ETV Bharat / state

ಸಂಸದೀಯ ಮಂಡಳಿಯಲ್ಲಿ ಅವಕಾಶ: ಬಿಜೆಪಿ, ಆರ್​ಎಸ್​ಎಸ್ ಕಚೇರಿಗೆ ಬಿಎಸ್​ವೈ ಭೇಟಿ - State BJP Office Jagannath Bhavan

ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಸ್ಥಾನ ಸಿಕ್ಕ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜತೆ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್​ವೈ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್​ವೈ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
author img

By

Published : Aug 17, 2022, 10:52 PM IST

ಬೆಂಗಳೂರು: ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಸ್ಥಾನ ಸಿಕ್ಕ ಬೆನ್ನಲ್ಲೇ ಪಕ್ಷದ ಕಚೇರಿಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ನಂತರ ಕೇಶವಕೃಪಾಗೆ ತೆರಳಿ ಸಂಘ ಪರಿವಾರದ ಹಿರಿಯರ ಜೊತೆ ಮಾತುಕತೆ ನಡೆಸಿದರು.

ಅಧಿಕೃತ ನಿವಾಸ ಕಾವೇರಿಯಿಂದ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಆಗಮಿಸಿದರು. ಯಡಿಯೂರಪ್ಪ ಜೊತೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಟ್ಟಿಗೆ ಒಂದೇ ಕಾರಿನಲ್ಲಿ ಆಗಮಿಸಿದರು. ಬಿಜೆಪಿ ಕಚೇರಿಯಲ್ಲಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ನಾಯಕರು ನಂತರ ಕೆಲಕಾಲ ಅನೌಪಚಾರಿಕ ಮಾತುಕತೆ ನಡೆಸಿದರು.

ಬಳಿಕ ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಕಟೀಲ್ ಸೇರಿಕೊಂಡು ದೇಶ ವಿಭಜನೆಯ ಕರಾಳ ನೆನಪು ಕುರಿತ ಚಿತ್ರಪ್ರದರ್ಶನ ವೀಕ್ಷಿಸಿದರು. ನಂತರ ಮೂವರೂ ನಾಯಕರು ಒಂದೇ ಕಾರಿನಲ್ಲಿ ಚಾಮರಾಜಪೇಟೆಯಲ್ಲಿರುವ ಆರ್​ಎಸ್ಎಸ್ ಕಚೇರಿ ಕೇಶವಕೃಪಾಗೆ ತೆರಳಿದರು. ಸಂಘ ಪರಿವಾರದ ಹಿರಿಯರ ಜೊತೆ ಮಾತುಕತೆ ನಡೆಸಿದರು.

ಓದಿ: ಸಂಸದೀಯ ಮಂಡಳಿಯಲ್ಲಿ ಬಿಎಸ್​ವೈಗೆ ಸ್ಥಾನ: ಪಕ್ಷ, ಸರ್ಕಾರದ ಹುಮ್ಮಸ್ಸು ಇಮ್ಮಡಿ ಎಂದ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಸ್ಥಾನ ಸಿಕ್ಕ ಬೆನ್ನಲ್ಲೇ ಪಕ್ಷದ ಕಚೇರಿಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ ನಂತರ ಕೇಶವಕೃಪಾಗೆ ತೆರಳಿ ಸಂಘ ಪರಿವಾರದ ಹಿರಿಯರ ಜೊತೆ ಮಾತುಕತೆ ನಡೆಸಿದರು.

ಅಧಿಕೃತ ನಿವಾಸ ಕಾವೇರಿಯಿಂದ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಆಗಮಿಸಿದರು. ಯಡಿಯೂರಪ್ಪ ಜೊತೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಟ್ಟಿಗೆ ಒಂದೇ ಕಾರಿನಲ್ಲಿ ಆಗಮಿಸಿದರು. ಬಿಜೆಪಿ ಕಚೇರಿಯಲ್ಲಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ನಾಯಕರು ನಂತರ ಕೆಲಕಾಲ ಅನೌಪಚಾರಿಕ ಮಾತುಕತೆ ನಡೆಸಿದರು.

ಬಳಿಕ ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಕಟೀಲ್ ಸೇರಿಕೊಂಡು ದೇಶ ವಿಭಜನೆಯ ಕರಾಳ ನೆನಪು ಕುರಿತ ಚಿತ್ರಪ್ರದರ್ಶನ ವೀಕ್ಷಿಸಿದರು. ನಂತರ ಮೂವರೂ ನಾಯಕರು ಒಂದೇ ಕಾರಿನಲ್ಲಿ ಚಾಮರಾಜಪೇಟೆಯಲ್ಲಿರುವ ಆರ್​ಎಸ್ಎಸ್ ಕಚೇರಿ ಕೇಶವಕೃಪಾಗೆ ತೆರಳಿದರು. ಸಂಘ ಪರಿವಾರದ ಹಿರಿಯರ ಜೊತೆ ಮಾತುಕತೆ ನಡೆಸಿದರು.

ಓದಿ: ಸಂಸದೀಯ ಮಂಡಳಿಯಲ್ಲಿ ಬಿಎಸ್​ವೈಗೆ ಸ್ಥಾನ: ಪಕ್ಷ, ಸರ್ಕಾರದ ಹುಮ್ಮಸ್ಸು ಇಮ್ಮಡಿ ಎಂದ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.