ETV Bharat / state

ಹರ್ಷ ಹತ್ಯೆ ಆರೋಪಿಗಳಿಂದ ಜೈಲಿನಿಂದಲೇ ವಿಡಿಯೋ ಕರೆ: ಎಫ್ಐಆರ್​ ದಾಖಲು

author img

By

Published : Jul 8, 2022, 4:25 PM IST

ಪರಪ್ಪನ ಅಗ್ರಹಾರದಲ್ಲಿ ಹರ್ಷನ ಹತ್ಯೆ ಮಾಡಿದ್ದ ಆರೋಪಿಗಳು ಬಿಂದಾಸ್ ಜೀವನ ನಡೆಸುತ್ತಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿತ್ತು. ಹೀಗಾಗಿ ಪರಪ್ಪನ ಅಗ್ರಹಾರ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಹರ್ಷ ಹತ್ಯೆ ಆರೋಪಿಗಳಿಂದ ಜೈಲಿನಿಂದಲೇ ವಿಡಿಯೋ ಕರೆ ಪ್ರಕರಣ
ಹರ್ಷ ಹತ್ಯೆ ಆರೋಪಿಗಳಿಂದ ಜೈಲಿನಿಂದಲೇ ವಿಡಿಯೋ ಕರೆ ಪ್ರಕರಣ

ಬೆಂಗಳೂರು: ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ವಿಡಿಯೋ ಕಾಲ್ ಮಾಡಿ ಕುಟುಂಬಸ್ಥರೊಂದಿಗೆ ಮಾತನಾತನಾಡಿದ ವಿಷಯಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸರು ಎಪ್​​ಐಆರ್ ದಾಖಲಿಸಿಕೊಂಡಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿರುವ ಹರ್ಷ ಕೊಲೆ ಆರೋಪಿಗಳು ಜೈಲಿನಲ್ಲಿರುವ ಇಬ್ಬರು ವಿಚಾರಣಾದೀನ ಖೈದಿಗಳಿಂದಲೇ ಮೊಬೈಲ್ ಪಡೆದಿರುವುದು ಬಹಿರಂಗವಾಗಿದೆ. ನಿಹಾರ್, ಮಗ್ದುಬ್ ಎಂಬ ಇಬ್ಬರು ಖೈದಿಗಳು ಕೇಸ್ ಒಂದರಲ್ಲಿ ರಂಜಾನ್ ಹಬ್ಬದ ಸಮಯದಲ್ಲಿ ಅಂದರ್ ಆಗಿದ್ರು. ನಿಹಾರ್ ಬಳಿ ಇದ್ದ ಮೊಬೈಲ್​​ನ್ನು ಮಗ್ದುಬ್ ಪಡೆದುಕೊಂಡಿದ್ದ. ಈ ವೇಳೆ ಮೊಬೈಲ್ ಕೊಡು ಕುಟುಂಬಸ್ಥರ ಜೊತೆ ಮಾತನಾಡಬೇಕು ಎಂದು ಹರ್ಷ ಕೊಲೆ ಆರೋಪಿಗಳು ಮಗ್ದಮ್ ನನ್ನು ಕೇಳಿದ್ದಾರೆ.

ತಕ್ಷಣ ಹಿಂದೆ ಮುಂದೆ ನೋಡದೇ ಮಗ್ದುಮ್ ಕೊಲೆ ಆರೋಪಿಗಳಿಗೆ ಮೊಬೈಲ್ ನೀಡಿದ್ದಾನೆ. ಹೀಗಾಗಿ ಆರೋಪಿಗಳು ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದರು. ಕೊಲೆ ಆರೋಪಿಗಳು ಕಾಲ್ ಮಾಡಿ ಮಾತನಾಡಿದ್ದ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಪರಪ್ಪನ ಅಗ್ರಹಾರದಲ್ಲಿ ಆರೋಪಿಗಳು ಬಿಂದಾಸ್ ಜೀವನ ನಡೆಸುತ್ತಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿತ್ತು. ಹೀಗಾಗಿ ಪರಪ್ಪನ ಅಗ್ರಹಾರ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ಬಾಡಿ ವಾರೆಂಟ್ ಪಡೆದು ವಿಚಾರಣೆ ನಡೆಸುತ್ತಿದ್ದಾರೆ‌. ಜೈಲಿನಲ್ಲಿ ಮೊಬೈಲ್ ಹೇಗೆ ಸಿಕ್ತು, ಯಾರು ಕೊಟ್ಟಿದ್ದು ಎನ್ನುವುದರ ಬಗ್ಗೆಯೂ ಕೂಲಂಕಷವಾಗಿ ತನಿಖೆ ನಡೆಸಿದ್ದಾರೆ.ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ನಿಹಾರ್ ಮತ್ತು ಮಗ್ದುಬ್ ಎಂಬುವವರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಕಾಲ್ ಮಾಡಿದವರು ಯಾರು?. ಯಾವ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೀರಿ?. ಇದೇ ಮೊದಲ ಬಾರಿಗೆ ಮೊಬೈಲ್ ಪಡೆದು ನೀವು ಮಾತನಾಡಿರೋದಾ? ಅಥವಾ ಹಲವು ಬಾರಿ ಮೊಬೈಲ್ ಪಡೆದುಕೊಂಡಿದ್ರಾ? ಎನ್ನುವುದರ ಬಗ್ಗೆಯೂ ಆರೋಪಿಗಳನ್ನು ಪೊಲೀಸರು ಪ್ರಶ್ನಿಸಿದ್ದಾರೆ‌. ಜೈಲು ಸಿಬ್ಬಂದಿ ಏನಾದ್ರೂ ಆರೋಪಿಗಳಿಗೆ ಮೊಬೈಲ್ ನೀಡಿದ್ರಾ? ಎಂಬ ಬಗ್ಗೆಯೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ‌.

ಇದನ್ನೂ ಓದಿ : ಹರ್ಷ ಹತ್ಯೆ ಆರೋಪಿಗಳಿಗೆ ಹೆಚ್ಚುವರಿ ಜೈಲು ಶಿಕ್ಷೆ ಸಂಭವ: ಏಕೆ ಗೊತ್ತೇ?

ಬೆಂಗಳೂರು: ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ವಿಡಿಯೋ ಕಾಲ್ ಮಾಡಿ ಕುಟುಂಬಸ್ಥರೊಂದಿಗೆ ಮಾತನಾತನಾಡಿದ ವಿಷಯಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸರು ಎಪ್​​ಐಆರ್ ದಾಖಲಿಸಿಕೊಂಡಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿರುವ ಹರ್ಷ ಕೊಲೆ ಆರೋಪಿಗಳು ಜೈಲಿನಲ್ಲಿರುವ ಇಬ್ಬರು ವಿಚಾರಣಾದೀನ ಖೈದಿಗಳಿಂದಲೇ ಮೊಬೈಲ್ ಪಡೆದಿರುವುದು ಬಹಿರಂಗವಾಗಿದೆ. ನಿಹಾರ್, ಮಗ್ದುಬ್ ಎಂಬ ಇಬ್ಬರು ಖೈದಿಗಳು ಕೇಸ್ ಒಂದರಲ್ಲಿ ರಂಜಾನ್ ಹಬ್ಬದ ಸಮಯದಲ್ಲಿ ಅಂದರ್ ಆಗಿದ್ರು. ನಿಹಾರ್ ಬಳಿ ಇದ್ದ ಮೊಬೈಲ್​​ನ್ನು ಮಗ್ದುಬ್ ಪಡೆದುಕೊಂಡಿದ್ದ. ಈ ವೇಳೆ ಮೊಬೈಲ್ ಕೊಡು ಕುಟುಂಬಸ್ಥರ ಜೊತೆ ಮಾತನಾಡಬೇಕು ಎಂದು ಹರ್ಷ ಕೊಲೆ ಆರೋಪಿಗಳು ಮಗ್ದಮ್ ನನ್ನು ಕೇಳಿದ್ದಾರೆ.

ತಕ್ಷಣ ಹಿಂದೆ ಮುಂದೆ ನೋಡದೇ ಮಗ್ದುಮ್ ಕೊಲೆ ಆರೋಪಿಗಳಿಗೆ ಮೊಬೈಲ್ ನೀಡಿದ್ದಾನೆ. ಹೀಗಾಗಿ ಆರೋಪಿಗಳು ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದರು. ಕೊಲೆ ಆರೋಪಿಗಳು ಕಾಲ್ ಮಾಡಿ ಮಾತನಾಡಿದ್ದ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಪರಪ್ಪನ ಅಗ್ರಹಾರದಲ್ಲಿ ಆರೋಪಿಗಳು ಬಿಂದಾಸ್ ಜೀವನ ನಡೆಸುತ್ತಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿತ್ತು. ಹೀಗಾಗಿ ಪರಪ್ಪನ ಅಗ್ರಹಾರ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ಬಾಡಿ ವಾರೆಂಟ್ ಪಡೆದು ವಿಚಾರಣೆ ನಡೆಸುತ್ತಿದ್ದಾರೆ‌. ಜೈಲಿನಲ್ಲಿ ಮೊಬೈಲ್ ಹೇಗೆ ಸಿಕ್ತು, ಯಾರು ಕೊಟ್ಟಿದ್ದು ಎನ್ನುವುದರ ಬಗ್ಗೆಯೂ ಕೂಲಂಕಷವಾಗಿ ತನಿಖೆ ನಡೆಸಿದ್ದಾರೆ.ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ನಿಹಾರ್ ಮತ್ತು ಮಗ್ದುಬ್ ಎಂಬುವವರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಕಾಲ್ ಮಾಡಿದವರು ಯಾರು?. ಯಾವ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೀರಿ?. ಇದೇ ಮೊದಲ ಬಾರಿಗೆ ಮೊಬೈಲ್ ಪಡೆದು ನೀವು ಮಾತನಾಡಿರೋದಾ? ಅಥವಾ ಹಲವು ಬಾರಿ ಮೊಬೈಲ್ ಪಡೆದುಕೊಂಡಿದ್ರಾ? ಎನ್ನುವುದರ ಬಗ್ಗೆಯೂ ಆರೋಪಿಗಳನ್ನು ಪೊಲೀಸರು ಪ್ರಶ್ನಿಸಿದ್ದಾರೆ‌. ಜೈಲು ಸಿಬ್ಬಂದಿ ಏನಾದ್ರೂ ಆರೋಪಿಗಳಿಗೆ ಮೊಬೈಲ್ ನೀಡಿದ್ರಾ? ಎಂಬ ಬಗ್ಗೆಯೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ‌.

ಇದನ್ನೂ ಓದಿ : ಹರ್ಷ ಹತ್ಯೆ ಆರೋಪಿಗಳಿಗೆ ಹೆಚ್ಚುವರಿ ಜೈಲು ಶಿಕ್ಷೆ ಸಂಭವ: ಏಕೆ ಗೊತ್ತೇ?

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.