ETV Bharat / state

ಆರೋಗ್ಯ ಸೇತು ಆ್ಯಪ್ ಬಳಕೆದಾರರ ಮಾಹಿತಿ ಸೋರಿಕೆಯಾಗಲ್ಲ : ಹೈಕೋರ್ಟ್‌ಗೆ ಕೇಂದ್ರದ ಸ್ಪಷ್ಟನೆ

author img

By

Published : Nov 10, 2020, 8:31 PM IST

ಆ್ಯಪ್ ಬಳಕೆಯಿಂದ ಬಳಕೆದಾರನ ಎಲ್ಲ ಮಾಹಿತಿಗಳು ಸೋರಿಕೆಯಾಗುವ ಸಾಧ್ಯತೆ ಇದೆ. ಬಳಕೆದಾರ ಎಲ್ಲಿಗೆ ಹೋದ, ಬಂದ ಎಂಬ ವಿವರಗಳೂ ಕೂಡ ದಾಖಲಾಗುತ್ತವೆ. ಇದು ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಲಿದೆ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ ವಿಚಾರಣೆ ಮುಂದೂಡಿತು..

High Court
ಹೈಕೋರ್ಟ್

ಬೆಂಗಳೂರು : ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯವಲ್ಲ. ಹಾಗೆಯೇ ಆ್ಯಪ್ ಬಳಸುವ ಯಾವುದೇ ವ್ಯಕ್ತಿಯ ಖಾಸಗಿ ವಿಚಾರಗಳು ಸೋರಿಕೆಯಾಗಲ್ಲ. ಆ್ಯಪ್ ಜಾರಿಗೆ ಕಾನೂನಿನ ಬೆಂಬಲವಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದೆ.

ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದ್ದ ಕ್ರಮ ಪ್ರಶ್ನಿಸಿ ನಗರದ ಅನಿವರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಕೇಂದ್ರ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು.

ವಿಚಾರಣೆ ಸಂದರ್ಭದಲ್ಲಿ ಕೇಂದ್ರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಆರೋಗ್ಯ ಸೇತು ಮೊಬೈಲ್ ಆ್ಯಪ್ ಬಳಕೆಯನ್ನು ಕೊರೊನಾ ನಿಯಂತ್ರಿಸುವ ಭಾಗವಾಗಿ ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕೇಂದ್ರದ ಈ ನಿರ್ಧಾರಕ್ಕೆ ಕಾನೂನಿನ ಬೆಂಬಲವೂ ಇದೆ.

ಈ ಹಿನ್ನೆಲೆಯಲ್ಲಿ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸಿತ್ತಾದರೂ ಇದೀಗ ಬಳಕೆದಾರರ ಆಯ್ಕೆಗೆ ಬಿಡಲಾಗಿದೆ. ಇನ್ನು, ಅರ್ಜಿದಾರರು ಆರೋಪಿಸಿರುವಂತೆ ಆ್ಯಪ್ ಬಳಕೆದಾರ ಯಾವುದೇ ಮಾಹಿತಿ ಸೋರಿಕೆಯಾಗುವುದಿಲ್ಲ ಎಂದು ವಿವರಿಸಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ಕೇಂದ್ರ ಸರ್ಕಾರ ಆ್ಯಪ್ ಆಯ್ಕೆಯನ್ನು ಕಡ್ಡಾಯವಲ್ಲ ಎಂದು ಹೇಳುತ್ತಿದೆ. ಆದರೆ, ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಆ್ಯಪ್ ಕಡ್ಡಾಯ ಮಾಡಿ ಹೊರಡಿಸಿರುವ 135 ಅಧಿಸೂಚನೆಗಳನ್ನು ಇಂದಿಗೂ ವಾಪಸ್ ಪಡೆದಿಲ್ಲ.

ಆ್ಯಪ್ ಬಳಕೆಯಿಂದ ಬಳಕೆದಾರನ ಎಲ್ಲ ಮಾಹಿತಿಗಳು ಸೋರಿಕೆಯಾಗುವ ಸಾಧ್ಯತೆ ಇದೆ. ಬಳಕೆದಾರ ಎಲ್ಲಿಗೆ ಹೋದ, ಬಂದ ಎಂಬ ವಿವರಗಳೂ ಕೂಡ ದಾಖಲಾಗುತ್ತವೆ. ಇದು ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಲಿದೆ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ ವಿಚಾರಣೆ ಮುಂದೂಡಿತು.

ಬೆಂಗಳೂರು : ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯವಲ್ಲ. ಹಾಗೆಯೇ ಆ್ಯಪ್ ಬಳಸುವ ಯಾವುದೇ ವ್ಯಕ್ತಿಯ ಖಾಸಗಿ ವಿಚಾರಗಳು ಸೋರಿಕೆಯಾಗಲ್ಲ. ಆ್ಯಪ್ ಜಾರಿಗೆ ಕಾನೂನಿನ ಬೆಂಬಲವಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದೆ.

ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದ್ದ ಕ್ರಮ ಪ್ರಶ್ನಿಸಿ ನಗರದ ಅನಿವರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಕೇಂದ್ರ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು.

ವಿಚಾರಣೆ ಸಂದರ್ಭದಲ್ಲಿ ಕೇಂದ್ರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಆರೋಗ್ಯ ಸೇತು ಮೊಬೈಲ್ ಆ್ಯಪ್ ಬಳಕೆಯನ್ನು ಕೊರೊನಾ ನಿಯಂತ್ರಿಸುವ ಭಾಗವಾಗಿ ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕೇಂದ್ರದ ಈ ನಿರ್ಧಾರಕ್ಕೆ ಕಾನೂನಿನ ಬೆಂಬಲವೂ ಇದೆ.

ಈ ಹಿನ್ನೆಲೆಯಲ್ಲಿ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸಿತ್ತಾದರೂ ಇದೀಗ ಬಳಕೆದಾರರ ಆಯ್ಕೆಗೆ ಬಿಡಲಾಗಿದೆ. ಇನ್ನು, ಅರ್ಜಿದಾರರು ಆರೋಪಿಸಿರುವಂತೆ ಆ್ಯಪ್ ಬಳಕೆದಾರ ಯಾವುದೇ ಮಾಹಿತಿ ಸೋರಿಕೆಯಾಗುವುದಿಲ್ಲ ಎಂದು ವಿವರಿಸಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ಕೇಂದ್ರ ಸರ್ಕಾರ ಆ್ಯಪ್ ಆಯ್ಕೆಯನ್ನು ಕಡ್ಡಾಯವಲ್ಲ ಎಂದು ಹೇಳುತ್ತಿದೆ. ಆದರೆ, ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಆ್ಯಪ್ ಕಡ್ಡಾಯ ಮಾಡಿ ಹೊರಡಿಸಿರುವ 135 ಅಧಿಸೂಚನೆಗಳನ್ನು ಇಂದಿಗೂ ವಾಪಸ್ ಪಡೆದಿಲ್ಲ.

ಆ್ಯಪ್ ಬಳಕೆಯಿಂದ ಬಳಕೆದಾರನ ಎಲ್ಲ ಮಾಹಿತಿಗಳು ಸೋರಿಕೆಯಾಗುವ ಸಾಧ್ಯತೆ ಇದೆ. ಬಳಕೆದಾರ ಎಲ್ಲಿಗೆ ಹೋದ, ಬಂದ ಎಂಬ ವಿವರಗಳೂ ಕೂಡ ದಾಖಲಾಗುತ್ತವೆ. ಇದು ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಲಿದೆ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ ವಿಚಾರಣೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.