ETV Bharat / state

ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಬದಲಿಸಲು ಸಿಎಂಗೆ ಮನವಿ ಮಾಡಿದ್ದೇನೆ: ನೆಹರು ಓಲೇಕಾರ್

author img

By

Published : Jul 29, 2020, 1:57 PM IST

ರಾಜ್ಯ ಸರ್ಕಾರ ನನಗೆ ಬಾಬು ಜಗಜೀವನ್ ರಾಮ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದೆ. ನನಗೆ ಇದು ಬೇಡ, ಬೇರೆ ನಿಗಮ ನೀಡಿ ಎಂದು ಮುಖ್ಯಮಂತ್ರಿಗೆ ಕೋರಿಕೊಂಡಿದ್ದೇನೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ್​ ಹೇಳಿದ್ದಾರೆ.

ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಬದಲಿಸಲು ಸಿಎಂಗೆ ಮನವಿ
ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಬದಲಿಸಲು ಸಿಎಂಗೆ ಮನವಿ

ಬೆಂಗಳೂರು: ನನಗೆ ನೀಡಿರುವ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಸಮಾಧಾನ ತಂದಿಲ್ಲ. ಈ ಸ್ಥಾನ ಬದಲಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿರುವುದಾಗಿ ಹಾವೇರಿ ಶಾಸಕ ನೆಹರು ಓಲೇಕಾರ್ ತಿಳಿಸಿದ್ದಾರೆ.

ವಿಧಾನಸೌಧ ಮುಂಭಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನನಗೆ ಬಾಬು ಜಗಜೀವನ್ ರಾಮ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದೆ. ನನಗೆ ಇದು ಬೇಡ, ಬೇರೆ ನಿಗಮ ನೀಡಿ ಎಂದು ಮುಖ್ಯಮಂತ್ರಿ ಅವರನ್ನು ಕೋರಿದ್ದೇನೆ. ಇದು ಸಾಧ್ಯವಾಗದಿದ್ದರೆ ಸಚಿವ ಸಂಪುಟದಲ್ಲಿ ಅವಕಾಶ ನೀಡಿ ಎಂದು ಕೇಳಿದ್ದೇನೆ. ಈ ಕುರಿತು ಮಧ್ಯಾಹ್ನ ಮಾತನಾಡೋಣ ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದರು.

ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಬದಲಿಸಲು ಸಿಎಂಗೆ ಮನವಿ

ಬಿಡಿಎ ಅಥವಾ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡಿದರೆ ಉತ್ತಮ ಎಂಬ ಅಭಿಪ್ರಾಯ ನನ್ನದು. ಅದು ಸಾಧ್ಯವಾಗದಿದ್ದರೆ ಶಾಸಕನಾಗಿಯೇ ಮುಂದುವರಿಯುತ್ತೇನೆ. ಈಗಾಗಲೇ ನಮ್ಮ ಜಿಲ್ಲೆಯವರು ಇಬ್ಬರು ಸಚಿವರಿದ್ದಾರೆ. ಇವರ ಜೊತೆ ಇದೀಗ ಶಂಕರ್ ಅವರಿಗೂ ಸಚಿವ ಸ್ಥಾನ ನೀಡುವ ಭರವಸೆ ಕೊಡಲಾಗಿದೆ. ಅವರಿಗೆ ಸಚಿವ ಸ್ಥಾನ ನೀಡಿದರೆ ನಾಲ್ವರಿಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಅಲ್ಲದೆ ನಿರೀಕ್ಷೆ ಮಾಡುವುದು ಕೂಡ ಸರಿಯಲ್ಲ. ಒಂದೊಮ್ಮೆ ಶಂಕರ್ ಗೆ ಸಚಿವ ಸ್ಥಾನ ನೀಡದಿದ್ದರೆ ತಮಗೆ ಅವಕಾಶ ನೀಡುವಂತೆ ಕೋರಿಕೊಳ್ಳುತ್ತೇನೆ ಎಂದು ಓಲೆಕಾರ್​ ಹೇಳಿದ್ರು.

ಸಚಿವ ಸ್ಥಾನ ನೀಡಿದರು ನಿಭಾಯಿಸುತ್ತೇನೆ ಶಾಸಕ ಸಿದ್ದು ಸವದಿ: ತೆರದಾಳ ಕ್ಷೇತ್ರದಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಸಂಪರ್ಕದಿಂದ ಕೊರೊನಾ ಬಂದಿತ್ತು. ಆದಾಗ್ಯೂ ಸಾಕಷ್ಟು ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಸಂಕಷ್ಟದಲ್ಲಿ ಇರುವ ನೇಕಾರರಿಗೆ ಆಹಾರದ ಕಿಟ್ ಗಳನ್ನು ಒದಗಿಸಿದ್ದೇವೆ ಎಂದು ವಿವರಿಸಿದರು.

ನಮ್ಮ ಕ್ಷೇತ್ರದ ಕೆಲಸಗಳಿಗೆ ಸಂಬಂಧಿಸಿದಂತೆ ಸಿಎಂ ಭೇಟಿಗೆ ಬಂದಿದ್ದೇನೆ. ನೇಕಾರ ನಿಗಮಕ್ಕೆ ನೇಕಾರರನ್ನೇ ನೇಮಕ ಮಾಡಲು ಹೇಳಿದ್ದೆವು. ಆದರೂ ನಮ್ಮ ಮೇಲೆ ಪ್ರೀತಿಯಿಂದ ನೇಕಾರ ನಿಗಮಕ್ಕೆ ನನ್ನನ್ನು ನೇಮಕ ಮಾಡಿದ್ದಾರೆ. ನಾವೇ ನೇಕಾರರಿಗೆ ಕೊಡಿ ಅಂತಾ ಹೇಳಿ, ನಾವೇ ಅದಕ್ಕೆ ಅಧ್ಯಕ್ಷರಾಗೋದು ಸರಿಯಲ್ಲ. ಅದಕ್ಕೆ ಬೇಡ ಅಂತಾ ಹೇಳಿದ್ದೇನೆ ಎಂದರು.

ಸಿಎಂ ಭೇಟಿ ಮಾಡಿ ಮನವರಿಕೆ ಮಾಡಿ ಕೊಡುತ್ತೇನೆ. ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ. ನಮಗಂತೂ ಯಾವುದೇ ಅಸಮಾಧಾನ ಇಲ್ಲ. ಪಕ್ಷದ ಕಾರ್ಯಕರ್ತನಾಗಿ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡುತ್ತೇನೆ ಎಂದರು.

ಬೆಂಗಳೂರು: ನನಗೆ ನೀಡಿರುವ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಸಮಾಧಾನ ತಂದಿಲ್ಲ. ಈ ಸ್ಥಾನ ಬದಲಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿರುವುದಾಗಿ ಹಾವೇರಿ ಶಾಸಕ ನೆಹರು ಓಲೇಕಾರ್ ತಿಳಿಸಿದ್ದಾರೆ.

ವಿಧಾನಸೌಧ ಮುಂಭಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನನಗೆ ಬಾಬು ಜಗಜೀವನ್ ರಾಮ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದೆ. ನನಗೆ ಇದು ಬೇಡ, ಬೇರೆ ನಿಗಮ ನೀಡಿ ಎಂದು ಮುಖ್ಯಮಂತ್ರಿ ಅವರನ್ನು ಕೋರಿದ್ದೇನೆ. ಇದು ಸಾಧ್ಯವಾಗದಿದ್ದರೆ ಸಚಿವ ಸಂಪುಟದಲ್ಲಿ ಅವಕಾಶ ನೀಡಿ ಎಂದು ಕೇಳಿದ್ದೇನೆ. ಈ ಕುರಿತು ಮಧ್ಯಾಹ್ನ ಮಾತನಾಡೋಣ ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದರು.

ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಬದಲಿಸಲು ಸಿಎಂಗೆ ಮನವಿ

ಬಿಡಿಎ ಅಥವಾ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡಿದರೆ ಉತ್ತಮ ಎಂಬ ಅಭಿಪ್ರಾಯ ನನ್ನದು. ಅದು ಸಾಧ್ಯವಾಗದಿದ್ದರೆ ಶಾಸಕನಾಗಿಯೇ ಮುಂದುವರಿಯುತ್ತೇನೆ. ಈಗಾಗಲೇ ನಮ್ಮ ಜಿಲ್ಲೆಯವರು ಇಬ್ಬರು ಸಚಿವರಿದ್ದಾರೆ. ಇವರ ಜೊತೆ ಇದೀಗ ಶಂಕರ್ ಅವರಿಗೂ ಸಚಿವ ಸ್ಥಾನ ನೀಡುವ ಭರವಸೆ ಕೊಡಲಾಗಿದೆ. ಅವರಿಗೆ ಸಚಿವ ಸ್ಥಾನ ನೀಡಿದರೆ ನಾಲ್ವರಿಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಅಲ್ಲದೆ ನಿರೀಕ್ಷೆ ಮಾಡುವುದು ಕೂಡ ಸರಿಯಲ್ಲ. ಒಂದೊಮ್ಮೆ ಶಂಕರ್ ಗೆ ಸಚಿವ ಸ್ಥಾನ ನೀಡದಿದ್ದರೆ ತಮಗೆ ಅವಕಾಶ ನೀಡುವಂತೆ ಕೋರಿಕೊಳ್ಳುತ್ತೇನೆ ಎಂದು ಓಲೆಕಾರ್​ ಹೇಳಿದ್ರು.

ಸಚಿವ ಸ್ಥಾನ ನೀಡಿದರು ನಿಭಾಯಿಸುತ್ತೇನೆ ಶಾಸಕ ಸಿದ್ದು ಸವದಿ: ತೆರದಾಳ ಕ್ಷೇತ್ರದಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಸಂಪರ್ಕದಿಂದ ಕೊರೊನಾ ಬಂದಿತ್ತು. ಆದಾಗ್ಯೂ ಸಾಕಷ್ಟು ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಸಂಕಷ್ಟದಲ್ಲಿ ಇರುವ ನೇಕಾರರಿಗೆ ಆಹಾರದ ಕಿಟ್ ಗಳನ್ನು ಒದಗಿಸಿದ್ದೇವೆ ಎಂದು ವಿವರಿಸಿದರು.

ನಮ್ಮ ಕ್ಷೇತ್ರದ ಕೆಲಸಗಳಿಗೆ ಸಂಬಂಧಿಸಿದಂತೆ ಸಿಎಂ ಭೇಟಿಗೆ ಬಂದಿದ್ದೇನೆ. ನೇಕಾರ ನಿಗಮಕ್ಕೆ ನೇಕಾರರನ್ನೇ ನೇಮಕ ಮಾಡಲು ಹೇಳಿದ್ದೆವು. ಆದರೂ ನಮ್ಮ ಮೇಲೆ ಪ್ರೀತಿಯಿಂದ ನೇಕಾರ ನಿಗಮಕ್ಕೆ ನನ್ನನ್ನು ನೇಮಕ ಮಾಡಿದ್ದಾರೆ. ನಾವೇ ನೇಕಾರರಿಗೆ ಕೊಡಿ ಅಂತಾ ಹೇಳಿ, ನಾವೇ ಅದಕ್ಕೆ ಅಧ್ಯಕ್ಷರಾಗೋದು ಸರಿಯಲ್ಲ. ಅದಕ್ಕೆ ಬೇಡ ಅಂತಾ ಹೇಳಿದ್ದೇನೆ ಎಂದರು.

ಸಿಎಂ ಭೇಟಿ ಮಾಡಿ ಮನವರಿಕೆ ಮಾಡಿ ಕೊಡುತ್ತೇನೆ. ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ. ನಮಗಂತೂ ಯಾವುದೇ ಅಸಮಾಧಾನ ಇಲ್ಲ. ಪಕ್ಷದ ಕಾರ್ಯಕರ್ತನಾಗಿ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡುತ್ತೇನೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.