ETV Bharat / state

'ರಾಷ್ಟ್ರೀಯ ಶಿಕ್ಷಣ ನೀತಿ' ಆಳವಾಗಿ ಅಧ್ಯಯನ ಮಾಡಿ ನಂತರ ವಿರೋಧಿಸಿ: ಪ್ರತಿಪಕ್ಷಗಳಿಗೆ ಅಶ್ವತ್ಥ​​ ನಾರಾಯಣ್ ತಿರುಗೇಟು

author img

By

Published : Aug 19, 2021, 10:33 PM IST

ರಾಷ್ಟ್ರೀಯ ಶಿಕ್ಷಣ ನೀತಿಯ ಸ್ವರೂಪದ ಬಗ್ಗೆ ತಿಳಿಯದವರು ಮೊದಲು ನೀತಿಯನ್ನು ಆಳವಾಗಿ ಅಧ್ಯಯನ ಮಾಡಿ ಮಾತನಾಡಲಿ ಎಂದು ಶಿಕ್ಷಣ ನೀತಿ ವಿರೋಧಿಸುತ್ತಿರುವ ಪ್ರತಿಪಕ್ಷಗಳ ನಾಯಕರಿಗೆ ಸಚಿವ ಡಾ.ಅಶ್ವತ್ಥ​ ನಾರಾಯಣ್ ತಿರುಗೇಟು ನೀಡಿದ್ದಾರೆ.

Ashwath narayan on national education policy
ಬೆಂಗಳೂರಿನಲ್ಲಿ ಸಂವಾದ ಕಾರ್ಯಕ್ರಮ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಸ್ವರೂಪ ಏನು ಎನ್ನುವುದೇ ಕೆಲವರಿಗೆ ಅರ್ಥವಾಗುತ್ತಿಲ್ಲ. ಇಡೀ ದೇಶಕ್ಕೆ ಹೊಸ ತಿರುವು, ವೇಗ ನೀಡಬಲ್ಲ ಶಿಕ್ಷಣ ನೀತಿಯ ಬಗ್ಗೆ ತಿಳಿಯುತ್ತಿಲ್ಲ. ಅಂಥವರು ಮೊದಲು ನೀತಿಯನ್ನು ಆಳವಾಗಿ ಅಧ್ಯಯನ ಮಾಡಿ ಮಾತನಾಡಲಿ ಎಂದು ಶಿಕ್ಷಣ ನೀತಿ ವಿರೋಧಿಸುತ್ತಿರುವ ಪ್ರತಿಪಕ್ಷಗಳ ನಾಯಕರಿಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ​ ನಾರಾಯಣ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಂವಾದ ಕಾರ್ಯಕ್ರಮ

ನಗರದ ಖಾಸಗಿ ಹೋಟೆಲ್​​ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ನಿಮಿತ್ತ ನಡೆದ ಬುದ್ಧಿಜೀವಿಗಳು ಮತ್ತು ವಿವಿಧ ಕ್ಷೇತ್ರಗಳ ವೃತ್ತಿಪರರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಷ್ಟ್ರೀಯ ಶಿಕ್ಷಣ ನೀತಿಯಿಂದ ನಮ್ಮ ದೇಶದ ಬೆಳವಣಿಗೆಯ ಸ್ವರೂಪವೇ ಬದಲಾಗಲಿದ್ದು, ವಿನಾಕಾರಣ ಈ ನೀತಿಯ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ ಎಂದರು.

ಶಿಕ್ಷಣ ನೀತಿ ರಚನೆಯ ಹಿಂದೆ ಅನೇಕ ಶ್ರೇಷ್ಠ ಮಿದುಳುಗಳು ಕೆಲಸ ಮಾಡಿವೆ. ಕನ್ನಡಿಗರೇ ಆದ ಡಾ.ಕಸ್ತೂರಿ ರಂಗನ್ ಅವರ ನೇತೃತ್ವದಲ್ಲಿ ನಮ್ಮ ನಾಡಿನ ಹೆಸರಾಂತ ತಜ್ಞರು, ವಿಜ್ಞಾನಿಗಳು, ಶಿಕ್ಷಣ ಕ್ಷೇತ್ರದ ನಿಪುಣರು ಅಹರ್ನಿಷಿ ದುಡಿದಿದ್ದಾರೆ. ಐದೂವರೇ ವರ್ಷ ಕಾಲ ನಿರಂತರ ಅಧ್ಯಯನ, ಸಂವಾದದಿಂದ ಈ ನೀತಿ ರೂಪಿತವಾಗಿದೆ ಎಂದರು.

35 ವರ್ಷಗಳ ಬಳಿಕ ಹೊಸ ಶಿಕ್ಷಣ ನೀತಿ

ಸುಮಾರು 35 ವರ್ಷಗಳ ನಂತರ ನಮ್ಮ ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ರೂಪಿತವಾಗಿದೆ. ಈ ಶಿಕ್ಷಣ ನೀತಿಯು ʼರಾಷ್ಟ್ರೀಯ ಅಗತ್ಯʼವೇ ಆಗಿತ್ತು ಎಂದು ನಿರ್ವಿವಾದವಾಗಿ ನಾನು ಹೇಳಬಲ್ಲೆ. ಸಾಂಪ್ರದಾಯಿಕವಾದ ಶಿಕ್ಷಣ ಪದ್ಧತಿಯಿಂದ ಕುಶಲತೆ ಹಾಗೂ ಜ್ಞಾನಕ್ಕೆ ಬರ ಉಂಟಾಗಿತ್ತು. ಅಂಥ ಕೊರತೆಯನ್ನು ಶಿಕ್ಷಣ ನೀತಿ ನೀಗಿಸುತ್ತಿದೆ ಎಂದು ಅವರು ಪ್ರತಿಪಾದಿಸಿದರು.

ವಿದ್ಯಾರ್ಥಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ

ಇದುವರೆಗಿನ ಶಿಕ್ಷಣ ಪದ್ಧತಿ ಹೇಗಿತ್ತೆಂದರೆ, ನಾವು ಹೇಳಿದ್ದನ್ನು ಮಕ್ಕಳು ಕಲಿಯುತ್ತಿದ್ದರು. ಈ ಸಾಂಪ್ರದಾಯಿಕ ಪದ್ಧತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ತಿಲಾಂಜಲಿ ಇಡುತ್ತಿದೆ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಂಪೂರ್ಣ ಸ್ವಾತಂತ್ರ್ಯವಿದೆ. ಬಹು ಶಿಸ್ತಿನ, ಬಹು ಆಯ್ಕೆಯ ವಿಷಯಾಧಾರಿತ ಕಲಿಕೆಯೇ ಈ ಶಿಕ್ಷಣ ನೀತಿಯ ಆತ್ಮ ಎಂದ ಡಾ. ಅಶ್ವತ್ಥ​ ನಾರಾಯಣ್​, ಮಾತೃಭಾಷೆ ಕಲಿಕೆಗೂ ಇಲ್ಲಿ ಪ್ರಾಧಾನ್ಯತೆ ಕೊಡಲಾಗಿದೆ ಎಂದು ಹೇಳಿದರು.

ಸಂವಾದದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ಮಾತನಾಡಿದರು. ಜತೆಗೆ ವಿವಿಧ ಕ್ಷೇತ್ರಗಳ ಗಣ್ಯರು, ತಂತ್ರಜ್ಞರು, ಶಿಕ್ಷಣ ತಜ್ಞರ ಜತೆ ಸಂವಾದ ನಡೆಸಿದರು.

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಸ್ವರೂಪ ಏನು ಎನ್ನುವುದೇ ಕೆಲವರಿಗೆ ಅರ್ಥವಾಗುತ್ತಿಲ್ಲ. ಇಡೀ ದೇಶಕ್ಕೆ ಹೊಸ ತಿರುವು, ವೇಗ ನೀಡಬಲ್ಲ ಶಿಕ್ಷಣ ನೀತಿಯ ಬಗ್ಗೆ ತಿಳಿಯುತ್ತಿಲ್ಲ. ಅಂಥವರು ಮೊದಲು ನೀತಿಯನ್ನು ಆಳವಾಗಿ ಅಧ್ಯಯನ ಮಾಡಿ ಮಾತನಾಡಲಿ ಎಂದು ಶಿಕ್ಷಣ ನೀತಿ ವಿರೋಧಿಸುತ್ತಿರುವ ಪ್ರತಿಪಕ್ಷಗಳ ನಾಯಕರಿಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ​ ನಾರಾಯಣ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಂವಾದ ಕಾರ್ಯಕ್ರಮ

ನಗರದ ಖಾಸಗಿ ಹೋಟೆಲ್​​ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ನಿಮಿತ್ತ ನಡೆದ ಬುದ್ಧಿಜೀವಿಗಳು ಮತ್ತು ವಿವಿಧ ಕ್ಷೇತ್ರಗಳ ವೃತ್ತಿಪರರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಷ್ಟ್ರೀಯ ಶಿಕ್ಷಣ ನೀತಿಯಿಂದ ನಮ್ಮ ದೇಶದ ಬೆಳವಣಿಗೆಯ ಸ್ವರೂಪವೇ ಬದಲಾಗಲಿದ್ದು, ವಿನಾಕಾರಣ ಈ ನೀತಿಯ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ ಎಂದರು.

ಶಿಕ್ಷಣ ನೀತಿ ರಚನೆಯ ಹಿಂದೆ ಅನೇಕ ಶ್ರೇಷ್ಠ ಮಿದುಳುಗಳು ಕೆಲಸ ಮಾಡಿವೆ. ಕನ್ನಡಿಗರೇ ಆದ ಡಾ.ಕಸ್ತೂರಿ ರಂಗನ್ ಅವರ ನೇತೃತ್ವದಲ್ಲಿ ನಮ್ಮ ನಾಡಿನ ಹೆಸರಾಂತ ತಜ್ಞರು, ವಿಜ್ಞಾನಿಗಳು, ಶಿಕ್ಷಣ ಕ್ಷೇತ್ರದ ನಿಪುಣರು ಅಹರ್ನಿಷಿ ದುಡಿದಿದ್ದಾರೆ. ಐದೂವರೇ ವರ್ಷ ಕಾಲ ನಿರಂತರ ಅಧ್ಯಯನ, ಸಂವಾದದಿಂದ ಈ ನೀತಿ ರೂಪಿತವಾಗಿದೆ ಎಂದರು.

35 ವರ್ಷಗಳ ಬಳಿಕ ಹೊಸ ಶಿಕ್ಷಣ ನೀತಿ

ಸುಮಾರು 35 ವರ್ಷಗಳ ನಂತರ ನಮ್ಮ ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ರೂಪಿತವಾಗಿದೆ. ಈ ಶಿಕ್ಷಣ ನೀತಿಯು ʼರಾಷ್ಟ್ರೀಯ ಅಗತ್ಯʼವೇ ಆಗಿತ್ತು ಎಂದು ನಿರ್ವಿವಾದವಾಗಿ ನಾನು ಹೇಳಬಲ್ಲೆ. ಸಾಂಪ್ರದಾಯಿಕವಾದ ಶಿಕ್ಷಣ ಪದ್ಧತಿಯಿಂದ ಕುಶಲತೆ ಹಾಗೂ ಜ್ಞಾನಕ್ಕೆ ಬರ ಉಂಟಾಗಿತ್ತು. ಅಂಥ ಕೊರತೆಯನ್ನು ಶಿಕ್ಷಣ ನೀತಿ ನೀಗಿಸುತ್ತಿದೆ ಎಂದು ಅವರು ಪ್ರತಿಪಾದಿಸಿದರು.

ವಿದ್ಯಾರ್ಥಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ

ಇದುವರೆಗಿನ ಶಿಕ್ಷಣ ಪದ್ಧತಿ ಹೇಗಿತ್ತೆಂದರೆ, ನಾವು ಹೇಳಿದ್ದನ್ನು ಮಕ್ಕಳು ಕಲಿಯುತ್ತಿದ್ದರು. ಈ ಸಾಂಪ್ರದಾಯಿಕ ಪದ್ಧತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ತಿಲಾಂಜಲಿ ಇಡುತ್ತಿದೆ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಂಪೂರ್ಣ ಸ್ವಾತಂತ್ರ್ಯವಿದೆ. ಬಹು ಶಿಸ್ತಿನ, ಬಹು ಆಯ್ಕೆಯ ವಿಷಯಾಧಾರಿತ ಕಲಿಕೆಯೇ ಈ ಶಿಕ್ಷಣ ನೀತಿಯ ಆತ್ಮ ಎಂದ ಡಾ. ಅಶ್ವತ್ಥ​ ನಾರಾಯಣ್​, ಮಾತೃಭಾಷೆ ಕಲಿಕೆಗೂ ಇಲ್ಲಿ ಪ್ರಾಧಾನ್ಯತೆ ಕೊಡಲಾಗಿದೆ ಎಂದು ಹೇಳಿದರು.

ಸಂವಾದದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ಮಾತನಾಡಿದರು. ಜತೆಗೆ ವಿವಿಧ ಕ್ಷೇತ್ರಗಳ ಗಣ್ಯರು, ತಂತ್ರಜ್ಞರು, ಶಿಕ್ಷಣ ತಜ್ಞರ ಜತೆ ಸಂವಾದ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.