ETV Bharat / state

ಕೈ ಮುಖಂಡನ ಮೇಲೆ ದಾಳಿ ಯತ್ನ: ಮೂವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

author img

By

Published : Dec 25, 2022, 1:20 PM IST

Updated : Dec 25, 2022, 1:56 PM IST

ಕಾಂಗ್ರೆಸ್​ ಮುಖಂಡರೊಬ್ಬರ ಮೇಲೆ ಹಲ್ಲೆ ನಡೆಸಲು ಆಟೋದಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಒಬ್ಬ ಪರಾರಿಯಾಗಿದ್ದಾನೆ.

Attempted attack on Congress leader
ಕಾಂಗ್ರೆಸ್ ಮುಖಂಡನ ಮೇಲೆ ದಾಳಿಗೆ ಯತ್ನ

ಕಾಂಗ್ರೆಸ್ ಮುಖಂಡನ ಮೇಲೆ ದಾಳಿಗೆ ಯತ್ನ

ಬೆಂಗಳೂರು: ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಮೇಲೆ ಹಲ್ಲೆಗೆ ಮಾರಕಾಸ್ತ್ರಗಳೊಂದಿಗೆ ಸಜ್ಜಾಗಿ ಬಂದಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ತಡರಾತ್ರಿ ಜೆ ಜೆ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾತ್ರಿ 10 ಗಂಟೆಯ ಸುಮಾರಿಗೆ ಜೆ ಜೆ ನಗರ ಠಾಣಾ ವ್ಯಾಪ್ತಿಯಲ್ಲಿರುವ ಅಲ್ತಾಫ್ ಖಾನ್ ಮನೆ ಬಳಿ ಚಾಕು, ಬ್ಲೇಡ್​ಗಳೊಂದಿಗೆ ಆಟೋದಲ್ಲಿ ಬಂದಿದ್ದ ನಾಲ್ವರು, ಹೊಂಚು ಹಾಕಿ ಕುಳಿತಿದ್ದರು. ಬಳಿಕ 'ಅಲ್ತಾಫ್ ಮನೆಯಿಂದ ಹೊರ ಬರ್ಲಿಲ್ಲ, ಬಚಾವ್ ಆದ' ಎಂದು ಮಾತನಾಡಿಕೊಳ್ಳುತ್ತಿದ್ದರು. ಆ ಮಾತು ಕೇಳಿಸಿಕೊಂಡು ಪರಾರಿಯಾಗುತ್ತಿದ್ದ ಆಟೋ ಬೆನ್ನಟ್ಟಿದ ಸ್ಥಳೀಯರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು : ಅಸ್ಸೋಂ ಕೂಲಿ ಕಾರ್ಮಿಕರಿಂದ ತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ ಆರೋಪ

ಕಾಂಗ್ರೆಸ್ ಮುಖಂಡನ ಮೇಲೆ ದಾಳಿಗೆ ಯತ್ನ

ಬೆಂಗಳೂರು: ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಮೇಲೆ ಹಲ್ಲೆಗೆ ಮಾರಕಾಸ್ತ್ರಗಳೊಂದಿಗೆ ಸಜ್ಜಾಗಿ ಬಂದಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ತಡರಾತ್ರಿ ಜೆ ಜೆ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾತ್ರಿ 10 ಗಂಟೆಯ ಸುಮಾರಿಗೆ ಜೆ ಜೆ ನಗರ ಠಾಣಾ ವ್ಯಾಪ್ತಿಯಲ್ಲಿರುವ ಅಲ್ತಾಫ್ ಖಾನ್ ಮನೆ ಬಳಿ ಚಾಕು, ಬ್ಲೇಡ್​ಗಳೊಂದಿಗೆ ಆಟೋದಲ್ಲಿ ಬಂದಿದ್ದ ನಾಲ್ವರು, ಹೊಂಚು ಹಾಕಿ ಕುಳಿತಿದ್ದರು. ಬಳಿಕ 'ಅಲ್ತಾಫ್ ಮನೆಯಿಂದ ಹೊರ ಬರ್ಲಿಲ್ಲ, ಬಚಾವ್ ಆದ' ಎಂದು ಮಾತನಾಡಿಕೊಳ್ಳುತ್ತಿದ್ದರು. ಆ ಮಾತು ಕೇಳಿಸಿಕೊಂಡು ಪರಾರಿಯಾಗುತ್ತಿದ್ದ ಆಟೋ ಬೆನ್ನಟ್ಟಿದ ಸ್ಥಳೀಯರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು : ಅಸ್ಸೋಂ ಕೂಲಿ ಕಾರ್ಮಿಕರಿಂದ ತೋಟದ ಮಾಲೀಕನ ಮೇಲೆ ಹಲ್ಲೆಗೆ ಯತ್ನ ಆರೋಪ

Last Updated : Dec 25, 2022, 1:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.