ETV Bharat / state

ಗುರು ರಾಘವೇಂದ್ರ ಬ್ಯಾಂಕ್ ಹಗರಣ: ಅಧ್ಯಕ್ಷ ರಾಮಕೃಷ್ಣ ಇಡಿ ವಶಕ್ಕೆ

author img

By

Published : Feb 16, 2022, 5:21 AM IST

ಗುರು ರಾಘವೇಂದ್ರ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ರಾಮಕೃಷ್ಣನನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

Bank President Ramakrishna arrested, Guru Raghavendra Bank scam, Guru Raghavendra Bank case, Guru Raghavendra Bank case update, ಬ್ಯಾಂಕ್​ ಅಧ್ಯಕ್ಷ ರಾಮಕೃಷ್ಣಗೆ ಇಡಿ ವಶಕ್ಕೆ, ಗುರು ರಾಘವೇಂದ್ರ ಬ್ಯಾಂಕ್ ಹಗರಣ, ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ, ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ ಅಪ್​ಡೇಟ್​,
ಗುರು ರಾಘವೇಂದ್ರ ಬ್ಯಾಂಕ್ ಹಗರಣ

ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬ್ಯಾಂಕ್​ನ ಅಧ್ಯಕ್ಷ ಕೆ.ರಾಮಕೃಷ್ಣರನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಇದೇ ಫೆಬ್ರವರಿ 18ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್​ನ ಅಧ್ಯಕ್ಷರಾದ 72 ವರ್ಷದ ಕೆ. ರಾಮಕೃಷ್ಣರನ್ನು ಸೋಮವಾರ ಸಂಜೆ ಬಂಧಿಸಿದ್ದ ಇ.ಡಿ ಅಧಿಕಾರಿಗಳು, ಮಂಗಳವಾರ ನಗರದ ಪ್ರಧಾನ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶ ಅನಿಲ್‌ ಬಿ. ಕಟ್ಟಿ ಅವರು ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಇದೇ ಫೆ. 18ರವರೆಗೆ ಇ.ಡಿ ವಶಕ್ಕೆ ಒಪ್ಪಿಸಿ ಆದೇಶಿಸಿದರು.

ಓದಿ: ವಿಶ್ವಾಸ ಹೆಚ್ಚಿಸುವ ಕ್ರಮಗಳನ್ನು ಚರ್ಚಿಸಲು ರಷ್ಯಾ ಸಿದ್ಧ : ಪುಟಿನ್​

ಕೆ. ರಾಮಕೃಷ್ಣ ಅವರು ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2,876 ಮಂದಿಗೆ 1,544.43 ಕೋಟಿ ರೂಪಾಯಿಯನ್ನು ಸಾಲವಾಗಿ ನೀಡಲಾಗಿದೆ. ಇದರಲ್ಲಿ 892.85 ಕೋಟಿ ರೂಪಾಯಿಯನ್ನು ಬೋಗಸ್‌ ದಾಖಲೆಗಳಿಗೆ ಸಾಲವಾಗಿ ನೀಡಲಾಗಿದೆ ಎಂದು ಇವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ದೂರು ದಾಖಲಾಗಿತ್ತು.

ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿತಂತೆ ಈಗಾಗಲೇ ಸಿಐಡಿ ಈಗ ತನಿಖೆ ನಡೆಸುತ್ತಿದೆ. ಇನ್ನು ಬೋಗಸ್ ದಾಖಲೆಗಳಿಗೆ ನೀಡಲಾಗಿದೆ ಎಂಬ 892 ಕೋಟಿ ರೂಪಾಯಿ ಹಣ ಏನಾಯಿತು ಎಂಬ ಕುರಿತು ರಾಮಕೃಷ್ಣರನ್ನು ವಿಚಾರಣೆಗೆ ಕರೆಸಿದ್ದ ಇ.ಡಿ ಅಧಿಕಾರಿಗಳು, ಕೆಲ ಕಾಲ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದರು. ಜಾರಿ ನಿರ್ದೇಶನಾಲಯದ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನಕುಮಾರ್ ಹಾಜರಾಗಿದ್ದರು.

ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬ್ಯಾಂಕ್​ನ ಅಧ್ಯಕ್ಷ ಕೆ.ರಾಮಕೃಷ್ಣರನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಇದೇ ಫೆಬ್ರವರಿ 18ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್​ನ ಅಧ್ಯಕ್ಷರಾದ 72 ವರ್ಷದ ಕೆ. ರಾಮಕೃಷ್ಣರನ್ನು ಸೋಮವಾರ ಸಂಜೆ ಬಂಧಿಸಿದ್ದ ಇ.ಡಿ ಅಧಿಕಾರಿಗಳು, ಮಂಗಳವಾರ ನಗರದ ಪ್ರಧಾನ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶ ಅನಿಲ್‌ ಬಿ. ಕಟ್ಟಿ ಅವರು ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಇದೇ ಫೆ. 18ರವರೆಗೆ ಇ.ಡಿ ವಶಕ್ಕೆ ಒಪ್ಪಿಸಿ ಆದೇಶಿಸಿದರು.

ಓದಿ: ವಿಶ್ವಾಸ ಹೆಚ್ಚಿಸುವ ಕ್ರಮಗಳನ್ನು ಚರ್ಚಿಸಲು ರಷ್ಯಾ ಸಿದ್ಧ : ಪುಟಿನ್​

ಕೆ. ರಾಮಕೃಷ್ಣ ಅವರು ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2,876 ಮಂದಿಗೆ 1,544.43 ಕೋಟಿ ರೂಪಾಯಿಯನ್ನು ಸಾಲವಾಗಿ ನೀಡಲಾಗಿದೆ. ಇದರಲ್ಲಿ 892.85 ಕೋಟಿ ರೂಪಾಯಿಯನ್ನು ಬೋಗಸ್‌ ದಾಖಲೆಗಳಿಗೆ ಸಾಲವಾಗಿ ನೀಡಲಾಗಿದೆ ಎಂದು ಇವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೊದಲಿಗೆ ದೂರು ದಾಖಲಾಗಿತ್ತು.

ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿತಂತೆ ಈಗಾಗಲೇ ಸಿಐಡಿ ಈಗ ತನಿಖೆ ನಡೆಸುತ್ತಿದೆ. ಇನ್ನು ಬೋಗಸ್ ದಾಖಲೆಗಳಿಗೆ ನೀಡಲಾಗಿದೆ ಎಂಬ 892 ಕೋಟಿ ರೂಪಾಯಿ ಹಣ ಏನಾಯಿತು ಎಂಬ ಕುರಿತು ರಾಮಕೃಷ್ಣರನ್ನು ವಿಚಾರಣೆಗೆ ಕರೆಸಿದ್ದ ಇ.ಡಿ ಅಧಿಕಾರಿಗಳು, ಕೆಲ ಕಾಲ ವಿಚಾರಣೆ ನಡೆಸಿದ ಬಳಿಕ ಬಂಧಿಸಿದ್ದರು. ಜಾರಿ ನಿರ್ದೇಶನಾಲಯದ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನಕುಮಾರ್ ಹಾಜರಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.