ETV Bharat / state

Bakrid: ನಮ್ಮನಮ್ಮಲ್ಲೇ ದ್ವೇಷ ವೈರತ್ವ ಹುಟ್ಟುಹಾಕುವ ಶಕ್ತಿಗಳಿಗೆ ಬೆಲೆ ಕೊಡಬೇಡಿ: ಸಿಎಂ ಸಿದ್ದರಾಮಯ್ಯ

author img

By

Published : Jun 29, 2023, 12:17 PM IST

Updated : Jun 29, 2023, 3:20 PM IST

ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ, ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಕ್ರೀದ್ ಪ್ರಯುಕ್ತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು. ವಸತಿ ಸಚಿವ ಜಮೀರ್ ಅಹಮದ್ ಸೇರಿ ಸಮುದಾಯದ ಮುಖಂಡರು, ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭ ಮಾತನಾಡಿದ ಸಿಎಂ, ಇಡೀ ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ನೀವೆಲ್ಲ ಇಲ್ಲಿ ಸೇರಿ ಪ್ರಾರ್ಥನೆ ಸಲ್ಲಿಸಿದ್ದೀರಿ. ಇದು ಭಾಷಣ ಮಾಡುವ ಸಭೆ ಅಲ್ಲ. ಈಗಾಗಲೇ ಧರ್ಮ ಗುರುಗಳು ಪ್ರಾರ್ಥನೆಯನ್ನು ಮಾಡಿ, ನಿಮ್ಮನ್ನೆಲ್ಲಾ ಭಾಗವಹಿಸುವಂತೆ ಮಾಡಿದ್ದಾರೆ. ಬಕ್ರೀದ್‌ ಹಬ್ಬ ತ್ಯಾಗ ಮಾಡುವ ಒಂದು ಹಬ್ಬ. ಈ ಹಬ್ಬದ ದಿನ ಚಾಮರಾಜಪೇಟೆ ಭಾಗದ ಎಲ್ಲ ಮುಸಲ್ಮಾನ್‌ ಬಾಂಧವರು ಸೇರಿ ಪ್ರಾರ್ಥನೆ ಮಾಡಿದ್ದೀರಿ. ನಾನು ಸಹ ಅತ್ಯಂತ ಸಂತೋಷದಿಂದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದೇನೆ ಎಂದರು.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಮುಸಲ್ಮಾನ್‌ ಬಾಂಧವರು ಮತ್ತು ಎಲ್ಲರಿಗೂ ಬಕ್ರೀದ್‌ ಹಬ್ಬದ ಶುಭಾಶಯ ಹೇಳಲು ಬಯಸುತ್ತಿದ್ದೇನೆ. ನಾವೆಲ್ಲರೂ ಕೂಡ ಮನುಷ್ಯರು. ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಸಹ ಮಾನವ ಧರ್ಮ ಹೊಂದಿರಬೇಕು. ಪರಸ್ಪರ ಪ್ರೀತಿ ವಿಶ್ವಾಸದಿಂದ ಇರಬೇಕು. ದೇವರು ಬುದ್ಧಿ ಕೊಟ್ಟಿದ್ದಾನೆ, ಉಪಯೋಗಿಸಿಕೊಳ್ಳಬೇಕು. ನಮ್ಮನಮ್ಮಲ್ಲೇ ದ್ವೇಶ ವೈರತ್ವ ಹುಟ್ಟುಹಾಕುವ ಕೆಲ ಶಕ್ತಿಗಳು ನಮ್ಮ ಮಧ್ಯದಲ್ಲಿವೆ. ಅವರಿಗೆ ಬೆಲೆ ಕೊಡಬಾರದು. ಮನುಷ್ಯರಂತೆ ಬದುಕುವ ವಾತಾವರಣ ಸಮಾಜದಲ್ಲಿ ನಿರ್ಮಾಣ ಆದರೆ, ರಾಜ್ಯ ಅಭಿವೃದ್ಧಿ ಆಗುತ್ತದೆ. ಎಲ್ಲರಿಗೂ ಸದ್ಬುದ್ಧಿ ಕೊಡಲಿ ಎಂದು ಹಾರೈಸಿದರು.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಬಕ್ರೀದ್‌ ಆಚರಣೆ: ಇಸ್ಲಾಂ ಧರ್ಮವನ್ನು ನಂಬುವ ಜನರ ಪ್ರಮುಖ ಹಬ್ಬಗಳಲ್ಲಿ ಬಕ್ರೀದ್ ಕೂಡ ಒಂದು. ಈ ಹಬ್ಬವನ್ನು ತ್ಯಾಗದ ಸಂಕೇತವೆಂದು ಆಚರಿಸಲಾಗುತ್ತದೆ. ಇತ್ತೀಚೆಗಷ್ಟೇ ಜಿಲ್ಹಿಜ್ ತಿಂಗಳ ಚಂದ್ರ ದರ್ಶನವಾಗಿದ್ದು, ಇದೀಗ ಬಕ್ರೀದ್ ದಿನವು ಆಚರಣೆಗೆ ಬಂದಿದೆ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಜಿಲ್ಹಿಜ್ ತಿಂಗಳನ್ನು ವರ್ಷದ ಕೊನೆಯ ತಿಂಗಳು ಎಂದು ಕರೆಯಲಾಗುತ್ತದೆ. ಅದರ ಮೊದಲ ದಿನಾಂಕವು ಬಹಳ ಮುಖ್ಯವಾಗಿದೆ. ಈ ದಿನ, ಚಂದ್ರನ ದರ್ಶನದೊಂದಿಗೆ, ಬಕ್ರೀದ್ ಅಥವಾ ಈದ್ ಉಲ್-ಅಧಾ ದಿನಾಂಕವನ್ನು ಘೋಷಿಸಲಾಗುತ್ತದೆ. ಚಂದ್ರ ದರ್ಶನವಾದ ಹತ್ತನೇ ದಿನದಂದು ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಇಸ್ಲಾಮಿನ ನಂಬಿಕೆಗಳ ಪ್ರಕಾರ, ಈದ್-ಉಲ್-ಅಧಾವನ್ನು ಇಸ್ಲಾಮಿಕ್ ಕ್ಯಾಲೆಂಡರ್‌ನ ಕೊನೆಯ ತಿಂಗಳಲ್ಲಿ ಆಚರಿಸಲಾಗುತ್ತದೆ. ಈದ್‌ ಹಬ್ಬ ಆಚರಿಸಿದ ಸುಮಾರು ಎರಡು ತಿಂಗಳುಗಳ ನಂತರ ಬಕ್ರೀದ್‌ ಹಬ್ಬವನ್ನು ಆಚರಿಸಲಾಗುತ್ತದೆ. ಇಸ್ಲಾಂ ಧರ್ಮದಲ್ಲಿ ಬಕ್ರೀದ್ ಅನ್ನು ತ್ಯಾಗದ ಸಂಕೇತವೆಂದು ಪರಿಗಣಿಸಲಾಗಿದೆ. ಬಕ್ರೀದ್‌ನಂದು ಕುರಿಗಳನ್ನು ಬಲಿ ನೀಡಿದರೆ, ಈದ್-ಉಲ್-ಫಿತರ್‌ನಲ್ಲಿ ಅಂದರೆ, ಈದ್‌ ಹಬ್ಬದಂದು ಶಾವಿಗೆ ಖೀರ್ ಅನ್ನು ತಯಾರಿಸಿ, ಅಕ್ಕ - ಪಕ್ಕದ, ಕುಟುಂಬ ಸದಸ್ಯರಿಗೆ ಹಂಚಿ ಸೇವಿಸಲಾಗುತ್ತದೆ.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಟ್ವೀಟ್‌ ಶುಭಾಶಯ: ಬಕ್ರೀದ್‌ ಹಬ್ಬದ ಸಂದರ್ಭ ಟ್ವೀಟ್‌ ಸಹ ಮಾಡಿರುವ ಸಿಎಂ ಸಿದ್ದರಾಮಯ್ಯ, ತ್ಯಾಗ - ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಸ್ನೇಹ, ಸೌಹಾರ್ದತೆಯು ಶಾಶ್ವತವಾಗಿ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಹಾರೈಕೆಗಳು ಎಂದು ಹೇಳಿದ್ದಾರೆ.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಜನಾರ್ದನದಲ್ಲಿ ಉಪಹಾರ: ಮುಖ್ಯಮಂತ್ರಿಗಳು ಇಂದು ಶಿವಾನಂದ ಸರ್ಕಲ್​ನಲ್ಲಿರುವ ಹೋಟೆಲ್ ಜನಾರ್ದನದಲ್ಲಿ ಬೆಳಗಿನ ಉಪಹಾರ ಸವಿದರು. ಸಚಿವರಾದ ಜಮೀರ್ ಅಹ್ಮದ್, ಭೈರತಿ ಸುರೇಶ ಹಾಗೂ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಗೃಹ ಸಚಿವ ಜಿ ಪರಮೇಶ್ವರ್

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಕ್ರೀದ್ ಪ್ರಯುಕ್ತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು. ವಸತಿ ಸಚಿವ ಜಮೀರ್ ಅಹಮದ್ ಸೇರಿ ಸಮುದಾಯದ ಮುಖಂಡರು, ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭ ಮಾತನಾಡಿದ ಸಿಎಂ, ಇಡೀ ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ನೀವೆಲ್ಲ ಇಲ್ಲಿ ಸೇರಿ ಪ್ರಾರ್ಥನೆ ಸಲ್ಲಿಸಿದ್ದೀರಿ. ಇದು ಭಾಷಣ ಮಾಡುವ ಸಭೆ ಅಲ್ಲ. ಈಗಾಗಲೇ ಧರ್ಮ ಗುರುಗಳು ಪ್ರಾರ್ಥನೆಯನ್ನು ಮಾಡಿ, ನಿಮ್ಮನ್ನೆಲ್ಲಾ ಭಾಗವಹಿಸುವಂತೆ ಮಾಡಿದ್ದಾರೆ. ಬಕ್ರೀದ್‌ ಹಬ್ಬ ತ್ಯಾಗ ಮಾಡುವ ಒಂದು ಹಬ್ಬ. ಈ ಹಬ್ಬದ ದಿನ ಚಾಮರಾಜಪೇಟೆ ಭಾಗದ ಎಲ್ಲ ಮುಸಲ್ಮಾನ್‌ ಬಾಂಧವರು ಸೇರಿ ಪ್ರಾರ್ಥನೆ ಮಾಡಿದ್ದೀರಿ. ನಾನು ಸಹ ಅತ್ಯಂತ ಸಂತೋಷದಿಂದ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದೇನೆ ಎಂದರು.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಮುಸಲ್ಮಾನ್‌ ಬಾಂಧವರು ಮತ್ತು ಎಲ್ಲರಿಗೂ ಬಕ್ರೀದ್‌ ಹಬ್ಬದ ಶುಭಾಶಯ ಹೇಳಲು ಬಯಸುತ್ತಿದ್ದೇನೆ. ನಾವೆಲ್ಲರೂ ಕೂಡ ಮನುಷ್ಯರು. ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಸಹ ಮಾನವ ಧರ್ಮ ಹೊಂದಿರಬೇಕು. ಪರಸ್ಪರ ಪ್ರೀತಿ ವಿಶ್ವಾಸದಿಂದ ಇರಬೇಕು. ದೇವರು ಬುದ್ಧಿ ಕೊಟ್ಟಿದ್ದಾನೆ, ಉಪಯೋಗಿಸಿಕೊಳ್ಳಬೇಕು. ನಮ್ಮನಮ್ಮಲ್ಲೇ ದ್ವೇಶ ವೈರತ್ವ ಹುಟ್ಟುಹಾಕುವ ಕೆಲ ಶಕ್ತಿಗಳು ನಮ್ಮ ಮಧ್ಯದಲ್ಲಿವೆ. ಅವರಿಗೆ ಬೆಲೆ ಕೊಡಬಾರದು. ಮನುಷ್ಯರಂತೆ ಬದುಕುವ ವಾತಾವರಣ ಸಮಾಜದಲ್ಲಿ ನಿರ್ಮಾಣ ಆದರೆ, ರಾಜ್ಯ ಅಭಿವೃದ್ಧಿ ಆಗುತ್ತದೆ. ಎಲ್ಲರಿಗೂ ಸದ್ಬುದ್ಧಿ ಕೊಡಲಿ ಎಂದು ಹಾರೈಸಿದರು.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಬಕ್ರೀದ್‌ ಆಚರಣೆ: ಇಸ್ಲಾಂ ಧರ್ಮವನ್ನು ನಂಬುವ ಜನರ ಪ್ರಮುಖ ಹಬ್ಬಗಳಲ್ಲಿ ಬಕ್ರೀದ್ ಕೂಡ ಒಂದು. ಈ ಹಬ್ಬವನ್ನು ತ್ಯಾಗದ ಸಂಕೇತವೆಂದು ಆಚರಿಸಲಾಗುತ್ತದೆ. ಇತ್ತೀಚೆಗಷ್ಟೇ ಜಿಲ್ಹಿಜ್ ತಿಂಗಳ ಚಂದ್ರ ದರ್ಶನವಾಗಿದ್ದು, ಇದೀಗ ಬಕ್ರೀದ್ ದಿನವು ಆಚರಣೆಗೆ ಬಂದಿದೆ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಜಿಲ್ಹಿಜ್ ತಿಂಗಳನ್ನು ವರ್ಷದ ಕೊನೆಯ ತಿಂಗಳು ಎಂದು ಕರೆಯಲಾಗುತ್ತದೆ. ಅದರ ಮೊದಲ ದಿನಾಂಕವು ಬಹಳ ಮುಖ್ಯವಾಗಿದೆ. ಈ ದಿನ, ಚಂದ್ರನ ದರ್ಶನದೊಂದಿಗೆ, ಬಕ್ರೀದ್ ಅಥವಾ ಈದ್ ಉಲ್-ಅಧಾ ದಿನಾಂಕವನ್ನು ಘೋಷಿಸಲಾಗುತ್ತದೆ. ಚಂದ್ರ ದರ್ಶನವಾದ ಹತ್ತನೇ ದಿನದಂದು ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಇಸ್ಲಾಮಿನ ನಂಬಿಕೆಗಳ ಪ್ರಕಾರ, ಈದ್-ಉಲ್-ಅಧಾವನ್ನು ಇಸ್ಲಾಮಿಕ್ ಕ್ಯಾಲೆಂಡರ್‌ನ ಕೊನೆಯ ತಿಂಗಳಲ್ಲಿ ಆಚರಿಸಲಾಗುತ್ತದೆ. ಈದ್‌ ಹಬ್ಬ ಆಚರಿಸಿದ ಸುಮಾರು ಎರಡು ತಿಂಗಳುಗಳ ನಂತರ ಬಕ್ರೀದ್‌ ಹಬ್ಬವನ್ನು ಆಚರಿಸಲಾಗುತ್ತದೆ. ಇಸ್ಲಾಂ ಧರ್ಮದಲ್ಲಿ ಬಕ್ರೀದ್ ಅನ್ನು ತ್ಯಾಗದ ಸಂಕೇತವೆಂದು ಪರಿಗಣಿಸಲಾಗಿದೆ. ಬಕ್ರೀದ್‌ನಂದು ಕುರಿಗಳನ್ನು ಬಲಿ ನೀಡಿದರೆ, ಈದ್-ಉಲ್-ಫಿತರ್‌ನಲ್ಲಿ ಅಂದರೆ, ಈದ್‌ ಹಬ್ಬದಂದು ಶಾವಿಗೆ ಖೀರ್ ಅನ್ನು ತಯಾರಿಸಿ, ಅಕ್ಕ - ಪಕ್ಕದ, ಕುಟುಂಬ ಸದಸ್ಯರಿಗೆ ಹಂಚಿ ಸೇವಿಸಲಾಗುತ್ತದೆ.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಟ್ವೀಟ್‌ ಶುಭಾಶಯ: ಬಕ್ರೀದ್‌ ಹಬ್ಬದ ಸಂದರ್ಭ ಟ್ವೀಟ್‌ ಸಹ ಮಾಡಿರುವ ಸಿಎಂ ಸಿದ್ದರಾಮಯ್ಯ, ತ್ಯಾಗ - ಬಲಿದಾನದ ಸಂಕೇತವಾಗಿ ಆಚರಿಸಲ್ಪಡುವ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಸ್ನೇಹ, ಸೌಹಾರ್ದತೆಯು ಶಾಶ್ವತವಾಗಿ ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಹಾರೈಕೆಗಳು ಎಂದು ಹೇಳಿದ್ದಾರೆ.

Chief Minister Siddaramaiah participated in the Bakrid mass prayer
ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ಜನಾರ್ದನದಲ್ಲಿ ಉಪಹಾರ: ಮುಖ್ಯಮಂತ್ರಿಗಳು ಇಂದು ಶಿವಾನಂದ ಸರ್ಕಲ್​ನಲ್ಲಿರುವ ಹೋಟೆಲ್ ಜನಾರ್ದನದಲ್ಲಿ ಬೆಳಗಿನ ಉಪಹಾರ ಸವಿದರು. ಸಚಿವರಾದ ಜಮೀರ್ ಅಹ್ಮದ್, ಭೈರತಿ ಸುರೇಶ ಹಾಗೂ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಗೃಹ ಸಚಿವ ಜಿ ಪರಮೇಶ್ವರ್

Last Updated : Jun 29, 2023, 3:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.