ETV Bharat / state

ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿಗೆ ಸಿಕ್ಕಿದ ಪ್ರತಿಪಕ್ಷ ಸ್ಥಾನ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಿನ್ನಲೆಯೇನು?

author img

By ETV Bharat Karnataka Team

Published : Nov 17, 2023, 10:25 PM IST

ರಾಜ್ಯದ ನೂತನ ವಿಪಕ್ಷ ನಾಯಕನಾಗಿ ಆಯ್ಕೆಯಾಗಿರುವ ಆರ್​ ಅಶೋಕ್​ ಅವರ ಹಿನ್ನೆಲೆ ಮತ್ತು ಅವರು ನಡೆದು ಬಂದ ಹಾದಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

Etv Bharatbackground-of-opposition-leader-r-ashok
ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿಗೆ ಸಿಕ್ಕಿದ ಪ್ರತಿಪಕ್ಷದ ಸ್ಥಾನ: ನೂತನ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ಹಿನ್ನಲೆಯೇನು?

ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಆರ್ ಅಶೋಕ್ ಅವರು ಪ್ರತಿಪಕ್ಷದ ನಾಯಕರಾಗಿ ಇಂದು ಆಯ್ಕೆಯಾಗಿದ್ದಾರೆ.
ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಅಶೋಕ್ ಅವರು ಶಾಸಕರಾಗಿ, ಸಚಿವರಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿಯೂ ಕೆಲಸ ಮಾಡಿದ್ದಾರೆ. ಅಶೋಕ್ ಅವರ ಹಿನ್ನೆಲೆ ಹಾಗೂ ಅವರು ನಡೆದು ಬಂದ ದಾರಿ ನೋಡುವುದಾದರೆ, (ಜಾಲಹಳ್ಳಿ ರಾಮಯ್ಯ ಅಶೋಕ) ಇವರು 1957 ಜುಲೈ 1 ರಂದು ಜಾಲಹಳ್ಳಿಯಲ್ಲಿ ತಂದೆ ರಾಮಯ್ಯ, ತಾಯಿ ಶ್ರೀಮತಿ ಆಂಜಿನಮ್ಮ ಅವರ ಮಗನಾಗಿ ಜನಿಸಿದರು.

ಪ್ರಾಥಮಿಕ ವಿದ್ಯಾಭ್ಯಾಸವನ್ನು ಜಾಲಹಳ್ಳಿಯಲ್ಲಿ ಪೂರೈಸಿದ್ದು, ವಿ.ವಿ.ಪುರಂ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಪಡೆದಿದ್ದಾರೆ. ತಮ್ಮ 10ನೇ ವಯಸ್ಸಿನಲ್ಲಿಯೇ ಆರ್​ಎಸ್​ಎಸ್​ಗೆ ಸೇರ್ಪಡೆಯಾಗಿ, 1975-77ರಲ್ಲಿ ಪ್ರಧಾನಮಂತ್ರಿ ಇಂದಿರಾಗಾಂಧಿಯವರು ವಿಧಿಸಿದ್ದಂತಹ ತುರ್ತು ಪರಿಸ್ಥಿತಿಯ ಸಮಯದಲ್ಲಿ ಎಲ್.ಕೆ ಅಡ್ವಾಣಿಯಂತಹ ಹಿರಿಯ ನಾಯಕರೊಂದಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಒಂದು ತಿಂಗಳುಗಳ ಕಾಲ ಕಾರಾಗೃಹ ವಾಸ ಅನುಭವಿಸಿದ್ದರು. 1995ರಲ್ಲಿ ಬಿಜೆಪಿಯ ಬೆಂಗಳೂರು ನಗರ ಅಧ್ಯಕ್ಷರಾಗಿ ನೇಮಕವಾಗಿದ್ದರು.

97 ರಲ್ಲಿ ಉತ್ತರಹಳ್ಳಿಯಿಂದ ಆಯ್ಕೆ: 1997 ರಲ್ಲಿ ಕರ್ನಾಟಕ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ ನಂತರ 1999 ಮತ್ತು 2004ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಕ್ಷೇತ್ರ ಪುನರ್ ವಿಂಗಡನೆಯ ನಂತರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ 2008, 2013, 2018, 2023 ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗಳಲ್ಲಿ ಸತತವಾಗಿ ವಿಜಯ ಸಾಧಿಸುವ ಮೂಲಕ 7ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2006-07 ರಲ್ಲಿ ಆರೋಗ್ಯ ಸಚಿವ: 2006-2007ರಲ್ಲಿನ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಕರ್ತವ್ಯ ನಿರ್ವಹಿದ್ದರು. ಈ ಸಮಯದಲ್ಲಿ ಮಡಿಲು ಕಿಟ್ ಎಂಬ ನೂತನ ಯೋಜನೆಯನ್ನು ಅನುಷ್ಠಾನ ಗೊಳಿಸುವ ಮೂಲಕ ಅಸಂಖ್ಯಾತ ಬಡ ಕುಟುಂಬದ ನವಜಾತ ಶಿಶುಗಳಿಗೆ ಮಡಿಲು ಕಿಟ್ ದೊರೆಯುವಂತೆ ಮಾಡಿದ್ದರು. ಜೊತೆಗೆ ಹಲವು ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಿದ್ದರು. ಗ್ರಾಮೀಣ ಭಾಗದಲ್ಲಿಯೂ ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿ ಹಲವು ನಕಲಿ ಡಾಕ್ಟರ್‌ಗಳ ಹಾವಳಿಯನ್ನು ತಡೆಯಲು ಶ್ರಮಿಸಿದ್ದರು.

2008-2010ರ ಬಿ.ಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರ ಖಾತೆಗಳ ಸಚಿವರಾಗಿ ಹತ್ತು ಹಲವು ಕಾರ್ಯಗಳನ್ನು ಮಾಡಿದ್ದಾರೆ, ಸಾರಿಗೆ ಇಲಾಖೆಯ ಆಧುನೀಕರಣಕ್ಕೆ ಮತ್ತು ನೂತನ ಸಾರಿಗೆ ಬಸ್‌ಗಳ ವ್ಯವಸ್ಥೆ ಮತ್ತು ನೂತನ ಬಸ್ ನಿಲ್ದಾಣಗಳ ನಿರ್ಮಾಣದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದರು. (2010-2012) ಸಾರಿಗೆ ಸಚಿವರು ಮತ್ತು ಗೃಹ ಸಚಿವರಾಗಿರುವ ಸಮಯದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಗೃಹ ಇಲಾಖೆಯ ದಕ್ಷ ನಿರ್ವಹಣೆಯನ್ನು ಮಾಡಿದ್ದರು. ಜೊತೆಗೆ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು.

2012ರಲ್ಲಿ ಉಪ ಮುಖ್ಯಮಂತ್ರಿಯಾಗಿ ಕೆಲಸ: 2012-2013 ರಲ್ಲಿ ಜಗದೀಶ್ ಶೆಟ್ಟರ್ ರವರ ನೇತೃತ್ವದ ಸರ್ಕಾರದಲ್ಲಿ ಸಾರಿಗೆ ಮತ್ತು ಗೃಹ ಸಚಿವರಾಗಿ, ಉಪ ಮುಖ್ಯಮಂತ್ರಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು. 2010 ರಲ್ಲಿ ಮತ್ತು 2015 ರಲ್ಲಿ ನಡೆದ ಬಿಬಿಎಂಪಿಯ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಿಸಲು ಇವರ ಶ್ರಮವು ಅತೀ ಹೆಚ್ಚಿನದಾಗಿದೆ. 2019ರ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಮತ್ತು 2021ರ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡಿದ್ದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಹಳ್ಳಿಯಲ್ಲೇ ವಾಸ್ತವ್ಯ ಹೂಡುವ ಮೂಲಕ ಸ್ಥಳದಲ್ಲಿಯೇ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದರು. ಮನೆ ಬಾಗಿಲಿಗೆ ಪಿಂಚಣಿ ಮೂಲಕ ಅಶಕ್ತರು ವೃದ್ಧರು ವಿಧವೆಯರಿಗೆ ಮನೆ ಬಾಗಿಲಲ್ಲೆ ಪಿಂಚಣಿ ಪಡೆಯುವ ವ್ಯವಸ್ಥೆಯನ್ನು ಮಾಡಿದ್ದರು. ಹಲವಾರು ತಾಲೂಕು ಆಡಳಿತ ಸೌಧಗಳನ್ನು ನಿರ್ಮಿಸುವ ಮೂಲಕ ಹಾಗೂ ತಾಲೂಕು ಆಡಳಿತ ಸೌಧಗಳಿಗೆ ಜಾಗವನ್ನು ಮೀಸಲಿಡುವ ಮೂಲ2/3 ಆಡಳಿತ ವ್ಯವಸ್ಥೆಯು ಸುಗಮವಾಗಿ ಸಾಗುವಂತೆ ಮಾಡಿದ್ದಾರೆ. 79/ಎ ಮತ್ತು 79/ಬಿ ಗಳನ್ನು ರದ್ದು ಮಾಡುವ ಮೂಲಕ ರೈತರಲ್ಲದವರು ಸಹ ಕೃಷಿ ಭೂಮಿಯನ್ನು ಖರೀದಿ ಮಾಡಿ ಕೃಷಿಯಲ್ಲಿ ತೊಡಗುವಂತೆ ಮಾಡಿರುತ್ತಾರೆ, ನೋಂದಣಿ ಮುದ್ರಾಂಕ ಶುಲ್ಕದಲ್ಲಿ ರಿಯಾಯಿತಿ ಕಲ್ಪಿಸಿದ್ದರು.

2019ರ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಮತ್ತು 2021ರ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದಲ್ಲಿ ರಾಜ್ಯ ವಿಪತ್ತು ನಿರ್ವಹಣೆಯ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಆದಂತಹ ಪ್ರಾಕೃತಿಕ ವಿಕೋಪಗಳಿಗೆ ಸೂಕ್ತ ಪರಿಹಾರ ಕೊಡಿಸುವಲ್ಲಿ ಶ್ರಮವಹಿಸಿದ್ದರು. 2019 ರಲ್ಲಿ ಕೊರೊನಾ ವೈರಸ್ ಎಂಬ ಜಾಗತಿಕ ಮಹಾಮಾರಿ ಜನರನ್ನು ಬಲಿ ಪಡೆಯುತ್ತಿರುವ ಸಂದರ್ಭದಲ್ಲಿ ಜನತೆಗೆ ಸೂಕ್ತ ವೈದ್ಯಕೀಯ ನೆರವನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಕೊರೊನಾದಿಂದ ಮೃತಪಟ್ಟ ವಾರಸುದಾರರಿಲ್ಲದ ಸಾವಿರಾರು ಅಸ್ಥಿಗಳನ್ನು ಕಾವೇರಿ ನದಿಯಲ್ಲಿ ಸೂಕ್ತ ವಿಧಿ ವಿಧಾನಗಳ ಮೂಲಕ ವಿಸರ್ಜಿಸಿ ನಾಡಿನ ಮತ್ತು ಸಂಸ್ಕೃತಿಯ ಘನತೆಯನ್ನು ಎತ್ತಿ ಹಿಡಿದು ಜನರ ಮೆಚ್ಚುಗೆ ಪಡೆದಿದ್ದರು. 2023 ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ 55,175 ಮತಗಳ ಅಂತರದಿಂದ ಪದ್ಮನಾಭನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸತತ 7 ಬಾರಿ ಒಂದೇ ಪಕ್ಷದಿಂದ ಗೆಲ್ಲುತ್ತಾ, ಸುಮಾರು 45 ವರ್ಷಗಳಿಂದ ಪಕ್ಷವು ವಹಿಸಿರುವ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ರಾಜಧಾನಿ ಬೆಂಗಳೂರಿಗೆ ಮುಖ್ಯಮಂತ್ರಿ ಸ್ಥಾನವಾಗಲೀ ಅಥವಾ ಪ್ರತಿಪಕ್ಷದ ನಾಯಕರ ಸ್ಥಾನವಾಗಲೀ ಇದುವರೆವಿಗೂ ಸಿಕ್ಕಿರಲಿಲ್ಲ. ಮೊದಲ ಬಾರಿ ಈ ಸ್ಥಾನ ಬೆಂಗಳೂರಿಗೆ ದೊರೆತಂತಾಗಿದೆ.

ಇದನ್ನೂ ಓದಿ: ಮಾಜಿ ಡಿಸಿಎಂ ಆರ್​ ಅಶೋಕ್​ಗೆ ಪ್ರತಿಪಕ್ಷ ನಾಯಕನ ಪಟ್ಟ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಆರ್ ಅಶೋಕ್ ಅವರು ಪ್ರತಿಪಕ್ಷದ ನಾಯಕರಾಗಿ ಇಂದು ಆಯ್ಕೆಯಾಗಿದ್ದಾರೆ.
ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಅಶೋಕ್ ಅವರು ಶಾಸಕರಾಗಿ, ಸಚಿವರಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿಯೂ ಕೆಲಸ ಮಾಡಿದ್ದಾರೆ. ಅಶೋಕ್ ಅವರ ಹಿನ್ನೆಲೆ ಹಾಗೂ ಅವರು ನಡೆದು ಬಂದ ದಾರಿ ನೋಡುವುದಾದರೆ, (ಜಾಲಹಳ್ಳಿ ರಾಮಯ್ಯ ಅಶೋಕ) ಇವರು 1957 ಜುಲೈ 1 ರಂದು ಜಾಲಹಳ್ಳಿಯಲ್ಲಿ ತಂದೆ ರಾಮಯ್ಯ, ತಾಯಿ ಶ್ರೀಮತಿ ಆಂಜಿನಮ್ಮ ಅವರ ಮಗನಾಗಿ ಜನಿಸಿದರು.

ಪ್ರಾಥಮಿಕ ವಿದ್ಯಾಭ್ಯಾಸವನ್ನು ಜಾಲಹಳ್ಳಿಯಲ್ಲಿ ಪೂರೈಸಿದ್ದು, ವಿ.ವಿ.ಪುರಂ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಪಡೆದಿದ್ದಾರೆ. ತಮ್ಮ 10ನೇ ವಯಸ್ಸಿನಲ್ಲಿಯೇ ಆರ್​ಎಸ್​ಎಸ್​ಗೆ ಸೇರ್ಪಡೆಯಾಗಿ, 1975-77ರಲ್ಲಿ ಪ್ರಧಾನಮಂತ್ರಿ ಇಂದಿರಾಗಾಂಧಿಯವರು ವಿಧಿಸಿದ್ದಂತಹ ತುರ್ತು ಪರಿಸ್ಥಿತಿಯ ಸಮಯದಲ್ಲಿ ಎಲ್.ಕೆ ಅಡ್ವಾಣಿಯಂತಹ ಹಿರಿಯ ನಾಯಕರೊಂದಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಒಂದು ತಿಂಗಳುಗಳ ಕಾಲ ಕಾರಾಗೃಹ ವಾಸ ಅನುಭವಿಸಿದ್ದರು. 1995ರಲ್ಲಿ ಬಿಜೆಪಿಯ ಬೆಂಗಳೂರು ನಗರ ಅಧ್ಯಕ್ಷರಾಗಿ ನೇಮಕವಾಗಿದ್ದರು.

97 ರಲ್ಲಿ ಉತ್ತರಹಳ್ಳಿಯಿಂದ ಆಯ್ಕೆ: 1997 ರಲ್ಲಿ ಕರ್ನಾಟಕ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ ನಂತರ 1999 ಮತ್ತು 2004ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಕ್ಷೇತ್ರ ಪುನರ್ ವಿಂಗಡನೆಯ ನಂತರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ 2008, 2013, 2018, 2023 ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗಳಲ್ಲಿ ಸತತವಾಗಿ ವಿಜಯ ಸಾಧಿಸುವ ಮೂಲಕ 7ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2006-07 ರಲ್ಲಿ ಆರೋಗ್ಯ ಸಚಿವ: 2006-2007ರಲ್ಲಿನ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಕರ್ತವ್ಯ ನಿರ್ವಹಿದ್ದರು. ಈ ಸಮಯದಲ್ಲಿ ಮಡಿಲು ಕಿಟ್ ಎಂಬ ನೂತನ ಯೋಜನೆಯನ್ನು ಅನುಷ್ಠಾನ ಗೊಳಿಸುವ ಮೂಲಕ ಅಸಂಖ್ಯಾತ ಬಡ ಕುಟುಂಬದ ನವಜಾತ ಶಿಶುಗಳಿಗೆ ಮಡಿಲು ಕಿಟ್ ದೊರೆಯುವಂತೆ ಮಾಡಿದ್ದರು. ಜೊತೆಗೆ ಹಲವು ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಿದ್ದರು. ಗ್ರಾಮೀಣ ಭಾಗದಲ್ಲಿಯೂ ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿ ಹಲವು ನಕಲಿ ಡಾಕ್ಟರ್‌ಗಳ ಹಾವಳಿಯನ್ನು ತಡೆಯಲು ಶ್ರಮಿಸಿದ್ದರು.

2008-2010ರ ಬಿ.ಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಾರಿಗೆ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರ ಖಾತೆಗಳ ಸಚಿವರಾಗಿ ಹತ್ತು ಹಲವು ಕಾರ್ಯಗಳನ್ನು ಮಾಡಿದ್ದಾರೆ, ಸಾರಿಗೆ ಇಲಾಖೆಯ ಆಧುನೀಕರಣಕ್ಕೆ ಮತ್ತು ನೂತನ ಸಾರಿಗೆ ಬಸ್‌ಗಳ ವ್ಯವಸ್ಥೆ ಮತ್ತು ನೂತನ ಬಸ್ ನಿಲ್ದಾಣಗಳ ನಿರ್ಮಾಣದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದರು. (2010-2012) ಸಾರಿಗೆ ಸಚಿವರು ಮತ್ತು ಗೃಹ ಸಚಿವರಾಗಿರುವ ಸಮಯದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಗೃಹ ಇಲಾಖೆಯ ದಕ್ಷ ನಿರ್ವಹಣೆಯನ್ನು ಮಾಡಿದ್ದರು. ಜೊತೆಗೆ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು.

2012ರಲ್ಲಿ ಉಪ ಮುಖ್ಯಮಂತ್ರಿಯಾಗಿ ಕೆಲಸ: 2012-2013 ರಲ್ಲಿ ಜಗದೀಶ್ ಶೆಟ್ಟರ್ ರವರ ನೇತೃತ್ವದ ಸರ್ಕಾರದಲ್ಲಿ ಸಾರಿಗೆ ಮತ್ತು ಗೃಹ ಸಚಿವರಾಗಿ, ಉಪ ಮುಖ್ಯಮಂತ್ರಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು. 2010 ರಲ್ಲಿ ಮತ್ತು 2015 ರಲ್ಲಿ ನಡೆದ ಬಿಬಿಎಂಪಿಯ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಿಸಲು ಇವರ ಶ್ರಮವು ಅತೀ ಹೆಚ್ಚಿನದಾಗಿದೆ. 2019ರ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಮತ್ತು 2021ರ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡಿದ್ದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಹಳ್ಳಿಯಲ್ಲೇ ವಾಸ್ತವ್ಯ ಹೂಡುವ ಮೂಲಕ ಸ್ಥಳದಲ್ಲಿಯೇ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದರು. ಮನೆ ಬಾಗಿಲಿಗೆ ಪಿಂಚಣಿ ಮೂಲಕ ಅಶಕ್ತರು ವೃದ್ಧರು ವಿಧವೆಯರಿಗೆ ಮನೆ ಬಾಗಿಲಲ್ಲೆ ಪಿಂಚಣಿ ಪಡೆಯುವ ವ್ಯವಸ್ಥೆಯನ್ನು ಮಾಡಿದ್ದರು. ಹಲವಾರು ತಾಲೂಕು ಆಡಳಿತ ಸೌಧಗಳನ್ನು ನಿರ್ಮಿಸುವ ಮೂಲಕ ಹಾಗೂ ತಾಲೂಕು ಆಡಳಿತ ಸೌಧಗಳಿಗೆ ಜಾಗವನ್ನು ಮೀಸಲಿಡುವ ಮೂಲ2/3 ಆಡಳಿತ ವ್ಯವಸ್ಥೆಯು ಸುಗಮವಾಗಿ ಸಾಗುವಂತೆ ಮಾಡಿದ್ದಾರೆ. 79/ಎ ಮತ್ತು 79/ಬಿ ಗಳನ್ನು ರದ್ದು ಮಾಡುವ ಮೂಲಕ ರೈತರಲ್ಲದವರು ಸಹ ಕೃಷಿ ಭೂಮಿಯನ್ನು ಖರೀದಿ ಮಾಡಿ ಕೃಷಿಯಲ್ಲಿ ತೊಡಗುವಂತೆ ಮಾಡಿರುತ್ತಾರೆ, ನೋಂದಣಿ ಮುದ್ರಾಂಕ ಶುಲ್ಕದಲ್ಲಿ ರಿಯಾಯಿತಿ ಕಲ್ಪಿಸಿದ್ದರು.

2019ರ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಮತ್ತು 2021ರ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದಲ್ಲಿ ರಾಜ್ಯ ವಿಪತ್ತು ನಿರ್ವಹಣೆಯ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಆದಂತಹ ಪ್ರಾಕೃತಿಕ ವಿಕೋಪಗಳಿಗೆ ಸೂಕ್ತ ಪರಿಹಾರ ಕೊಡಿಸುವಲ್ಲಿ ಶ್ರಮವಹಿಸಿದ್ದರು. 2019 ರಲ್ಲಿ ಕೊರೊನಾ ವೈರಸ್ ಎಂಬ ಜಾಗತಿಕ ಮಹಾಮಾರಿ ಜನರನ್ನು ಬಲಿ ಪಡೆಯುತ್ತಿರುವ ಸಂದರ್ಭದಲ್ಲಿ ಜನತೆಗೆ ಸೂಕ್ತ ವೈದ್ಯಕೀಯ ನೆರವನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಕೊರೊನಾದಿಂದ ಮೃತಪಟ್ಟ ವಾರಸುದಾರರಿಲ್ಲದ ಸಾವಿರಾರು ಅಸ್ಥಿಗಳನ್ನು ಕಾವೇರಿ ನದಿಯಲ್ಲಿ ಸೂಕ್ತ ವಿಧಿ ವಿಧಾನಗಳ ಮೂಲಕ ವಿಸರ್ಜಿಸಿ ನಾಡಿನ ಮತ್ತು ಸಂಸ್ಕೃತಿಯ ಘನತೆಯನ್ನು ಎತ್ತಿ ಹಿಡಿದು ಜನರ ಮೆಚ್ಚುಗೆ ಪಡೆದಿದ್ದರು. 2023 ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ 55,175 ಮತಗಳ ಅಂತರದಿಂದ ಪದ್ಮನಾಭನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸತತ 7 ಬಾರಿ ಒಂದೇ ಪಕ್ಷದಿಂದ ಗೆಲ್ಲುತ್ತಾ, ಸುಮಾರು 45 ವರ್ಷಗಳಿಂದ ಪಕ್ಷವು ವಹಿಸಿರುವ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ರಾಜಧಾನಿ ಬೆಂಗಳೂರಿಗೆ ಮುಖ್ಯಮಂತ್ರಿ ಸ್ಥಾನವಾಗಲೀ ಅಥವಾ ಪ್ರತಿಪಕ್ಷದ ನಾಯಕರ ಸ್ಥಾನವಾಗಲೀ ಇದುವರೆವಿಗೂ ಸಿಕ್ಕಿರಲಿಲ್ಲ. ಮೊದಲ ಬಾರಿ ಈ ಸ್ಥಾನ ಬೆಂಗಳೂರಿಗೆ ದೊರೆತಂತಾಗಿದೆ.

ಇದನ್ನೂ ಓದಿ: ಮಾಜಿ ಡಿಸಿಎಂ ಆರ್​ ಅಶೋಕ್​ಗೆ ಪ್ರತಿಪಕ್ಷ ನಾಯಕನ ಪಟ್ಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.