುರಿತು ಪ್ರದರ್ಶನ

ವಿಶೇಷತೆಗಳು: ಸೈಬರ್​ ಅಪರಾಧಗಳ ಅವಲೋಕನ, ಸೈಬರ್ ಕಾನೂನುಗಳು, ಡಿಜಿಟಲ್ ಫಾರೆನ್ಸಿಕ್ಸ್, ಸೈಬರ್ ಅಪರಾಧಗಳ ಕಾರ್ಯವಿಧಾನಗಳು, ವಿದ್ಯುನ್ಮಾನ ಸಾಕ್ಷ್ಯಗಳ ಸ್ವೀಕಾರಾರ್ಹತೆ ಮತ್ತು ಫಾರೆನ್ಸಿಕ್ಸ್‌ನಲ್ಲಿ ಪ್ರಮಾಣಿತ ತನಿಖಾ ವಿಧಾನಗಳಿಗೆ ಮಾತ್ರ ಸೀಮಿತವಾಗದೇ ವ್ಯಾಪಕ ವಿಷಯಾಧಾರಿತ ಮಾಹಿತಿಗಳನ್ನೊಳಗೊಂಡಿದೆ. ಮತ್ತು ಡಿಜಿಟಲ್ ಫಾರೆನ್ಸಿಕ್ಸ್​ ಮತ್ತು ಸೈಬರ್ ಅಪರಾಧಗಳ ತನಿಖಾ ಕ್ಷೇತ್ರದಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ನುರಿತ ಪೊಲೀಸ್ ಅಧಿಕಾರಿಗಳು ಹಾಗೂ ಡಿ.ಎಸ್.ಸಿ.ಐ.ನ ವಿಷಯ ತಜ್ಞರು ಈ ಕೈಪಿಡಿಯನ್ನು ತಯಾರಿಸಿದ್ದಾರೆ.

senior police officers annual conference
ಪೊಲೀಸ್​ ಅಧಿಕಾರಿಗಳಿಗೆ ಅಭಿನಂದಿಸುತ್ತಿರುವ ಸಿಎಂ ಸಿದ್ದರಾಮಯ್ಯ

ಕಾನೂನು ಮತ್ತು ನೈತಿಕ ಚೌಕಟ್ಟಿನ ಪರಿಮಿತಿಯೊಳಗೆ ತನಿಖಾಧಿಕಾರಿಗಳು ಪರಿಣಾಮಕಾರಿ ತನಿಖೆ ನಡೆಸುವುದಕ್ಕೆ ಒತ್ತು ನೀಡಲಾಗಿದ್ದು ತನಿಖಾಧಿಕಾರಿಗಳ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಈ ಕೈಪಿಡಿಯ ಮೂಲಕ ಸ್ಪಷ್ಟಪಡಿಸಲಾಗಿದೆ. ಸೈಬರ್ ಅಪರಾಧಗಳ ವ್ಯಾಪ್ತಿಯನ್ನು ಅರಿಯಲು ಅಗತ್ಯವಿರುವ ಜ್ಞಾನ ಹಾಗೂ ಸಾಧನಗಳೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಸಂಕ್ಷಿಪ್ತ ಸೈಬರ್​ ಕ್ರೈಂ ತನಿಖಾ ಕೈಪಿಡಿಯನ್ನು ರಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ತಿರುವಳ್ಳುವರ್ ಪ್ರತಿಮೆಗೆ ಬಿ.ವೈ.ವಿಜಯೇಂದ್ರ ಮಾಲಾರ್ಪಣೆ

ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ

ಬೆಂಗಳೂರು: ನಗರದ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಹಿರಿಯ ಪೊಲೀಸ್​​ ಅಧಿಕಾರಿಗಳ ವಾರ್ಷಿಕ ಸಮಾವೇಶದ ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾಗಿಯಾಗಿದ್ದಾರೆ. ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

ಸಮಾವೇಶದಲ್ಲಿ ರಾಜ್ಯದ ವಿವಿಧ ತನಿಖಾ ವಿಶೇಷತೆಗಳ ಕುರಿತು ಪ್ರದರ್ಶಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಗರುಡ ಪಡೆ, ಎಫ್.ಎಸ್.ಎಲ್. ಹಾಗೂ ಮೊಬೈಲ್ ಕಮಾಂಡ್ ಕಂಟ್ರೋಲ್​ ಸೆಂಟರ್​ಗಳ ವಿಶೇಷತೆಗಳ ಕುರಿತು ಸಿದ್ದರಾಮಯ್ಯ ಹಾಗೂ ಪರಮೇಶ್ವರ್​ ಮಾಹಿತಿ ಪಡೆದರು. ಡ್ರಗ್​ ಮುಕ್ತ ಕರ್ನಾಟಕ ಜಾಗೃತಿ ಕಾರ್ಯಕ್ರಮದ ಭಾಗವಾಗಿ, ಪೊಲೀಸರು ವಶಕ್ಕೆ ಪಡೆದಿರುವ ಹಲವು ಮಾದರಿಯ ಮಾದಕ ವಸ್ತುಗಳನ್ನು ಪ್ರದರ್ಶಿಸಲಾಗಿದೆ. ಸಮಾವೇಶದಲ್ಲಿ ರಾಜ್ಯದಲ್ಲಿ ಕಳೆದ ವರ್ಷ ಪೊಲೀಸ್​ ಇಲಾಖೆಯಲ್ಲಿ ಸಾಧಿಸಿದ ಕಾರ್ಯಾಚರಣೆಗಳು, ಈ ವರ್ಷ ಹಾಕಿಕೊಂಡಿರುವ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಗುತ್ತಿದೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆ, ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ರಾಜ್ಯಾದ್ಯಂತ ಕೈಗೊಳ್ಳಬೇಕಿರುವ ಅಗತ್ಯ ಭದ್ರತಾ ಕ್ರಮಗಳ ಕುರಿತು ಚರ್ಚಿಸಲಾಯಿತು.

senior police officers annual conference
ರಾಜ್ಯ ಹಿರಿಯ ಪೊಲೀಸ್​ ಅಧಿಕಾರಿಗಳ ವಾರ್ಷಿಕ ಸಮಾವೇಶ

ಸಂಕ್ಷಿಪ್ತ ಸೈಬರ್​ ಕ್ರೈಂ ತನಿಖಾ ಕೈಪಿಡಿ ಬಿಡುಗಡೆ: ಇದೇ ವೇಳೆ 'ಸಂಕ್ಷಿಪ್ತ ಸೈಬರ್ ಕ್ರೈಂ ತನಿಖಾ ಕೈಪಿಡಿ' ಬಿಡುಗಡೆಗೊಳಿಸಲಾಯಿತು. ತಂತ್ರಜ್ಞಾನ ವೇಗವಾಗಿರುವ ಈ ವಿದ್ಯುನ್ಮಾನ ಯುಗದಲ್ಲಿ ಅದರಿಂದ ಆಗುತ್ತಿರುವ ಸಮಸ್ಯೆಗಳು ಕೂಡ ಜಟಿಲವಾಗಿದ್ದು, ಪೊಲೀಸ್ ಅಧಿಕಾರಿಗಳು ಇಂತಹ ಸನ್ನಿವೇಶಗಳನ್ನು ಎದುರಿಸಲು ತಾಂತ್ರಿಕವಾಗಿ ಒಂದು ಹೆಜ್ಜೆ ಮುಂದೆ ಇರಬೇಕಾಗಿರುತ್ತದೆ. ಸಂಕ್ಷಿಪ್ತ ಸೈಬರ್ ಕ್ರೈಂ ತನಿಖಾ ಕೈಪಿಡಿಯು ಅಂಥ ಸೈಬರ್ ತನಿಖಾ ಪ್ರಕ್ರಿಯೆ, ಡಿಜಿಟಲ್ ಫಾರೆನ್ಸಿಕ್‌ನಲ್ಲಿ ಪ್ರಮಾಣಿತ ಅಭ್ಯಾಸಗಳು, ಇತ್ತೀಚೆಗೆ ಸೈಬರ್ ಅಪರಾಧಗಳಲ್ಲಿ ಬದಲಾದ ಸನ್ನಿವೇಶಗಳ ಒಳನೋಟವನ್ನು ಒಳಗೊಂಡಿದೆ. ಈ ಕೈಪಿಡಿಯನ್ನು ಸಿ.ಐ.ಡಿ., ಕರ್ನಾಟಕದವರು ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ (ಡಿ.ಎಸ್.ಸಿ.ಐ), ಇನ್ಫೋಸಿಸ್​ ಫೌಂಡೇಶನ್ ಸಹಯೋಗದೊಂದಿಗೆ ಸ್ಥಾಪಿಸಲಾದ ಸೆಂಟರ್​ ಫಾರ್​​ ಸೈಬರ್​​ ಕ್ರೈಂ ಟ್ರೈನಿಂಗ್​​ & ರಿಸರ್ಚ್​ (ಸಿ.ಸಿ.ಐ.ಟಿ.ಆರ್) ಮೂಲಕ ಅಭಿವೃದ್ಧಿಪಡಿಸಲಾಗಿದೆ.

senior police officers annual conference
ವಿವಿಧ ತನಿಖಾ ವಿಶೇಷತೆಗಳ ಕುರಿತು ಪ್ರದರ್ಶನ

ವಿಶೇಷತೆಗಳು: ಸೈಬರ್​ ಅಪರಾಧಗಳ ಅವಲೋಕನ, ಸೈಬರ್ ಕಾನೂನುಗಳು, ಡಿಜಿಟಲ್ ಫಾರೆನ್ಸಿಕ್ಸ್, ಸೈಬರ್ ಅಪರಾಧಗಳ ಕಾರ್ಯವಿಧಾನಗಳು, ವಿದ್ಯುನ್ಮಾನ ಸಾಕ್ಷ್ಯಗಳ ಸ್ವೀಕಾರಾರ್ಹತೆ ಮತ್ತು ಫಾರೆನ್ಸಿಕ್ಸ್‌ನಲ್ಲಿ ಪ್ರಮಾಣಿತ ತನಿಖಾ ವಿಧಾನಗಳಿಗೆ ಮಾತ್ರ ಸೀಮಿತವಾಗದೇ ವ್ಯಾಪಕ ವಿಷಯಾಧಾರಿತ ಮಾಹಿತಿಗಳನ್ನೊಳಗೊಂಡಿದೆ. ಮತ್ತು ಡಿಜಿಟಲ್ ಫಾರೆನ್ಸಿಕ್ಸ್​ ಮತ್ತು ಸೈಬರ್ ಅಪರಾಧಗಳ ತನಿಖಾ ಕ್ಷೇತ್ರದಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ನುರಿತ ಪೊಲೀಸ್ ಅಧಿಕಾರಿಗಳು ಹಾಗೂ ಡಿ.ಎಸ್.ಸಿ.ಐ.ನ ವಿಷಯ ತಜ್ಞರು ಈ ಕೈಪಿಡಿಯನ್ನು ತಯಾರಿಸಿದ್ದಾರೆ.

senior police officers annual conference
ಪೊಲೀಸ್​ ಅಧಿಕಾರಿಗಳಿಗೆ ಅಭಿನಂದಿಸುತ್ತಿರುವ ಸಿಎಂ ಸಿದ್ದರಾಮಯ್ಯ

ಕಾನೂನು ಮತ್ತು ನೈತಿಕ ಚೌಕಟ್ಟಿನ ಪರಿಮಿತಿಯೊಳಗೆ ತನಿಖಾಧಿಕಾರಿಗಳು ಪರಿಣಾಮಕಾರಿ ತನಿಖೆ ನಡೆಸುವುದಕ್ಕೆ ಒತ್ತು ನೀಡಲಾಗಿದ್ದು ತನಿಖಾಧಿಕಾರಿಗಳ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಈ ಕೈಪಿಡಿಯ ಮೂಲಕ ಸ್ಪಷ್ಟಪಡಿಸಲಾಗಿದೆ. ಸೈಬರ್ ಅಪರಾಧಗಳ ವ್ಯಾಪ್ತಿಯನ್ನು ಅರಿಯಲು ಅಗತ್ಯವಿರುವ ಜ್ಞಾನ ಹಾಗೂ ಸಾಧನಗಳೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಸಂಕ್ಷಿಪ್ತ ಸೈಬರ್​ ಕ್ರೈಂ ತನಿಖಾ ಕೈಪಿಡಿಯನ್ನು ರಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ತಿರುವಳ್ಳುವರ್ ಪ್ರತಿಮೆಗೆ ಬಿ.ವೈ.ವಿಜಯೇಂದ್ರ ಮಾಲಾರ್ಪಣೆ

Last Updated : Jan 16, 2024, 3:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.