ETV Bharat / state

ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದವನನ್ನು ಅಪಹರಿಸಿ ಸುಲಿಗೆ ಮಾಡಿದ್ದ ಪರಿಚಿತರ ಬಂಧನ

Arrest of kidnappers of tea seller: ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದಿದ್ದ ಟೀ ಮಾರುವವನನ್ನು ಅಪಹರಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

author img

By

Published : Aug 18, 2023, 1:50 PM IST

ಪರಿಚಿತರ ಬಂಧನ
ಪರಿಚಿತರ ಬಂಧನ

ಬೆಂಗಳೂರು: ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದು ನಗರಕ್ಕೆ ಬಂದಿದ್ದ ರಸ್ತೆ ಟೀ ಮಾರುತ್ತಿದ್ದ ವ್ಯಕ್ತಿಯನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಂಟು ಜನ ಆರೋಪಿಗಳನ್ನು ಹನುಮಂತನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಶ್ರೀನಗರದ ನಿವಾಸಿಯಾಗಿರುವ 32 ವರ್ಷದ ತಿಲಕ್ ಮಣಿಕಂಠ ಎಂಬಾತನನ್ನು ಅಪಹರಿಸಿ ಹದಿನೈದು ಲಕ್ಷ ರೂ. ಸುಲಿಗೆ ಮಾಡಿದ್ದ ಕಾರ್ತಿಕ್, ರಾಹುಲ್ ಎಂಬಾತ ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ.

ನಗರದಲ್ಲಿ ಟೀ ವ್ಯಾಪಾರ ಮಾಡುತ್ತಿದ್ದ ತಿಲಕ್, ಗೋವಾಕ್ಕೆ ತೆರಳಿ ಅಲ್ಲಿ ಕ್ಯಾಸಿನೊ ಆಡಬೇಕು ಎಂದು ಮಹಾದಾಸೆ ಹೊಂದಿದ್ದ. ಜತೆಗೆ ಕ್ಯಾಸಿನೊ ಜೂಜಿನ ಬಗ್ಗೆ ಹೆಚ್ಚು ತಿಳಿದುಕೊಂಡಿದ್ದ. ಇದರಂತೆ 4 ಲಕ್ಷ ಹಣ ಹೊಂದಿಸಿಕೊಂಡು ಸ್ನೇಹಿತರೊಂದಿಗೆ ಕಳೆದ ಜುಲೈ 30 ರಂದು ಬೆಂಗಳೂರಿನಿಂದ ಪಣಜಿಗೆ ವಿಮಾನದ ಮೂಲಕ ಹೋಗಿದ್ದ.

ಮೂರು - ನಾಲ್ಕು ದಿನಗಳು ಅಲ್ಲೇ ಉಳಿದು ಅಲ್ಲಿನ ಪ್ರೈಡ್ ಎಂಬ ಕ್ಯಾಸಿನೊ ಜೂಜು ಆಡಿ 25 ಲಕ್ಷ ಹಣ ಗೆದಿದ್ದ. ಜೂಜಿನಲ್ಲಿ 25 ಲಕ್ಷ ಹಣ ಗೆದ್ದ ವಿಚಾರ ಮನೆಯವರು ಹಾಗೂ ಸ್ನೇಹಿತರೊಂದಿಗೆ ಹಂಚಿಕೊಂಡು ಸಂಭ್ರಮಿಸಿದ್ದ. ಎಂದಿನಂತೆ ತನ್ನ ಕಾಯಕದಲ್ಲಿದ್ದಾಗ ಆಗಸ್ಟ್ 5ರಂದು ಕಾರಿನಲ್ಲಿ ಬಂದಿದ್ದ ಆರೋಪಿಗಳು ತಿಲಕ್​ನನ್ನು ಕಾರಿನಲ್ಲಿ ಬಲವಂತವಾಗಿ ಕೂರಿಸಿ ಅಪಹರಿಸಿದ್ದರು.

ಜ್ಞಾನ ಭಾರತಿ ವಿವಿ ಬಳಿ ನಿರ್ಜನ ಪ್ರದೇಶದಲ್ಲಿ ಕರೆದೊಯ್ದು ಇಸ್ಟೀಟ್ ಆಟದ ಬಗ್ಗೆ ಕ್ಯಾತೆ ತೆಗೆದಿದ್ದರು. ನಂತರ ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದಿರುವ ವಿಚಾರ ನಮಗೆ ಗೊತ್ತಿದೆ ಎಂದು ಹೇಳಿ ಹಣ ಕೊಡುವಂತೆ ಬೆದರಿಸಿ ಹಲ್ಲೆ ಮಾಡಿದ್ದಾರೆ. ಮೊಬೈಲ್ ಕಸಿದುಕೊಂಡು ಬ್ಯಾಂಕ್ ಖಾತೆ ಪರಿಶೀಲಿಸಿದಾಗ 25 ಲಕ್ಷ ಇರುವುದನ್ನು ಅರಿತುಕೊಂಡು ಸುಮಾರು 15 ಲಕ್ಷ ಹಣದವರೆಗೂ ತಮ್ಮ ತಮ್ಮ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದರು.

ಬಳಿಕ ನೆಲಮಂಗಲ ಗೊಲ್ಲಹಳ್ಳಿ ಬಳಿಯಿರುವ ರೆಸಾರ್ಟ್​ಗೆ ಕರೆದೊಯ್ದು ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದಾರೆ. ಮಾರನೇ ದಿನ ಅಪಹರಣಕಾರರು ನಮ್ಮಿಂದ ಇಸ್ಟೀಟ್ ಮೋಸದಾಟದಲ್ಲಿ ಗೆದ್ದಿರುವ ದುಡ್ಡು. ಹೀಗಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದೇವೆ ಎಂದು ಹೇಳಿಸಿ ಮೊಬೈಲ್​ನಲ್ಲಿ ವಿಡಿಯೋ ಮಾಡಿಸಿಕೊಂಡು, ಪೊಲೀಸರಿಗೆ ಏನಾದರೂ ನಮ್ಮ ವಿರುದ್ಧ ದೂರು ನೀಡಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿ ಬೆಂಗಳೂರು ಸಮೀಪ ತಿಲಕ್​ನನ್ನು ಬಿಟ್ಟು ಕಳುಹಿಸಿದ್ದರು.

ಹಣ ಕಳೆದುಕೊಂಡ ಬಗ್ಗೆ ತಿಲಕ್ ಹನುಮಂತ ನಗರ ಠಾಣೆಗೆ ದೂರು ನೀಡಿದ್ದ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಗೋವಾ, ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ರೂ ಹಣ ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವ ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದ: ಬೆಂಗಳೂರಿಗೆ ಬರುತ್ತಿದ್ದಂತೆ ಹಣಕ್ಕಾಗಿ ಪರಿಚಯಸ್ಥರಿಂದಲೇ ಕಿಡ್ನಾಪ್!

ಬೆಂಗಳೂರು: ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದು ನಗರಕ್ಕೆ ಬಂದಿದ್ದ ರಸ್ತೆ ಟೀ ಮಾರುತ್ತಿದ್ದ ವ್ಯಕ್ತಿಯನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಂಟು ಜನ ಆರೋಪಿಗಳನ್ನು ಹನುಮಂತನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಶ್ರೀನಗರದ ನಿವಾಸಿಯಾಗಿರುವ 32 ವರ್ಷದ ತಿಲಕ್ ಮಣಿಕಂಠ ಎಂಬಾತನನ್ನು ಅಪಹರಿಸಿ ಹದಿನೈದು ಲಕ್ಷ ರೂ. ಸುಲಿಗೆ ಮಾಡಿದ್ದ ಕಾರ್ತಿಕ್, ರಾಹುಲ್ ಎಂಬಾತ ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ.

ನಗರದಲ್ಲಿ ಟೀ ವ್ಯಾಪಾರ ಮಾಡುತ್ತಿದ್ದ ತಿಲಕ್, ಗೋವಾಕ್ಕೆ ತೆರಳಿ ಅಲ್ಲಿ ಕ್ಯಾಸಿನೊ ಆಡಬೇಕು ಎಂದು ಮಹಾದಾಸೆ ಹೊಂದಿದ್ದ. ಜತೆಗೆ ಕ್ಯಾಸಿನೊ ಜೂಜಿನ ಬಗ್ಗೆ ಹೆಚ್ಚು ತಿಳಿದುಕೊಂಡಿದ್ದ. ಇದರಂತೆ 4 ಲಕ್ಷ ಹಣ ಹೊಂದಿಸಿಕೊಂಡು ಸ್ನೇಹಿತರೊಂದಿಗೆ ಕಳೆದ ಜುಲೈ 30 ರಂದು ಬೆಂಗಳೂರಿನಿಂದ ಪಣಜಿಗೆ ವಿಮಾನದ ಮೂಲಕ ಹೋಗಿದ್ದ.

ಮೂರು - ನಾಲ್ಕು ದಿನಗಳು ಅಲ್ಲೇ ಉಳಿದು ಅಲ್ಲಿನ ಪ್ರೈಡ್ ಎಂಬ ಕ್ಯಾಸಿನೊ ಜೂಜು ಆಡಿ 25 ಲಕ್ಷ ಹಣ ಗೆದಿದ್ದ. ಜೂಜಿನಲ್ಲಿ 25 ಲಕ್ಷ ಹಣ ಗೆದ್ದ ವಿಚಾರ ಮನೆಯವರು ಹಾಗೂ ಸ್ನೇಹಿತರೊಂದಿಗೆ ಹಂಚಿಕೊಂಡು ಸಂಭ್ರಮಿಸಿದ್ದ. ಎಂದಿನಂತೆ ತನ್ನ ಕಾಯಕದಲ್ಲಿದ್ದಾಗ ಆಗಸ್ಟ್ 5ರಂದು ಕಾರಿನಲ್ಲಿ ಬಂದಿದ್ದ ಆರೋಪಿಗಳು ತಿಲಕ್​ನನ್ನು ಕಾರಿನಲ್ಲಿ ಬಲವಂತವಾಗಿ ಕೂರಿಸಿ ಅಪಹರಿಸಿದ್ದರು.

ಜ್ಞಾನ ಭಾರತಿ ವಿವಿ ಬಳಿ ನಿರ್ಜನ ಪ್ರದೇಶದಲ್ಲಿ ಕರೆದೊಯ್ದು ಇಸ್ಟೀಟ್ ಆಟದ ಬಗ್ಗೆ ಕ್ಯಾತೆ ತೆಗೆದಿದ್ದರು. ನಂತರ ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದಿರುವ ವಿಚಾರ ನಮಗೆ ಗೊತ್ತಿದೆ ಎಂದು ಹೇಳಿ ಹಣ ಕೊಡುವಂತೆ ಬೆದರಿಸಿ ಹಲ್ಲೆ ಮಾಡಿದ್ದಾರೆ. ಮೊಬೈಲ್ ಕಸಿದುಕೊಂಡು ಬ್ಯಾಂಕ್ ಖಾತೆ ಪರಿಶೀಲಿಸಿದಾಗ 25 ಲಕ್ಷ ಇರುವುದನ್ನು ಅರಿತುಕೊಂಡು ಸುಮಾರು 15 ಲಕ್ಷ ಹಣದವರೆಗೂ ತಮ್ಮ ತಮ್ಮ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದರು.

ಬಳಿಕ ನೆಲಮಂಗಲ ಗೊಲ್ಲಹಳ್ಳಿ ಬಳಿಯಿರುವ ರೆಸಾರ್ಟ್​ಗೆ ಕರೆದೊಯ್ದು ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದಾರೆ. ಮಾರನೇ ದಿನ ಅಪಹರಣಕಾರರು ನಮ್ಮಿಂದ ಇಸ್ಟೀಟ್ ಮೋಸದಾಟದಲ್ಲಿ ಗೆದ್ದಿರುವ ದುಡ್ಡು. ಹೀಗಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದೇವೆ ಎಂದು ಹೇಳಿಸಿ ಮೊಬೈಲ್​ನಲ್ಲಿ ವಿಡಿಯೋ ಮಾಡಿಸಿಕೊಂಡು, ಪೊಲೀಸರಿಗೆ ಏನಾದರೂ ನಮ್ಮ ವಿರುದ್ಧ ದೂರು ನೀಡಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿ ಬೆಂಗಳೂರು ಸಮೀಪ ತಿಲಕ್​ನನ್ನು ಬಿಟ್ಟು ಕಳುಹಿಸಿದ್ದರು.

ಹಣ ಕಳೆದುಕೊಂಡ ಬಗ್ಗೆ ತಿಲಕ್ ಹನುಮಂತ ನಗರ ಠಾಣೆಗೆ ದೂರು ನೀಡಿದ್ದ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಗೋವಾ, ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ರೂ ಹಣ ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಟೀ ಮಾರುವವ ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದ: ಬೆಂಗಳೂರಿಗೆ ಬರುತ್ತಿದ್ದಂತೆ ಹಣಕ್ಕಾಗಿ ಪರಿಚಯಸ್ಥರಿಂದಲೇ ಕಿಡ್ನಾಪ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.