ETV Bharat / state

ಉಪ ಚುನಾವಣೆಯಲ್ಲಿ ಶಿಕ್ಷಣ ಸಚಿವರು ಬ್ಯುಸಿ.. ಯುಗಾದಿ ಬಳಿಕ ವಾರ್ಷಿಕ ಪರೀಕ್ಷೆ ನಿರ್ಧಾರ

author img

By

Published : Apr 13, 2021, 4:50 AM IST

Updated : Apr 13, 2021, 6:01 AM IST

ಉಪ ಚುನಾವಣೆಯಲ್ಲಿ ಶಿಕ್ಷಣ ಸಚಿವರು ಬ್ಯುಸಿಯಾಗಿದ್ದು, ಯುಗಾದಿ ಹಬ್ಬ ಮುಗಿದ ನಂತರ ವಾರ್ಷಿಕ ಪರೀಕ್ಷೆ ಬಗ್ಗೆ ನಿರ್ಧಾರ ಕೈಗೊಳ್ಳುವುದು ಬಹತೇಕ ಖಚಿವಾಗಿದೆ.

Annual Examination decision,  Annual Examination decision after Ugadi Festival,  Minister Suresh Kumar,  Minister Suresh Kumar news,  ವಾರ್ಷಿಕ ಪರೀಕ್ಷೆ ನಿರ್ಧಾರ,  ಯುಗಾದಿ ಹಬ್ಬ ಮುಗಿದ ನಂತರ ವಾರ್ಷಿಕ ಪರೀಕ್ಷೆ ನಿರ್ಧಾರ,  ಸಚಿವ ಸುರೇಶ್​ ಕುಮಾರ್​,  ಸಚಿವ ಸುರೇಶ್​ ಕುಮಾರ ಸುದ್ದಿ,
ಶಿಕ್ಷಣ ಸಚಿವ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ.‌ ಇತ್ತ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕಾ ಅಥವಾ ಬೇಡ್ವಾ ಎಂಬುದರ ಕುರಿತು ಇನ್ನೂ ಯಾವುದೇ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿಲ್ಲ.

ಒಂದು ಕಡೆ ಕೋವಿಡ್ ಹೆಚ್ಚಾಗುತ್ತಿರುವುದರಿಂದ ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಗೆ ಸವಾಲೇ ಎನಿಸಿದೆ. ಇದರ ಜೊತೆಗೆ ಇನ್ನೇನು ಕೆಲ ದಿನಗಳಲ್ಲಿ ಎಸ್ಎಸ್ಎಲ್​ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೂ ಇಲಾಖೆ ತಯಾರಿ ಮಾಡಿಕೊಳ್ಳಬೇಕು. ಹಾಗಾಗಿ 1 ರಿಂದ 5 ತರಗತಿ ಮಕ್ಕಳಿಗೆ ಆನ್​ಲೈನ್ ಪರೀಕ್ಷೆ, 6-9 ನೇ ತರಗತಿ ವಿದ್ಯಾರ್ಥಿಗಳಿಗೆ ಆನ್​ಲೈನ್​ ಪರೀಕ್ಷೆ ನಡೆಸುವ ಕುರಿತು ಚರ್ಚಿಸಬೇಕಿದೆ.‌

ಈ ಸಂಬಂಧ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಬೆಳಗಾವಿಯ ಉಪ ಚುನಾವಣೆ ಪ್ರಚಾರ ಕಾರ್ಯಕ್ಕಾಗಿ ಹೋಗಿದ್ದರಿಂದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿಲ್ಲ. ಹಾಗೇ ಶಿಕ್ಷಣ ಇಲಾಖೆಯ ಆಯುಕ್ತರು ಎರಡ್ಮೂರು ದಿನ ಉಸ್ತುವಾರಿ ಜಿಲ್ಲೆಯ ಪ್ರವಾಸದಲ್ಲಿದ್ದರು. ಹೀಗಾಗಿ, ಮುಂದಿನ ಗುರುವಾರ ಈ ಕುರಿತು ಚರ್ಚೆ ನಡೆಸಲಾಗುವುದು ಅಂತ ತಿಳಿಸಿದ್ದಾರೆ.‌

ಶನಿವಾರ ಅಥವಾ ಭಾನುವಾರ ಸರ್ಕಾರಿ ರಜೆ ಇದ್ದಿದ್ದರಿಂದ ಹಾಗೂ ಯುಗಾದಿ ಹಬ್ಬ ಮುಗಿದ ನಂತರ ಸಚಿವರು ಸಭೆ ನಡೆಸಲಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ.‌ ಇತ್ತ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬೇಕಾ ಅಥವಾ ಬೇಡ್ವಾ ಎಂಬುದರ ಕುರಿತು ಇನ್ನೂ ಯಾವುದೇ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿಲ್ಲ.

ಒಂದು ಕಡೆ ಕೋವಿಡ್ ಹೆಚ್ಚಾಗುತ್ತಿರುವುದರಿಂದ ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಗೆ ಸವಾಲೇ ಎನಿಸಿದೆ. ಇದರ ಜೊತೆಗೆ ಇನ್ನೇನು ಕೆಲ ದಿನಗಳಲ್ಲಿ ಎಸ್ಎಸ್ಎಲ್​ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೂ ಇಲಾಖೆ ತಯಾರಿ ಮಾಡಿಕೊಳ್ಳಬೇಕು. ಹಾಗಾಗಿ 1 ರಿಂದ 5 ತರಗತಿ ಮಕ್ಕಳಿಗೆ ಆನ್​ಲೈನ್ ಪರೀಕ್ಷೆ, 6-9 ನೇ ತರಗತಿ ವಿದ್ಯಾರ್ಥಿಗಳಿಗೆ ಆನ್​ಲೈನ್​ ಪರೀಕ್ಷೆ ನಡೆಸುವ ಕುರಿತು ಚರ್ಚಿಸಬೇಕಿದೆ.‌

ಈ ಸಂಬಂಧ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಬೆಳಗಾವಿಯ ಉಪ ಚುನಾವಣೆ ಪ್ರಚಾರ ಕಾರ್ಯಕ್ಕಾಗಿ ಹೋಗಿದ್ದರಿಂದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿಲ್ಲ. ಹಾಗೇ ಶಿಕ್ಷಣ ಇಲಾಖೆಯ ಆಯುಕ್ತರು ಎರಡ್ಮೂರು ದಿನ ಉಸ್ತುವಾರಿ ಜಿಲ್ಲೆಯ ಪ್ರವಾಸದಲ್ಲಿದ್ದರು. ಹೀಗಾಗಿ, ಮುಂದಿನ ಗುರುವಾರ ಈ ಕುರಿತು ಚರ್ಚೆ ನಡೆಸಲಾಗುವುದು ಅಂತ ತಿಳಿಸಿದ್ದಾರೆ.‌

ಶನಿವಾರ ಅಥವಾ ಭಾನುವಾರ ಸರ್ಕಾರಿ ರಜೆ ಇದ್ದಿದ್ದರಿಂದ ಹಾಗೂ ಯುಗಾದಿ ಹಬ್ಬ ಮುಗಿದ ನಂತರ ಸಚಿವರು ಸಭೆ ನಡೆಸಲಿದ್ದಾರೆ.

Last Updated : Apr 13, 2021, 6:01 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.