ETV Bharat / state

ವಕೀಲರಿಗೆ ಆರ್ಥಿಕ ನೆರವು ಕೋರಿ ಪರಿಷತ್ತಿನಿಂದ ಸಿಎಂ ಬಿಎಸ್​​ವೈಗೆ ಮನವಿ

author img

By

Published : May 19, 2020, 5:30 PM IST

ಲಾಕ್​ಡೌನ್​ ಆದೇಶದ ಬಳಿಕ ವಕೀಲರು ಸಹ ಮನೆಯಲ್ಲಿಯೇ ಕಾಲ ಕಳೆಯುವಂತಾಗಿತ್ತು. ಕೋರ್ಟ್​​ಗಳು ಬಂದ್ ಆಗಿದ್ದರಿಂದಾಗಿ ರಾಜ್ಯದ ವಕೀಲರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆ ರಾಜ್ಯ ವಕೀಲರ ಪರಿಷತ್ತಿನ ನಿಯೋಗ ಇಂದು ಸಿಎಂ ಬಿಎಸ್​​ವೈ ಅವರನ್ನು ಭೇಟಿ ಮಾಡಿದ್ದು, ಆರ್ಥಿಕ ನೆರವು ನೀಡುವಂತೆ ಲಿಖಿತ ಮನವಿ ಮಾಡಿಕೊಂಡಿದ್ದಾರೆ.

Appeal to CM BSY from the council of lawyers for financial assistance
ವಕೀಲರಿಗೆ ಆರ್ಥಿಕ ನೆರವು ಕೋರಿ ಪರಿಷತ್ತಿನಿಂದ ಸಿಎಂ ಬಿಎಸ್​​ವೈಗೆ ಮನವಿ

ಬೆಂಗಳೂರು: ಲಾಕ್​​ಡೌನ್ ಬಳಿಕ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ವಕೀಲ ಸಮುದಾಯಕ್ಕೆ ತುರ್ತು ಹಣಕಾಸು ನೆರವು ನೀಡಬೇಕೆಂದು ಕೋರಿ ರಾಜ್ಯ ವಕೀಲರ ಪರಿಷತ್ತಿನ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಲಿಖಿತ ಮನವಿ ಸಲ್ಲಿಸಿದೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ ಜೆ.ಎಂ.ಅನಿಲ್ ಕುಮಾರ್, ಉಪಾಧ್ಯಕ್ಷರಾದ ಎನ್.ಶಿವಕುಮಾರ್ ಹಾಗೂ ಪರಿಷತ್ ಹಿರಿಯ ಸದಸ್ಯರಾದ ಆರ್.ರಾಜಣ್ಣ ಮತ್ತಿತರರನ್ನು ಒಳಗೊಂಡ ನಿಯೋಗ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಅರ್ಜಿಯಲ್ಲಿ, ಲಾಕ್​ಡೌನ್ ಬಳಿಕ ರಾಜ್ಯದ ಎಲ್ಲ ಕೋರ್ಟ್​​ಗಳಿಗೆ ರಜೆ ಘೋಷಿಸಲಾಗಿದ್ದು, ವಕೀಲರಿಗೆ ಕೆಲಸ ಮತ್ತು ಸಂಪಾದನೆ ಇಲ್ಲವಾಗಿದೆ. ವಕೀಲರಲ್ಲಿ ಅತಿ ಹೆಚ್ಚು ಮಂದಿ ಗ್ರಾಮೀಣ ಪ್ರದೇಶಗಳಿಂದ ಬಂದಿರುವವರಾಗಿದ್ದು ಇದೀಗ ಮನೆ, ಕಚೇರಿ ಬಾಡಿಗೆ, ಮಕ್ಕಳ ಶೈಕ್ಷಣಿಕ ವೆಚ್ಚಗಳನ್ನು ಭರಿಸಲಾಗದೇ ತೀವ್ರ ಆರ್ಥಿಕ ಸಮಸ್ಯೆಗಳಿಗೆ ಸಿಲುಕಿದ್ದಾರೆ ಎಂದು ತಿಳಿಸಲಾಗಿದೆ.

ಅಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ವಕೀಲರಿಗೆ ತುರ್ತಾಗಿ ಹಣಕಾಸು ನೆರವಿನ ಅಗತ್ಯವಿದೆ. ಹೀಗಾಗಿ ಸರ್ಕಾರ ಕೂಡಲೇ ವಕೀಲರಿಗೆ ನೆರವು ನೀಡಲು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ. ಪರಿಷತ್ತಿನ ಮನವಿ ಪರಿಗಣಿಸಿರುವುದಾಗಿ ತಿಳಿಸಿರುವ ಸಿಎಂ ಯಡಿಯೂರಪ್ಪ ನೆರವು ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಲಾಕ್​​ಡೌನ್ ಬಳಿಕ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ವಕೀಲ ಸಮುದಾಯಕ್ಕೆ ತುರ್ತು ಹಣಕಾಸು ನೆರವು ನೀಡಬೇಕೆಂದು ಕೋರಿ ರಾಜ್ಯ ವಕೀಲರ ಪರಿಷತ್ತಿನ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಲಿಖಿತ ಮನವಿ ಸಲ್ಲಿಸಿದೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಾದ ಜೆ.ಎಂ.ಅನಿಲ್ ಕುಮಾರ್, ಉಪಾಧ್ಯಕ್ಷರಾದ ಎನ್.ಶಿವಕುಮಾರ್ ಹಾಗೂ ಪರಿಷತ್ ಹಿರಿಯ ಸದಸ್ಯರಾದ ಆರ್.ರಾಜಣ್ಣ ಮತ್ತಿತರರನ್ನು ಒಳಗೊಂಡ ನಿಯೋಗ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಅರ್ಜಿಯಲ್ಲಿ, ಲಾಕ್​ಡೌನ್ ಬಳಿಕ ರಾಜ್ಯದ ಎಲ್ಲ ಕೋರ್ಟ್​​ಗಳಿಗೆ ರಜೆ ಘೋಷಿಸಲಾಗಿದ್ದು, ವಕೀಲರಿಗೆ ಕೆಲಸ ಮತ್ತು ಸಂಪಾದನೆ ಇಲ್ಲವಾಗಿದೆ. ವಕೀಲರಲ್ಲಿ ಅತಿ ಹೆಚ್ಚು ಮಂದಿ ಗ್ರಾಮೀಣ ಪ್ರದೇಶಗಳಿಂದ ಬಂದಿರುವವರಾಗಿದ್ದು ಇದೀಗ ಮನೆ, ಕಚೇರಿ ಬಾಡಿಗೆ, ಮಕ್ಕಳ ಶೈಕ್ಷಣಿಕ ವೆಚ್ಚಗಳನ್ನು ಭರಿಸಲಾಗದೇ ತೀವ್ರ ಆರ್ಥಿಕ ಸಮಸ್ಯೆಗಳಿಗೆ ಸಿಲುಕಿದ್ದಾರೆ ಎಂದು ತಿಳಿಸಲಾಗಿದೆ.

ಅಲ್ಲದೇ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ವಕೀಲರಿಗೆ ತುರ್ತಾಗಿ ಹಣಕಾಸು ನೆರವಿನ ಅಗತ್ಯವಿದೆ. ಹೀಗಾಗಿ ಸರ್ಕಾರ ಕೂಡಲೇ ವಕೀಲರಿಗೆ ನೆರವು ನೀಡಲು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ. ಪರಿಷತ್ತಿನ ಮನವಿ ಪರಿಗಣಿಸಿರುವುದಾಗಿ ತಿಳಿಸಿರುವ ಸಿಎಂ ಯಡಿಯೂರಪ್ಪ ನೆರವು ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.