ಬೆಂಗಳೂರು: ಎಲ್ಲರ ಆರೋಗ್ಯದ ಬಗ್ಗೆ ಕಾಳಜಿವಹಿಸುವ ಆರೋಗ್ಯ ಇಲಾಖೆಗೂ ಕೊರೊನಾ ಭೀತಿ ಎದುರಾಗಿದ್ದು, ಕೇಂದ್ರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಕೋವಿಡ್ ಆತಂಕದಿಂದಾಗಿ ನಗರದ ಆನಂದ ರಾವ್ ಸರ್ಕಲ್ ನಲ್ಲಿರುವ ಕೇಂದ್ರ ಕಚೇರಿಯನ್ನು ಸೀಲ್ ಡೌನ್ ಮಾಡಿದ್ದಾರೆ. ನಿನ್ನೆ ಇಲಾಖೆ ಆಯುಕ್ತರ ಕಾರ್ ಡ್ರೈವರ್ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಡ್ರೈವರ್ ಇಲಾಖೆಯ ಎಲ್ಲಾ ಕಡೆಗಳಲ್ಲಿ ಓಡಾಡಿದ್ದರು. ಈ ಹಿನ್ನೆಲೆಯಲ್ಲಿ 24 ಗಂಟೆಗಳ ಕಾಲ ಇಲಾಖೆಯ ಕೇಂದ್ರ ಕಚೇಯನ್ನು ಸೀಲ್ ಡೌನ್ ಮಾಡಲಾಗಿದೆ.
ಕಚೇರಿಯನ್ನು ಸಂಪೂರ್ಣ ಸ್ಯಾನಿಟೈಸ್ ಕೂಡ ಮಾಡಲಾಗಿದೆ. ಡ್ರೈವರ್ ಸಂಪರ್ಕ ಹೊಂದಿದ್ದ ಎಲ್ಲರನ್ನೂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.