ಬೆಂಗಳೂರು: ಲಾಕ್ ಡೌನ್ ವೇಳೆ ಅನಧಿಕೃತವಾಗಿ ನಡೆಯುತ್ತಿದ್ದ ಹುಕ್ಕಾ ಬಾರ್ ಮೇಲೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.
ಲಾಕ್ ಡೌನ್ ಆದೇಶ ಇದ್ದರೂ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಮಾಲಿಕ ಹಾಗೂ ಮ್ಯಾನೇಜರ್ ಸೇರಿದಂತೆ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
ಸೂರಜ್ ಕುಮಾರ್ (29), ಲಕ್ಷ್ಮಣ್ (26) ಹಾಗೂ ಜೀತು (21) ಬಂಧಿತ ಆರೋಪಿಗಳು. ಇವರಿಂದ ಹುಕ್ಕಾ ಪಾಟ್ಸ್ , ತಂಬಾಕು, ಲಿಕ್ಕರ್ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬನಶಂಕರಿ ಠಾಣೆಯಲ್ಲಿ ಆರೋಪಿಗಳ ವಿರುದ್ದ ಸಿಗರೇಟ್ & ತಂಬಾಕು ಉತ್ಪನ್ನಗಳ ಕಾಯ್ದೆ, ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ ತನಿಖೆ ಮುಂದುವರೆಸಿದ್ದಾರೆ.