ETV Bharat / state

ಬೆಂಗಳೂರಿನಲ್ಲಿ ನಕಲಿ ಅಂಕ ಪಟ್ಟಿ ದಂಧೆ.. ಸಿಸಿಬಿ ಪೊಲೀಸರಿಂದ ದಾಳಿ - Attack by CCB police

ನಕಲಿ ಅಂಕ ಪಟ್ಟಿ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಮಹಾಲಕ್ಷ್ಮಿ ಲೇಔಟ್‌ನ ಶ್ರೀ ವೆಂಕಟೇಶ್ವರ ಇನ್‍ಸ್ಟಿಟ್ಯೂಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಆಂಧ್ರ ಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ
ಆಂಧ್ರ ಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ
author img

By

Published : Dec 11, 2019, 12:00 PM IST

ಬೆಂಗಳೂರು: ನಕಲಿ ಅಂಕ ಪಟ್ಟಿ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಮಹಾಲಕ್ಷ್ಮಿ ಲೇಔಟ್‌ನ ಶ್ರೀ ವೆಂಕಟೇಶ್ವರ ಇನ್‍ಸ್ಟಿಟ್ಯೂಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಅಪಾರ ಪ್ರಮಾಣದ ನಕಲಿ ಅಂ‌ಕ ಪಟ್ಟಿಗಳು ಪತ್ತೆಯಾಗಿದ್ದು, ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ ಎಂಬುವವರನ್ನು ಬಂಧಿಸಿದ್ದಾರೆ.

ಇಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳ ನಕಲಿ ಅಂಕಪಟ್ಟಿಯನ್ನು ಮಾಡಿ ಕೊಡಲಾಗುತಿತ್ತು. ಒಂದು ವಿಷಯಕ್ಕೆ 15 ಸಾವಿರದಿಂದ 3 ಲಕ್ಷದವರೆಗೂ ಹಣ ವಸೂಲಿ ಮಾಡಲಾಗುತಿತ್ತು ಎಂದು ತಿಳಿದು ಬಂದಿದೆ.

ಶ್ರೀ ವೆಂಕಟೇಶ್ವರ ಇನ್‍ಸ್ಟಿಟ್ಯೂಟ್ ಮೇಲೆ ಸಿಸಿಬಿ ಪೊಲೀಸರ ದಾಳಿ

ಕಾರ್ಲೆಕ್ಸ್ ಟೀಚರ್ ಯುನಿವರ್ಸಿಟಿ, ನಾರ್ತ್ ಈಸ್ಟ್ ಯುನಿವರ್ಸಿಟಿ, ಸ್ವಾಮಿ ವಿವೇಕಾನಂದ ಯುನಿವರ್ಸಿಟಿಗಳ ಅಂಕ ಪಟ್ಟಿಗಳನ್ನು ಹಣ ತೆಗೆದುಕೊಂಡು ಕೊಡಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ತಂಡ, ಸಾವಿರಾರು ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದೆ. ಈ ಕುರಿತಾಗಿ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ನಕಲಿ ಅಂಕ ಪಟ್ಟಿ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಮಹಾಲಕ್ಷ್ಮಿ ಲೇಔಟ್‌ನ ಶ್ರೀ ವೆಂಕಟೇಶ್ವರ ಇನ್‍ಸ್ಟಿಟ್ಯೂಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಅಪಾರ ಪ್ರಮಾಣದ ನಕಲಿ ಅಂ‌ಕ ಪಟ್ಟಿಗಳು ಪತ್ತೆಯಾಗಿದ್ದು, ಆಂಧ್ರಪ್ರದೇಶ ಮೂಲದ ಶ್ರೀನಿವಾಸ್ ರೆಡ್ಡಿ ಎಂಬುವವರನ್ನು ಬಂಧಿಸಿದ್ದಾರೆ.

ಇಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳ ನಕಲಿ ಅಂಕಪಟ್ಟಿಯನ್ನು ಮಾಡಿ ಕೊಡಲಾಗುತಿತ್ತು. ಒಂದು ವಿಷಯಕ್ಕೆ 15 ಸಾವಿರದಿಂದ 3 ಲಕ್ಷದವರೆಗೂ ಹಣ ವಸೂಲಿ ಮಾಡಲಾಗುತಿತ್ತು ಎಂದು ತಿಳಿದು ಬಂದಿದೆ.

ಶ್ರೀ ವೆಂಕಟೇಶ್ವರ ಇನ್‍ಸ್ಟಿಟ್ಯೂಟ್ ಮೇಲೆ ಸಿಸಿಬಿ ಪೊಲೀಸರ ದಾಳಿ

ಕಾರ್ಲೆಕ್ಸ್ ಟೀಚರ್ ಯುನಿವರ್ಸಿಟಿ, ನಾರ್ತ್ ಈಸ್ಟ್ ಯುನಿವರ್ಸಿಟಿ, ಸ್ವಾಮಿ ವಿವೇಕಾನಂದ ಯುನಿವರ್ಸಿಟಿಗಳ ಅಂಕ ಪಟ್ಟಿಗಳನ್ನು ಹಣ ತೆಗೆದುಕೊಂಡು ಕೊಡಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ತಂಡ, ಸಾವಿರಾರು ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದೆ. ಈ ಕುರಿತಾಗಿ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿವಿಧ
ಪ್ರತಿಷ್ಟಿತ ಓಪನ್ ಯೂನಿವರ್ಸಿಟಿಗಳ ನಕಲಿ ಮಾರ್ಕ್ಸ್ ಕಾರ್ಡ್ ನೀಡುತ್ತಿದ್ದ ಅಷಾಮಿ
ಸದ್ಯ ಸಿಸಿಬಿ ಪೊಲೀಸರ ದಾಳಿ

ವಿವಿಧ ಖಾಸಗಿ ಪ್ರತಿಷ್ಟಿತ ಓಪನ್ ಯೂನಿವರ್ಸಿಟಿ ಗಳಿಗೆ ಸಂಬಂಧಿಸಿದ ನಕಲಿ ಅಂಕಪಟ್ಟಿಗಳನ್ನ ಅಸಲಿ ಎಂದು ನೀಡಿ ಮೋಸ ಮಾಡುತ್ತಿದ್ದಂತಹ ಇನ್ಸ್ ಸ್ಟಿಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಹಾಲಕ್ಷ್ಮೀ ಲೇಔಟ್ ನಲ್ಲಿರೋ ಶ್ರೀ ವೆಂಕಟೇಶ್ವರ ಇನ್ಸ್ ಟ್ಯೂಟ್ ಮೇಲೆ ದಾಳಿ ‌ಮಾಡಿ ಆಂಧ್ರ ಮೂಲದ ಶ್ರೀನಿವಾಸ್ ರೆಡ್ಡಿಗೆ ಬಂಧಿಸಿದ್ದಾರೆ.

ಶ್ರೀನಿವಾಸ್ ರೆಡ್ಡಿ ನಾಮಕವ್ಯಸ್ತೆಗೆ ಎಕ್ಸಾಂ ಬರೆಸುವ ರೀತಿ ಬರೆಸಿ 15 ಸಾವಿರ ದಿಂದ 3 ಲಕ್ಷದವರೆಗೆ ಹಣ‌ಪಡೆದು ಆಂಧ್ರ ಹಾಗೂ ರಾಜ್ಯದ ಅನೇಕ ವಿಶ್ವವಿದ್ಯಾಲಯದ ಕಾರ್ಲೆಕ್ಸ್ ಟೇಚರ್ ಯುನಿವರ್ಸಿಟಿ ,ನಾರ್ತ್ ಈಸ್ಟ್ ಯುನಿವರ್ಸಿಟಿ ಸ್ವಾಮಿ ವಿವೇಕಾನಂದ ಯುನಿವರ್ಸಿಟಿ ಹೀಗೆ ಹಲವು ಇನ್ಸ್ ಟ್ಯೂಟ್ ಹೆಸರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿ ಮಾಡಿ ಎಸ್ಎಸ್ಎಲ್ ಸಿ, ಪಿಯುಸಿ, ಡಿಗ್ರಿ,ಮಾಸ್ಟರ್ ಡಿಗ್ರಿ ಸೇರಿ ಎಲ್ಲಾ ಡಿಗ್ರಿಗಳ ನಕಲಿ ಅಂಕ ಪಟ್ಟಿ ನೀಡುತ್ತಿದ್ದ.

ಇನ್ನು ಸಿಸಿಬಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ
ಸಾವಿರಾರು ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆ ಮಾಡಿ ಶ್ರೀನಿವಾಸ್ ಹಾಗೂ ಇನ್ಸ್ ಟ್ಯೂಟ್ ನಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು, ಕಂಪ್ಯೂಟರ್ ಹೀಗೆ ಹಲವಾರು ದಾಖಲೆ ವಶಪಡಿಸಿ
ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಮುಂದುವರೆಸಿದ್ದಾರೆBody:KN_BNG_CCB_RAID_7204498Conclusion:KN_BNG_CCB_RAID_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.